Homeಮುಖಪುಟವೋಟ್ ಬ್ಯಾಂಕ್ ರಾಜಕಾರಣ 'ಅಲ್ಪಸಂಖ್ಯಾತರ ತುಷ್ಟೀಕರಣ'ಕ್ಕೆ ಸಂಬಂಧಿಸಿದೆ ಎಂದ NCERT ಪರಿಷ್ಕೃತ ಪಠ್ಯ ಪುಸ್ತಕ

ವೋಟ್ ಬ್ಯಾಂಕ್ ರಾಜಕಾರಣ ‘ಅಲ್ಪಸಂಖ್ಯಾತರ ತುಷ್ಟೀಕರಣ’ಕ್ಕೆ ಸಂಬಂಧಿಸಿದೆ ಎಂದ NCERT ಪರಿಷ್ಕೃತ ಪಠ್ಯ ಪುಸ್ತಕ

- Advertisement -
- Advertisement -

ಭಾರತದಲ್ಲಿ ವೋಟ್ ಬ್ಯಾಂಕ್ ರಾಜಕಾರಣವು ‘ಅಲ್ಪಸಂಖ್ಯಾತರ ತುಷ್ಟೀಕರಣ’ಕ್ಕೆ ಸಂಬಂಧಿಸಿದೆ. ಇದು ರಾಜಕೀಯ ಪಕ್ಷಗಳು ಎಲ್ಲಾ ನಾಗರಿಕರ ಸಮಾನತೆಯ ತತ್ವಗಳನ್ನು ಕಡೆಗಣಿಸುವಂತೆ ಮಾಡುತ್ತದೆ ಎಂದು ಎನ್‌ಸಿಇಆರ್‌ಟಿಯ 11ನೇ ತರಗತಿಯ ಪರಿಷ್ಕೃತ ರಾಜ್ಯಶಾಸ್ತ್ರ ಪಠ್ಯ ಪುಸ್ತಕದಲ್ಲಿ ಹೇಳಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2023-24ನೇ ಶೈಕ್ಷಣಿಕ ವರ್ಷದ ಪಠ್ಯ ಪುಸ್ತಕದಲ್ಲಿ ವೋಟ್‌ ಬ್ಯಾಂಕ್ ರಾಜಕಾರಣ ಎಂಬ ವಿಭಾಗದಲ್ಲಿ ‘ಅಲ್ಪ ಸಂಖ್ಯಾತರ ತುಷ್ಠೀಕರಣ’ ಎನ್ನುವುದು ಇರಲಿಲ್ಲ. ಪರಿಷ್ಕೃತ ಪಠ್ಯದಲ್ಲಿ ಅದನ್ನು ಸೇರಿಸಲಾಗಿದೆ. ಪರಿಷ್ಕೃತ ಪಠ್ಯವು ‘Criticism of Indian secularism’ಎಂಬ ವಿಭಾಗದಲ್ಲಿ ಒಳಗೊಂಡಿದೆ ಎಂದು ವರದಿ ತಿಳಿಸಿದೆ.

ವೋಟ್ ಬ್ಯಾಂಕ್ ರಾಜಕೀಯವನ್ನು ಸಮರ್ಥಿಸುವ ಉದ್ದೇಶದಿಂದ ಮಾತ್ರ’ ಹಳೆಯ ಆವೃತ್ತಿಗೆ ಪರಿಷ್ಕರಣೆಗಳನ್ನು ಮಾಡಲಾಗಿದೆ. ಹೊಸ ಆವೃತ್ತಿಯು ‘Criticism of Indian secularism’ಎಂಬ ವಿಭಾಗಕ್ಕೆ ಸಂಬಂಧಿಸಿದೆ ಎಂದು ಎನ್‌ಸಿಇಆರ್‌ಟಿ ಹೇಳಿದೆ.

“ಅಲ್ಪಸಂಖ್ಯಾತರ ಮತಗಳನ್ನು ಯಾಚಿಸುವ ಜಾತ್ಯತೀತ ರಾಜಕಾರಣಿಗಳು, ಅವರಿಗೆ ಬೇಕಾದುದನ್ನು ನೀಡಲು ಯಶಸ್ವಿಯಾದರೆ, ಇದು ಜಾತ್ಯತೀತೆಯ ಯಶಸ್ಸು. ಇದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ಹಳೆಯ ಮತ್ತು ಹೊಸ ಆವೃತ್ತಿಯ ಎರಡೂ ಪಠ್ಯ ಪುಸ್ತಕಗಳಲ್ಲಿ ಇದೆ ಎಂದು ವರದಿ ತಿಳಿಸಿದೆ.

ಇತರ ಗುಂಪುಗಳ ಹಣ ಮತ್ತು ಹಕ್ಕುಗಳನ್ನು ಬಳಸಿ ಒಂದು ಪ್ರತ್ಯೇಕ ಗುಂಪಿನ ಕಲ್ಯಾಣ ಮಾಡಿದರೆ ಹೇಗೆ? ಇಂತಹ ಸೆಕ್ಯುಲರ್ ರಾಜಕಾರಣಿಗಳಿಂದ ಬಹುಸಂಖ್ಯಾತರ ಹಿತಾಸಕ್ತಿಗೆ ಧಕ್ಕೆಯಾದರೆ? ಆಗ ಹೊಸ ಅನ್ಯಾಯ ಹುಟ್ಟುತ್ತದೆ ಎಂದು ಪರಿಷ್ಕೃತ ಪಠ್ಯದಲ್ಲಿ ಹೇಳಲಾಗಿದೆಯಂತೆ.

“ಸಿದ್ಧಾಂತದಲ್ಲಿ ವೋಟ್‌ ಬ್ಯಾಂಕ್‌ ರಾಜಕಾರಣದಲ್ಲಿ ಯಾವುದೇ ತಪ್ಪಿಲ್ಲದಿದ್ದರೂ, ಅದರ ಅಭ್ಯಾಸವು ಚುನಾವಣಾ ರಾಜಕೀಯವನ್ನು ವಿರೂಪಗೊಳಿಸುತ್ತದೆ ಮತ್ತು ನಿರ್ದಿಷ್ಟ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗೆ ಸಾಮೂಹಿಕವಾಗಿ ಮತ ಚಲಾಯಿಸಲು ಸಾಮಾಜಿಕ ಗುಂಪನ್ನು ಸಜ್ಜುಗೊಳಿಸುತ್ತದೆ” ಎಂದು ಪರಿಷ್ಕತ ಪಠ್ಯ ಪುಸ್ತಕ ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

“ಅಲ್ಪಸಂಖ್ಯಾತ ಗುಂಪಿನಲ್ಲಿ ವೈವಿಧ್ಯತೆಯ ಹೊರತಾಗಿಯೂ, ವೋಟ್ ಬ್ಯಾಂಕ್ ರಾಜಕೀಯವನ್ನು ಅನುಸರಿಸುವ ಪಕ್ಷ ಅಥವಾ ನಾಯಕ “ಗುಂಪಿನ ಹಿತಾಸಕ್ತಿ ಒಂದೇ ಎಂಬ ನಂಬಿಕೆಯನ್ನು ಕೃತಕವಾಗಿ ನಿರ್ಮಿಸಲು” ಪ್ರಯತ್ನಿಸುತ್ತದೆ. ಸಮಾಜದ ದೀರ್ಘಾವಧಿಯ ಅಭಿವೃದ್ಧಿ ಮತ್ತು ಆಡಳಿತದ ಅಗತ್ಯಗಳಿಗಿಂತ ಅಲ್ಪಾವಧಿಯ ಚುನಾವಣಾ ಲಾಭಗಳಿಗೆ ಆದ್ಯತೆ ನೀಡುತ್ತದೆ” ಎಂದು ಪಠ್ಯ ಪುಸ್ತಕದಲ್ಲಿದೆ ಎಂದಿದೆ.

ಬಿಜೆಪಿ ಮತ್ತು ಸಂಘಪರಿವಾರ ದೇಶದಲ್ಲಿ ಕಾಂಗ್ರೆಸ್‌ ಸೇರಿದಂತೆ ಇತರ ಪಕ್ಷಗಳು ಓಟ್‌ ಬ್ಯಾಂಕ್‌ಗಾಗಿ ಅಲ್ಪ ಸಂಖ್ಯಾತರ ಓಲೈಕೆಯಲ್ಲಿ ತೊಡಗಿವೆ ಎಂದು ಆಗಾಗ ಹೇಳುತ್ತಿರುತ್ತವೆ. ಆದರೆ, ಕಾಂಗ್ರೆಸ್‌ ಮುಸ್ಲಿಮರ ಮತಗಳನ್ನು ಪಡೆದಿರುವುದಕ್ಕಿಂತ ಹೆಚ್ಚು ಮತಗಳನ್ನು ಮೇಲ್ಜಾತಿ ಹಿಂದೂಗಳಿಂದ ಬಿಜೆಪಿ ಪಡೆದಿದೆ ಎಂದು ಚುನಾವಣೋತ್ತ ಸಮೀಕ್ಷೆಗಳು ಹೇಳಿವೆ.

2014 ಲೋಕಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಶೇ. 38ರಷ್ಟು ಮುಸ್ಲಿಮರು ಕಾಂಗ್ರೆಸ್‌ಗೆ ಮತ ಚಲಾಯಿಸಿರುವುದಾಗಿ ಹೇಳಿದ್ದಾರೆ. ಹಿಂದೂಗಳಲ್ಲಿ ಶೇ.53ರಷ್ಟು ಮಂದಿ ಬಿಜೆಪಿಗೆ ಮತ ಚಲಾಯಿಸುರುವುದಾಗಿ ತಿಳಿಸಿದ್ದಾರೆ. 2019ಕ್ಕೆ ಹೋಲಿಸಿದರೆ ಬಿಜೆಪಿಗೆ ಮತ ಹಾಕಿರುವ ಮೇಲ್ಜಾತಿ ಹಿಂದೂಗಳ ಸಂಖ್ಯೆ ಅದೇ ಮಟ್ಟದಲ್ಲಿದೆ. ಆದರೆ ಇತರ ಹಿಂದುಳಿದ ವರ್ಗ ಮತ್ತು ದಲಿತ ಸಮುದಾಯಗಳ ಮತಗಳು ಕಡಿಮೆಯಾಗಿವೆ.

ಇದನ್ನೂ ಓದಿ : NCERT ಪರಿಷ್ಕೃತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ಕೈ ಬಿಡಲು ಆಗ್ರಹಿಸಿದ ಯೋಗೇಂದ್ರ ಯಾದವ್, ಸುಹಾಸ್ ಪಾಲ್ಶಿಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...