Homeಮುಖಪುಟವೋಟ್ ಬ್ಯಾಂಕ್ ರಾಜಕಾರಣ 'ಅಲ್ಪಸಂಖ್ಯಾತರ ತುಷ್ಟೀಕರಣ'ಕ್ಕೆ ಸಂಬಂಧಿಸಿದೆ ಎಂದ NCERT ಪರಿಷ್ಕೃತ ಪಠ್ಯ ಪುಸ್ತಕ

ವೋಟ್ ಬ್ಯಾಂಕ್ ರಾಜಕಾರಣ ‘ಅಲ್ಪಸಂಖ್ಯಾತರ ತುಷ್ಟೀಕರಣ’ಕ್ಕೆ ಸಂಬಂಧಿಸಿದೆ ಎಂದ NCERT ಪರಿಷ್ಕೃತ ಪಠ್ಯ ಪುಸ್ತಕ

- Advertisement -
- Advertisement -

ಭಾರತದಲ್ಲಿ ವೋಟ್ ಬ್ಯಾಂಕ್ ರಾಜಕಾರಣವು ‘ಅಲ್ಪಸಂಖ್ಯಾತರ ತುಷ್ಟೀಕರಣ’ಕ್ಕೆ ಸಂಬಂಧಿಸಿದೆ. ಇದು ರಾಜಕೀಯ ಪಕ್ಷಗಳು ಎಲ್ಲಾ ನಾಗರಿಕರ ಸಮಾನತೆಯ ತತ್ವಗಳನ್ನು ಕಡೆಗಣಿಸುವಂತೆ ಮಾಡುತ್ತದೆ ಎಂದು ಎನ್‌ಸಿಇಆರ್‌ಟಿಯ 11ನೇ ತರಗತಿಯ ಪರಿಷ್ಕೃತ ರಾಜ್ಯಶಾಸ್ತ್ರ ಪಠ್ಯ ಪುಸ್ತಕದಲ್ಲಿ ಹೇಳಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2023-24ನೇ ಶೈಕ್ಷಣಿಕ ವರ್ಷದ ಪಠ್ಯ ಪುಸ್ತಕದಲ್ಲಿ ವೋಟ್‌ ಬ್ಯಾಂಕ್ ರಾಜಕಾರಣ ಎಂಬ ವಿಭಾಗದಲ್ಲಿ ‘ಅಲ್ಪ ಸಂಖ್ಯಾತರ ತುಷ್ಠೀಕರಣ’ ಎನ್ನುವುದು ಇರಲಿಲ್ಲ. ಪರಿಷ್ಕೃತ ಪಠ್ಯದಲ್ಲಿ ಅದನ್ನು ಸೇರಿಸಲಾಗಿದೆ. ಪರಿಷ್ಕೃತ ಪಠ್ಯವು ‘Criticism of Indian secularism’ಎಂಬ ವಿಭಾಗದಲ್ಲಿ ಒಳಗೊಂಡಿದೆ ಎಂದು ವರದಿ ತಿಳಿಸಿದೆ.

ವೋಟ್ ಬ್ಯಾಂಕ್ ರಾಜಕೀಯವನ್ನು ಸಮರ್ಥಿಸುವ ಉದ್ದೇಶದಿಂದ ಮಾತ್ರ’ ಹಳೆಯ ಆವೃತ್ತಿಗೆ ಪರಿಷ್ಕರಣೆಗಳನ್ನು ಮಾಡಲಾಗಿದೆ. ಹೊಸ ಆವೃತ್ತಿಯು ‘Criticism of Indian secularism’ಎಂಬ ವಿಭಾಗಕ್ಕೆ ಸಂಬಂಧಿಸಿದೆ ಎಂದು ಎನ್‌ಸಿಇಆರ್‌ಟಿ ಹೇಳಿದೆ.

“ಅಲ್ಪಸಂಖ್ಯಾತರ ಮತಗಳನ್ನು ಯಾಚಿಸುವ ಜಾತ್ಯತೀತ ರಾಜಕಾರಣಿಗಳು, ಅವರಿಗೆ ಬೇಕಾದುದನ್ನು ನೀಡಲು ಯಶಸ್ವಿಯಾದರೆ, ಇದು ಜಾತ್ಯತೀತೆಯ ಯಶಸ್ಸು. ಇದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ಹಳೆಯ ಮತ್ತು ಹೊಸ ಆವೃತ್ತಿಯ ಎರಡೂ ಪಠ್ಯ ಪುಸ್ತಕಗಳಲ್ಲಿ ಇದೆ ಎಂದು ವರದಿ ತಿಳಿಸಿದೆ.

ಇತರ ಗುಂಪುಗಳ ಹಣ ಮತ್ತು ಹಕ್ಕುಗಳನ್ನು ಬಳಸಿ ಒಂದು ಪ್ರತ್ಯೇಕ ಗುಂಪಿನ ಕಲ್ಯಾಣ ಮಾಡಿದರೆ ಹೇಗೆ? ಇಂತಹ ಸೆಕ್ಯುಲರ್ ರಾಜಕಾರಣಿಗಳಿಂದ ಬಹುಸಂಖ್ಯಾತರ ಹಿತಾಸಕ್ತಿಗೆ ಧಕ್ಕೆಯಾದರೆ? ಆಗ ಹೊಸ ಅನ್ಯಾಯ ಹುಟ್ಟುತ್ತದೆ ಎಂದು ಪರಿಷ್ಕೃತ ಪಠ್ಯದಲ್ಲಿ ಹೇಳಲಾಗಿದೆಯಂತೆ.

“ಸಿದ್ಧಾಂತದಲ್ಲಿ ವೋಟ್‌ ಬ್ಯಾಂಕ್‌ ರಾಜಕಾರಣದಲ್ಲಿ ಯಾವುದೇ ತಪ್ಪಿಲ್ಲದಿದ್ದರೂ, ಅದರ ಅಭ್ಯಾಸವು ಚುನಾವಣಾ ರಾಜಕೀಯವನ್ನು ವಿರೂಪಗೊಳಿಸುತ್ತದೆ ಮತ್ತು ನಿರ್ದಿಷ್ಟ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗೆ ಸಾಮೂಹಿಕವಾಗಿ ಮತ ಚಲಾಯಿಸಲು ಸಾಮಾಜಿಕ ಗುಂಪನ್ನು ಸಜ್ಜುಗೊಳಿಸುತ್ತದೆ” ಎಂದು ಪರಿಷ್ಕತ ಪಠ್ಯ ಪುಸ್ತಕ ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

“ಅಲ್ಪಸಂಖ್ಯಾತ ಗುಂಪಿನಲ್ಲಿ ವೈವಿಧ್ಯತೆಯ ಹೊರತಾಗಿಯೂ, ವೋಟ್ ಬ್ಯಾಂಕ್ ರಾಜಕೀಯವನ್ನು ಅನುಸರಿಸುವ ಪಕ್ಷ ಅಥವಾ ನಾಯಕ “ಗುಂಪಿನ ಹಿತಾಸಕ್ತಿ ಒಂದೇ ಎಂಬ ನಂಬಿಕೆಯನ್ನು ಕೃತಕವಾಗಿ ನಿರ್ಮಿಸಲು” ಪ್ರಯತ್ನಿಸುತ್ತದೆ. ಸಮಾಜದ ದೀರ್ಘಾವಧಿಯ ಅಭಿವೃದ್ಧಿ ಮತ್ತು ಆಡಳಿತದ ಅಗತ್ಯಗಳಿಗಿಂತ ಅಲ್ಪಾವಧಿಯ ಚುನಾವಣಾ ಲಾಭಗಳಿಗೆ ಆದ್ಯತೆ ನೀಡುತ್ತದೆ” ಎಂದು ಪಠ್ಯ ಪುಸ್ತಕದಲ್ಲಿದೆ ಎಂದಿದೆ.

ಬಿಜೆಪಿ ಮತ್ತು ಸಂಘಪರಿವಾರ ದೇಶದಲ್ಲಿ ಕಾಂಗ್ರೆಸ್‌ ಸೇರಿದಂತೆ ಇತರ ಪಕ್ಷಗಳು ಓಟ್‌ ಬ್ಯಾಂಕ್‌ಗಾಗಿ ಅಲ್ಪ ಸಂಖ್ಯಾತರ ಓಲೈಕೆಯಲ್ಲಿ ತೊಡಗಿವೆ ಎಂದು ಆಗಾಗ ಹೇಳುತ್ತಿರುತ್ತವೆ. ಆದರೆ, ಕಾಂಗ್ರೆಸ್‌ ಮುಸ್ಲಿಮರ ಮತಗಳನ್ನು ಪಡೆದಿರುವುದಕ್ಕಿಂತ ಹೆಚ್ಚು ಮತಗಳನ್ನು ಮೇಲ್ಜಾತಿ ಹಿಂದೂಗಳಿಂದ ಬಿಜೆಪಿ ಪಡೆದಿದೆ ಎಂದು ಚುನಾವಣೋತ್ತ ಸಮೀಕ್ಷೆಗಳು ಹೇಳಿವೆ.

2014 ಲೋಕಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಶೇ. 38ರಷ್ಟು ಮುಸ್ಲಿಮರು ಕಾಂಗ್ರೆಸ್‌ಗೆ ಮತ ಚಲಾಯಿಸಿರುವುದಾಗಿ ಹೇಳಿದ್ದಾರೆ. ಹಿಂದೂಗಳಲ್ಲಿ ಶೇ.53ರಷ್ಟು ಮಂದಿ ಬಿಜೆಪಿಗೆ ಮತ ಚಲಾಯಿಸುರುವುದಾಗಿ ತಿಳಿಸಿದ್ದಾರೆ. 2019ಕ್ಕೆ ಹೋಲಿಸಿದರೆ ಬಿಜೆಪಿಗೆ ಮತ ಹಾಕಿರುವ ಮೇಲ್ಜಾತಿ ಹಿಂದೂಗಳ ಸಂಖ್ಯೆ ಅದೇ ಮಟ್ಟದಲ್ಲಿದೆ. ಆದರೆ ಇತರ ಹಿಂದುಳಿದ ವರ್ಗ ಮತ್ತು ದಲಿತ ಸಮುದಾಯಗಳ ಮತಗಳು ಕಡಿಮೆಯಾಗಿವೆ.

ಇದನ್ನೂ ಓದಿ : NCERT ಪರಿಷ್ಕೃತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ಕೈ ಬಿಡಲು ಆಗ್ರಹಿಸಿದ ಯೋಗೇಂದ್ರ ಯಾದವ್, ಸುಹಾಸ್ ಪಾಲ್ಶಿಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...