Homeಮುಖಪುಟಮೋದಿ ಮಣಿಪುರ ಭೇಟಿ ದೊಡ್ಡ ವಿಷಯವೇನಲ್ಲ, 'ಮತಗಳ್ಳತನ' ಈಗ ದೇಶದ ಮುಂದಿರುವ ಪ್ರಮುಖ ಚರ್ಚೆ: ರಾಹುಲ್...

ಮೋದಿ ಮಣಿಪುರ ಭೇಟಿ ದೊಡ್ಡ ವಿಷಯವೇನಲ್ಲ, ‘ಮತಗಳ್ಳತನ’ ಈಗ ದೇಶದ ಮುಂದಿರುವ ಪ್ರಮುಖ ಚರ್ಚೆ: ರಾಹುಲ್ ಗಾಂಧಿ

- Advertisement -
- Advertisement -

ಮಣಿಪುರ ಬಹಳ ಸಮಯದಿಂದ ಸಮಸ್ಯೆಯಲ್ಲಿದೆ, ಪ್ರಧಾನಿ ನರೇಂದ್ರ ಮೋದಿ ಈಗ ಆ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಒಳ್ಳೆಯದು, ಆದರೆ ದೊಡ್ಡ ವಿಷಯವೇನಲ್ಲ. ‘ಮತಗಳ್ಳತನ’ ಪ್ರಸ್ತುತ ದೇಶದ ಮುಂದಿರುವ ಪ್ರಮುಖ ಚರ್ಚೆಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

2023ರಲ್ಲಿ ಜನಾಂಗೀಯ ಸಂಘರ್ಷ ಶುರುವಾದ ಬಳಿಕ ಪ್ರಧಾನಿ ಮೋದಿ ಶನಿವಾರ (ಸೆ.13) ಮೊದಲ ಬಾರಿ ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ.

ಗುಜರಾತ್‌ ಕಾಂಗ್ರೆಸ್‌ನ ಜಿಲ್ಲಾ ಮತ್ತು ನಗರ ಘಟಕದ ಅಧ್ಯಕ್ಷರನ್ನು ಉದ್ದೇಶಿಸಿ ಮಾತನಾಡಲು ಮತ್ತು ಹಿರಿಯ ನಾಯಕರೊಂದಿಗೆ ಸಂವಾದ ನಡೆಸಲು ರಾಹುಲ್ ಗಾಂಧಿಯವರು ಶುಕ್ರವಾರ ಜುನಾಗಢಕ್ಕೆ ಭೇಟಿ ನೀಡಿದ್ದರು. ಪಕ್ಷದ 41 ನಗರ ಮತ್ತು ಜಿಲ್ಲಾ ಅಧ್ಯಕ್ಷರಿಗೆ ತರಬೇತಿ ನೀಡಲು ಎರಡು ಗಂಟೆಗಳಿಗೂ ಹೆಚ್ಚು ಸಮಯ ರಾಹುಲ್ ನಗರದಲ್ಲಿದ್ದರು. ಈ ಮೂಲಕ 2027ರ ವಿಧಾನಸಭಾ ಚುನಾವಣೆಗೆ ಈಗಲೇ ತಯಾರಿಗೆ ಪ್ರಾರಂಭಿಸಿದ್ದಾರೆ.

ರಾಹುಲ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಕಳೆದ ಏಳು ತಿಂಗಳಲ್ಲಿ ಐದನೇ ಬಾರಿ ರಾಹುಲ್ ಗಾಂಧಿ ಗುಜರಾತ್‌ಗೆ ಭೇಟಿ ನೀಡಿದ್ದಾರೆ. ಇದು ಪಕ್ಷ ಸಂಘಟನೆ ಮತ್ತು ಮುಂದಿನ ಚುನಾವಣೆಯ ತಯಾರಿಗೆ ಈಗಲೇ ಧುಮುಕಿರುವುದನ್ನು ಸೂಚಿಸುತ್ತದೆ.

ಜುಲೈ 26 ರಂದು ಗುಜರಾತ್‌ನ ಆನಂದ್‌ ರಾಹುಲ್ ಭೇಟಿ ಕೊಟ್ಟಿದ್ದಾಗ ನೀಡಿದ್ದ ಸಂದೇಶಕ್ಕಿಂತ ಈ ಬಾರಿ ಅವರ ಮಾತುಗಳು ತೀಕ್ಷ್ಣವಾಗಿತ್ತು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜೊತೆ ನೇರಾ ಹಣಾಹಣಿಗೆ ಇಳಿಯಬೇಕು ಮತ್ತು ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬ ದಾಟಿಯಲ್ಲಿ ಇತ್ತು ಎಂದು ವರದಿಗಳು ಹೇಳಿವೆ.

ಗುಜರಾತ್‌ನಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡುವ ಸೂಚನೆಯನ್ನೂ ಕಾಂಗ್ರೆಸ್ ಹೈಕಮಾಂಡ್ ನೀಡಿದೆ. ಒಂಬತ್ತು ಜಿಲ್ಲಾಧ್ಯಕ್ಷರನ್ನು ‘ನಿಷ್ಕ್ರಿಯ’ ಎಂದು ಕರೆದಿದೆ. ಅವರನ್ನು ‘ಕೊಳೆತ ಮಾವಿನಹಣ್ಣು’ಗಳಿಗೆ ಹೋಲಿಸಿದೆ. ಈ ಮೂಲಕ ಸರಿಯಾಗಿ ಕಾರ್ಯನಿರ್ವಹಿಸದವರನ್ನು ತೆಗೆದುಹಾಕಲಾಗುವುದು ಎಂಬ ಸ್ಪಷ್ಟ ಸಂದೇಶ ರವಾನಿಸಿದೆ.

2022ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ವಿರೋಧ ಪಕ್ಷದ ಮತಗಳನ್ನು ವಿಭಜಿಸಿ ಬಿಜೆಪಿಗೆ ಭರ್ಜರಿ ಗೆಲುವು ತಂದುಕೊಟ್ಟಾಗ ಪಕ್ಷ ಅನುಭವಿಸಿದ ಅವಮಾನಕರ ಸೋಲಿನಿಂದ ಈಗ ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಂಡಿದ್ದಾರೆ. ಕಳೆದ ಐದು ವರ್ಷಗಳಲ್ಲಿ, ಎಎಪಿ ಗುಜರಾತ್‌ನಲ್ಲಿ ತನ್ನ ಹೆಜ್ಜೆಗುರುತನ್ನು ಸ್ಥಿರವಾಗಿ ವಿಸ್ತರಿಸಿದೆ. ಬಿಜೆಪಿ ವಿರೋಧಿ ಮತಗಳನ್ನು ಪಡೆಯುವಲ್ಲಿ ಕಾಂಗ್ರೆಸ್‌ಗೆ ಗಂಭೀರ ಸವಾಲಾಗಿ ಹೊರಹೊಮ್ಮಿದೆ ಎಂದು ವರದಿಗಳು ಹೇಳಿವೆ.

ಬಿಜೆಪಿಯನ್ನು ನೇರವಾಗಿ ಎದುರಿಸಲು ಪ್ರತಿಜ್ಞೆ ಮಾಡಿರುವ ರಾಹುಲ್ ಗಾಂಧಿ, ಪಕ್ಷ ಸಂಘಟನೆ ಅಭಿಯಾನ, ನಾಯಕತ್ವ ಪುನರ್‌ರಚನೆ ಮತ್ತು ಹೊಸ ಶಕ್ತಿಯನ್ನು ತುಂಬುವ ಮೂಲಕ ರಾಜ್ಯ ಘಟಕದ ಪ್ರಮುಖ ಪುನರುಜ್ಜೀವನಕ್ಕೆ ನಿರ್ದೇಶನ ನೀಡಿದ್ದಾರೆ. ಇತ್ತೀಚಿನ ತರಬೇತಿ ಅವಧಿಯು ಸ್ಥಳೀಯ ನಾಯಕರನ್ನು ಸ್ಪಷ್ಟ ಕಾರ್ಯತಂತ್ರದೊಂದಿಗೆ ಸಜ್ಜುಗೊಳಿಸುವ ಗುರಿಯನ್ನು ಹೊಂದಿದೆ. ಇದು ಪಕ್ಷದ 2027ರ ದೊಡ್ಡ ದೃಷ್ಟಿಕೋನಕ್ಕೆ ತಳಮಟ್ಟದ ಸಜ್ಜುಗೊಳಿಸುವಿಕೆ ಎಂದು ವರದಿಗಳು ವಿವರಿಸಿವೆ.

ಬಿಜೆಪಿ ದೃಢವಾಗಿ ಬೇರೂರಿರುವ ಮತ್ತು ಎಎಪಿ ತನ್ನ ಮತಗಳನ್ನು ಕೈ ತಪ್ಪುವಂತೆ ಮಾಡುತ್ತಿರುವ ಹಿನ್ನೆಲೆ, ರಾಹುಲ್ ಗಾಂಧಿಯವರ ಗುಜರಾತ್ ಕಸರತ್ತು ಮಹತ್ವ ಪಡೆದುಕೊಂಡಿದೆ. ಆಂತರಿಕವಾಗಿ ಕಾಂಗ್ರೆಸ್ ಮನೆಯನ್ನು ಸ್ವಚ್ಛಗೊಳಿಸುವುದು ಮತ್ತು ಪಕ್ಷವನ್ನು ಒಗ್ಗೂಡಿಸುವ ಮೂಲಕ ಎದುರಾಳಿಗಳ ವಿರುದ್ಧ ಹೋರಾಟವನ್ನು ನಡೆಸುವುದರ ಮೇಲೆ ಗುಜರಾತ್‌ನಲ್ಲಿ ಕಾಂಗ್ರೆಸ್ ಭವಿಷ್ಯ ಅವಲಂಬಿತವಾಗಿದೆ. ಈ ಎಲ್ಲಾ ವಿಷಯಗಳನ್ನು ರಾಹುಲ್ ಗಾಂಧಿ ಅರ್ಥ ಮಾಡಿಕೊಂಡಂತಿದೆ.

ಮೋದಿ ಮಣಿಪುರ ಭೇಟಿ 

2023ರಲ್ಲಿ ಜನಾಂಗೀಯ ಸಂಘರ್ಷ ಶುರುವಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಶನಿವಾರ (ಸೆ.13) ಮೊದಲ ಬಾರಿಗೆ ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ.

ಮಣಿಪುರದಲ್ಲಿ ಮೇ 3, 2023ರಿಂದ ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವೆ ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 260 ಸಾವುಗಳು ಸಂಭವಿಸಿವೆ. ಅಧಿಕೃತ ಸರ್ಕಾರಿ ದತ್ತಾಂಶ ಮತ್ತು ವಿಶ್ವಾಸಾರ್ಹ ಮೂಲಗಳ ವರದಿಗಳ ಪ್ರಕಾರ, ಎರಡೂ ಕಡೆಯ ನಾಗರಿಕರು, ಭದ್ರತಾ ಸಿಬ್ಬಂದಿ ಮತ್ತು ಬಂಡುಕೋರರು ಸಾವಿಗೀಡಾದವರಲ್ಲಿ ಒಳಗೊಂಡಿದ್ದಾರೆ.

ಸಂಘರ್ಷ ಆರಂಭವಾದಾಗಿನಿಂದ ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಬೇಕು ಎಂದು ಕಾಂಗ್ರೆಸ್ ಆದಿಯಾಗಿ ವಿರೋಧ ಪಕ್ಷಗಳು ಮತ್ತು ಇತರ ನಾಗರಿಕ ಸಂಘಟನೆಗಳು ಒತ್ತಾಯ ಮಾಡುತ್ತಲೇ ಬಂದಿವೆ. ಅಲ್ಲದೆ, ಸಂಸತ್ತಿನಲ್ಲಿಯೂ ಪ್ರಧಾನಿ ಈ ಬಗ್ಗೆ ಮಾತನಾಡುವಂತೆ ಆಗ್ರಹಿಸಿವೆ. ಆದರೆ, ಪ್ರಧಾನಿಯಿಂದ ಸೂಕ್ತವಾದ ಪ್ರತಿಕ್ರಿಯೆ ಬಂದಿರಲಿಲ್ಲ.

ವರದಿಗಳ ಪ್ರಕಾರ, ಪ್ರಧಾನಿ ಮೋದಿಯವರ ಭೇಟಿ ವಿರೋಧಿಸಿ 6 ಬಂಡುಕೋರ ಸಂಘಟನೆಗಳು ಮಣಿಪುರ  ಬಂದ್‌ಗೆ ಕರೆ ಕೊಟ್ಟಿವೆ. ಮೋದಿ ಮಣಿಪುರಕ್ಕೆ ಭೇಟಿ ನೀಡಿ ನಿರ್ಗಮಿಸುವವರೆಗೆ ಬಂದ್ ನಡೆಸುವಂತೆ ಮನವಿ ಮಾಡಿವೆ.

ಕಾಂಗ್ಲೇಪಾಕ್ ಕಮ್ಯುನಿಸ್ಟ್ ಪಕ್ಷ (ಕೆಸಿಪಿ),ಕಾಂಗ್ಲೇಯ್ ಯಾವೋಲ್ ಕನ್ನಾ ಲುಪ್ (ಕೆವೈಕೆಎಲ್‌), ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಾಂಗ್ಲೇಪಾಕ್ (ಪಿಆರ್‌ಇಪಿಎಕೆ), ಯುನೈಟೆಡ್ ನ್ಯಾಷನಲ್ ಲಿಬರೇಷನ್ ಫ್ರಂಟ್ (ಯುನೆಎನ್‌ಎಲ್‌ಎಫ್‌) ಮತ್ತು ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್‌ಎ)ಗಳು ಬಂದ್‌ ಕರೆ ಕೊಟ್ಟ ಸಂಘಟನೆಗಳಲ್ಲಿ ಸೇರಿವೆ.

ನಾಳೆ (ಸೆ.13) ಮಣಿಪುರಕ್ಕೆ ಪ್ರಧಾನಿ ಭೇಟಿ: 6 ಬಂಡುಕೋರ ಸಂಘಟನೆಗಳಿಂದ ಮೋದಿ ಬಂದು-ನಿರ್ಗಮಿಸುವವರೆಗೂ ಬಂದ್‌ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...