Homeಮುಖಪುಟಮತಗಳ್ಳತನ ಆರೋಪ: ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಲು ಎದ್ದೇಳು ಕರ್ನಾಟಕ ಆಗ್ರಹ

ಮತಗಳ್ಳತನ ಆರೋಪ: ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಲು ಎದ್ದೇಳು ಕರ್ನಾಟಕ ಆಗ್ರಹ

- Advertisement -
- Advertisement -

ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದಲ್ಲಿ ನಡೆದಿರುವ ಚುನಾವಣಾ ವಂಚನೆ ಸಾಕ್ಷಿ ಸಮೇತ ಬಯಲಾಗಿದೆ.

ಅಕ್ರಮದಲ್ಲಿ ಭಾಗಿಯಾದ ಅಧಿಕಾರಗಳನ್ನು ಅಮಾನತುಗೊಳಿಸಿ ಸಮಗ್ರ ತನಿಖೆಗೆ ಆದೇಶಿಸಬೇಕು.

ಎಲ್ಲಾ ಲೋಕಸಭಾ ಕ್ಷೇತ್ರಗಳ ಡಿಜಿಟಲ್‌ ಡಾಟಾವನ್ನು ಅಭ್ಯರ್ಥಿಗಳಿಗೆ ಒದಗಿಸಬೇಕು.

ಚುನಾವಣಾ ಆಯೋಗ ಸಾರ್ವಜನಿಕ ಕ್ಷಮೆ ಕೇಳಿ ರಾಜಿನಾಮೆ ನೀಡಬೇಕು.

…………………………………………………………….

ಬೆಂಗಳೂರು: ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವ ಕುರಿತು ರಾಹುಲ್ ಗಾಂಧಿ ಮಾಡಿರುವ ಆರೋಪಗಳಿಗೆ ಹಲವು ಸಾಕ್ಷ್ಯಗಳು ದೊರೆತಿವೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಮರು ಚುನಾವಣೆ ನಡೆಸಬೇಕು, ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿ, ತನಿಖೆ ನಡೆಸಬೇಕು ಎಂದು ‘ಎದ್ದೇಳು ಕರ್ನಾಟಕ’ ಸಂಘಟನೆ ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯು, ಇತ್ತೀಚೆಗೆ ರಾಹುಲ್ ಗಾಂಧಿ ಅವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮಹದೇವಪುರ ವಿಧಾನಸಭಾ ವಲಯದಲ್ಲಿ ನಡೆದಿರುವ ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ಹೇಳಿದೆ. ಈ ಆರೋಪಗಳು ಸಾಕ್ಷ್ಯಾಧಾರ ಸಮೇತ ಇವೆ ಎಂದು ಸಂಘಟನೆ ತಿಳಿಸಿದೆ.

ರಾಹುಲ್‌ ಗಾಂಧಿ ಮಾಡಿದ ಪತ್ರಿಕಾ ಗೋಷ್ಟಿ ಮತ್ತು ಬಿಚ್ಚಿಟ್ಟ ಮಾಹಿತಿಗಳು ಅನುಮಾನಕ್ಕಾಸ್ಪದವಿಲ್ಲದಂತೆ ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ವಲಯದ ಮತದಾರರ ಪಟ್ಟಿಯಲ್ಲಿ ನಡೆದಿರುವ ಅಪರಾಧಿ ಚಟುವಟಿಕೆಗಳು ಸಾಬೀತಾಗಿವೆ. ಇದು ಆರೋಪವಲ್ಲ, ಸಾಕ್ಷ್ಯ. ಐದು ಬಗೆಯ ಅಕ್ರಮಗಳ ಕುರಿತು ಒಂದಲ್ಲ, ಸಾವಿರಾರು ಸಾಕ್ಷಿಗಳನ್ನು ಒದಗಿಸಲಾಗಿದೆ. ನಕಲಿ ಮತದಾರರನ್ನು ಸೃಷ್ಟಿಸಿರುವ, ತಂದೆಯ ಹೆಸರಿಲ್ಲದ, ವಿಳಾಸವಿಲ್ಲದ ಮತಚೀಟಿಗಳನ್ನು ವಿತರಿಸಿರುವ, ಭಾವಚಿತ್ರವೇ ಇಲ್ಲದಂತೆ ಅಥವಾ ಕಾಣದಂತೆ ಮತ ಚೀಟಿ ನೀಡಿರುವ, ಒಂದೇ ವಿಳಾಸದಲ್ಲಿ 40, 80 ಜನರಿಗೆ ಮತಚೀಟಿ ಸೃಷ್ಟಿಸಿರುವ, ಹೊಸ ಮತದಾರರಿಗೆ ನೀಡಬೇಕಾದ ನಮೂನೆ 6ನ್ನು ದುರುಪಯೋಗಪಡಿಸಿಕೊಂಡಿರುವ, ಅಪರಾಧ ಸಾಕಷ್ಟು ಸಾಕ್ಷ್ಯಗಳ ಮೂಲಕ ಸಾಬೀತಾಗಿದೆ ಎಂದು ಎದ್ದೇಳು ಕರ್ನಾಟಕ ಹೇಳಿದೆ.

ಇದು ಒಂದು ಲೋಕಸಭಾ ಕ್ಷೇತ್ರದ, ಒಂದು ವಿಧಾನ ಸಭಾ ಕ್ಷೇತ್ರದಲ್ಲಿ ನಡೆದಿರುವ ಅಕ್ರಮ. ಇಡೀ ದೇಶದಲ್ಲಿ ನೂರಾರು ಕಡೆ ಇದು ನಡೆದಿರುವ ಎಲ್ಲಾ ಸಾಧ್ಯತೆಗಳೂ ಇವೆ. ಚುನಾವಣಾ ಫಲಿತಾಂಶ ಬಂದ ಕೂಡಲೇ ಅಕ್ರಮ ನಡೆದಿರುವ ಸಾಧ್ಯತೆಗಳ ಬಗ್ಗೆ ಎದ್ದೇಳು ಕರ್ನಾಟಕ ಹೇಳಿಕೆ ನೀಡಿತ್ತು. ಮರು ಮತದಾನಕ್ಕೆ ಹಾಕವಂತೆ ಬೆಂಗಳೂರು ಕೇಂದ್ರದ ಅಭ್ಯರ್ಥಿಯನ್ನೂ ಒತ್ತಾಯಿಸಿತ್ತು. ಜುಲೈ 2024 ರಲ್ಲಿ Vote For Democracy ಎಂಬ ಸಂಸ್ಥೆ ವರದಿಯೊಂದನ್ನು [Conduct of Lok sabha elections 2024] ಬಿಡುಗಡೆ ಮಾಡಿ, ಅದರಲ್ಲಿ ದೇಶದ 79 ಕ್ಷೇತ್ರಗಳಲ್ಲಿ ಮತಕಳವು ನಡೆದಿರುವುದಕ್ಕೆ ಸಾಂದರ್ಭಿಕ ಸಾಕ್ಷ್ಯವನ್ನು ಮುಂದಿಟ್ಟಿತ್ತು. ಚುನಾವಣಾ ಆಯೋಗವು ಎಷ್ಟು ಮತದಾನ ನಡೆದಿದೆ ಎಂಬ ಬಗ್ಗೆ ನೀಡಿದ ಎರಡು ಸಂಖ್ಯೆಗಳ ನಡುವಿನ ಅಂತರ ಆ ಕ್ಷೇತ್ರದ ಗೆಲುವಿನ ಅಂತರಕ್ಕಿಂತ ಹೆಚ್ಚಿರುವುದನ್ನು ಗುರುತಿಸಿ ಈ ಕ್ಷೇತ್ರಗಳಲ್ಲಿ ಕಳುವಾಗಿರುವ ಎಲ್ಲಾ ಸಾಧ್ಯತೆಗಳಿವೆ ಎಂದು ಆರೋಪಿಸಿತ್ತು. ಆ 79 ಕ್ಷೇತ್ರಗಳ ಪಟ್ಟಿಯನ್ನು ಒದಗಿಸಿತ್ತು. ಅದರಲ್ಲಿ ಕರ್ನಾಟಕದ 6 ಕ್ಷೇತ್ರಗಳ ಹೆಸರುಗಳು ಇದ್ದವು. ಅದರಲ್ಲಿ ಬೆಂಗಳೂರು ಸೆಂಟ್ರಲ್‌ ಕ್ಷೇತ್ರವೂ ಇತ್ತು. ಈಗ ಈ 79 ಕ್ಷೇತ್ರದ ಪೈಕಿ ಒಂದು ಕ್ಷೇತ್ರದಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿದೆ ಎಂದು ಅದು ಹೇಳಿದೆ.

ಈ ಸಾಕ್ಷ್ಯವನ್ನು ಹೊರತೆಗೆಯಲು ನಡೆದಿರುವ ಪರಿಶ್ರಮ ಅಪಾರವಾದುದು, ಶ್ಲಾಘನೀಯವಾದುದು. ಚುನಾವಣಾ ಆಯೋಗವು ಡಿಜಿಟಲ್‌ ಡಾಟಾವನ್ನು ಒದಗಿಸಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಸಹಸ್ರಾರು ಪುಟಗಳ ಮುದ್ರಿತ ದಾಖಲೆಯನ್ನು ಒಂದೊಂದಾಗಿ ಪರಿಶೀಲಿಸಿ, ತಾಳೆ ಹಾಕಿ, ಈ ಬೃಹತ್‌ ಸಾಕ್ಷ್ಯವನ್ನು ಸಿದ್ಧಪಡಿಸಲಾಗಿದೆ. ಇದನ್ನು ಸಿದ್ಧಪಡಿಸಿದ ತಂಡಕ್ಕೆ, ಅದಕ್ಕೆ ಬೆಂಬಲ ನೀಡಿದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ ಅವರಿಗೆ, ಅದನ್ನು ದಿಟ್ಟವಾಗಿ ಮತ್ತು ಪರಿಣಾಮಕಾರಿಯಾಗಿ ಮುಂದಿಟ್ಟ ರಾಹುಲ್‌ ಗಾಂಧಿ ಅವರಿಗೆ ಅಭಿನಂದನೆಗಳು ಎಂದು ಎದ್ದೇಳು ಕರ್ನಾಟಕ ತಿಳಿಸಿದೆ.

ಸಂವಿಧಾನ ಪದ್ದತಿಗೆ ವಿರುದ್ಧವಾಗಿ ಚುನಾವಣಾ ಆಯೋಗವನ್ನು ತಾನೇ ನೇಮಿಸಿರುವ ಬಿಜೆಪಿ ಸರ್ಕಾರ, ಅದನ್ನು ಬಳಸಿಕೊಂಡು ಪ್ರಜಾತಂತ್ರವನ್ನು ಕೊಲೆ ಮಾಡಲು ಹೊರಟಿದೆ. ಜನಾಕ್ರೋಶ ಬೆಳೆಯುತ್ತಿದ್ದು, ಚುನಾವಣೆಗಳಲ್ಲಿ ಸೋಲುವ ಭೀತಿ ಹೆಚ್ಚಿರುವುದರಿಂದ, ಮತಗಳನ್ನು ಅಪಹರಿಸುವ ಮತ್ತು ಕಳ್ಳ ಮತಗಳನ್ನು ಬರೆಸುವ ಮತ ಮಾಫಿಯಾ ಕೆಲಸಕ್ಕೆ ಕೈಹಾಕಿದೆ ಎಂದು ಅದು ಆರೋಪಿಸಿದೆ.

ಸಾಕ್ಷ್ಯಗಳನ್ನು ಮುಂದಿಟ್ಟಾಗ ಮೌನ ಧರಿಸುವುದು ಅಪರಾಧವನ್ನು ಮುಚ್ಚಿಡುವ ತಂತ್ರವಾಗುತ್ತದೆ. ಚುನಾವಣ ಆಯೋಗವು ಮಾತನಾಡಬೇಕು ಎಂದು ನಾವು ಆಗ್ರಹಿಸುತ್ತೇವೆ. ಒಂದು ವೇಳೆ ರಾಹುಲ್‌ ಗಾಂಧಿ ಬಿಚ್ಚಿಟ್ಟ ಸತ್ಯ ಸತ್ಯವಲ್ಲ ಎಂಬುದಾದರೆ ಅದನ್ನು ಚುನಾವಣಾ ಆಯೋಗವು ತಡಮಾಡದೆ ಜನತೆಯ ಮುಂದಿಡಬೇಕು. ಅಥವಾ ತಾನು ಮಾಡಿದ ತಪ್ಪಿಗಾಗಿ ಜನತೆಯ ಮುಂದೆ ಕ್ಷಮೆಯಾಚಿಸಬೇಕು. ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ ಈ ಅಕ್ರಮದ ತನಿಖೆಯಾಗಬೇಕು. ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ಮರುಮತದಾನಕ್ಕೆ ಆದೇಶ ಹೊರಡಿಸಬೇಕು.  ಕೊನೆಯದಾಗಿ ಮತದಾರರ ಪಟ್ಟಿ ಮತ್ತು ಮತದಾನ ನಡೆದ ವಿಧಾನಕ್ಕೆ ಸಂಬಂಧಪಟ್ಟಂತೆ ಇರುವ ಎಲ್ಲಾ ಡಿಜಿಟಲ್‌ ಡಾಟಾವನ್ನು ಬಿಡುಗಡೆ ಮಾಡಬೇಕು. ಇದನ್ನು ಮಾಡದಿದ್ದರೆ ನಾಗರೀಕರಾದ ನಾವು ಸುಮ್ಮನೆ ಕೂರುವುದಿಲ್ಲ ರಾಜ್ಯವ್ಯಾಪಿ ಪ್ರತಿಭಟನೆ ಆರಂಭಿಸುತ್ತೇವೆ ಎಂದು ಎದ್ದೇಳು ಕರ್ನಾಟಕ ಎಚ್ಚರಿಕೆ ನೀಡಿದೆ

‘ಎದ್ದೇಳು ಕರ್ನಾಟಕ’ ಸಂಘಟನೆಯ ಆಗ್ರಹಗಳು:

*ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಬೇಕು

* ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ, ಸಮಗ್ರ ತನಿಖೆ ನಡೆಸಬೇಕು

* ಎಲ್ಲಾ ಲೋಕಸಭಾ ಕ್ಷೇತ್ರಗಳ ಡಿಜಿಟಲ್ ಡೇಟಾವನ್ನು ಅಭ್ಯರ್ಥಿಗಳಿಗೆ ಒದಗಿಸಬೇಕು

* ಚುನಾವಣಾ ಆಯೋಗವು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಮತ್ತು ರಾಜೀನಾಮೆ ನೀಡಬೇಕು

ಈಗಾಗಲೇ ಸಾಕ್ಷ್ಯಾಧಾರಗಳು ಲಭ್ಯವಿದ್ದರೂ ಮೌನವಾಗಿರುವುದು ಅಪರಾಧವನ್ನು ಮುಚ್ಚಿಡುವ ತಂತ್ರ ಎಂದು ಸಂಘಟನೆ ಹೇಳಿದೆ. ಒಂದು ವೇಳೆ ಈ ಆರೋಪಗಳು ಸುಳ್ಳಾಗಿದ್ದರೆ ಚುನಾವಣಾ ಆಯೋಗವು ಸ್ಪಷ್ಟೀಕರಣ ನೀಡಬೇಕು, ಇಲ್ಲವಾದರೆ ತಾನು ಮಾಡಿದ ತಪ್ಪಿಗೆ ಕ್ಷಮೆಯಾಚಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಈ ಹೇಳಿಕೆಯನ್ನು ತಾರಾ ರಾವ್, ಮೊಹಮ್ಮದ್ ಕುನ್ನಿ, ಫಾ.ಅರುಣ್ ಲೂಯಿಸ್, ಕೆ.ಎಲ್.ಅಶೋಕ್ ಮತ್ತು ಜಿ.ಎಂ.ವೀರಸಂಗಯ್ಯ ಅವರು ‘ಎದ್ದೇಳು ಕರ್ನಾಟಕ’ದ ಪರವಾಗಿ ನೀಡಿದ್ದಾರೆ.

ಬಿಹಾರ| ಮತಪಟ್ಟಿ ಪರಿಷ್ಕರಣೆ ವಿರೋಧಿಸಿ ಪ್ರತಿಭಟನೆ-ಬಂಧನ: ಅವರು ಯಾವುದಕ್ಕೆ ಹೆದರುತ್ತಿದ್ದಾರೆ? ಎಂದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....