Homeಮುಖಪುಟವೋಟ್ ಬ್ಯಾಂಕ್ ರಾಜಕಾರಣ 'ಅಲ್ಪಸಂಖ್ಯಾತರ ತುಷ್ಟೀಕರಣ'ಕ್ಕೆ ಸಂಬಂಧಿಸಿದೆ ಎಂದ NCERT ಪರಿಷ್ಕೃತ ಪಠ್ಯ ಪುಸ್ತಕ

ವೋಟ್ ಬ್ಯಾಂಕ್ ರಾಜಕಾರಣ ‘ಅಲ್ಪಸಂಖ್ಯಾತರ ತುಷ್ಟೀಕರಣ’ಕ್ಕೆ ಸಂಬಂಧಿಸಿದೆ ಎಂದ NCERT ಪರಿಷ್ಕೃತ ಪಠ್ಯ ಪುಸ್ತಕ

- Advertisement -
- Advertisement -

ಭಾರತದಲ್ಲಿ ವೋಟ್ ಬ್ಯಾಂಕ್ ರಾಜಕಾರಣವು ‘ಅಲ್ಪಸಂಖ್ಯಾತರ ತುಷ್ಟೀಕರಣ’ಕ್ಕೆ ಸಂಬಂಧಿಸಿದೆ. ಇದು ರಾಜಕೀಯ ಪಕ್ಷಗಳು ಎಲ್ಲಾ ನಾಗರಿಕರ ಸಮಾನತೆಯ ತತ್ವಗಳನ್ನು ಕಡೆಗಣಿಸುವಂತೆ ಮಾಡುತ್ತದೆ ಎಂದು ಎನ್‌ಸಿಇಆರ್‌ಟಿಯ 11ನೇ ತರಗತಿಯ ಪರಿಷ್ಕೃತ ರಾಜ್ಯಶಾಸ್ತ್ರ ಪಠ್ಯ ಪುಸ್ತಕದಲ್ಲಿ ಹೇಳಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2023-24ನೇ ಶೈಕ್ಷಣಿಕ ವರ್ಷದ ಪಠ್ಯ ಪುಸ್ತಕದಲ್ಲಿ ವೋಟ್‌ ಬ್ಯಾಂಕ್ ರಾಜಕಾರಣ ಎಂಬ ವಿಭಾಗದಲ್ಲಿ ‘ಅಲ್ಪ ಸಂಖ್ಯಾತರ ತುಷ್ಠೀಕರಣ’ ಎನ್ನುವುದು ಇರಲಿಲ್ಲ. ಪರಿಷ್ಕೃತ ಪಠ್ಯದಲ್ಲಿ ಅದನ್ನು ಸೇರಿಸಲಾಗಿದೆ. ಪರಿಷ್ಕೃತ ಪಠ್ಯವು ‘Criticism of Indian secularism’ಎಂಬ ವಿಭಾಗದಲ್ಲಿ ಒಳಗೊಂಡಿದೆ ಎಂದು ವರದಿ ತಿಳಿಸಿದೆ.

ವೋಟ್ ಬ್ಯಾಂಕ್ ರಾಜಕೀಯವನ್ನು ಸಮರ್ಥಿಸುವ ಉದ್ದೇಶದಿಂದ ಮಾತ್ರ’ ಹಳೆಯ ಆವೃತ್ತಿಗೆ ಪರಿಷ್ಕರಣೆಗಳನ್ನು ಮಾಡಲಾಗಿದೆ. ಹೊಸ ಆವೃತ್ತಿಯು ‘Criticism of Indian secularism’ಎಂಬ ವಿಭಾಗಕ್ಕೆ ಸಂಬಂಧಿಸಿದೆ ಎಂದು ಎನ್‌ಸಿಇಆರ್‌ಟಿ ಹೇಳಿದೆ.

“ಅಲ್ಪಸಂಖ್ಯಾತರ ಮತಗಳನ್ನು ಯಾಚಿಸುವ ಜಾತ್ಯತೀತ ರಾಜಕಾರಣಿಗಳು, ಅವರಿಗೆ ಬೇಕಾದುದನ್ನು ನೀಡಲು ಯಶಸ್ವಿಯಾದರೆ, ಇದು ಜಾತ್ಯತೀತೆಯ ಯಶಸ್ಸು. ಇದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ಹಳೆಯ ಮತ್ತು ಹೊಸ ಆವೃತ್ತಿಯ ಎರಡೂ ಪಠ್ಯ ಪುಸ್ತಕಗಳಲ್ಲಿ ಇದೆ ಎಂದು ವರದಿ ತಿಳಿಸಿದೆ.

ಇತರ ಗುಂಪುಗಳ ಹಣ ಮತ್ತು ಹಕ್ಕುಗಳನ್ನು ಬಳಸಿ ಒಂದು ಪ್ರತ್ಯೇಕ ಗುಂಪಿನ ಕಲ್ಯಾಣ ಮಾಡಿದರೆ ಹೇಗೆ? ಇಂತಹ ಸೆಕ್ಯುಲರ್ ರಾಜಕಾರಣಿಗಳಿಂದ ಬಹುಸಂಖ್ಯಾತರ ಹಿತಾಸಕ್ತಿಗೆ ಧಕ್ಕೆಯಾದರೆ? ಆಗ ಹೊಸ ಅನ್ಯಾಯ ಹುಟ್ಟುತ್ತದೆ ಎಂದು ಪರಿಷ್ಕೃತ ಪಠ್ಯದಲ್ಲಿ ಹೇಳಲಾಗಿದೆಯಂತೆ.

“ಸಿದ್ಧಾಂತದಲ್ಲಿ ವೋಟ್‌ ಬ್ಯಾಂಕ್‌ ರಾಜಕಾರಣದಲ್ಲಿ ಯಾವುದೇ ತಪ್ಪಿಲ್ಲದಿದ್ದರೂ, ಅದರ ಅಭ್ಯಾಸವು ಚುನಾವಣಾ ರಾಜಕೀಯವನ್ನು ವಿರೂಪಗೊಳಿಸುತ್ತದೆ ಮತ್ತು ನಿರ್ದಿಷ್ಟ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗೆ ಸಾಮೂಹಿಕವಾಗಿ ಮತ ಚಲಾಯಿಸಲು ಸಾಮಾಜಿಕ ಗುಂಪನ್ನು ಸಜ್ಜುಗೊಳಿಸುತ್ತದೆ” ಎಂದು ಪರಿಷ್ಕತ ಪಠ್ಯ ಪುಸ್ತಕ ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

“ಅಲ್ಪಸಂಖ್ಯಾತ ಗುಂಪಿನಲ್ಲಿ ವೈವಿಧ್ಯತೆಯ ಹೊರತಾಗಿಯೂ, ವೋಟ್ ಬ್ಯಾಂಕ್ ರಾಜಕೀಯವನ್ನು ಅನುಸರಿಸುವ ಪಕ್ಷ ಅಥವಾ ನಾಯಕ “ಗುಂಪಿನ ಹಿತಾಸಕ್ತಿ ಒಂದೇ ಎಂಬ ನಂಬಿಕೆಯನ್ನು ಕೃತಕವಾಗಿ ನಿರ್ಮಿಸಲು” ಪ್ರಯತ್ನಿಸುತ್ತದೆ. ಸಮಾಜದ ದೀರ್ಘಾವಧಿಯ ಅಭಿವೃದ್ಧಿ ಮತ್ತು ಆಡಳಿತದ ಅಗತ್ಯಗಳಿಗಿಂತ ಅಲ್ಪಾವಧಿಯ ಚುನಾವಣಾ ಲಾಭಗಳಿಗೆ ಆದ್ಯತೆ ನೀಡುತ್ತದೆ” ಎಂದು ಪಠ್ಯ ಪುಸ್ತಕದಲ್ಲಿದೆ ಎಂದಿದೆ.

ಬಿಜೆಪಿ ಮತ್ತು ಸಂಘಪರಿವಾರ ದೇಶದಲ್ಲಿ ಕಾಂಗ್ರೆಸ್‌ ಸೇರಿದಂತೆ ಇತರ ಪಕ್ಷಗಳು ಓಟ್‌ ಬ್ಯಾಂಕ್‌ಗಾಗಿ ಅಲ್ಪ ಸಂಖ್ಯಾತರ ಓಲೈಕೆಯಲ್ಲಿ ತೊಡಗಿವೆ ಎಂದು ಆಗಾಗ ಹೇಳುತ್ತಿರುತ್ತವೆ. ಆದರೆ, ಕಾಂಗ್ರೆಸ್‌ ಮುಸ್ಲಿಮರ ಮತಗಳನ್ನು ಪಡೆದಿರುವುದಕ್ಕಿಂತ ಹೆಚ್ಚು ಮತಗಳನ್ನು ಮೇಲ್ಜಾತಿ ಹಿಂದೂಗಳಿಂದ ಬಿಜೆಪಿ ಪಡೆದಿದೆ ಎಂದು ಚುನಾವಣೋತ್ತ ಸಮೀಕ್ಷೆಗಳು ಹೇಳಿವೆ.

2014 ಲೋಕಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಶೇ. 38ರಷ್ಟು ಮುಸ್ಲಿಮರು ಕಾಂಗ್ರೆಸ್‌ಗೆ ಮತ ಚಲಾಯಿಸಿರುವುದಾಗಿ ಹೇಳಿದ್ದಾರೆ. ಹಿಂದೂಗಳಲ್ಲಿ ಶೇ.53ರಷ್ಟು ಮಂದಿ ಬಿಜೆಪಿಗೆ ಮತ ಚಲಾಯಿಸುರುವುದಾಗಿ ತಿಳಿಸಿದ್ದಾರೆ. 2019ಕ್ಕೆ ಹೋಲಿಸಿದರೆ ಬಿಜೆಪಿಗೆ ಮತ ಹಾಕಿರುವ ಮೇಲ್ಜಾತಿ ಹಿಂದೂಗಳ ಸಂಖ್ಯೆ ಅದೇ ಮಟ್ಟದಲ್ಲಿದೆ. ಆದರೆ ಇತರ ಹಿಂದುಳಿದ ವರ್ಗ ಮತ್ತು ದಲಿತ ಸಮುದಾಯಗಳ ಮತಗಳು ಕಡಿಮೆಯಾಗಿವೆ.

ಇದನ್ನೂ ಓದಿ : NCERT ಪರಿಷ್ಕೃತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ಕೈ ಬಿಡಲು ಆಗ್ರಹಿಸಿದ ಯೋಗೇಂದ್ರ ಯಾದವ್, ಸುಹಾಸ್ ಪಾಲ್ಶಿಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...