Homeಮುಖಪುಟವೋಟ್ ಬ್ಯಾಂಕ್ ರಾಜಕಾರಣ 'ಅಲ್ಪಸಂಖ್ಯಾತರ ತುಷ್ಟೀಕರಣ'ಕ್ಕೆ ಸಂಬಂಧಿಸಿದೆ ಎಂದ NCERT ಪರಿಷ್ಕೃತ ಪಠ್ಯ ಪುಸ್ತಕ

ವೋಟ್ ಬ್ಯಾಂಕ್ ರಾಜಕಾರಣ ‘ಅಲ್ಪಸಂಖ್ಯಾತರ ತುಷ್ಟೀಕರಣ’ಕ್ಕೆ ಸಂಬಂಧಿಸಿದೆ ಎಂದ NCERT ಪರಿಷ್ಕೃತ ಪಠ್ಯ ಪುಸ್ತಕ

- Advertisement -
- Advertisement -

ಭಾರತದಲ್ಲಿ ವೋಟ್ ಬ್ಯಾಂಕ್ ರಾಜಕಾರಣವು ‘ಅಲ್ಪಸಂಖ್ಯಾತರ ತುಷ್ಟೀಕರಣ’ಕ್ಕೆ ಸಂಬಂಧಿಸಿದೆ. ಇದು ರಾಜಕೀಯ ಪಕ್ಷಗಳು ಎಲ್ಲಾ ನಾಗರಿಕರ ಸಮಾನತೆಯ ತತ್ವಗಳನ್ನು ಕಡೆಗಣಿಸುವಂತೆ ಮಾಡುತ್ತದೆ ಎಂದು ಎನ್‌ಸಿಇಆರ್‌ಟಿಯ 11ನೇ ತರಗತಿಯ ಪರಿಷ್ಕೃತ ರಾಜ್ಯಶಾಸ್ತ್ರ ಪಠ್ಯ ಪುಸ್ತಕದಲ್ಲಿ ಹೇಳಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2023-24ನೇ ಶೈಕ್ಷಣಿಕ ವರ್ಷದ ಪಠ್ಯ ಪುಸ್ತಕದಲ್ಲಿ ವೋಟ್‌ ಬ್ಯಾಂಕ್ ರಾಜಕಾರಣ ಎಂಬ ವಿಭಾಗದಲ್ಲಿ ‘ಅಲ್ಪ ಸಂಖ್ಯಾತರ ತುಷ್ಠೀಕರಣ’ ಎನ್ನುವುದು ಇರಲಿಲ್ಲ. ಪರಿಷ್ಕೃತ ಪಠ್ಯದಲ್ಲಿ ಅದನ್ನು ಸೇರಿಸಲಾಗಿದೆ. ಪರಿಷ್ಕೃತ ಪಠ್ಯವು ‘Criticism of Indian secularism’ಎಂಬ ವಿಭಾಗದಲ್ಲಿ ಒಳಗೊಂಡಿದೆ ಎಂದು ವರದಿ ತಿಳಿಸಿದೆ.

ವೋಟ್ ಬ್ಯಾಂಕ್ ರಾಜಕೀಯವನ್ನು ಸಮರ್ಥಿಸುವ ಉದ್ದೇಶದಿಂದ ಮಾತ್ರ’ ಹಳೆಯ ಆವೃತ್ತಿಗೆ ಪರಿಷ್ಕರಣೆಗಳನ್ನು ಮಾಡಲಾಗಿದೆ. ಹೊಸ ಆವೃತ್ತಿಯು ‘Criticism of Indian secularism’ಎಂಬ ವಿಭಾಗಕ್ಕೆ ಸಂಬಂಧಿಸಿದೆ ಎಂದು ಎನ್‌ಸಿಇಆರ್‌ಟಿ ಹೇಳಿದೆ.

“ಅಲ್ಪಸಂಖ್ಯಾತರ ಮತಗಳನ್ನು ಯಾಚಿಸುವ ಜಾತ್ಯತೀತ ರಾಜಕಾರಣಿಗಳು, ಅವರಿಗೆ ಬೇಕಾದುದನ್ನು ನೀಡಲು ಯಶಸ್ವಿಯಾದರೆ, ಇದು ಜಾತ್ಯತೀತೆಯ ಯಶಸ್ಸು. ಇದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ಹಳೆಯ ಮತ್ತು ಹೊಸ ಆವೃತ್ತಿಯ ಎರಡೂ ಪಠ್ಯ ಪುಸ್ತಕಗಳಲ್ಲಿ ಇದೆ ಎಂದು ವರದಿ ತಿಳಿಸಿದೆ.

ಇತರ ಗುಂಪುಗಳ ಹಣ ಮತ್ತು ಹಕ್ಕುಗಳನ್ನು ಬಳಸಿ ಒಂದು ಪ್ರತ್ಯೇಕ ಗುಂಪಿನ ಕಲ್ಯಾಣ ಮಾಡಿದರೆ ಹೇಗೆ? ಇಂತಹ ಸೆಕ್ಯುಲರ್ ರಾಜಕಾರಣಿಗಳಿಂದ ಬಹುಸಂಖ್ಯಾತರ ಹಿತಾಸಕ್ತಿಗೆ ಧಕ್ಕೆಯಾದರೆ? ಆಗ ಹೊಸ ಅನ್ಯಾಯ ಹುಟ್ಟುತ್ತದೆ ಎಂದು ಪರಿಷ್ಕೃತ ಪಠ್ಯದಲ್ಲಿ ಹೇಳಲಾಗಿದೆಯಂತೆ.

“ಸಿದ್ಧಾಂತದಲ್ಲಿ ವೋಟ್‌ ಬ್ಯಾಂಕ್‌ ರಾಜಕಾರಣದಲ್ಲಿ ಯಾವುದೇ ತಪ್ಪಿಲ್ಲದಿದ್ದರೂ, ಅದರ ಅಭ್ಯಾಸವು ಚುನಾವಣಾ ರಾಜಕೀಯವನ್ನು ವಿರೂಪಗೊಳಿಸುತ್ತದೆ ಮತ್ತು ನಿರ್ದಿಷ್ಟ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗೆ ಸಾಮೂಹಿಕವಾಗಿ ಮತ ಚಲಾಯಿಸಲು ಸಾಮಾಜಿಕ ಗುಂಪನ್ನು ಸಜ್ಜುಗೊಳಿಸುತ್ತದೆ” ಎಂದು ಪರಿಷ್ಕತ ಪಠ್ಯ ಪುಸ್ತಕ ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

“ಅಲ್ಪಸಂಖ್ಯಾತ ಗುಂಪಿನಲ್ಲಿ ವೈವಿಧ್ಯತೆಯ ಹೊರತಾಗಿಯೂ, ವೋಟ್ ಬ್ಯಾಂಕ್ ರಾಜಕೀಯವನ್ನು ಅನುಸರಿಸುವ ಪಕ್ಷ ಅಥವಾ ನಾಯಕ “ಗುಂಪಿನ ಹಿತಾಸಕ್ತಿ ಒಂದೇ ಎಂಬ ನಂಬಿಕೆಯನ್ನು ಕೃತಕವಾಗಿ ನಿರ್ಮಿಸಲು” ಪ್ರಯತ್ನಿಸುತ್ತದೆ. ಸಮಾಜದ ದೀರ್ಘಾವಧಿಯ ಅಭಿವೃದ್ಧಿ ಮತ್ತು ಆಡಳಿತದ ಅಗತ್ಯಗಳಿಗಿಂತ ಅಲ್ಪಾವಧಿಯ ಚುನಾವಣಾ ಲಾಭಗಳಿಗೆ ಆದ್ಯತೆ ನೀಡುತ್ತದೆ” ಎಂದು ಪಠ್ಯ ಪುಸ್ತಕದಲ್ಲಿದೆ ಎಂದಿದೆ.

ಬಿಜೆಪಿ ಮತ್ತು ಸಂಘಪರಿವಾರ ದೇಶದಲ್ಲಿ ಕಾಂಗ್ರೆಸ್‌ ಸೇರಿದಂತೆ ಇತರ ಪಕ್ಷಗಳು ಓಟ್‌ ಬ್ಯಾಂಕ್‌ಗಾಗಿ ಅಲ್ಪ ಸಂಖ್ಯಾತರ ಓಲೈಕೆಯಲ್ಲಿ ತೊಡಗಿವೆ ಎಂದು ಆಗಾಗ ಹೇಳುತ್ತಿರುತ್ತವೆ. ಆದರೆ, ಕಾಂಗ್ರೆಸ್‌ ಮುಸ್ಲಿಮರ ಮತಗಳನ್ನು ಪಡೆದಿರುವುದಕ್ಕಿಂತ ಹೆಚ್ಚು ಮತಗಳನ್ನು ಮೇಲ್ಜಾತಿ ಹಿಂದೂಗಳಿಂದ ಬಿಜೆಪಿ ಪಡೆದಿದೆ ಎಂದು ಚುನಾವಣೋತ್ತ ಸಮೀಕ್ಷೆಗಳು ಹೇಳಿವೆ.

2014 ಲೋಕಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಶೇ. 38ರಷ್ಟು ಮುಸ್ಲಿಮರು ಕಾಂಗ್ರೆಸ್‌ಗೆ ಮತ ಚಲಾಯಿಸಿರುವುದಾಗಿ ಹೇಳಿದ್ದಾರೆ. ಹಿಂದೂಗಳಲ್ಲಿ ಶೇ.53ರಷ್ಟು ಮಂದಿ ಬಿಜೆಪಿಗೆ ಮತ ಚಲಾಯಿಸುರುವುದಾಗಿ ತಿಳಿಸಿದ್ದಾರೆ. 2019ಕ್ಕೆ ಹೋಲಿಸಿದರೆ ಬಿಜೆಪಿಗೆ ಮತ ಹಾಕಿರುವ ಮೇಲ್ಜಾತಿ ಹಿಂದೂಗಳ ಸಂಖ್ಯೆ ಅದೇ ಮಟ್ಟದಲ್ಲಿದೆ. ಆದರೆ ಇತರ ಹಿಂದುಳಿದ ವರ್ಗ ಮತ್ತು ದಲಿತ ಸಮುದಾಯಗಳ ಮತಗಳು ಕಡಿಮೆಯಾಗಿವೆ.

ಇದನ್ನೂ ಓದಿ : NCERT ಪರಿಷ್ಕೃತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ಕೈ ಬಿಡಲು ಆಗ್ರಹಿಸಿದ ಯೋಗೇಂದ್ರ ಯಾದವ್, ಸುಹಾಸ್ ಪಾಲ್ಶಿಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...