Homeಮುಖಪುಟಮೋದಿ ಮಣಿಪುರ ಭೇಟಿ ದೊಡ್ಡ ವಿಷಯವೇನಲ್ಲ, 'ಮತಗಳ್ಳತನ' ಈಗ ದೇಶದ ಮುಂದಿರುವ ಪ್ರಮುಖ ಚರ್ಚೆ: ರಾಹುಲ್...

ಮೋದಿ ಮಣಿಪುರ ಭೇಟಿ ದೊಡ್ಡ ವಿಷಯವೇನಲ್ಲ, ‘ಮತಗಳ್ಳತನ’ ಈಗ ದೇಶದ ಮುಂದಿರುವ ಪ್ರಮುಖ ಚರ್ಚೆ: ರಾಹುಲ್ ಗಾಂಧಿ

- Advertisement -
- Advertisement -

ಮಣಿಪುರ ಬಹಳ ಸಮಯದಿಂದ ಸಮಸ್ಯೆಯಲ್ಲಿದೆ, ಪ್ರಧಾನಿ ನರೇಂದ್ರ ಮೋದಿ ಈಗ ಆ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಒಳ್ಳೆಯದು, ಆದರೆ ದೊಡ್ಡ ವಿಷಯವೇನಲ್ಲ. ‘ಮತಗಳ್ಳತನ’ ಪ್ರಸ್ತುತ ದೇಶದ ಮುಂದಿರುವ ಪ್ರಮುಖ ಚರ್ಚೆಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

2023ರಲ್ಲಿ ಜನಾಂಗೀಯ ಸಂಘರ್ಷ ಶುರುವಾದ ಬಳಿಕ ಪ್ರಧಾನಿ ಮೋದಿ ಶನಿವಾರ (ಸೆ.13) ಮೊದಲ ಬಾರಿ ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ.

ಗುಜರಾತ್‌ ಕಾಂಗ್ರೆಸ್‌ನ ಜಿಲ್ಲಾ ಮತ್ತು ನಗರ ಘಟಕದ ಅಧ್ಯಕ್ಷರನ್ನು ಉದ್ದೇಶಿಸಿ ಮಾತನಾಡಲು ಮತ್ತು ಹಿರಿಯ ನಾಯಕರೊಂದಿಗೆ ಸಂವಾದ ನಡೆಸಲು ರಾಹುಲ್ ಗಾಂಧಿಯವರು ಶುಕ್ರವಾರ ಜುನಾಗಢಕ್ಕೆ ಭೇಟಿ ನೀಡಿದ್ದರು. ಪಕ್ಷದ 41 ನಗರ ಮತ್ತು ಜಿಲ್ಲಾ ಅಧ್ಯಕ್ಷರಿಗೆ ತರಬೇತಿ ನೀಡಲು ಎರಡು ಗಂಟೆಗಳಿಗೂ ಹೆಚ್ಚು ಸಮಯ ರಾಹುಲ್ ನಗರದಲ್ಲಿದ್ದರು. ಈ ಮೂಲಕ 2027ರ ವಿಧಾನಸಭಾ ಚುನಾವಣೆಗೆ ಈಗಲೇ ತಯಾರಿಗೆ ಪ್ರಾರಂಭಿಸಿದ್ದಾರೆ.

ರಾಹುಲ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಕಳೆದ ಏಳು ತಿಂಗಳಲ್ಲಿ ಐದನೇ ಬಾರಿ ರಾಹುಲ್ ಗಾಂಧಿ ಗುಜರಾತ್‌ಗೆ ಭೇಟಿ ನೀಡಿದ್ದಾರೆ. ಇದು ಪಕ್ಷ ಸಂಘಟನೆ ಮತ್ತು ಮುಂದಿನ ಚುನಾವಣೆಯ ತಯಾರಿಗೆ ಈಗಲೇ ಧುಮುಕಿರುವುದನ್ನು ಸೂಚಿಸುತ್ತದೆ.

ಜುಲೈ 26 ರಂದು ಗುಜರಾತ್‌ನ ಆನಂದ್‌ ರಾಹುಲ್ ಭೇಟಿ ಕೊಟ್ಟಿದ್ದಾಗ ನೀಡಿದ್ದ ಸಂದೇಶಕ್ಕಿಂತ ಈ ಬಾರಿ ಅವರ ಮಾತುಗಳು ತೀಕ್ಷ್ಣವಾಗಿತ್ತು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜೊತೆ ನೇರಾ ಹಣಾಹಣಿಗೆ ಇಳಿಯಬೇಕು ಮತ್ತು ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬ ದಾಟಿಯಲ್ಲಿ ಇತ್ತು ಎಂದು ವರದಿಗಳು ಹೇಳಿವೆ.

ಗುಜರಾತ್‌ನಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡುವ ಸೂಚನೆಯನ್ನೂ ಕಾಂಗ್ರೆಸ್ ಹೈಕಮಾಂಡ್ ನೀಡಿದೆ. ಒಂಬತ್ತು ಜಿಲ್ಲಾಧ್ಯಕ್ಷರನ್ನು ‘ನಿಷ್ಕ್ರಿಯ’ ಎಂದು ಕರೆದಿದೆ. ಅವರನ್ನು ‘ಕೊಳೆತ ಮಾವಿನಹಣ್ಣು’ಗಳಿಗೆ ಹೋಲಿಸಿದೆ. ಈ ಮೂಲಕ ಸರಿಯಾಗಿ ಕಾರ್ಯನಿರ್ವಹಿಸದವರನ್ನು ತೆಗೆದುಹಾಕಲಾಗುವುದು ಎಂಬ ಸ್ಪಷ್ಟ ಸಂದೇಶ ರವಾನಿಸಿದೆ.

2022ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ವಿರೋಧ ಪಕ್ಷದ ಮತಗಳನ್ನು ವಿಭಜಿಸಿ ಬಿಜೆಪಿಗೆ ಭರ್ಜರಿ ಗೆಲುವು ತಂದುಕೊಟ್ಟಾಗ ಪಕ್ಷ ಅನುಭವಿಸಿದ ಅವಮಾನಕರ ಸೋಲಿನಿಂದ ಈಗ ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಂಡಿದ್ದಾರೆ. ಕಳೆದ ಐದು ವರ್ಷಗಳಲ್ಲಿ, ಎಎಪಿ ಗುಜರಾತ್‌ನಲ್ಲಿ ತನ್ನ ಹೆಜ್ಜೆಗುರುತನ್ನು ಸ್ಥಿರವಾಗಿ ವಿಸ್ತರಿಸಿದೆ. ಬಿಜೆಪಿ ವಿರೋಧಿ ಮತಗಳನ್ನು ಪಡೆಯುವಲ್ಲಿ ಕಾಂಗ್ರೆಸ್‌ಗೆ ಗಂಭೀರ ಸವಾಲಾಗಿ ಹೊರಹೊಮ್ಮಿದೆ ಎಂದು ವರದಿಗಳು ಹೇಳಿವೆ.

ಬಿಜೆಪಿಯನ್ನು ನೇರವಾಗಿ ಎದುರಿಸಲು ಪ್ರತಿಜ್ಞೆ ಮಾಡಿರುವ ರಾಹುಲ್ ಗಾಂಧಿ, ಪಕ್ಷ ಸಂಘಟನೆ ಅಭಿಯಾನ, ನಾಯಕತ್ವ ಪುನರ್‌ರಚನೆ ಮತ್ತು ಹೊಸ ಶಕ್ತಿಯನ್ನು ತುಂಬುವ ಮೂಲಕ ರಾಜ್ಯ ಘಟಕದ ಪ್ರಮುಖ ಪುನರುಜ್ಜೀವನಕ್ಕೆ ನಿರ್ದೇಶನ ನೀಡಿದ್ದಾರೆ. ಇತ್ತೀಚಿನ ತರಬೇತಿ ಅವಧಿಯು ಸ್ಥಳೀಯ ನಾಯಕರನ್ನು ಸ್ಪಷ್ಟ ಕಾರ್ಯತಂತ್ರದೊಂದಿಗೆ ಸಜ್ಜುಗೊಳಿಸುವ ಗುರಿಯನ್ನು ಹೊಂದಿದೆ. ಇದು ಪಕ್ಷದ 2027ರ ದೊಡ್ಡ ದೃಷ್ಟಿಕೋನಕ್ಕೆ ತಳಮಟ್ಟದ ಸಜ್ಜುಗೊಳಿಸುವಿಕೆ ಎಂದು ವರದಿಗಳು ವಿವರಿಸಿವೆ.

ಬಿಜೆಪಿ ದೃಢವಾಗಿ ಬೇರೂರಿರುವ ಮತ್ತು ಎಎಪಿ ತನ್ನ ಮತಗಳನ್ನು ಕೈ ತಪ್ಪುವಂತೆ ಮಾಡುತ್ತಿರುವ ಹಿನ್ನೆಲೆ, ರಾಹುಲ್ ಗಾಂಧಿಯವರ ಗುಜರಾತ್ ಕಸರತ್ತು ಮಹತ್ವ ಪಡೆದುಕೊಂಡಿದೆ. ಆಂತರಿಕವಾಗಿ ಕಾಂಗ್ರೆಸ್ ಮನೆಯನ್ನು ಸ್ವಚ್ಛಗೊಳಿಸುವುದು ಮತ್ತು ಪಕ್ಷವನ್ನು ಒಗ್ಗೂಡಿಸುವ ಮೂಲಕ ಎದುರಾಳಿಗಳ ವಿರುದ್ಧ ಹೋರಾಟವನ್ನು ನಡೆಸುವುದರ ಮೇಲೆ ಗುಜರಾತ್‌ನಲ್ಲಿ ಕಾಂಗ್ರೆಸ್ ಭವಿಷ್ಯ ಅವಲಂಬಿತವಾಗಿದೆ. ಈ ಎಲ್ಲಾ ವಿಷಯಗಳನ್ನು ರಾಹುಲ್ ಗಾಂಧಿ ಅರ್ಥ ಮಾಡಿಕೊಂಡಂತಿದೆ.

ಮೋದಿ ಮಣಿಪುರ ಭೇಟಿ 

2023ರಲ್ಲಿ ಜನಾಂಗೀಯ ಸಂಘರ್ಷ ಶುರುವಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಶನಿವಾರ (ಸೆ.13) ಮೊದಲ ಬಾರಿಗೆ ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ.

ಮಣಿಪುರದಲ್ಲಿ ಮೇ 3, 2023ರಿಂದ ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವೆ ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 260 ಸಾವುಗಳು ಸಂಭವಿಸಿವೆ. ಅಧಿಕೃತ ಸರ್ಕಾರಿ ದತ್ತಾಂಶ ಮತ್ತು ವಿಶ್ವಾಸಾರ್ಹ ಮೂಲಗಳ ವರದಿಗಳ ಪ್ರಕಾರ, ಎರಡೂ ಕಡೆಯ ನಾಗರಿಕರು, ಭದ್ರತಾ ಸಿಬ್ಬಂದಿ ಮತ್ತು ಬಂಡುಕೋರರು ಸಾವಿಗೀಡಾದವರಲ್ಲಿ ಒಳಗೊಂಡಿದ್ದಾರೆ.

ಸಂಘರ್ಷ ಆರಂಭವಾದಾಗಿನಿಂದ ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಬೇಕು ಎಂದು ಕಾಂಗ್ರೆಸ್ ಆದಿಯಾಗಿ ವಿರೋಧ ಪಕ್ಷಗಳು ಮತ್ತು ಇತರ ನಾಗರಿಕ ಸಂಘಟನೆಗಳು ಒತ್ತಾಯ ಮಾಡುತ್ತಲೇ ಬಂದಿವೆ. ಅಲ್ಲದೆ, ಸಂಸತ್ತಿನಲ್ಲಿಯೂ ಪ್ರಧಾನಿ ಈ ಬಗ್ಗೆ ಮಾತನಾಡುವಂತೆ ಆಗ್ರಹಿಸಿವೆ. ಆದರೆ, ಪ್ರಧಾನಿಯಿಂದ ಸೂಕ್ತವಾದ ಪ್ರತಿಕ್ರಿಯೆ ಬಂದಿರಲಿಲ್ಲ.

ವರದಿಗಳ ಪ್ರಕಾರ, ಪ್ರಧಾನಿ ಮೋದಿಯವರ ಭೇಟಿ ವಿರೋಧಿಸಿ 6 ಬಂಡುಕೋರ ಸಂಘಟನೆಗಳು ಮಣಿಪುರ  ಬಂದ್‌ಗೆ ಕರೆ ಕೊಟ್ಟಿವೆ. ಮೋದಿ ಮಣಿಪುರಕ್ಕೆ ಭೇಟಿ ನೀಡಿ ನಿರ್ಗಮಿಸುವವರೆಗೆ ಬಂದ್ ನಡೆಸುವಂತೆ ಮನವಿ ಮಾಡಿವೆ.

ಕಾಂಗ್ಲೇಪಾಕ್ ಕಮ್ಯುನಿಸ್ಟ್ ಪಕ್ಷ (ಕೆಸಿಪಿ),ಕಾಂಗ್ಲೇಯ್ ಯಾವೋಲ್ ಕನ್ನಾ ಲುಪ್ (ಕೆವೈಕೆಎಲ್‌), ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಾಂಗ್ಲೇಪಾಕ್ (ಪಿಆರ್‌ಇಪಿಎಕೆ), ಯುನೈಟೆಡ್ ನ್ಯಾಷನಲ್ ಲಿಬರೇಷನ್ ಫ್ರಂಟ್ (ಯುನೆಎನ್‌ಎಲ್‌ಎಫ್‌) ಮತ್ತು ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್‌ಎ)ಗಳು ಬಂದ್‌ ಕರೆ ಕೊಟ್ಟ ಸಂಘಟನೆಗಳಲ್ಲಿ ಸೇರಿವೆ.

ನಾಳೆ (ಸೆ.13) ಮಣಿಪುರಕ್ಕೆ ಪ್ರಧಾನಿ ಭೇಟಿ: 6 ಬಂಡುಕೋರ ಸಂಘಟನೆಗಳಿಂದ ಮೋದಿ ಬಂದು-ನಿರ್ಗಮಿಸುವವರೆಗೂ ಬಂದ್‌ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...