Homeಮುಖಪುಟಮೋದಿ ಮಣಿಪುರ ಭೇಟಿ ದೊಡ್ಡ ವಿಷಯವೇನಲ್ಲ, 'ಮತಗಳ್ಳತನ' ಈಗ ದೇಶದ ಮುಂದಿರುವ ಪ್ರಮುಖ ಚರ್ಚೆ: ರಾಹುಲ್...

ಮೋದಿ ಮಣಿಪುರ ಭೇಟಿ ದೊಡ್ಡ ವಿಷಯವೇನಲ್ಲ, ‘ಮತಗಳ್ಳತನ’ ಈಗ ದೇಶದ ಮುಂದಿರುವ ಪ್ರಮುಖ ಚರ್ಚೆ: ರಾಹುಲ್ ಗಾಂಧಿ

- Advertisement -
- Advertisement -

ಮಣಿಪುರ ಬಹಳ ಸಮಯದಿಂದ ಸಮಸ್ಯೆಯಲ್ಲಿದೆ, ಪ್ರಧಾನಿ ನರೇಂದ್ರ ಮೋದಿ ಈಗ ಆ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಒಳ್ಳೆಯದು, ಆದರೆ ದೊಡ್ಡ ವಿಷಯವೇನಲ್ಲ. ‘ಮತಗಳ್ಳತನ’ ಪ್ರಸ್ತುತ ದೇಶದ ಮುಂದಿರುವ ಪ್ರಮುಖ ಚರ್ಚೆಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

2023ರಲ್ಲಿ ಜನಾಂಗೀಯ ಸಂಘರ್ಷ ಶುರುವಾದ ಬಳಿಕ ಪ್ರಧಾನಿ ಮೋದಿ ಶನಿವಾರ (ಸೆ.13) ಮೊದಲ ಬಾರಿ ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ.

ಗುಜರಾತ್‌ ಕಾಂಗ್ರೆಸ್‌ನ ಜಿಲ್ಲಾ ಮತ್ತು ನಗರ ಘಟಕದ ಅಧ್ಯಕ್ಷರನ್ನು ಉದ್ದೇಶಿಸಿ ಮಾತನಾಡಲು ಮತ್ತು ಹಿರಿಯ ನಾಯಕರೊಂದಿಗೆ ಸಂವಾದ ನಡೆಸಲು ರಾಹುಲ್ ಗಾಂಧಿಯವರು ಶುಕ್ರವಾರ ಜುನಾಗಢಕ್ಕೆ ಭೇಟಿ ನೀಡಿದ್ದರು. ಪಕ್ಷದ 41 ನಗರ ಮತ್ತು ಜಿಲ್ಲಾ ಅಧ್ಯಕ್ಷರಿಗೆ ತರಬೇತಿ ನೀಡಲು ಎರಡು ಗಂಟೆಗಳಿಗೂ ಹೆಚ್ಚು ಸಮಯ ರಾಹುಲ್ ನಗರದಲ್ಲಿದ್ದರು. ಈ ಮೂಲಕ 2027ರ ವಿಧಾನಸಭಾ ಚುನಾವಣೆಗೆ ಈಗಲೇ ತಯಾರಿಗೆ ಪ್ರಾರಂಭಿಸಿದ್ದಾರೆ.

ರಾಹುಲ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಕಳೆದ ಏಳು ತಿಂಗಳಲ್ಲಿ ಐದನೇ ಬಾರಿ ರಾಹುಲ್ ಗಾಂಧಿ ಗುಜರಾತ್‌ಗೆ ಭೇಟಿ ನೀಡಿದ್ದಾರೆ. ಇದು ಪಕ್ಷ ಸಂಘಟನೆ ಮತ್ತು ಮುಂದಿನ ಚುನಾವಣೆಯ ತಯಾರಿಗೆ ಈಗಲೇ ಧುಮುಕಿರುವುದನ್ನು ಸೂಚಿಸುತ್ತದೆ.

ಜುಲೈ 26 ರಂದು ಗುಜರಾತ್‌ನ ಆನಂದ್‌ ರಾಹುಲ್ ಭೇಟಿ ಕೊಟ್ಟಿದ್ದಾಗ ನೀಡಿದ್ದ ಸಂದೇಶಕ್ಕಿಂತ ಈ ಬಾರಿ ಅವರ ಮಾತುಗಳು ತೀಕ್ಷ್ಣವಾಗಿತ್ತು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜೊತೆ ನೇರಾ ಹಣಾಹಣಿಗೆ ಇಳಿಯಬೇಕು ಮತ್ತು ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬ ದಾಟಿಯಲ್ಲಿ ಇತ್ತು ಎಂದು ವರದಿಗಳು ಹೇಳಿವೆ.

ಗುಜರಾತ್‌ನಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡುವ ಸೂಚನೆಯನ್ನೂ ಕಾಂಗ್ರೆಸ್ ಹೈಕಮಾಂಡ್ ನೀಡಿದೆ. ಒಂಬತ್ತು ಜಿಲ್ಲಾಧ್ಯಕ್ಷರನ್ನು ‘ನಿಷ್ಕ್ರಿಯ’ ಎಂದು ಕರೆದಿದೆ. ಅವರನ್ನು ‘ಕೊಳೆತ ಮಾವಿನಹಣ್ಣು’ಗಳಿಗೆ ಹೋಲಿಸಿದೆ. ಈ ಮೂಲಕ ಸರಿಯಾಗಿ ಕಾರ್ಯನಿರ್ವಹಿಸದವರನ್ನು ತೆಗೆದುಹಾಕಲಾಗುವುದು ಎಂಬ ಸ್ಪಷ್ಟ ಸಂದೇಶ ರವಾನಿಸಿದೆ.

2022ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ವಿರೋಧ ಪಕ್ಷದ ಮತಗಳನ್ನು ವಿಭಜಿಸಿ ಬಿಜೆಪಿಗೆ ಭರ್ಜರಿ ಗೆಲುವು ತಂದುಕೊಟ್ಟಾಗ ಪಕ್ಷ ಅನುಭವಿಸಿದ ಅವಮಾನಕರ ಸೋಲಿನಿಂದ ಈಗ ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಂಡಿದ್ದಾರೆ. ಕಳೆದ ಐದು ವರ್ಷಗಳಲ್ಲಿ, ಎಎಪಿ ಗುಜರಾತ್‌ನಲ್ಲಿ ತನ್ನ ಹೆಜ್ಜೆಗುರುತನ್ನು ಸ್ಥಿರವಾಗಿ ವಿಸ್ತರಿಸಿದೆ. ಬಿಜೆಪಿ ವಿರೋಧಿ ಮತಗಳನ್ನು ಪಡೆಯುವಲ್ಲಿ ಕಾಂಗ್ರೆಸ್‌ಗೆ ಗಂಭೀರ ಸವಾಲಾಗಿ ಹೊರಹೊಮ್ಮಿದೆ ಎಂದು ವರದಿಗಳು ಹೇಳಿವೆ.

ಬಿಜೆಪಿಯನ್ನು ನೇರವಾಗಿ ಎದುರಿಸಲು ಪ್ರತಿಜ್ಞೆ ಮಾಡಿರುವ ರಾಹುಲ್ ಗಾಂಧಿ, ಪಕ್ಷ ಸಂಘಟನೆ ಅಭಿಯಾನ, ನಾಯಕತ್ವ ಪುನರ್‌ರಚನೆ ಮತ್ತು ಹೊಸ ಶಕ್ತಿಯನ್ನು ತುಂಬುವ ಮೂಲಕ ರಾಜ್ಯ ಘಟಕದ ಪ್ರಮುಖ ಪುನರುಜ್ಜೀವನಕ್ಕೆ ನಿರ್ದೇಶನ ನೀಡಿದ್ದಾರೆ. ಇತ್ತೀಚಿನ ತರಬೇತಿ ಅವಧಿಯು ಸ್ಥಳೀಯ ನಾಯಕರನ್ನು ಸ್ಪಷ್ಟ ಕಾರ್ಯತಂತ್ರದೊಂದಿಗೆ ಸಜ್ಜುಗೊಳಿಸುವ ಗುರಿಯನ್ನು ಹೊಂದಿದೆ. ಇದು ಪಕ್ಷದ 2027ರ ದೊಡ್ಡ ದೃಷ್ಟಿಕೋನಕ್ಕೆ ತಳಮಟ್ಟದ ಸಜ್ಜುಗೊಳಿಸುವಿಕೆ ಎಂದು ವರದಿಗಳು ವಿವರಿಸಿವೆ.

ಬಿಜೆಪಿ ದೃಢವಾಗಿ ಬೇರೂರಿರುವ ಮತ್ತು ಎಎಪಿ ತನ್ನ ಮತಗಳನ್ನು ಕೈ ತಪ್ಪುವಂತೆ ಮಾಡುತ್ತಿರುವ ಹಿನ್ನೆಲೆ, ರಾಹುಲ್ ಗಾಂಧಿಯವರ ಗುಜರಾತ್ ಕಸರತ್ತು ಮಹತ್ವ ಪಡೆದುಕೊಂಡಿದೆ. ಆಂತರಿಕವಾಗಿ ಕಾಂಗ್ರೆಸ್ ಮನೆಯನ್ನು ಸ್ವಚ್ಛಗೊಳಿಸುವುದು ಮತ್ತು ಪಕ್ಷವನ್ನು ಒಗ್ಗೂಡಿಸುವ ಮೂಲಕ ಎದುರಾಳಿಗಳ ವಿರುದ್ಧ ಹೋರಾಟವನ್ನು ನಡೆಸುವುದರ ಮೇಲೆ ಗುಜರಾತ್‌ನಲ್ಲಿ ಕಾಂಗ್ರೆಸ್ ಭವಿಷ್ಯ ಅವಲಂಬಿತವಾಗಿದೆ. ಈ ಎಲ್ಲಾ ವಿಷಯಗಳನ್ನು ರಾಹುಲ್ ಗಾಂಧಿ ಅರ್ಥ ಮಾಡಿಕೊಂಡಂತಿದೆ.

ಮೋದಿ ಮಣಿಪುರ ಭೇಟಿ 

2023ರಲ್ಲಿ ಜನಾಂಗೀಯ ಸಂಘರ್ಷ ಶುರುವಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಶನಿವಾರ (ಸೆ.13) ಮೊದಲ ಬಾರಿಗೆ ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ.

ಮಣಿಪುರದಲ್ಲಿ ಮೇ 3, 2023ರಿಂದ ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವೆ ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 260 ಸಾವುಗಳು ಸಂಭವಿಸಿವೆ. ಅಧಿಕೃತ ಸರ್ಕಾರಿ ದತ್ತಾಂಶ ಮತ್ತು ವಿಶ್ವಾಸಾರ್ಹ ಮೂಲಗಳ ವರದಿಗಳ ಪ್ರಕಾರ, ಎರಡೂ ಕಡೆಯ ನಾಗರಿಕರು, ಭದ್ರತಾ ಸಿಬ್ಬಂದಿ ಮತ್ತು ಬಂಡುಕೋರರು ಸಾವಿಗೀಡಾದವರಲ್ಲಿ ಒಳಗೊಂಡಿದ್ದಾರೆ.

ಸಂಘರ್ಷ ಆರಂಭವಾದಾಗಿನಿಂದ ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಬೇಕು ಎಂದು ಕಾಂಗ್ರೆಸ್ ಆದಿಯಾಗಿ ವಿರೋಧ ಪಕ್ಷಗಳು ಮತ್ತು ಇತರ ನಾಗರಿಕ ಸಂಘಟನೆಗಳು ಒತ್ತಾಯ ಮಾಡುತ್ತಲೇ ಬಂದಿವೆ. ಅಲ್ಲದೆ, ಸಂಸತ್ತಿನಲ್ಲಿಯೂ ಪ್ರಧಾನಿ ಈ ಬಗ್ಗೆ ಮಾತನಾಡುವಂತೆ ಆಗ್ರಹಿಸಿವೆ. ಆದರೆ, ಪ್ರಧಾನಿಯಿಂದ ಸೂಕ್ತವಾದ ಪ್ರತಿಕ್ರಿಯೆ ಬಂದಿರಲಿಲ್ಲ.

ವರದಿಗಳ ಪ್ರಕಾರ, ಪ್ರಧಾನಿ ಮೋದಿಯವರ ಭೇಟಿ ವಿರೋಧಿಸಿ 6 ಬಂಡುಕೋರ ಸಂಘಟನೆಗಳು ಮಣಿಪುರ  ಬಂದ್‌ಗೆ ಕರೆ ಕೊಟ್ಟಿವೆ. ಮೋದಿ ಮಣಿಪುರಕ್ಕೆ ಭೇಟಿ ನೀಡಿ ನಿರ್ಗಮಿಸುವವರೆಗೆ ಬಂದ್ ನಡೆಸುವಂತೆ ಮನವಿ ಮಾಡಿವೆ.

ಕಾಂಗ್ಲೇಪಾಕ್ ಕಮ್ಯುನಿಸ್ಟ್ ಪಕ್ಷ (ಕೆಸಿಪಿ),ಕಾಂಗ್ಲೇಯ್ ಯಾವೋಲ್ ಕನ್ನಾ ಲುಪ್ (ಕೆವೈಕೆಎಲ್‌), ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಾಂಗ್ಲೇಪಾಕ್ (ಪಿಆರ್‌ಇಪಿಎಕೆ), ಯುನೈಟೆಡ್ ನ್ಯಾಷನಲ್ ಲಿಬರೇಷನ್ ಫ್ರಂಟ್ (ಯುನೆಎನ್‌ಎಲ್‌ಎಫ್‌) ಮತ್ತು ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್‌ಎ)ಗಳು ಬಂದ್‌ ಕರೆ ಕೊಟ್ಟ ಸಂಘಟನೆಗಳಲ್ಲಿ ಸೇರಿವೆ.

ನಾಳೆ (ಸೆ.13) ಮಣಿಪುರಕ್ಕೆ ಪ್ರಧಾನಿ ಭೇಟಿ: 6 ಬಂಡುಕೋರ ಸಂಘಟನೆಗಳಿಂದ ಮೋದಿ ಬಂದು-ನಿರ್ಗಮಿಸುವವರೆಗೂ ಬಂದ್‌ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...