Homeಕರ್ನಾಟಕಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ - ಆರೋಪ

ಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ – ಆರೋಪ

- Advertisement -
- Advertisement -

ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್‌ ಭೂಷಣ್‌ ಅವರು ಸ್ಥಾಪಿಸಿರುವ ಸ್ವರಾಜ್ ಅಭಿಯಾನ್‌ ಸಂಘಟನೆಯ ಕಾರ್ಯಕರ್ತರು ಬೆಂಗಳೂರಿನಲ್ಲಿ ಲಾಕ್‌ಡೌನ್‌ನಿಂದ ಸಂತ್ರಸ್ತರಾದ ಕಾರ್ಮಿಕರಿಗೆ ಪರಿಹಾರ ಸಾಮಗ್ರಿಗಳನ್ನು ವಿತರಿಸುವಾಗ ಆರ್‌ಎಸ್‌ಎಸ್ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ಜರುಗಿದೆ.

ಕಳೆದ ವಾರ ಏಪ್ರಿಲ್ 04 ರಂದು ಬೆಂಗಳೂರಿನ ದಾಸರಹಳ್ಳಿಯಲ್ಲಿ ಕೊರೊನಾ ಲಾಕ್‌ಡೌನ್ ಮಧ್ಯೆ ಪರಿಹಾರ ಸಾಮಗ್ರಿಗಳನ್ನು ವಿತರಿಸುವಾಗ ಈ ಘಟನೆ ನಡೆದಿದೆ. ಅಪರಿಚಿತ ಜನರು ಸ್ವರಾಜ್ ಅಭಿಯಾನದ ಕಾರ್ಯಕರ್ತೆಯಾದ ಝರೀನ್ ತಾಜ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು “ದಿ ಹಿಂದೂ” ವರದಿ ಮಾಡಿದೆ. ದಾಳಿಕೋರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಎಂದು ತಾಜ್ ಆರೋಪಿಸಿದ್ದಾರೆ.

ಈ ಘಟನೆಯಲ್ಲಿ ಅವರ ಮಗ ಮತ್ತು ಅವನ ಸ್ನೇಹಿತ ಸೇರಿದಂತೆ ನಾಲ್ವರು ಕುಟುಂಬ ಸದಸ್ಯರು ಗಾಯಗೊಂಡಿದ್ದಾರೆ ಎಂದು ತಾಜ್ ಹೇಳಿದ್ದಾರೆ. “ಆರೋಗ್ಯ ಇಲಾಖೆಯು ಪರಿಶೀಲನೆ ನಡೆಸಿ ಇದನ್ನು ಸುರಕ್ಷಿತವೆಂದು ಪ್ರಮಾಣಗೊಳಿಸುವವರೆಗೂ ಪಡಿತರವನ್ನು ವಿತರಿಸಲು ಬಿಡುವುದಿಲ್ಲ ಎಂದು ಧಮಕಿ ಹಾಕಿದ ಆರ್‌ಎಸ್‌ಎಸ್‌ ಕಾರ್ಯಕರ್ತರು ನಾವು ಉದ್ದೇಶಪೂರ್ವಕವಾಗಿ ವೈರಸ್ ಹರಡುತ್ತಿದ್ದೇವೆ ಎಂದು ನಿಂದಿಸಿದ್ದಾರೆ” ಎಂದು ತಾಜ್ ಕಿಡಿಕಾರಿದ್ದಾರೆ. ದಾಳಿ ಮಾಡಿದ ನಂತರ ನಮ್ಮ ಮೇಲೆಯೇ ಪಡಿತರ ವಿತರಿಸುವಾಗ ಸಾಮಾಜಿಕ ಅಂತರವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿ ದೂರು ಸಹ ದಾಖಲಿಸಿದ್ದಾರೆ ಎಂದು ತಾಜ್‌ ತಿಳಿಸಿದ್ದಾರೆ.

ಈ ಬಗ್ಗೆ ಸ್ವರಾಜ್ ಅಭಿಯಾನ ಮುಖ್ಯಸ್ಥರಾರ ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

ಹಲ್ಲೆಗೊಳಗಾದವರನ್ನು ಝರೀನ್ ತಾಜ್ ಅವರ ಪುತ್ರ ಹಾಗೂ ಸ್ವರಾಜ್ ಅಭಿಯಾನದ ಬೆಂಗಳೂರು ಜಿಲ್ಲಾ ಕಾರ್ಯದರ್ಶಿಯಾದ ಸೈಯದ್ ತಬ್ರೆಜ್, ಕಿರಣ್, ಜುನೈದ್, ರಿಯಾಜ್, ಫಿರೋಜ್ ಮತ್ತು ಅಮ್ಜದ್ ಎಂದು ಗುರುತಿಸಲಾಗಿದೆ.

ಈ ಕುರಿತು ಝರಿನಾ ತಾಜ್‌ರವರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುಂದಕ್ಕೆ ಇಂತಹ ಅಡೆತಡೆಗಳು ನಡೆಯದಂತೆ ಕ್ರಮಕೈಗೊಳ್ಳುತ್ತೇವೆ ಎಂದು ಪೋಲಿಸರು ಭರವಸೆ ನೀಡಿದ್ದರು, ಆದರೆ ಸೋಮವಾರವೂ ಸಹ ಅವರು ಪಡಿತರವನ್ನು ವಿತರಿಸುವಾಗ, ಏಪ್ರಿಲ್ 4 ರಂದು ಎದುರಿಸಿದವರಿಗಿಂತ ಭಿನ್ನವಾದ ಆರು ಜನರ ಗುಂಪು ಕ್ರಿಕೆಟ್ ಬ್ಯಾಟ್ ಗಳಿಂದ ಹಲ್ಲೆ ಮಾಡಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಮತ್ತೊಂದು ದೂರು ನೀಡಲು ಹೋದರೆ ಪೊಲೀಸರು ರಾಜಿ ಮಾಡಿಕೊಳ್ಳಿ ಎಂದು ಒತ್ತಡ ಮಾಡುತ್ತಿದ್ದಾರೆ ಅವರು ಆರೋಪಿಸಿದ್ದಾರೆ.

“ನಮ್ಮಲ್ಲಿ ಐದು ಜನರು ತೀವ್ರವಾಗಿ ಗಾಯಗೊಂಡಿದ್ದೇವೆ, ನಾವು ಹಸಿದವರಿಗೆ ಸಹಾಯ ಮಾಡಲು ಬಯಸುವುದು ತಪ್ಪೇ?” ಎಂದು ತಾಜ್ ಹೇಳಿದ್ದಾರೆ.

“ಮುಸ್ಲಿಮರು ಪಡಿತರದಲ್ಲಿ ವಿಷವನ್ನು ನೀಡುತ್ತಿದ್ದಾರೆ, ನೀವು ಇಲ್ಲಿ ಆಹಾರವನ್ನು ತಲುಪಿಸುವಂತಿಲ್ಲ, ಕೂಡಲೆ ನೀವು ಕೊಳೆಗೇರಿ ಬಿಟ್ಟು ಬೇರೆಡೆಗೆ ಹೋಗಬೇಕು” ಎಂದು ಹಲ್ಲೆ ನಡೆಸಿದವರು ಹೇಳಿದ್ದಾರೆ ಎಂದು ತಾಜ್ ಆರೋಪಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಶಾಂಪುರದ ಡಾ.ಅಂಬೇಡ್ಕರ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಕೋಮು ದ್ವೇಷವನ್ನು ಹರಡುವ ಯಾರೊಬ್ಬನ್ನೂ ಪೊಲೀಸರು ಸಹಿಸುವುದಿಲ್ಲ ಎಂದು ಬೆಂಗಳೂರು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಭೀಮಾಶಂಕರ್ ಗುಳೆದ್‌ ಹೇಳಿದ್ದಾರೆ. ಈ ವಿಷಯದಲ್ಲಿ ಪ್ರಕರಣ ದಾಖಲಿಸಿ ಮತ್ತು ಆರೋಪಿಗಳನ್ನು ಬಂಧಿಸಲಾಗುವುದು ಎಂದಿದ್ದಾರೆ. ಇದನ್ನು ಮೊದಲು ಏಕೆ ಮಾಡಲಾಗಿಲ್ಲ ಎಂದು ಪ್ರಶ್ನಿಸಿದಾಗ, ಸಂತ್ರಸ್ತರು ಪ್ರಕರಣ ದಾಖಲಿಸಲು ಬಯಸಿರಲಿಲ್ಲ ಎಂದು ಗುಳೆದ್‌ ಹೇಳಿದ್ದಾರೆ.

ಕಳೆದ ವಾರ, ಮುಸ್ಲಿಂ ಸಮುದಾಯದ ನಿಯೋಗವು, ಎಲ್ಲಾ ಪೊಲೀಸ್ ಆಯುಕ್ತರು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದ್ವೇಷದ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡುವಂತೆ, ಮಹಾನಿರ್ದೇಶಕರು ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಪ್ರವೀಣ್ ಸೂದ್ ಅವರಿಗೆ ಮನವಿ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...