Homeಮುಖಪುಟವೋಟ್ ಬ್ಯಾಂಕ್ ರಾಜಕಾರಣ 'ಅಲ್ಪಸಂಖ್ಯಾತರ ತುಷ್ಟೀಕರಣ'ಕ್ಕೆ ಸಂಬಂಧಿಸಿದೆ ಎಂದ NCERT ಪರಿಷ್ಕೃತ ಪಠ್ಯ ಪುಸ್ತಕ

ವೋಟ್ ಬ್ಯಾಂಕ್ ರಾಜಕಾರಣ ‘ಅಲ್ಪಸಂಖ್ಯಾತರ ತುಷ್ಟೀಕರಣ’ಕ್ಕೆ ಸಂಬಂಧಿಸಿದೆ ಎಂದ NCERT ಪರಿಷ್ಕೃತ ಪಠ್ಯ ಪುಸ್ತಕ

- Advertisement -
- Advertisement -

ಭಾರತದಲ್ಲಿ ವೋಟ್ ಬ್ಯಾಂಕ್ ರಾಜಕಾರಣವು ‘ಅಲ್ಪಸಂಖ್ಯಾತರ ತುಷ್ಟೀಕರಣ’ಕ್ಕೆ ಸಂಬಂಧಿಸಿದೆ. ಇದು ರಾಜಕೀಯ ಪಕ್ಷಗಳು ಎಲ್ಲಾ ನಾಗರಿಕರ ಸಮಾನತೆಯ ತತ್ವಗಳನ್ನು ಕಡೆಗಣಿಸುವಂತೆ ಮಾಡುತ್ತದೆ ಎಂದು ಎನ್‌ಸಿಇಆರ್‌ಟಿಯ 11ನೇ ತರಗತಿಯ ಪರಿಷ್ಕೃತ ರಾಜ್ಯಶಾಸ್ತ್ರ ಪಠ್ಯ ಪುಸ್ತಕದಲ್ಲಿ ಹೇಳಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2023-24ನೇ ಶೈಕ್ಷಣಿಕ ವರ್ಷದ ಪಠ್ಯ ಪುಸ್ತಕದಲ್ಲಿ ವೋಟ್‌ ಬ್ಯಾಂಕ್ ರಾಜಕಾರಣ ಎಂಬ ವಿಭಾಗದಲ್ಲಿ ‘ಅಲ್ಪ ಸಂಖ್ಯಾತರ ತುಷ್ಠೀಕರಣ’ ಎನ್ನುವುದು ಇರಲಿಲ್ಲ. ಪರಿಷ್ಕೃತ ಪಠ್ಯದಲ್ಲಿ ಅದನ್ನು ಸೇರಿಸಲಾಗಿದೆ. ಪರಿಷ್ಕೃತ ಪಠ್ಯವು ‘Criticism of Indian secularism’ಎಂಬ ವಿಭಾಗದಲ್ಲಿ ಒಳಗೊಂಡಿದೆ ಎಂದು ವರದಿ ತಿಳಿಸಿದೆ.

ವೋಟ್ ಬ್ಯಾಂಕ್ ರಾಜಕೀಯವನ್ನು ಸಮರ್ಥಿಸುವ ಉದ್ದೇಶದಿಂದ ಮಾತ್ರ’ ಹಳೆಯ ಆವೃತ್ತಿಗೆ ಪರಿಷ್ಕರಣೆಗಳನ್ನು ಮಾಡಲಾಗಿದೆ. ಹೊಸ ಆವೃತ್ತಿಯು ‘Criticism of Indian secularism’ಎಂಬ ವಿಭಾಗಕ್ಕೆ ಸಂಬಂಧಿಸಿದೆ ಎಂದು ಎನ್‌ಸಿಇಆರ್‌ಟಿ ಹೇಳಿದೆ.

“ಅಲ್ಪಸಂಖ್ಯಾತರ ಮತಗಳನ್ನು ಯಾಚಿಸುವ ಜಾತ್ಯತೀತ ರಾಜಕಾರಣಿಗಳು, ಅವರಿಗೆ ಬೇಕಾದುದನ್ನು ನೀಡಲು ಯಶಸ್ವಿಯಾದರೆ, ಇದು ಜಾತ್ಯತೀತೆಯ ಯಶಸ್ಸು. ಇದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ಹಳೆಯ ಮತ್ತು ಹೊಸ ಆವೃತ್ತಿಯ ಎರಡೂ ಪಠ್ಯ ಪುಸ್ತಕಗಳಲ್ಲಿ ಇದೆ ಎಂದು ವರದಿ ತಿಳಿಸಿದೆ.

ಇತರ ಗುಂಪುಗಳ ಹಣ ಮತ್ತು ಹಕ್ಕುಗಳನ್ನು ಬಳಸಿ ಒಂದು ಪ್ರತ್ಯೇಕ ಗುಂಪಿನ ಕಲ್ಯಾಣ ಮಾಡಿದರೆ ಹೇಗೆ? ಇಂತಹ ಸೆಕ್ಯುಲರ್ ರಾಜಕಾರಣಿಗಳಿಂದ ಬಹುಸಂಖ್ಯಾತರ ಹಿತಾಸಕ್ತಿಗೆ ಧಕ್ಕೆಯಾದರೆ? ಆಗ ಹೊಸ ಅನ್ಯಾಯ ಹುಟ್ಟುತ್ತದೆ ಎಂದು ಪರಿಷ್ಕೃತ ಪಠ್ಯದಲ್ಲಿ ಹೇಳಲಾಗಿದೆಯಂತೆ.

“ಸಿದ್ಧಾಂತದಲ್ಲಿ ವೋಟ್‌ ಬ್ಯಾಂಕ್‌ ರಾಜಕಾರಣದಲ್ಲಿ ಯಾವುದೇ ತಪ್ಪಿಲ್ಲದಿದ್ದರೂ, ಅದರ ಅಭ್ಯಾಸವು ಚುನಾವಣಾ ರಾಜಕೀಯವನ್ನು ವಿರೂಪಗೊಳಿಸುತ್ತದೆ ಮತ್ತು ನಿರ್ದಿಷ್ಟ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗೆ ಸಾಮೂಹಿಕವಾಗಿ ಮತ ಚಲಾಯಿಸಲು ಸಾಮಾಜಿಕ ಗುಂಪನ್ನು ಸಜ್ಜುಗೊಳಿಸುತ್ತದೆ” ಎಂದು ಪರಿಷ್ಕತ ಪಠ್ಯ ಪುಸ್ತಕ ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

“ಅಲ್ಪಸಂಖ್ಯಾತ ಗುಂಪಿನಲ್ಲಿ ವೈವಿಧ್ಯತೆಯ ಹೊರತಾಗಿಯೂ, ವೋಟ್ ಬ್ಯಾಂಕ್ ರಾಜಕೀಯವನ್ನು ಅನುಸರಿಸುವ ಪಕ್ಷ ಅಥವಾ ನಾಯಕ “ಗುಂಪಿನ ಹಿತಾಸಕ್ತಿ ಒಂದೇ ಎಂಬ ನಂಬಿಕೆಯನ್ನು ಕೃತಕವಾಗಿ ನಿರ್ಮಿಸಲು” ಪ್ರಯತ್ನಿಸುತ್ತದೆ. ಸಮಾಜದ ದೀರ್ಘಾವಧಿಯ ಅಭಿವೃದ್ಧಿ ಮತ್ತು ಆಡಳಿತದ ಅಗತ್ಯಗಳಿಗಿಂತ ಅಲ್ಪಾವಧಿಯ ಚುನಾವಣಾ ಲಾಭಗಳಿಗೆ ಆದ್ಯತೆ ನೀಡುತ್ತದೆ” ಎಂದು ಪಠ್ಯ ಪುಸ್ತಕದಲ್ಲಿದೆ ಎಂದಿದೆ.

ಬಿಜೆಪಿ ಮತ್ತು ಸಂಘಪರಿವಾರ ದೇಶದಲ್ಲಿ ಕಾಂಗ್ರೆಸ್‌ ಸೇರಿದಂತೆ ಇತರ ಪಕ್ಷಗಳು ಓಟ್‌ ಬ್ಯಾಂಕ್‌ಗಾಗಿ ಅಲ್ಪ ಸಂಖ್ಯಾತರ ಓಲೈಕೆಯಲ್ಲಿ ತೊಡಗಿವೆ ಎಂದು ಆಗಾಗ ಹೇಳುತ್ತಿರುತ್ತವೆ. ಆದರೆ, ಕಾಂಗ್ರೆಸ್‌ ಮುಸ್ಲಿಮರ ಮತಗಳನ್ನು ಪಡೆದಿರುವುದಕ್ಕಿಂತ ಹೆಚ್ಚು ಮತಗಳನ್ನು ಮೇಲ್ಜಾತಿ ಹಿಂದೂಗಳಿಂದ ಬಿಜೆಪಿ ಪಡೆದಿದೆ ಎಂದು ಚುನಾವಣೋತ್ತ ಸಮೀಕ್ಷೆಗಳು ಹೇಳಿವೆ.

2014 ಲೋಕಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಶೇ. 38ರಷ್ಟು ಮುಸ್ಲಿಮರು ಕಾಂಗ್ರೆಸ್‌ಗೆ ಮತ ಚಲಾಯಿಸಿರುವುದಾಗಿ ಹೇಳಿದ್ದಾರೆ. ಹಿಂದೂಗಳಲ್ಲಿ ಶೇ.53ರಷ್ಟು ಮಂದಿ ಬಿಜೆಪಿಗೆ ಮತ ಚಲಾಯಿಸುರುವುದಾಗಿ ತಿಳಿಸಿದ್ದಾರೆ. 2019ಕ್ಕೆ ಹೋಲಿಸಿದರೆ ಬಿಜೆಪಿಗೆ ಮತ ಹಾಕಿರುವ ಮೇಲ್ಜಾತಿ ಹಿಂದೂಗಳ ಸಂಖ್ಯೆ ಅದೇ ಮಟ್ಟದಲ್ಲಿದೆ. ಆದರೆ ಇತರ ಹಿಂದುಳಿದ ವರ್ಗ ಮತ್ತು ದಲಿತ ಸಮುದಾಯಗಳ ಮತಗಳು ಕಡಿಮೆಯಾಗಿವೆ.

ಇದನ್ನೂ ಓದಿ : NCERT ಪರಿಷ್ಕೃತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ಕೈ ಬಿಡಲು ಆಗ್ರಹಿಸಿದ ಯೋಗೇಂದ್ರ ಯಾದವ್, ಸುಹಾಸ್ ಪಾಲ್ಶಿಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...