Homeಮುಖಪುಟ’ಕೈ’ಗೆ ಮತ ನೀಡಿ ಎಂದು ಬಿಜೆಪಿ ರ್‍ಯಾಲಿಯಲ್ಲಿ ಸಿಂಧಿಯಾ ಮತ ಯಾಚನೆ!

’ಕೈ’ಗೆ ಮತ ನೀಡಿ ಎಂದು ಬಿಜೆಪಿ ರ್‍ಯಾಲಿಯಲ್ಲಿ ಸಿಂಧಿಯಾ ಮತ ಯಾಚನೆ!

2002ರಲ್ಲಿ ಕಾಂಗ್ರೆಸ್‌ ಸೇರಿದ್ದ ಸಿಂಧಿಯಾ ಅವರು ಹದಿನೆಂಟು ವರ್ಷಗಳ ನಂತರ ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಬಿಜೆಪಿಗೆ ಸೇರಿದ್ದಾರೆ. ಈ ಘಟನೆ ಸಿಂಧಿಯಾ ಇನ್ನೂ ಕಾಂಗ್ರೆಸ್ ಗುಂಗಿನಲ್ಲೇ ಇದ್ದಾರಾ ಎಂಬ ವದಂತಿಗೆ ಕಾರಣವಾಗಿದ್ದಾರೆ.

- Advertisement -
- Advertisement -

ಕೆಲವು ಅಭ್ಯಾಸಗಳು ಬಿಟ್ಟುಬಿಡಲು ಹಲವು ವರ್ಷಗಳೇ ಬೇಕಾಗುತ್ತದೆ ಎಂಬುದಕ್ಕೆ ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಉದಾಹರಣೆಯಾಗಿದ್ದಾರೆ. ಮಧ್ಯಪ್ರದೇಶದಲ್ಲಿ ಉಪಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್‌ ಪರವಾಗಿ ಮತಯಾಚಿಸಿ, ಮುಜುಗರಕ್ಕೀಡಾಗಿದ್ದಾರೆ. ಈ ಘಟನೆ ಸಿಂಧಿಯಾ ಇನ್ನೂ ಕಾಂಗ್ರೆಸ್ ಗುಂಗಿನಲ್ಲೇ ಇದ್ದಾರಾ ಎಂಬ ವದಂತಿಗೆ ಕಾರಣವಾಗಿದ್ದಾರೆ.

ಸಾರ್ವಜನಿಕ ಸಮಾವೇಶದಲ್ಲಿ ಗ್ವಾಲಿಯರ್‌ನ ದಾಬ್ರ ನಗರದ ಬಿಜೆಪಿ ಅಭ್ಯರ್ಥಿ ಇಮ್ರಾತಿ ದೇವಿ ಪರವಾಗಿ ಮತ ಯಾಚಿಸಲು ಹೋಗಿ ಬಾಯಿತಪ್ಪಿನಿಂದ ಕಾಂಗ್ರೆಸ್‌ಗೆ ಮತ ನೀಡುವಂತೆ ಕೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

‘ದಾಬ್ರದ ಉತ್ಸಾಹಭರಿತ ನನ್ನ ಜನರೇ, ನೀವು ‘ಕೈ’ ಗುರುತಿಗೆ ಮತ ಹಾಕುವಿರಿ ಎಂಬುದನ್ನು ನನಗೂ ಮತ್ತು ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಅವರಿಗೆ ಮನವರಿಕೆ ಮಾಡಲು ನಿಮ್ಮ ಕೈಯನ್ನು ಎತ್ತಿ ಮುಷ್ಟಿ ಮಾಡಿ’ ಎಂದು ಹೇಳಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಅವರು, ಬಿಜೆಪಿಯ ‘ಕಮಲ’ ಚಿಹ್ನೆಗೆ ಮತ ಚಲಾಯಿಸುವಂತೆ ಕೇಳಿದ್ದಾರೆ.

ತಕ್ಷಣ ತಮ್ಮ ಮಾತನ್ನು ಬದಲಾಯಿಸಿಕೊಂಡರೂ ಸಹ ಜನಸಂದಣಿ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಪಕ್ಕದಲ್ಲಿ ನಿಂತಿದ್ದ ಬಿಜೆಪಿ ಅಭ್ಯರ್ಥಿ ಇಮ್ರಾತಿ ದೇವಿಯೂ ನಸುನಗುತ್ತಿರುವುದನ್ನು ಕಾಣಿಸುತ್ತಿತ್ತು.

ಇದನ್ನೂ ಓದಿ: ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೊನೆಕ್ಷಣದಲ್ಲಿ ಕಮಲ್ ನಾಥ್ ಹೆಸರು ಕೈಬಿಟ್ಟ ಚುನಾವಣಾ ಆಯೋಗ!

ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೇಳಿಕೆಯ ವಿಡಿಯೋವನ್ನು ಕಾಂಗ್ರೆಸ್ ಕೂಡ ಟ್ವೀಟ್ ಮಾಡಿದ್ದು, ’ಮಾನ್ಯ ಸಿಂಧಿಯಾ ಜಿ, ಮಧ್ಯಪ್ರದೇಶದ ಜನರು ಖಂಡಿತ ಕಾಂಗ್ರೆಸ್‌​ ಗುರುತಿಗೆ ಮತ ಹಾಕಿ ಬೆಂಬಲಿಸುತ್ತಾರೆ’ ಅಂತ ಟಾಂಗ್ ಕೊಟ್ಟಿದೆ.

’ಇಂತ ತಪ್ಪು ಯಾವುದೇ ವ್ಯಕ್ತಿಯಿಂದಲೂ ಆಗಬಹುದು. ಅವರು ತಕ್ಷಣ ತಮ್ಮ ತಪ್ಪನ್ನು ಸರಿಪಡಿಸಿಕೊಂಡಿದ್ದಾರೆ. ಅವರು ಬಿಜೆಪಿ ನಾಯಕ ಎಂಬುದು ಎಲ್ಲರಿಗೂ ತಿಳಿದಿದೆ’ ಎಂದು ರಾಜ್ಯ ಬಿಜೆಪಿ ವಕ್ತಾರ ಪಂಕಜ್‌ ಚತುರ್ವೇದಿ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಇಮಾರ್ತಿ ದೇವಿ ಕುರಿತು ಕಮಲನಾಥ್‌ ಅವರು ಬಹಿರಂಗ ಸಭೆಯಲ್ಲೆ ‘ಐಟಂ’ ಎಂಬ ಪದ ಬಳಸಿ ವ್ಯಂಗ್ಯವಾಡಿದ್ದರು ಈ ಬಗ್ಗೆ ಬಿಜೆಪಿಯಲ್ಲಿ ಆಕ್ರೋಶ ಭುಗಿಲ್ಲೆದ್ದಿತು. ನಂತರ ಪರ ವಿರೋಧ ಟೀಕಾಸ್ತ್ರಾ ಪ್ರಯೋಗಿಸಲಾಗಿತ್ತು.

2002ರಲ್ಲಿ ಕಾಂಗ್ರೆಸ್‌ ಸೇರಿದ್ದ ಸಿಂಧಿಯಾ ಅವರು ಹದಿನೆಂಟು ವರ್ಷಗಳ ನಂತರ ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಬಿಜೆಪಿಗೆ ಸೇರಿದ್ದಾರೆ.

ಕಮಲನಾಥ್ ಸರ್ಕಾರವನ್ನು ಬೀಳಿಸುವಲ್ಲಿ ಪ್ರಮುಖಪಾತ್ರ ವಹಿಸಿದ್ದ ಜೋತಿರಾಧಿತ್ಯ ಸಿಂಧಿಯಾಗೆ ನಿಷ್ಠೆಯಿಂದಿದ್ದ ಇಮಾರ್ತಿ ದೇವಿ ಮತ್ತು ಇತರ 21 ಶಾಸಕರು ಕಾಂಗ್ರೆಸ್ ಮತ್ತು ರಾಜ್ಯ ವಿಧಾನಸಭೆಗೆ ರಾಜೀನಾಮೆ ನೀಡಿ ಈ ವರ್ಷದ ಮಾರ್ಚ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.


ಇದನ್ನೂ ಓದಿ: ಮಧ್ಯಪ್ರದೇಶ: ವಿವಾದಾತ್ಮಕ ಹೇಳಿಕೆ; ಬಿಜೆಪಿ ನಾಯಕಿಗೆ ನೋಟಿಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...