Homeಮುಖಪುಟವೋಟ್ ಬ್ಯಾಂಕ್ ರಾಜಕಾರಣ 'ಅಲ್ಪಸಂಖ್ಯಾತರ ತುಷ್ಟೀಕರಣ'ಕ್ಕೆ ಸಂಬಂಧಿಸಿದೆ ಎಂದ NCERT ಪರಿಷ್ಕೃತ ಪಠ್ಯ ಪುಸ್ತಕ

ವೋಟ್ ಬ್ಯಾಂಕ್ ರಾಜಕಾರಣ ‘ಅಲ್ಪಸಂಖ್ಯಾತರ ತುಷ್ಟೀಕರಣ’ಕ್ಕೆ ಸಂಬಂಧಿಸಿದೆ ಎಂದ NCERT ಪರಿಷ್ಕೃತ ಪಠ್ಯ ಪುಸ್ತಕ

- Advertisement -
- Advertisement -

ಭಾರತದಲ್ಲಿ ವೋಟ್ ಬ್ಯಾಂಕ್ ರಾಜಕಾರಣವು ‘ಅಲ್ಪಸಂಖ್ಯಾತರ ತುಷ್ಟೀಕರಣ’ಕ್ಕೆ ಸಂಬಂಧಿಸಿದೆ. ಇದು ರಾಜಕೀಯ ಪಕ್ಷಗಳು ಎಲ್ಲಾ ನಾಗರಿಕರ ಸಮಾನತೆಯ ತತ್ವಗಳನ್ನು ಕಡೆಗಣಿಸುವಂತೆ ಮಾಡುತ್ತದೆ ಎಂದು ಎನ್‌ಸಿಇಆರ್‌ಟಿಯ 11ನೇ ತರಗತಿಯ ಪರಿಷ್ಕೃತ ರಾಜ್ಯಶಾಸ್ತ್ರ ಪಠ್ಯ ಪುಸ್ತಕದಲ್ಲಿ ಹೇಳಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2023-24ನೇ ಶೈಕ್ಷಣಿಕ ವರ್ಷದ ಪಠ್ಯ ಪುಸ್ತಕದಲ್ಲಿ ವೋಟ್‌ ಬ್ಯಾಂಕ್ ರಾಜಕಾರಣ ಎಂಬ ವಿಭಾಗದಲ್ಲಿ ‘ಅಲ್ಪ ಸಂಖ್ಯಾತರ ತುಷ್ಠೀಕರಣ’ ಎನ್ನುವುದು ಇರಲಿಲ್ಲ. ಪರಿಷ್ಕೃತ ಪಠ್ಯದಲ್ಲಿ ಅದನ್ನು ಸೇರಿಸಲಾಗಿದೆ. ಪರಿಷ್ಕೃತ ಪಠ್ಯವು ‘Criticism of Indian secularism’ಎಂಬ ವಿಭಾಗದಲ್ಲಿ ಒಳಗೊಂಡಿದೆ ಎಂದು ವರದಿ ತಿಳಿಸಿದೆ.

ವೋಟ್ ಬ್ಯಾಂಕ್ ರಾಜಕೀಯವನ್ನು ಸಮರ್ಥಿಸುವ ಉದ್ದೇಶದಿಂದ ಮಾತ್ರ’ ಹಳೆಯ ಆವೃತ್ತಿಗೆ ಪರಿಷ್ಕರಣೆಗಳನ್ನು ಮಾಡಲಾಗಿದೆ. ಹೊಸ ಆವೃತ್ತಿಯು ‘Criticism of Indian secularism’ಎಂಬ ವಿಭಾಗಕ್ಕೆ ಸಂಬಂಧಿಸಿದೆ ಎಂದು ಎನ್‌ಸಿಇಆರ್‌ಟಿ ಹೇಳಿದೆ.

“ಅಲ್ಪಸಂಖ್ಯಾತರ ಮತಗಳನ್ನು ಯಾಚಿಸುವ ಜಾತ್ಯತೀತ ರಾಜಕಾರಣಿಗಳು, ಅವರಿಗೆ ಬೇಕಾದುದನ್ನು ನೀಡಲು ಯಶಸ್ವಿಯಾದರೆ, ಇದು ಜಾತ್ಯತೀತೆಯ ಯಶಸ್ಸು. ಇದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ಹಳೆಯ ಮತ್ತು ಹೊಸ ಆವೃತ್ತಿಯ ಎರಡೂ ಪಠ್ಯ ಪುಸ್ತಕಗಳಲ್ಲಿ ಇದೆ ಎಂದು ವರದಿ ತಿಳಿಸಿದೆ.

ಇತರ ಗುಂಪುಗಳ ಹಣ ಮತ್ತು ಹಕ್ಕುಗಳನ್ನು ಬಳಸಿ ಒಂದು ಪ್ರತ್ಯೇಕ ಗುಂಪಿನ ಕಲ್ಯಾಣ ಮಾಡಿದರೆ ಹೇಗೆ? ಇಂತಹ ಸೆಕ್ಯುಲರ್ ರಾಜಕಾರಣಿಗಳಿಂದ ಬಹುಸಂಖ್ಯಾತರ ಹಿತಾಸಕ್ತಿಗೆ ಧಕ್ಕೆಯಾದರೆ? ಆಗ ಹೊಸ ಅನ್ಯಾಯ ಹುಟ್ಟುತ್ತದೆ ಎಂದು ಪರಿಷ್ಕೃತ ಪಠ್ಯದಲ್ಲಿ ಹೇಳಲಾಗಿದೆಯಂತೆ.

“ಸಿದ್ಧಾಂತದಲ್ಲಿ ವೋಟ್‌ ಬ್ಯಾಂಕ್‌ ರಾಜಕಾರಣದಲ್ಲಿ ಯಾವುದೇ ತಪ್ಪಿಲ್ಲದಿದ್ದರೂ, ಅದರ ಅಭ್ಯಾಸವು ಚುನಾವಣಾ ರಾಜಕೀಯವನ್ನು ವಿರೂಪಗೊಳಿಸುತ್ತದೆ ಮತ್ತು ನಿರ್ದಿಷ್ಟ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗೆ ಸಾಮೂಹಿಕವಾಗಿ ಮತ ಚಲಾಯಿಸಲು ಸಾಮಾಜಿಕ ಗುಂಪನ್ನು ಸಜ್ಜುಗೊಳಿಸುತ್ತದೆ” ಎಂದು ಪರಿಷ್ಕತ ಪಠ್ಯ ಪುಸ್ತಕ ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

“ಅಲ್ಪಸಂಖ್ಯಾತ ಗುಂಪಿನಲ್ಲಿ ವೈವಿಧ್ಯತೆಯ ಹೊರತಾಗಿಯೂ, ವೋಟ್ ಬ್ಯಾಂಕ್ ರಾಜಕೀಯವನ್ನು ಅನುಸರಿಸುವ ಪಕ್ಷ ಅಥವಾ ನಾಯಕ “ಗುಂಪಿನ ಹಿತಾಸಕ್ತಿ ಒಂದೇ ಎಂಬ ನಂಬಿಕೆಯನ್ನು ಕೃತಕವಾಗಿ ನಿರ್ಮಿಸಲು” ಪ್ರಯತ್ನಿಸುತ್ತದೆ. ಸಮಾಜದ ದೀರ್ಘಾವಧಿಯ ಅಭಿವೃದ್ಧಿ ಮತ್ತು ಆಡಳಿತದ ಅಗತ್ಯಗಳಿಗಿಂತ ಅಲ್ಪಾವಧಿಯ ಚುನಾವಣಾ ಲಾಭಗಳಿಗೆ ಆದ್ಯತೆ ನೀಡುತ್ತದೆ” ಎಂದು ಪಠ್ಯ ಪುಸ್ತಕದಲ್ಲಿದೆ ಎಂದಿದೆ.

ಬಿಜೆಪಿ ಮತ್ತು ಸಂಘಪರಿವಾರ ದೇಶದಲ್ಲಿ ಕಾಂಗ್ರೆಸ್‌ ಸೇರಿದಂತೆ ಇತರ ಪಕ್ಷಗಳು ಓಟ್‌ ಬ್ಯಾಂಕ್‌ಗಾಗಿ ಅಲ್ಪ ಸಂಖ್ಯಾತರ ಓಲೈಕೆಯಲ್ಲಿ ತೊಡಗಿವೆ ಎಂದು ಆಗಾಗ ಹೇಳುತ್ತಿರುತ್ತವೆ. ಆದರೆ, ಕಾಂಗ್ರೆಸ್‌ ಮುಸ್ಲಿಮರ ಮತಗಳನ್ನು ಪಡೆದಿರುವುದಕ್ಕಿಂತ ಹೆಚ್ಚು ಮತಗಳನ್ನು ಮೇಲ್ಜಾತಿ ಹಿಂದೂಗಳಿಂದ ಬಿಜೆಪಿ ಪಡೆದಿದೆ ಎಂದು ಚುನಾವಣೋತ್ತ ಸಮೀಕ್ಷೆಗಳು ಹೇಳಿವೆ.

2014 ಲೋಕಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಶೇ. 38ರಷ್ಟು ಮುಸ್ಲಿಮರು ಕಾಂಗ್ರೆಸ್‌ಗೆ ಮತ ಚಲಾಯಿಸಿರುವುದಾಗಿ ಹೇಳಿದ್ದಾರೆ. ಹಿಂದೂಗಳಲ್ಲಿ ಶೇ.53ರಷ್ಟು ಮಂದಿ ಬಿಜೆಪಿಗೆ ಮತ ಚಲಾಯಿಸುರುವುದಾಗಿ ತಿಳಿಸಿದ್ದಾರೆ. 2019ಕ್ಕೆ ಹೋಲಿಸಿದರೆ ಬಿಜೆಪಿಗೆ ಮತ ಹಾಕಿರುವ ಮೇಲ್ಜಾತಿ ಹಿಂದೂಗಳ ಸಂಖ್ಯೆ ಅದೇ ಮಟ್ಟದಲ್ಲಿದೆ. ಆದರೆ ಇತರ ಹಿಂದುಳಿದ ವರ್ಗ ಮತ್ತು ದಲಿತ ಸಮುದಾಯಗಳ ಮತಗಳು ಕಡಿಮೆಯಾಗಿವೆ.

ಇದನ್ನೂ ಓದಿ : NCERT ಪರಿಷ್ಕೃತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ಕೈ ಬಿಡಲು ಆಗ್ರಹಿಸಿದ ಯೋಗೇಂದ್ರ ಯಾದವ್, ಸುಹಾಸ್ ಪಾಲ್ಶಿಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...