Homeಮುಖಪುಟ‘ಅಲ್ಪಸಂಖ್ಯಾತರನ್ನು ರಕ್ಷಿಸುವವರಿಗೆ ಮತ ನೀಡಿ’: ಸಿರೊ ಮಲಬಾರ್ ಚರ್ಚ್

‘ಅಲ್ಪಸಂಖ್ಯಾತರನ್ನು ರಕ್ಷಿಸುವವರಿಗೆ ಮತ ನೀಡಿ’: ಸಿರೊ ಮಲಬಾರ್ ಚರ್ಚ್

- Advertisement -
- Advertisement -

ಅಲ್ಪಸಂಖ್ಯಾತರ ಹಕ್ಕುಗಳನ್ನು ಕಾಪಾಡುವ ಮತ್ತು ದೇಶದ ಸಂವಿಧಾನವನ್ನು ಎತ್ತಿಹಿಡಿಯುವವರಿಗೆ ಜನರು ಮತ ಹಾಕುವುದು ಅನಿವಾರ್ಯವಾಗಿದೆ ಎಂದು ಸೈರೋ-ಮಲಬಾರ್ ಚರ್ಚ್‌ನ ಮುಖ್ಯಸ್ಥರಾದ ರಾಫೆಲ್ ಥಟ್ಟಿಲ್ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.

ಭಾರತದಲ್ಲಿ ಕ್ರಿಶ್ಚಿಯನ್ನರು ಸುರಕ್ಷಿತವಾಗಿದ್ದಾರೆ ಎಂದು ಸೈರೋ-ಮಲಬಾರ್ ಚರ್ಚ್‌ನ ಮಾಜಿ ಮುಖ್ಯಸ್ಥ ಜಾರ್ಜ್ ಅಲೆಂಚೆರಿ ಈ ಹಿಂದೆ ಹೇಳಿಕೆ ನೀಡಿದ್ದರು, ಇದಾದ ಒಂದು ವರ್ಷದ ನಂತರ, ಅವರ ಉತ್ತರಾಧಿಕಾರಿ ರಾಫೆಲ್ ಥಟ್ಟಿಲ್ ಅವರು ಶುಕ್ರವಾರದಂದು ದೇಶದಲ್ಲಿ ಕ್ರಿಶ್ಚಿಯನ್ನರ ವಿರುದ್ಧದ ದಾಳಿಗಳ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಬಿಡುಗಡೆ ಮಾಡಿದ ಇತ್ತೀಚಿನ ವರದಿಗೆ ಪ್ರತಿಕ್ರಿಯೆಯಾಗಿ ಥಟ್ಟಿಲ್ ಅವರ ಹೇಳಿಕೆ ಹೊರಬಿದ್ದಿದೆ. ಕ್ರಿಶ್ಚಿಯನ್ನರ ಮೇಲೆ 161 ದಾಳಿಗಳು ನಡೆದಿರುವ ಬಗ್ಗೆ ಜನವರಿ 1ರಿಂದ ಮಾರ್ಚ್ 15 2024ರವರೆಗೆ UCFನ ಟೋಲ್-ಫ್ರೀ ಸಂಖ್ಯೆಯ ಮೂಲಕ ವರದಿಯಾಗಿದೆ. ನಮ್ಮ ಹಕ್ಕುಗಳನ್ನು ರಕ್ಷಿಸಲು ನಾವು ದೃಢವಾದ ಸಂವಿಧಾನವನ್ನು ಹೊಂದಿರುವಾಗ ಈ ದಾಳಿಗಳ ವರದಿಗಳು ಆಳವಾಗಿ ದುಃಖವನ್ನುಂಟು ಮಾಡುತ್ತವೆ. ಪ್ರಧಾನಿಯೊಂದಿಗಿನ ನಮ್ಮ ಭೇಟಿಯ ಸಮಯದಲ್ಲಿ, ಸರ್ಕಾರವು ಕ್ರಮ ಕೈಗೊಳ್ಳುವ ಭರವಸೆ ನೀಡಿತ್ತು ಎಂದು ಬಿಷಪ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ತಟ್ಟಿಲ್ ಅವರು ತಮ್ಮ ಮತದಾನದ ಹಕ್ಕನ್ನು ಜವಾಬ್ದಾರಿಯುತವಾಗಿ ಚಲಾಯಿಸಲು ಹೇಳಿದ್ದು, ಜನರು ತಮಗೆ ಬೇಕಾದಂತೆ ಮತ ಚಲಾಯಿಸಲು ಸ್ವತಂತ್ರರಾಗಿದ್ದರೂ, ಅಲ್ಪಸಂಖ್ಯಾತರು ಮತ್ತು ಸಂವಿಧಾನವನ್ನು ರಕ್ಷಿಸುವವರ ಪರವಾಗಿ ಮತ ಚಲಾಯಿಸುವಂತೆ ನಾನು ವೈಯಕ್ತಿಕವಾಗಿ ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

UCF ಮಾಹಿತಿಯ ಪ್ರಕಾರ, 2023ರಿಂದ ದೇಶಾದ್ಯಂತ ಕ್ರಿಶ್ಚಿಯನ್ನರ ವಿರುದ್ಧ 600ಕ್ಕೂ ಹೆಚ್ಚು ದಾಳಿಗಳು ದಾಖಲಾಗಿವೆ. ವರದಿಯು ಛತ್ತೀಸ್‌ಗಢ ರಾಜ್ಯವು ಕ್ರಿಶ್ಚಿಯನ್ನರ ಮೇಲೆ ಅತಿ ಹೆಚ್ಚು ದಾಳಿಗಳಿಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದು, ಉತ್ತರಪ್ರದೇಶವು ಎರಡನೇ ಸ್ಥಾನದಲ್ಲಿದೆ. ಉತ್ತರಪ್ರದೇಶದಲ್ಲಿ ದಾಳಿಗಳು ಸರಕಾರಿ ಪ್ರಾಯೋಜಿತವಾಗಿದೆ ಎಂದು ಹೇಳಿದೆ.

ಏಪ್ರಿಲ್ 2023ರಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ, ಜಾರ್ಜ್ ಅಲೆಂಚೆರಿ ಭಾರತದಲ್ಲಿ ಕ್ರಿಶ್ಚಿಯನ್ ಸಮುದಾಯದ ಸುರಕ್ಷತೆಯ ಬಗ್ಗೆ ಮಾತನಾಡಿದ್ದರು, ಕ್ರಿಶ್ಚಿಯನ್ನರು ಪ್ರಸ್ತುತ ಅಂತಹ ಯಾವುದೇ ಅಭದ್ರತೆಯನ್ನು ಎದುರಿಸುವುದಿಲ್ಲ. ಬಿಜೆಪಿಯು ಸಂಪೂರ್ಣ ಅಧಿಕಾರವನ್ನು ಗಳಿಸಿದರೆ ಈ ರೀತಿ ಸಂಭವಿಸಬಹುದು ಎಂದು ಕೆಲವರು ಹೇಳುತ್ತಾರೆ ಎಂದು ಹೇಳಿದ್ದರು.

 ಇದನ್ನು ಓದಿ: ಲೋಕಸಭೆ ಚುನಾವಣೆ: ಬಿಜೆಪಿ ಸೇರಿದ್ದ ಜಡ್ಜ್‌ ವಿರುದ್ಧ ವಿದ್ಯಾರ್ಥಿ ನಾಯಕನನ್ನು ಕಣಕ್ಕಿಳಿಸಿದ ದೀದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...