Homeಮುಖಪುಟಮತಗಳ್ಳತನ ಆರೋಪ: ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಲು ಎದ್ದೇಳು ಕರ್ನಾಟಕ ಆಗ್ರಹ

ಮತಗಳ್ಳತನ ಆರೋಪ: ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಲು ಎದ್ದೇಳು ಕರ್ನಾಟಕ ಆಗ್ರಹ

- Advertisement -
- Advertisement -

ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದಲ್ಲಿ ನಡೆದಿರುವ ಚುನಾವಣಾ ವಂಚನೆ ಸಾಕ್ಷಿ ಸಮೇತ ಬಯಲಾಗಿದೆ.

ಅಕ್ರಮದಲ್ಲಿ ಭಾಗಿಯಾದ ಅಧಿಕಾರಗಳನ್ನು ಅಮಾನತುಗೊಳಿಸಿ ಸಮಗ್ರ ತನಿಖೆಗೆ ಆದೇಶಿಸಬೇಕು.

ಎಲ್ಲಾ ಲೋಕಸಭಾ ಕ್ಷೇತ್ರಗಳ ಡಿಜಿಟಲ್‌ ಡಾಟಾವನ್ನು ಅಭ್ಯರ್ಥಿಗಳಿಗೆ ಒದಗಿಸಬೇಕು.

ಚುನಾವಣಾ ಆಯೋಗ ಸಾರ್ವಜನಿಕ ಕ್ಷಮೆ ಕೇಳಿ ರಾಜಿನಾಮೆ ನೀಡಬೇಕು.

…………………………………………………………….

ಬೆಂಗಳೂರು: ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವ ಕುರಿತು ರಾಹುಲ್ ಗಾಂಧಿ ಮಾಡಿರುವ ಆರೋಪಗಳಿಗೆ ಹಲವು ಸಾಕ್ಷ್ಯಗಳು ದೊರೆತಿವೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಮರು ಚುನಾವಣೆ ನಡೆಸಬೇಕು, ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತುಗೊಳಿಸಿ, ತನಿಖೆ ನಡೆಸಬೇಕು ಎಂದು ‘ಎದ್ದೇಳು ಕರ್ನಾಟಕ’ ಸಂಘಟನೆ ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯು, ಇತ್ತೀಚೆಗೆ ರಾಹುಲ್ ಗಾಂಧಿ ಅವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮಹದೇವಪುರ ವಿಧಾನಸಭಾ ವಲಯದಲ್ಲಿ ನಡೆದಿರುವ ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ಹೇಳಿದೆ. ಈ ಆರೋಪಗಳು ಸಾಕ್ಷ್ಯಾಧಾರ ಸಮೇತ ಇವೆ ಎಂದು ಸಂಘಟನೆ ತಿಳಿಸಿದೆ.

ರಾಹುಲ್‌ ಗಾಂಧಿ ಮಾಡಿದ ಪತ್ರಿಕಾ ಗೋಷ್ಟಿ ಮತ್ತು ಬಿಚ್ಚಿಟ್ಟ ಮಾಹಿತಿಗಳು ಅನುಮಾನಕ್ಕಾಸ್ಪದವಿಲ್ಲದಂತೆ ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ವಲಯದ ಮತದಾರರ ಪಟ್ಟಿಯಲ್ಲಿ ನಡೆದಿರುವ ಅಪರಾಧಿ ಚಟುವಟಿಕೆಗಳು ಸಾಬೀತಾಗಿವೆ. ಇದು ಆರೋಪವಲ್ಲ, ಸಾಕ್ಷ್ಯ. ಐದು ಬಗೆಯ ಅಕ್ರಮಗಳ ಕುರಿತು ಒಂದಲ್ಲ, ಸಾವಿರಾರು ಸಾಕ್ಷಿಗಳನ್ನು ಒದಗಿಸಲಾಗಿದೆ. ನಕಲಿ ಮತದಾರರನ್ನು ಸೃಷ್ಟಿಸಿರುವ, ತಂದೆಯ ಹೆಸರಿಲ್ಲದ, ವಿಳಾಸವಿಲ್ಲದ ಮತಚೀಟಿಗಳನ್ನು ವಿತರಿಸಿರುವ, ಭಾವಚಿತ್ರವೇ ಇಲ್ಲದಂತೆ ಅಥವಾ ಕಾಣದಂತೆ ಮತ ಚೀಟಿ ನೀಡಿರುವ, ಒಂದೇ ವಿಳಾಸದಲ್ಲಿ 40, 80 ಜನರಿಗೆ ಮತಚೀಟಿ ಸೃಷ್ಟಿಸಿರುವ, ಹೊಸ ಮತದಾರರಿಗೆ ನೀಡಬೇಕಾದ ನಮೂನೆ 6ನ್ನು ದುರುಪಯೋಗಪಡಿಸಿಕೊಂಡಿರುವ, ಅಪರಾಧ ಸಾಕಷ್ಟು ಸಾಕ್ಷ್ಯಗಳ ಮೂಲಕ ಸಾಬೀತಾಗಿದೆ ಎಂದು ಎದ್ದೇಳು ಕರ್ನಾಟಕ ಹೇಳಿದೆ.

ಇದು ಒಂದು ಲೋಕಸಭಾ ಕ್ಷೇತ್ರದ, ಒಂದು ವಿಧಾನ ಸಭಾ ಕ್ಷೇತ್ರದಲ್ಲಿ ನಡೆದಿರುವ ಅಕ್ರಮ. ಇಡೀ ದೇಶದಲ್ಲಿ ನೂರಾರು ಕಡೆ ಇದು ನಡೆದಿರುವ ಎಲ್ಲಾ ಸಾಧ್ಯತೆಗಳೂ ಇವೆ. ಚುನಾವಣಾ ಫಲಿತಾಂಶ ಬಂದ ಕೂಡಲೇ ಅಕ್ರಮ ನಡೆದಿರುವ ಸಾಧ್ಯತೆಗಳ ಬಗ್ಗೆ ಎದ್ದೇಳು ಕರ್ನಾಟಕ ಹೇಳಿಕೆ ನೀಡಿತ್ತು. ಮರು ಮತದಾನಕ್ಕೆ ಹಾಕವಂತೆ ಬೆಂಗಳೂರು ಕೇಂದ್ರದ ಅಭ್ಯರ್ಥಿಯನ್ನೂ ಒತ್ತಾಯಿಸಿತ್ತು. ಜುಲೈ 2024 ರಲ್ಲಿ Vote For Democracy ಎಂಬ ಸಂಸ್ಥೆ ವರದಿಯೊಂದನ್ನು [Conduct of Lok sabha elections 2024] ಬಿಡುಗಡೆ ಮಾಡಿ, ಅದರಲ್ಲಿ ದೇಶದ 79 ಕ್ಷೇತ್ರಗಳಲ್ಲಿ ಮತಕಳವು ನಡೆದಿರುವುದಕ್ಕೆ ಸಾಂದರ್ಭಿಕ ಸಾಕ್ಷ್ಯವನ್ನು ಮುಂದಿಟ್ಟಿತ್ತು. ಚುನಾವಣಾ ಆಯೋಗವು ಎಷ್ಟು ಮತದಾನ ನಡೆದಿದೆ ಎಂಬ ಬಗ್ಗೆ ನೀಡಿದ ಎರಡು ಸಂಖ್ಯೆಗಳ ನಡುವಿನ ಅಂತರ ಆ ಕ್ಷೇತ್ರದ ಗೆಲುವಿನ ಅಂತರಕ್ಕಿಂತ ಹೆಚ್ಚಿರುವುದನ್ನು ಗುರುತಿಸಿ ಈ ಕ್ಷೇತ್ರಗಳಲ್ಲಿ ಕಳುವಾಗಿರುವ ಎಲ್ಲಾ ಸಾಧ್ಯತೆಗಳಿವೆ ಎಂದು ಆರೋಪಿಸಿತ್ತು. ಆ 79 ಕ್ಷೇತ್ರಗಳ ಪಟ್ಟಿಯನ್ನು ಒದಗಿಸಿತ್ತು. ಅದರಲ್ಲಿ ಕರ್ನಾಟಕದ 6 ಕ್ಷೇತ್ರಗಳ ಹೆಸರುಗಳು ಇದ್ದವು. ಅದರಲ್ಲಿ ಬೆಂಗಳೂರು ಸೆಂಟ್ರಲ್‌ ಕ್ಷೇತ್ರವೂ ಇತ್ತು. ಈಗ ಈ 79 ಕ್ಷೇತ್ರದ ಪೈಕಿ ಒಂದು ಕ್ಷೇತ್ರದಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿದೆ ಎಂದು ಅದು ಹೇಳಿದೆ.

ಈ ಸಾಕ್ಷ್ಯವನ್ನು ಹೊರತೆಗೆಯಲು ನಡೆದಿರುವ ಪರಿಶ್ರಮ ಅಪಾರವಾದುದು, ಶ್ಲಾಘನೀಯವಾದುದು. ಚುನಾವಣಾ ಆಯೋಗವು ಡಿಜಿಟಲ್‌ ಡಾಟಾವನ್ನು ಒದಗಿಸಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಸಹಸ್ರಾರು ಪುಟಗಳ ಮುದ್ರಿತ ದಾಖಲೆಯನ್ನು ಒಂದೊಂದಾಗಿ ಪರಿಶೀಲಿಸಿ, ತಾಳೆ ಹಾಕಿ, ಈ ಬೃಹತ್‌ ಸಾಕ್ಷ್ಯವನ್ನು ಸಿದ್ಧಪಡಿಸಲಾಗಿದೆ. ಇದನ್ನು ಸಿದ್ಧಪಡಿಸಿದ ತಂಡಕ್ಕೆ, ಅದಕ್ಕೆ ಬೆಂಬಲ ನೀಡಿದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ ಅವರಿಗೆ, ಅದನ್ನು ದಿಟ್ಟವಾಗಿ ಮತ್ತು ಪರಿಣಾಮಕಾರಿಯಾಗಿ ಮುಂದಿಟ್ಟ ರಾಹುಲ್‌ ಗಾಂಧಿ ಅವರಿಗೆ ಅಭಿನಂದನೆಗಳು ಎಂದು ಎದ್ದೇಳು ಕರ್ನಾಟಕ ತಿಳಿಸಿದೆ.

ಸಂವಿಧಾನ ಪದ್ದತಿಗೆ ವಿರುದ್ಧವಾಗಿ ಚುನಾವಣಾ ಆಯೋಗವನ್ನು ತಾನೇ ನೇಮಿಸಿರುವ ಬಿಜೆಪಿ ಸರ್ಕಾರ, ಅದನ್ನು ಬಳಸಿಕೊಂಡು ಪ್ರಜಾತಂತ್ರವನ್ನು ಕೊಲೆ ಮಾಡಲು ಹೊರಟಿದೆ. ಜನಾಕ್ರೋಶ ಬೆಳೆಯುತ್ತಿದ್ದು, ಚುನಾವಣೆಗಳಲ್ಲಿ ಸೋಲುವ ಭೀತಿ ಹೆಚ್ಚಿರುವುದರಿಂದ, ಮತಗಳನ್ನು ಅಪಹರಿಸುವ ಮತ್ತು ಕಳ್ಳ ಮತಗಳನ್ನು ಬರೆಸುವ ಮತ ಮಾಫಿಯಾ ಕೆಲಸಕ್ಕೆ ಕೈಹಾಕಿದೆ ಎಂದು ಅದು ಆರೋಪಿಸಿದೆ.

ಸಾಕ್ಷ್ಯಗಳನ್ನು ಮುಂದಿಟ್ಟಾಗ ಮೌನ ಧರಿಸುವುದು ಅಪರಾಧವನ್ನು ಮುಚ್ಚಿಡುವ ತಂತ್ರವಾಗುತ್ತದೆ. ಚುನಾವಣ ಆಯೋಗವು ಮಾತನಾಡಬೇಕು ಎಂದು ನಾವು ಆಗ್ರಹಿಸುತ್ತೇವೆ. ಒಂದು ವೇಳೆ ರಾಹುಲ್‌ ಗಾಂಧಿ ಬಿಚ್ಚಿಟ್ಟ ಸತ್ಯ ಸತ್ಯವಲ್ಲ ಎಂಬುದಾದರೆ ಅದನ್ನು ಚುನಾವಣಾ ಆಯೋಗವು ತಡಮಾಡದೆ ಜನತೆಯ ಮುಂದಿಡಬೇಕು. ಅಥವಾ ತಾನು ಮಾಡಿದ ತಪ್ಪಿಗಾಗಿ ಜನತೆಯ ಮುಂದೆ ಕ್ಷಮೆಯಾಚಿಸಬೇಕು. ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ ಈ ಅಕ್ರಮದ ತನಿಖೆಯಾಗಬೇಕು. ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ಮರುಮತದಾನಕ್ಕೆ ಆದೇಶ ಹೊರಡಿಸಬೇಕು.  ಕೊನೆಯದಾಗಿ ಮತದಾರರ ಪಟ್ಟಿ ಮತ್ತು ಮತದಾನ ನಡೆದ ವಿಧಾನಕ್ಕೆ ಸಂಬಂಧಪಟ್ಟಂತೆ ಇರುವ ಎಲ್ಲಾ ಡಿಜಿಟಲ್‌ ಡಾಟಾವನ್ನು ಬಿಡುಗಡೆ ಮಾಡಬೇಕು. ಇದನ್ನು ಮಾಡದಿದ್ದರೆ ನಾಗರೀಕರಾದ ನಾವು ಸುಮ್ಮನೆ ಕೂರುವುದಿಲ್ಲ ರಾಜ್ಯವ್ಯಾಪಿ ಪ್ರತಿಭಟನೆ ಆರಂಭಿಸುತ್ತೇವೆ ಎಂದು ಎದ್ದೇಳು ಕರ್ನಾಟಕ ಎಚ್ಚರಿಕೆ ನೀಡಿದೆ

‘ಎದ್ದೇಳು ಕರ್ನಾಟಕ’ ಸಂಘಟನೆಯ ಆಗ್ರಹಗಳು:

*ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಬೇಕು

* ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ, ಸಮಗ್ರ ತನಿಖೆ ನಡೆಸಬೇಕು

* ಎಲ್ಲಾ ಲೋಕಸಭಾ ಕ್ಷೇತ್ರಗಳ ಡಿಜಿಟಲ್ ಡೇಟಾವನ್ನು ಅಭ್ಯರ್ಥಿಗಳಿಗೆ ಒದಗಿಸಬೇಕು

* ಚುನಾವಣಾ ಆಯೋಗವು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಮತ್ತು ರಾಜೀನಾಮೆ ನೀಡಬೇಕು

ಈಗಾಗಲೇ ಸಾಕ್ಷ್ಯಾಧಾರಗಳು ಲಭ್ಯವಿದ್ದರೂ ಮೌನವಾಗಿರುವುದು ಅಪರಾಧವನ್ನು ಮುಚ್ಚಿಡುವ ತಂತ್ರ ಎಂದು ಸಂಘಟನೆ ಹೇಳಿದೆ. ಒಂದು ವೇಳೆ ಈ ಆರೋಪಗಳು ಸುಳ್ಳಾಗಿದ್ದರೆ ಚುನಾವಣಾ ಆಯೋಗವು ಸ್ಪಷ್ಟೀಕರಣ ನೀಡಬೇಕು, ಇಲ್ಲವಾದರೆ ತಾನು ಮಾಡಿದ ತಪ್ಪಿಗೆ ಕ್ಷಮೆಯಾಚಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಈ ಹೇಳಿಕೆಯನ್ನು ತಾರಾ ರಾವ್, ಮೊಹಮ್ಮದ್ ಕುನ್ನಿ, ಫಾ.ಅರುಣ್ ಲೂಯಿಸ್, ಕೆ.ಎಲ್.ಅಶೋಕ್ ಮತ್ತು ಜಿ.ಎಂ.ವೀರಸಂಗಯ್ಯ ಅವರು ‘ಎದ್ದೇಳು ಕರ್ನಾಟಕ’ದ ಪರವಾಗಿ ನೀಡಿದ್ದಾರೆ.

ಬಿಹಾರ| ಮತಪಟ್ಟಿ ಪರಿಷ್ಕರಣೆ ವಿರೋಧಿಸಿ ಪ್ರತಿಭಟನೆ-ಬಂಧನ: ಅವರು ಯಾವುದಕ್ಕೆ ಹೆದರುತ್ತಿದ್ದಾರೆ? ಎಂದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...