Homeಮುಖಪುಟ’ಕೈ’ಗೆ ಮತ ನೀಡಿ ಎಂದು ಬಿಜೆಪಿ ರ್‍ಯಾಲಿಯಲ್ಲಿ ಸಿಂಧಿಯಾ ಮತ ಯಾಚನೆ!

’ಕೈ’ಗೆ ಮತ ನೀಡಿ ಎಂದು ಬಿಜೆಪಿ ರ್‍ಯಾಲಿಯಲ್ಲಿ ಸಿಂಧಿಯಾ ಮತ ಯಾಚನೆ!

2002ರಲ್ಲಿ ಕಾಂಗ್ರೆಸ್‌ ಸೇರಿದ್ದ ಸಿಂಧಿಯಾ ಅವರು ಹದಿನೆಂಟು ವರ್ಷಗಳ ನಂತರ ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಬಿಜೆಪಿಗೆ ಸೇರಿದ್ದಾರೆ. ಈ ಘಟನೆ ಸಿಂಧಿಯಾ ಇನ್ನೂ ಕಾಂಗ್ರೆಸ್ ಗುಂಗಿನಲ್ಲೇ ಇದ್ದಾರಾ ಎಂಬ ವದಂತಿಗೆ ಕಾರಣವಾಗಿದ್ದಾರೆ.

- Advertisement -
- Advertisement -

ಕೆಲವು ಅಭ್ಯಾಸಗಳು ಬಿಟ್ಟುಬಿಡಲು ಹಲವು ವರ್ಷಗಳೇ ಬೇಕಾಗುತ್ತದೆ ಎಂಬುದಕ್ಕೆ ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಉದಾಹರಣೆಯಾಗಿದ್ದಾರೆ. ಮಧ್ಯಪ್ರದೇಶದಲ್ಲಿ ಉಪಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್‌ ಪರವಾಗಿ ಮತಯಾಚಿಸಿ, ಮುಜುಗರಕ್ಕೀಡಾಗಿದ್ದಾರೆ. ಈ ಘಟನೆ ಸಿಂಧಿಯಾ ಇನ್ನೂ ಕಾಂಗ್ರೆಸ್ ಗುಂಗಿನಲ್ಲೇ ಇದ್ದಾರಾ ಎಂಬ ವದಂತಿಗೆ ಕಾರಣವಾಗಿದ್ದಾರೆ.

ಸಾರ್ವಜನಿಕ ಸಮಾವೇಶದಲ್ಲಿ ಗ್ವಾಲಿಯರ್‌ನ ದಾಬ್ರ ನಗರದ ಬಿಜೆಪಿ ಅಭ್ಯರ್ಥಿ ಇಮ್ರಾತಿ ದೇವಿ ಪರವಾಗಿ ಮತ ಯಾಚಿಸಲು ಹೋಗಿ ಬಾಯಿತಪ್ಪಿನಿಂದ ಕಾಂಗ್ರೆಸ್‌ಗೆ ಮತ ನೀಡುವಂತೆ ಕೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

‘ದಾಬ್ರದ ಉತ್ಸಾಹಭರಿತ ನನ್ನ ಜನರೇ, ನೀವು ‘ಕೈ’ ಗುರುತಿಗೆ ಮತ ಹಾಕುವಿರಿ ಎಂಬುದನ್ನು ನನಗೂ ಮತ್ತು ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಅವರಿಗೆ ಮನವರಿಕೆ ಮಾಡಲು ನಿಮ್ಮ ಕೈಯನ್ನು ಎತ್ತಿ ಮುಷ್ಟಿ ಮಾಡಿ’ ಎಂದು ಹೇಳಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಅವರು, ಬಿಜೆಪಿಯ ‘ಕಮಲ’ ಚಿಹ್ನೆಗೆ ಮತ ಚಲಾಯಿಸುವಂತೆ ಕೇಳಿದ್ದಾರೆ.

ತಕ್ಷಣ ತಮ್ಮ ಮಾತನ್ನು ಬದಲಾಯಿಸಿಕೊಂಡರೂ ಸಹ ಜನಸಂದಣಿ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಪಕ್ಕದಲ್ಲಿ ನಿಂತಿದ್ದ ಬಿಜೆಪಿ ಅಭ್ಯರ್ಥಿ ಇಮ್ರಾತಿ ದೇವಿಯೂ ನಸುನಗುತ್ತಿರುವುದನ್ನು ಕಾಣಿಸುತ್ತಿತ್ತು.

ಇದನ್ನೂ ಓದಿ: ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೊನೆಕ್ಷಣದಲ್ಲಿ ಕಮಲ್ ನಾಥ್ ಹೆಸರು ಕೈಬಿಟ್ಟ ಚುನಾವಣಾ ಆಯೋಗ!

ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೇಳಿಕೆಯ ವಿಡಿಯೋವನ್ನು ಕಾಂಗ್ರೆಸ್ ಕೂಡ ಟ್ವೀಟ್ ಮಾಡಿದ್ದು, ’ಮಾನ್ಯ ಸಿಂಧಿಯಾ ಜಿ, ಮಧ್ಯಪ್ರದೇಶದ ಜನರು ಖಂಡಿತ ಕಾಂಗ್ರೆಸ್‌​ ಗುರುತಿಗೆ ಮತ ಹಾಕಿ ಬೆಂಬಲಿಸುತ್ತಾರೆ’ ಅಂತ ಟಾಂಗ್ ಕೊಟ್ಟಿದೆ.

’ಇಂತ ತಪ್ಪು ಯಾವುದೇ ವ್ಯಕ್ತಿಯಿಂದಲೂ ಆಗಬಹುದು. ಅವರು ತಕ್ಷಣ ತಮ್ಮ ತಪ್ಪನ್ನು ಸರಿಪಡಿಸಿಕೊಂಡಿದ್ದಾರೆ. ಅವರು ಬಿಜೆಪಿ ನಾಯಕ ಎಂಬುದು ಎಲ್ಲರಿಗೂ ತಿಳಿದಿದೆ’ ಎಂದು ರಾಜ್ಯ ಬಿಜೆಪಿ ವಕ್ತಾರ ಪಂಕಜ್‌ ಚತುರ್ವೇದಿ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಇಮಾರ್ತಿ ದೇವಿ ಕುರಿತು ಕಮಲನಾಥ್‌ ಅವರು ಬಹಿರಂಗ ಸಭೆಯಲ್ಲೆ ‘ಐಟಂ’ ಎಂಬ ಪದ ಬಳಸಿ ವ್ಯಂಗ್ಯವಾಡಿದ್ದರು ಈ ಬಗ್ಗೆ ಬಿಜೆಪಿಯಲ್ಲಿ ಆಕ್ರೋಶ ಭುಗಿಲ್ಲೆದ್ದಿತು. ನಂತರ ಪರ ವಿರೋಧ ಟೀಕಾಸ್ತ್ರಾ ಪ್ರಯೋಗಿಸಲಾಗಿತ್ತು.

2002ರಲ್ಲಿ ಕಾಂಗ್ರೆಸ್‌ ಸೇರಿದ್ದ ಸಿಂಧಿಯಾ ಅವರು ಹದಿನೆಂಟು ವರ್ಷಗಳ ನಂತರ ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಬಿಜೆಪಿಗೆ ಸೇರಿದ್ದಾರೆ.

ಕಮಲನಾಥ್ ಸರ್ಕಾರವನ್ನು ಬೀಳಿಸುವಲ್ಲಿ ಪ್ರಮುಖಪಾತ್ರ ವಹಿಸಿದ್ದ ಜೋತಿರಾಧಿತ್ಯ ಸಿಂಧಿಯಾಗೆ ನಿಷ್ಠೆಯಿಂದಿದ್ದ ಇಮಾರ್ತಿ ದೇವಿ ಮತ್ತು ಇತರ 21 ಶಾಸಕರು ಕಾಂಗ್ರೆಸ್ ಮತ್ತು ರಾಜ್ಯ ವಿಧಾನಸಭೆಗೆ ರಾಜೀನಾಮೆ ನೀಡಿ ಈ ವರ್ಷದ ಮಾರ್ಚ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.


ಇದನ್ನೂ ಓದಿ: ಮಧ್ಯಪ್ರದೇಶ: ವಿವಾದಾತ್ಮಕ ಹೇಳಿಕೆ; ಬಿಜೆಪಿ ನಾಯಕಿಗೆ ನೋಟಿಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...