Homeಮುಖಪುಟಮೋದಿ ಮಣಿಪುರ ಭೇಟಿ ದೊಡ್ಡ ವಿಷಯವೇನಲ್ಲ, 'ಮತಗಳ್ಳತನ' ಈಗ ದೇಶದ ಮುಂದಿರುವ ಪ್ರಮುಖ ಚರ್ಚೆ: ರಾಹುಲ್...

ಮೋದಿ ಮಣಿಪುರ ಭೇಟಿ ದೊಡ್ಡ ವಿಷಯವೇನಲ್ಲ, ‘ಮತಗಳ್ಳತನ’ ಈಗ ದೇಶದ ಮುಂದಿರುವ ಪ್ರಮುಖ ಚರ್ಚೆ: ರಾಹುಲ್ ಗಾಂಧಿ

- Advertisement -
- Advertisement -

ಮಣಿಪುರ ಬಹಳ ಸಮಯದಿಂದ ಸಮಸ್ಯೆಯಲ್ಲಿದೆ, ಪ್ರಧಾನಿ ನರೇಂದ್ರ ಮೋದಿ ಈಗ ಆ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಒಳ್ಳೆಯದು, ಆದರೆ ದೊಡ್ಡ ವಿಷಯವೇನಲ್ಲ. ‘ಮತಗಳ್ಳತನ’ ಪ್ರಸ್ತುತ ದೇಶದ ಮುಂದಿರುವ ಪ್ರಮುಖ ಚರ್ಚೆಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

2023ರಲ್ಲಿ ಜನಾಂಗೀಯ ಸಂಘರ್ಷ ಶುರುವಾದ ಬಳಿಕ ಪ್ರಧಾನಿ ಮೋದಿ ಶನಿವಾರ (ಸೆ.13) ಮೊದಲ ಬಾರಿ ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ.

ಗುಜರಾತ್‌ ಕಾಂಗ್ರೆಸ್‌ನ ಜಿಲ್ಲಾ ಮತ್ತು ನಗರ ಘಟಕದ ಅಧ್ಯಕ್ಷರನ್ನು ಉದ್ದೇಶಿಸಿ ಮಾತನಾಡಲು ಮತ್ತು ಹಿರಿಯ ನಾಯಕರೊಂದಿಗೆ ಸಂವಾದ ನಡೆಸಲು ರಾಹುಲ್ ಗಾಂಧಿಯವರು ಶುಕ್ರವಾರ ಜುನಾಗಢಕ್ಕೆ ಭೇಟಿ ನೀಡಿದ್ದರು. ಪಕ್ಷದ 41 ನಗರ ಮತ್ತು ಜಿಲ್ಲಾ ಅಧ್ಯಕ್ಷರಿಗೆ ತರಬೇತಿ ನೀಡಲು ಎರಡು ಗಂಟೆಗಳಿಗೂ ಹೆಚ್ಚು ಸಮಯ ರಾಹುಲ್ ನಗರದಲ್ಲಿದ್ದರು. ಈ ಮೂಲಕ 2027ರ ವಿಧಾನಸಭಾ ಚುನಾವಣೆಗೆ ಈಗಲೇ ತಯಾರಿಗೆ ಪ್ರಾರಂಭಿಸಿದ್ದಾರೆ.

ರಾಹುಲ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಕಳೆದ ಏಳು ತಿಂಗಳಲ್ಲಿ ಐದನೇ ಬಾರಿ ರಾಹುಲ್ ಗಾಂಧಿ ಗುಜರಾತ್‌ಗೆ ಭೇಟಿ ನೀಡಿದ್ದಾರೆ. ಇದು ಪಕ್ಷ ಸಂಘಟನೆ ಮತ್ತು ಮುಂದಿನ ಚುನಾವಣೆಯ ತಯಾರಿಗೆ ಈಗಲೇ ಧುಮುಕಿರುವುದನ್ನು ಸೂಚಿಸುತ್ತದೆ.

ಜುಲೈ 26 ರಂದು ಗುಜರಾತ್‌ನ ಆನಂದ್‌ ರಾಹುಲ್ ಭೇಟಿ ಕೊಟ್ಟಿದ್ದಾಗ ನೀಡಿದ್ದ ಸಂದೇಶಕ್ಕಿಂತ ಈ ಬಾರಿ ಅವರ ಮಾತುಗಳು ತೀಕ್ಷ್ಣವಾಗಿತ್ತು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜೊತೆ ನೇರಾ ಹಣಾಹಣಿಗೆ ಇಳಿಯಬೇಕು ಮತ್ತು ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬ ದಾಟಿಯಲ್ಲಿ ಇತ್ತು ಎಂದು ವರದಿಗಳು ಹೇಳಿವೆ.

ಗುಜರಾತ್‌ನಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡುವ ಸೂಚನೆಯನ್ನೂ ಕಾಂಗ್ರೆಸ್ ಹೈಕಮಾಂಡ್ ನೀಡಿದೆ. ಒಂಬತ್ತು ಜಿಲ್ಲಾಧ್ಯಕ್ಷರನ್ನು ‘ನಿಷ್ಕ್ರಿಯ’ ಎಂದು ಕರೆದಿದೆ. ಅವರನ್ನು ‘ಕೊಳೆತ ಮಾವಿನಹಣ್ಣು’ಗಳಿಗೆ ಹೋಲಿಸಿದೆ. ಈ ಮೂಲಕ ಸರಿಯಾಗಿ ಕಾರ್ಯನಿರ್ವಹಿಸದವರನ್ನು ತೆಗೆದುಹಾಕಲಾಗುವುದು ಎಂಬ ಸ್ಪಷ್ಟ ಸಂದೇಶ ರವಾನಿಸಿದೆ.

2022ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ವಿರೋಧ ಪಕ್ಷದ ಮತಗಳನ್ನು ವಿಭಜಿಸಿ ಬಿಜೆಪಿಗೆ ಭರ್ಜರಿ ಗೆಲುವು ತಂದುಕೊಟ್ಟಾಗ ಪಕ್ಷ ಅನುಭವಿಸಿದ ಅವಮಾನಕರ ಸೋಲಿನಿಂದ ಈಗ ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಂಡಿದ್ದಾರೆ. ಕಳೆದ ಐದು ವರ್ಷಗಳಲ್ಲಿ, ಎಎಪಿ ಗುಜರಾತ್‌ನಲ್ಲಿ ತನ್ನ ಹೆಜ್ಜೆಗುರುತನ್ನು ಸ್ಥಿರವಾಗಿ ವಿಸ್ತರಿಸಿದೆ. ಬಿಜೆಪಿ ವಿರೋಧಿ ಮತಗಳನ್ನು ಪಡೆಯುವಲ್ಲಿ ಕಾಂಗ್ರೆಸ್‌ಗೆ ಗಂಭೀರ ಸವಾಲಾಗಿ ಹೊರಹೊಮ್ಮಿದೆ ಎಂದು ವರದಿಗಳು ಹೇಳಿವೆ.

ಬಿಜೆಪಿಯನ್ನು ನೇರವಾಗಿ ಎದುರಿಸಲು ಪ್ರತಿಜ್ಞೆ ಮಾಡಿರುವ ರಾಹುಲ್ ಗಾಂಧಿ, ಪಕ್ಷ ಸಂಘಟನೆ ಅಭಿಯಾನ, ನಾಯಕತ್ವ ಪುನರ್‌ರಚನೆ ಮತ್ತು ಹೊಸ ಶಕ್ತಿಯನ್ನು ತುಂಬುವ ಮೂಲಕ ರಾಜ್ಯ ಘಟಕದ ಪ್ರಮುಖ ಪುನರುಜ್ಜೀವನಕ್ಕೆ ನಿರ್ದೇಶನ ನೀಡಿದ್ದಾರೆ. ಇತ್ತೀಚಿನ ತರಬೇತಿ ಅವಧಿಯು ಸ್ಥಳೀಯ ನಾಯಕರನ್ನು ಸ್ಪಷ್ಟ ಕಾರ್ಯತಂತ್ರದೊಂದಿಗೆ ಸಜ್ಜುಗೊಳಿಸುವ ಗುರಿಯನ್ನು ಹೊಂದಿದೆ. ಇದು ಪಕ್ಷದ 2027ರ ದೊಡ್ಡ ದೃಷ್ಟಿಕೋನಕ್ಕೆ ತಳಮಟ್ಟದ ಸಜ್ಜುಗೊಳಿಸುವಿಕೆ ಎಂದು ವರದಿಗಳು ವಿವರಿಸಿವೆ.

ಬಿಜೆಪಿ ದೃಢವಾಗಿ ಬೇರೂರಿರುವ ಮತ್ತು ಎಎಪಿ ತನ್ನ ಮತಗಳನ್ನು ಕೈ ತಪ್ಪುವಂತೆ ಮಾಡುತ್ತಿರುವ ಹಿನ್ನೆಲೆ, ರಾಹುಲ್ ಗಾಂಧಿಯವರ ಗುಜರಾತ್ ಕಸರತ್ತು ಮಹತ್ವ ಪಡೆದುಕೊಂಡಿದೆ. ಆಂತರಿಕವಾಗಿ ಕಾಂಗ್ರೆಸ್ ಮನೆಯನ್ನು ಸ್ವಚ್ಛಗೊಳಿಸುವುದು ಮತ್ತು ಪಕ್ಷವನ್ನು ಒಗ್ಗೂಡಿಸುವ ಮೂಲಕ ಎದುರಾಳಿಗಳ ವಿರುದ್ಧ ಹೋರಾಟವನ್ನು ನಡೆಸುವುದರ ಮೇಲೆ ಗುಜರಾತ್‌ನಲ್ಲಿ ಕಾಂಗ್ರೆಸ್ ಭವಿಷ್ಯ ಅವಲಂಬಿತವಾಗಿದೆ. ಈ ಎಲ್ಲಾ ವಿಷಯಗಳನ್ನು ರಾಹುಲ್ ಗಾಂಧಿ ಅರ್ಥ ಮಾಡಿಕೊಂಡಂತಿದೆ.

ಮೋದಿ ಮಣಿಪುರ ಭೇಟಿ 

2023ರಲ್ಲಿ ಜನಾಂಗೀಯ ಸಂಘರ್ಷ ಶುರುವಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಶನಿವಾರ (ಸೆ.13) ಮೊದಲ ಬಾರಿಗೆ ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ.

ಮಣಿಪುರದಲ್ಲಿ ಮೇ 3, 2023ರಿಂದ ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವೆ ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 260 ಸಾವುಗಳು ಸಂಭವಿಸಿವೆ. ಅಧಿಕೃತ ಸರ್ಕಾರಿ ದತ್ತಾಂಶ ಮತ್ತು ವಿಶ್ವಾಸಾರ್ಹ ಮೂಲಗಳ ವರದಿಗಳ ಪ್ರಕಾರ, ಎರಡೂ ಕಡೆಯ ನಾಗರಿಕರು, ಭದ್ರತಾ ಸಿಬ್ಬಂದಿ ಮತ್ತು ಬಂಡುಕೋರರು ಸಾವಿಗೀಡಾದವರಲ್ಲಿ ಒಳಗೊಂಡಿದ್ದಾರೆ.

ಸಂಘರ್ಷ ಆರಂಭವಾದಾಗಿನಿಂದ ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಬೇಕು ಎಂದು ಕಾಂಗ್ರೆಸ್ ಆದಿಯಾಗಿ ವಿರೋಧ ಪಕ್ಷಗಳು ಮತ್ತು ಇತರ ನಾಗರಿಕ ಸಂಘಟನೆಗಳು ಒತ್ತಾಯ ಮಾಡುತ್ತಲೇ ಬಂದಿವೆ. ಅಲ್ಲದೆ, ಸಂಸತ್ತಿನಲ್ಲಿಯೂ ಪ್ರಧಾನಿ ಈ ಬಗ್ಗೆ ಮಾತನಾಡುವಂತೆ ಆಗ್ರಹಿಸಿವೆ. ಆದರೆ, ಪ್ರಧಾನಿಯಿಂದ ಸೂಕ್ತವಾದ ಪ್ರತಿಕ್ರಿಯೆ ಬಂದಿರಲಿಲ್ಲ.

ವರದಿಗಳ ಪ್ರಕಾರ, ಪ್ರಧಾನಿ ಮೋದಿಯವರ ಭೇಟಿ ವಿರೋಧಿಸಿ 6 ಬಂಡುಕೋರ ಸಂಘಟನೆಗಳು ಮಣಿಪುರ  ಬಂದ್‌ಗೆ ಕರೆ ಕೊಟ್ಟಿವೆ. ಮೋದಿ ಮಣಿಪುರಕ್ಕೆ ಭೇಟಿ ನೀಡಿ ನಿರ್ಗಮಿಸುವವರೆಗೆ ಬಂದ್ ನಡೆಸುವಂತೆ ಮನವಿ ಮಾಡಿವೆ.

ಕಾಂಗ್ಲೇಪಾಕ್ ಕಮ್ಯುನಿಸ್ಟ್ ಪಕ್ಷ (ಕೆಸಿಪಿ),ಕಾಂಗ್ಲೇಯ್ ಯಾವೋಲ್ ಕನ್ನಾ ಲುಪ್ (ಕೆವೈಕೆಎಲ್‌), ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಾಂಗ್ಲೇಪಾಕ್ (ಪಿಆರ್‌ಇಪಿಎಕೆ), ಯುನೈಟೆಡ್ ನ್ಯಾಷನಲ್ ಲಿಬರೇಷನ್ ಫ್ರಂಟ್ (ಯುನೆಎನ್‌ಎಲ್‌ಎಫ್‌) ಮತ್ತು ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್‌ಎ)ಗಳು ಬಂದ್‌ ಕರೆ ಕೊಟ್ಟ ಸಂಘಟನೆಗಳಲ್ಲಿ ಸೇರಿವೆ.

ನಾಳೆ (ಸೆ.13) ಮಣಿಪುರಕ್ಕೆ ಪ್ರಧಾನಿ ಭೇಟಿ: 6 ಬಂಡುಕೋರ ಸಂಘಟನೆಗಳಿಂದ ಮೋದಿ ಬಂದು-ನಿರ್ಗಮಿಸುವವರೆಗೂ ಬಂದ್‌ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...