Homeಮುಖಪುಟವೋಟ್ ಬ್ಯಾಂಕ್ ರಾಜಕಾರಣ 'ಅಲ್ಪಸಂಖ್ಯಾತರ ತುಷ್ಟೀಕರಣ'ಕ್ಕೆ ಸಂಬಂಧಿಸಿದೆ ಎಂದ NCERT ಪರಿಷ್ಕೃತ ಪಠ್ಯ ಪುಸ್ತಕ

ವೋಟ್ ಬ್ಯಾಂಕ್ ರಾಜಕಾರಣ ‘ಅಲ್ಪಸಂಖ್ಯಾತರ ತುಷ್ಟೀಕರಣ’ಕ್ಕೆ ಸಂಬಂಧಿಸಿದೆ ಎಂದ NCERT ಪರಿಷ್ಕೃತ ಪಠ್ಯ ಪುಸ್ತಕ

- Advertisement -
- Advertisement -

ಭಾರತದಲ್ಲಿ ವೋಟ್ ಬ್ಯಾಂಕ್ ರಾಜಕಾರಣವು ‘ಅಲ್ಪಸಂಖ್ಯಾತರ ತುಷ್ಟೀಕರಣ’ಕ್ಕೆ ಸಂಬಂಧಿಸಿದೆ. ಇದು ರಾಜಕೀಯ ಪಕ್ಷಗಳು ಎಲ್ಲಾ ನಾಗರಿಕರ ಸಮಾನತೆಯ ತತ್ವಗಳನ್ನು ಕಡೆಗಣಿಸುವಂತೆ ಮಾಡುತ್ತದೆ ಎಂದು ಎನ್‌ಸಿಇಆರ್‌ಟಿಯ 11ನೇ ತರಗತಿಯ ಪರಿಷ್ಕೃತ ರಾಜ್ಯಶಾಸ್ತ್ರ ಪಠ್ಯ ಪುಸ್ತಕದಲ್ಲಿ ಹೇಳಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2023-24ನೇ ಶೈಕ್ಷಣಿಕ ವರ್ಷದ ಪಠ್ಯ ಪುಸ್ತಕದಲ್ಲಿ ವೋಟ್‌ ಬ್ಯಾಂಕ್ ರಾಜಕಾರಣ ಎಂಬ ವಿಭಾಗದಲ್ಲಿ ‘ಅಲ್ಪ ಸಂಖ್ಯಾತರ ತುಷ್ಠೀಕರಣ’ ಎನ್ನುವುದು ಇರಲಿಲ್ಲ. ಪರಿಷ್ಕೃತ ಪಠ್ಯದಲ್ಲಿ ಅದನ್ನು ಸೇರಿಸಲಾಗಿದೆ. ಪರಿಷ್ಕೃತ ಪಠ್ಯವು ‘Criticism of Indian secularism’ಎಂಬ ವಿಭಾಗದಲ್ಲಿ ಒಳಗೊಂಡಿದೆ ಎಂದು ವರದಿ ತಿಳಿಸಿದೆ.

ವೋಟ್ ಬ್ಯಾಂಕ್ ರಾಜಕೀಯವನ್ನು ಸಮರ್ಥಿಸುವ ಉದ್ದೇಶದಿಂದ ಮಾತ್ರ’ ಹಳೆಯ ಆವೃತ್ತಿಗೆ ಪರಿಷ್ಕರಣೆಗಳನ್ನು ಮಾಡಲಾಗಿದೆ. ಹೊಸ ಆವೃತ್ತಿಯು ‘Criticism of Indian secularism’ಎಂಬ ವಿಭಾಗಕ್ಕೆ ಸಂಬಂಧಿಸಿದೆ ಎಂದು ಎನ್‌ಸಿಇಆರ್‌ಟಿ ಹೇಳಿದೆ.

“ಅಲ್ಪಸಂಖ್ಯಾತರ ಮತಗಳನ್ನು ಯಾಚಿಸುವ ಜಾತ್ಯತೀತ ರಾಜಕಾರಣಿಗಳು, ಅವರಿಗೆ ಬೇಕಾದುದನ್ನು ನೀಡಲು ಯಶಸ್ವಿಯಾದರೆ, ಇದು ಜಾತ್ಯತೀತೆಯ ಯಶಸ್ಸು. ಇದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ಹಳೆಯ ಮತ್ತು ಹೊಸ ಆವೃತ್ತಿಯ ಎರಡೂ ಪಠ್ಯ ಪುಸ್ತಕಗಳಲ್ಲಿ ಇದೆ ಎಂದು ವರದಿ ತಿಳಿಸಿದೆ.

ಇತರ ಗುಂಪುಗಳ ಹಣ ಮತ್ತು ಹಕ್ಕುಗಳನ್ನು ಬಳಸಿ ಒಂದು ಪ್ರತ್ಯೇಕ ಗುಂಪಿನ ಕಲ್ಯಾಣ ಮಾಡಿದರೆ ಹೇಗೆ? ಇಂತಹ ಸೆಕ್ಯುಲರ್ ರಾಜಕಾರಣಿಗಳಿಂದ ಬಹುಸಂಖ್ಯಾತರ ಹಿತಾಸಕ್ತಿಗೆ ಧಕ್ಕೆಯಾದರೆ? ಆಗ ಹೊಸ ಅನ್ಯಾಯ ಹುಟ್ಟುತ್ತದೆ ಎಂದು ಪರಿಷ್ಕೃತ ಪಠ್ಯದಲ್ಲಿ ಹೇಳಲಾಗಿದೆಯಂತೆ.

“ಸಿದ್ಧಾಂತದಲ್ಲಿ ವೋಟ್‌ ಬ್ಯಾಂಕ್‌ ರಾಜಕಾರಣದಲ್ಲಿ ಯಾವುದೇ ತಪ್ಪಿಲ್ಲದಿದ್ದರೂ, ಅದರ ಅಭ್ಯಾಸವು ಚುನಾವಣಾ ರಾಜಕೀಯವನ್ನು ವಿರೂಪಗೊಳಿಸುತ್ತದೆ ಮತ್ತು ನಿರ್ದಿಷ್ಟ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗೆ ಸಾಮೂಹಿಕವಾಗಿ ಮತ ಚಲಾಯಿಸಲು ಸಾಮಾಜಿಕ ಗುಂಪನ್ನು ಸಜ್ಜುಗೊಳಿಸುತ್ತದೆ” ಎಂದು ಪರಿಷ್ಕತ ಪಠ್ಯ ಪುಸ್ತಕ ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

“ಅಲ್ಪಸಂಖ್ಯಾತ ಗುಂಪಿನಲ್ಲಿ ವೈವಿಧ್ಯತೆಯ ಹೊರತಾಗಿಯೂ, ವೋಟ್ ಬ್ಯಾಂಕ್ ರಾಜಕೀಯವನ್ನು ಅನುಸರಿಸುವ ಪಕ್ಷ ಅಥವಾ ನಾಯಕ “ಗುಂಪಿನ ಹಿತಾಸಕ್ತಿ ಒಂದೇ ಎಂಬ ನಂಬಿಕೆಯನ್ನು ಕೃತಕವಾಗಿ ನಿರ್ಮಿಸಲು” ಪ್ರಯತ್ನಿಸುತ್ತದೆ. ಸಮಾಜದ ದೀರ್ಘಾವಧಿಯ ಅಭಿವೃದ್ಧಿ ಮತ್ತು ಆಡಳಿತದ ಅಗತ್ಯಗಳಿಗಿಂತ ಅಲ್ಪಾವಧಿಯ ಚುನಾವಣಾ ಲಾಭಗಳಿಗೆ ಆದ್ಯತೆ ನೀಡುತ್ತದೆ” ಎಂದು ಪಠ್ಯ ಪುಸ್ತಕದಲ್ಲಿದೆ ಎಂದಿದೆ.

ಬಿಜೆಪಿ ಮತ್ತು ಸಂಘಪರಿವಾರ ದೇಶದಲ್ಲಿ ಕಾಂಗ್ರೆಸ್‌ ಸೇರಿದಂತೆ ಇತರ ಪಕ್ಷಗಳು ಓಟ್‌ ಬ್ಯಾಂಕ್‌ಗಾಗಿ ಅಲ್ಪ ಸಂಖ್ಯಾತರ ಓಲೈಕೆಯಲ್ಲಿ ತೊಡಗಿವೆ ಎಂದು ಆಗಾಗ ಹೇಳುತ್ತಿರುತ್ತವೆ. ಆದರೆ, ಕಾಂಗ್ರೆಸ್‌ ಮುಸ್ಲಿಮರ ಮತಗಳನ್ನು ಪಡೆದಿರುವುದಕ್ಕಿಂತ ಹೆಚ್ಚು ಮತಗಳನ್ನು ಮೇಲ್ಜಾತಿ ಹಿಂದೂಗಳಿಂದ ಬಿಜೆಪಿ ಪಡೆದಿದೆ ಎಂದು ಚುನಾವಣೋತ್ತ ಸಮೀಕ್ಷೆಗಳು ಹೇಳಿವೆ.

2014 ಲೋಕಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಶೇ. 38ರಷ್ಟು ಮುಸ್ಲಿಮರು ಕಾಂಗ್ರೆಸ್‌ಗೆ ಮತ ಚಲಾಯಿಸಿರುವುದಾಗಿ ಹೇಳಿದ್ದಾರೆ. ಹಿಂದೂಗಳಲ್ಲಿ ಶೇ.53ರಷ್ಟು ಮಂದಿ ಬಿಜೆಪಿಗೆ ಮತ ಚಲಾಯಿಸುರುವುದಾಗಿ ತಿಳಿಸಿದ್ದಾರೆ. 2019ಕ್ಕೆ ಹೋಲಿಸಿದರೆ ಬಿಜೆಪಿಗೆ ಮತ ಹಾಕಿರುವ ಮೇಲ್ಜಾತಿ ಹಿಂದೂಗಳ ಸಂಖ್ಯೆ ಅದೇ ಮಟ್ಟದಲ್ಲಿದೆ. ಆದರೆ ಇತರ ಹಿಂದುಳಿದ ವರ್ಗ ಮತ್ತು ದಲಿತ ಸಮುದಾಯಗಳ ಮತಗಳು ಕಡಿಮೆಯಾಗಿವೆ.

ಇದನ್ನೂ ಓದಿ : NCERT ಪರಿಷ್ಕೃತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ಕೈ ಬಿಡಲು ಆಗ್ರಹಿಸಿದ ಯೋಗೇಂದ್ರ ಯಾದವ್, ಸುಹಾಸ್ ಪಾಲ್ಶಿಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...