Homeಮುಖಪುಟಮತಗಳ್ಳತನ ಆರೋಪ: ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಲು ಎದ್ದೇಳು ಕರ್ನಾಟಕ ಆಗ್ರಹ

ಮತಗಳ್ಳತನ ಆರೋಪ: ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಲು ಎದ್ದೇಳು ಕರ್ನಾಟಕ ಆಗ್ರಹ

- Advertisement -
- Advertisement -

ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದಲ್ಲಿ ನಡೆದಿರುವ ಚುನಾವಣಾ ವಂಚನೆ ಸಾಕ್ಷಿ ಸಮೇತ ಬಯಲಾಗಿದೆ.

ಅಕ್ರಮದಲ್ಲಿ ಭಾಗಿಯಾದ ಅಧಿಕಾರಗಳನ್ನು ಅಮಾನತುಗೊಳಿಸಿ ಸಮಗ್ರ ತನಿಖೆಗೆ ಆದೇಶಿಸಬೇಕು.

ಎಲ್ಲಾ ಲೋಕಸಭಾ ಕ್ಷೇತ್ರಗಳ ಡಿಜಿಟಲ್‌ ಡಾಟಾವನ್ನು ಅಭ್ಯರ್ಥಿಗಳಿಗೆ ಒದಗಿಸಬೇಕು.

ಚುನಾವಣಾ ಆಯೋಗ ಸಾರ್ವಜನಿಕ ಕ್ಷಮೆ ಕೇಳಿ ರಾಜಿನಾಮೆ ನೀಡಬೇಕು.

…………………………………………………………….

ಬೆಂಗಳೂರು: ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವ ಕುರಿತು ರಾಹುಲ್ ಗಾಂಧಿ ಮಾಡಿರುವ ಆರೋಪಗಳಿಗೆ ಹಲವು ಸಾಕ್ಷ್ಯಗಳು ದೊರೆತಿವೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಮರು ಚುನಾವಣೆ ನಡೆಸಬೇಕು, ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿ, ತನಿಖೆ ನಡೆಸಬೇಕು ಎಂದು ‘ಎದ್ದೇಳು ಕರ್ನಾಟಕ’ ಸಂಘಟನೆ ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯು, ಇತ್ತೀಚೆಗೆ ರಾಹುಲ್ ಗಾಂಧಿ ಅವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮಹದೇವಪುರ ವಿಧಾನಸಭಾ ವಲಯದಲ್ಲಿ ನಡೆದಿರುವ ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ಹೇಳಿದೆ. ಈ ಆರೋಪಗಳು ಸಾಕ್ಷ್ಯಾಧಾರ ಸಮೇತ ಇವೆ ಎಂದು ಸಂಘಟನೆ ತಿಳಿಸಿದೆ.

ರಾಹುಲ್‌ ಗಾಂಧಿ ಮಾಡಿದ ಪತ್ರಿಕಾ ಗೋಷ್ಟಿ ಮತ್ತು ಬಿಚ್ಚಿಟ್ಟ ಮಾಹಿತಿಗಳು ಅನುಮಾನಕ್ಕಾಸ್ಪದವಿಲ್ಲದಂತೆ ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ವಲಯದ ಮತದಾರರ ಪಟ್ಟಿಯಲ್ಲಿ ನಡೆದಿರುವ ಅಪರಾಧಿ ಚಟುವಟಿಕೆಗಳು ಸಾಬೀತಾಗಿವೆ. ಇದು ಆರೋಪವಲ್ಲ, ಸಾಕ್ಷ್ಯ. ಐದು ಬಗೆಯ ಅಕ್ರಮಗಳ ಕುರಿತು ಒಂದಲ್ಲ, ಸಾವಿರಾರು ಸಾಕ್ಷಿಗಳನ್ನು ಒದಗಿಸಲಾಗಿದೆ. ನಕಲಿ ಮತದಾರರನ್ನು ಸೃಷ್ಟಿಸಿರುವ, ತಂದೆಯ ಹೆಸರಿಲ್ಲದ, ವಿಳಾಸವಿಲ್ಲದ ಮತಚೀಟಿಗಳನ್ನು ವಿತರಿಸಿರುವ, ಭಾವಚಿತ್ರವೇ ಇಲ್ಲದಂತೆ ಅಥವಾ ಕಾಣದಂತೆ ಮತ ಚೀಟಿ ನೀಡಿರುವ, ಒಂದೇ ವಿಳಾಸದಲ್ಲಿ 40, 80 ಜನರಿಗೆ ಮತಚೀಟಿ ಸೃಷ್ಟಿಸಿರುವ, ಹೊಸ ಮತದಾರರಿಗೆ ನೀಡಬೇಕಾದ ನಮೂನೆ 6ನ್ನು ದುರುಪಯೋಗಪಡಿಸಿಕೊಂಡಿರುವ, ಅಪರಾಧ ಸಾಕಷ್ಟು ಸಾಕ್ಷ್ಯಗಳ ಮೂಲಕ ಸಾಬೀತಾಗಿದೆ ಎಂದು ಎದ್ದೇಳು ಕರ್ನಾಟಕ ಹೇಳಿದೆ.

ಇದು ಒಂದು ಲೋಕಸಭಾ ಕ್ಷೇತ್ರದ, ಒಂದು ವಿಧಾನ ಸಭಾ ಕ್ಷೇತ್ರದಲ್ಲಿ ನಡೆದಿರುವ ಅಕ್ರಮ. ಇಡೀ ದೇಶದಲ್ಲಿ ನೂರಾರು ಕಡೆ ಇದು ನಡೆದಿರುವ ಎಲ್ಲಾ ಸಾಧ್ಯತೆಗಳೂ ಇವೆ. ಚುನಾವಣಾ ಫಲಿತಾಂಶ ಬಂದ ಕೂಡಲೇ ಅಕ್ರಮ ನಡೆದಿರುವ ಸಾಧ್ಯತೆಗಳ ಬಗ್ಗೆ ಎದ್ದೇಳು ಕರ್ನಾಟಕ ಹೇಳಿಕೆ ನೀಡಿತ್ತು. ಮರು ಮತದಾನಕ್ಕೆ ಹಾಕವಂತೆ ಬೆಂಗಳೂರು ಕೇಂದ್ರದ ಅಭ್ಯರ್ಥಿಯನ್ನೂ ಒತ್ತಾಯಿಸಿತ್ತು. ಜುಲೈ 2024 ರಲ್ಲಿ Vote For Democracy ಎಂಬ ಸಂಸ್ಥೆ ವರದಿಯೊಂದನ್ನು [Conduct of Lok sabha elections 2024] ಬಿಡುಗಡೆ ಮಾಡಿ, ಅದರಲ್ಲಿ ದೇಶದ 79 ಕ್ಷೇತ್ರಗಳಲ್ಲಿ ಮತಕಳವು ನಡೆದಿರುವುದಕ್ಕೆ ಸಾಂದರ್ಭಿಕ ಸಾಕ್ಷ್ಯವನ್ನು ಮುಂದಿಟ್ಟಿತ್ತು. ಚುನಾವಣಾ ಆಯೋಗವು ಎಷ್ಟು ಮತದಾನ ನಡೆದಿದೆ ಎಂಬ ಬಗ್ಗೆ ನೀಡಿದ ಎರಡು ಸಂಖ್ಯೆಗಳ ನಡುವಿನ ಅಂತರ ಆ ಕ್ಷೇತ್ರದ ಗೆಲುವಿನ ಅಂತರಕ್ಕಿಂತ ಹೆಚ್ಚಿರುವುದನ್ನು ಗುರುತಿಸಿ ಈ ಕ್ಷೇತ್ರಗಳಲ್ಲಿ ಕಳುವಾಗಿರುವ ಎಲ್ಲಾ ಸಾಧ್ಯತೆಗಳಿವೆ ಎಂದು ಆರೋಪಿಸಿತ್ತು. ಆ 79 ಕ್ಷೇತ್ರಗಳ ಪಟ್ಟಿಯನ್ನು ಒದಗಿಸಿತ್ತು. ಅದರಲ್ಲಿ ಕರ್ನಾಟಕದ 6 ಕ್ಷೇತ್ರಗಳ ಹೆಸರುಗಳು ಇದ್ದವು. ಅದರಲ್ಲಿ ಬೆಂಗಳೂರು ಸೆಂಟ್ರಲ್‌ ಕ್ಷೇತ್ರವೂ ಇತ್ತು. ಈಗ ಈ 79 ಕ್ಷೇತ್ರದ ಪೈಕಿ ಒಂದು ಕ್ಷೇತ್ರದಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿದೆ ಎಂದು ಅದು ಹೇಳಿದೆ.

ಈ ಸಾಕ್ಷ್ಯವನ್ನು ಹೊರತೆಗೆಯಲು ನಡೆದಿರುವ ಪರಿಶ್ರಮ ಅಪಾರವಾದುದು, ಶ್ಲಾಘನೀಯವಾದುದು. ಚುನಾವಣಾ ಆಯೋಗವು ಡಿಜಿಟಲ್‌ ಡಾಟಾವನ್ನು ಒದಗಿಸಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಸಹಸ್ರಾರು ಪುಟಗಳ ಮುದ್ರಿತ ದಾಖಲೆಯನ್ನು ಒಂದೊಂದಾಗಿ ಪರಿಶೀಲಿಸಿ, ತಾಳೆ ಹಾಕಿ, ಈ ಬೃಹತ್‌ ಸಾಕ್ಷ್ಯವನ್ನು ಸಿದ್ಧಪಡಿಸಲಾಗಿದೆ. ಇದನ್ನು ಸಿದ್ಧಪಡಿಸಿದ ತಂಡಕ್ಕೆ, ಅದಕ್ಕೆ ಬೆಂಬಲ ನೀಡಿದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ ಅವರಿಗೆ, ಅದನ್ನು ದಿಟ್ಟವಾಗಿ ಮತ್ತು ಪರಿಣಾಮಕಾರಿಯಾಗಿ ಮುಂದಿಟ್ಟ ರಾಹುಲ್‌ ಗಾಂಧಿ ಅವರಿಗೆ ಅಭಿನಂದನೆಗಳು ಎಂದು ಎದ್ದೇಳು ಕರ್ನಾಟಕ ತಿಳಿಸಿದೆ.

ಸಂವಿಧಾನ ಪದ್ದತಿಗೆ ವಿರುದ್ಧವಾಗಿ ಚುನಾವಣಾ ಆಯೋಗವನ್ನು ತಾನೇ ನೇಮಿಸಿರುವ ಬಿಜೆಪಿ ಸರ್ಕಾರ, ಅದನ್ನು ಬಳಸಿಕೊಂಡು ಪ್ರಜಾತಂತ್ರವನ್ನು ಕೊಲೆ ಮಾಡಲು ಹೊರಟಿದೆ. ಜನಾಕ್ರೋಶ ಬೆಳೆಯುತ್ತಿದ್ದು, ಚುನಾವಣೆಗಳಲ್ಲಿ ಸೋಲುವ ಭೀತಿ ಹೆಚ್ಚಿರುವುದರಿಂದ, ಮತಗಳನ್ನು ಅಪಹರಿಸುವ ಮತ್ತು ಕಳ್ಳ ಮತಗಳನ್ನು ಬರೆಸುವ ಮತ ಮಾಫಿಯಾ ಕೆಲಸಕ್ಕೆ ಕೈಹಾಕಿದೆ ಎಂದು ಅದು ಆರೋಪಿಸಿದೆ.

ಸಾಕ್ಷ್ಯಗಳನ್ನು ಮುಂದಿಟ್ಟಾಗ ಮೌನ ಧರಿಸುವುದು ಅಪರಾಧವನ್ನು ಮುಚ್ಚಿಡುವ ತಂತ್ರವಾಗುತ್ತದೆ. ಚುನಾವಣ ಆಯೋಗವು ಮಾತನಾಡಬೇಕು ಎಂದು ನಾವು ಆಗ್ರಹಿಸುತ್ತೇವೆ. ಒಂದು ವೇಳೆ ರಾಹುಲ್‌ ಗಾಂಧಿ ಬಿಚ್ಚಿಟ್ಟ ಸತ್ಯ ಸತ್ಯವಲ್ಲ ಎಂಬುದಾದರೆ ಅದನ್ನು ಚುನಾವಣಾ ಆಯೋಗವು ತಡಮಾಡದೆ ಜನತೆಯ ಮುಂದಿಡಬೇಕು. ಅಥವಾ ತಾನು ಮಾಡಿದ ತಪ್ಪಿಗಾಗಿ ಜನತೆಯ ಮುಂದೆ ಕ್ಷಮೆಯಾಚಿಸಬೇಕು. ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ ಈ ಅಕ್ರಮದ ತನಿಖೆಯಾಗಬೇಕು. ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ಮರುಮತದಾನಕ್ಕೆ ಆದೇಶ ಹೊರಡಿಸಬೇಕು.  ಕೊನೆಯದಾಗಿ ಮತದಾರರ ಪಟ್ಟಿ ಮತ್ತು ಮತದಾನ ನಡೆದ ವಿಧಾನಕ್ಕೆ ಸಂಬಂಧಪಟ್ಟಂತೆ ಇರುವ ಎಲ್ಲಾ ಡಿಜಿಟಲ್‌ ಡಾಟಾವನ್ನು ಬಿಡುಗಡೆ ಮಾಡಬೇಕು. ಇದನ್ನು ಮಾಡದಿದ್ದರೆ ನಾಗರೀಕರಾದ ನಾವು ಸುಮ್ಮನೆ ಕೂರುವುದಿಲ್ಲ ರಾಜ್ಯವ್ಯಾಪಿ ಪ್ರತಿಭಟನೆ ಆರಂಭಿಸುತ್ತೇವೆ ಎಂದು ಎದ್ದೇಳು ಕರ್ನಾಟಕ ಎಚ್ಚರಿಕೆ ನೀಡಿದೆ

‘ಎದ್ದೇಳು ಕರ್ನಾಟಕ’ ಸಂಘಟನೆಯ ಆಗ್ರಹಗಳು:

*ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಬೇಕು

* ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ, ಸಮಗ್ರ ತನಿಖೆ ನಡೆಸಬೇಕು

* ಎಲ್ಲಾ ಲೋಕಸಭಾ ಕ್ಷೇತ್ರಗಳ ಡಿಜಿಟಲ್ ಡೇಟಾವನ್ನು ಅಭ್ಯರ್ಥಿಗಳಿಗೆ ಒದಗಿಸಬೇಕು

* ಚುನಾವಣಾ ಆಯೋಗವು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಮತ್ತು ರಾಜೀನಾಮೆ ನೀಡಬೇಕು

ಈಗಾಗಲೇ ಸಾಕ್ಷ್ಯಾಧಾರಗಳು ಲಭ್ಯವಿದ್ದರೂ ಮೌನವಾಗಿರುವುದು ಅಪರಾಧವನ್ನು ಮುಚ್ಚಿಡುವ ತಂತ್ರ ಎಂದು ಸಂಘಟನೆ ಹೇಳಿದೆ. ಒಂದು ವೇಳೆ ಈ ಆರೋಪಗಳು ಸುಳ್ಳಾಗಿದ್ದರೆ ಚುನಾವಣಾ ಆಯೋಗವು ಸ್ಪಷ್ಟೀಕರಣ ನೀಡಬೇಕು, ಇಲ್ಲವಾದರೆ ತಾನು ಮಾಡಿದ ತಪ್ಪಿಗೆ ಕ್ಷಮೆಯಾಚಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಈ ಹೇಳಿಕೆಯನ್ನು ತಾರಾ ರಾವ್, ಮೊಹಮ್ಮದ್ ಕುನ್ನಿ, ಫಾ.ಅರುಣ್ ಲೂಯಿಸ್, ಕೆ.ಎಲ್.ಅಶೋಕ್ ಮತ್ತು ಜಿ.ಎಂ.ವೀರಸಂಗಯ್ಯ ಅವರು ‘ಎದ್ದೇಳು ಕರ್ನಾಟಕ’ದ ಪರವಾಗಿ ನೀಡಿದ್ದಾರೆ.

ಬಿಹಾರ| ಮತಪಟ್ಟಿ ಪರಿಷ್ಕರಣೆ ವಿರೋಧಿಸಿ ಪ್ರತಿಭಟನೆ-ಬಂಧನ: ಅವರು ಯಾವುದಕ್ಕೆ ಹೆದರುತ್ತಿದ್ದಾರೆ? ಎಂದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...