Homeಮುಖಪುಟಉಪರಾಷ್ಟ್ರಪತಿ ಚುನಾವಣೆಯಲ್ಲೂ ಮತಗಳ್ಳತನ: ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖ್ಯ ಸಚೇತಕ ಮಾಣಿಕಂ ಟ್ಯಾಗೋರ್ ಆರೋಪ!

ಉಪರಾಷ್ಟ್ರಪತಿ ಚುನಾವಣೆಯಲ್ಲೂ ಮತಗಳ್ಳತನ: ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖ್ಯ ಸಚೇತಕ ಮಾಣಿಕಂ ಟ್ಯಾಗೋರ್ ಆರೋಪ!

- Advertisement -
- Advertisement -

ಉಪರಾಷ್ಟ್ರಪತಿ ಚುನಾವಣೆಯಲ್ಲೂ ಬಿಜೆಪಿ ‘ಮತಗಳ್ಳತನ’ ಮಾಡಿದೆ ಎಂದು ಕಾಂಗ್ರೆಸ್ ಸಂಸದ, ಲೋಕಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕರಾಗಿರುವ ಮಾಣಿಕಂ ಟ್ಯಾಗೋರ್ ಆರೋಪಿಸಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನದ ಊಹಾಪೋಹಗಳು ಹರಡಿದೆ. ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಎರಡೂ ಸದನಗಳಲ್ಲಿರುವ ತನ್ನ ಸಾಮೂಹಿಕ ಸಾಮರ್ಥ್ಯಕ್ಕಿಂತ ಕಡಿಮೆ ಮತ ಪಡೆಯುವಂತಾಗಲು ಇಂಡಿಯಾ ಮೈತ್ರಿಕೂಟದ ಅಂಗಪಕ್ಷಗಳಾದ ಶಿವಸೇನೆ (ಉದ್ಧವ್ ಬಣ) ಹಾಗೂ ಎಎಪಿಯ ಕೆಲ ಸಂಸದರು ಎನ್‌ಡಿಎ ಅಭ್ಯರ್ಥಿ ಪರ ಮತ ಚಲಾಯಿಸಿರುವುದು ಕಾರಣ ಎಂಬ ಅನುಮಾನಗಳು ವ್ಯಕ್ತವಾಗಿದೆ. ಈ ಬೆನ್ನಿಗೇ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಮತಗಳ್ಳತನ ಮಾಡಿದೆ ಎಂಬ ಗಂಭೀರ ಆರೋಪವನ್ನು ಮಾಣಿಕಂ ಟ್ಯಾಗೋರ್ ಮಾಡಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಇಂಡಿಯಾ ಅಭ್ಯರ್ಥಿ ಪರ ಬಿದ್ದ ಮತಗಳ ಸಂಖ್ಯೆ ಹೇಗೆ ಕಡಿಮೆ ಆದವು ಎಂಬುದರ ಕುರಿತು ವಿಪಕ್ಷಗಳ ನಾಯಕರು ಅನೌಪಚಾರಿಕ ತನಿಖೆಗಳನ್ನು ಪ್ರಾರಂಭಿಸಿದ್ದಾರೆ. ಅವರ ಸ್ವಂತ ಅಂದಾಜಿನ ಪ್ರಕಾರ, ಬಹುತೇಕ ಪರಿಪೂರ್ಣ ಹಾಜರಾತಿಯನ್ನು ಹೊಂದಿದ್ದರೂ, ಇಂಡಿಯಾ ಅಭ್ಯರ್ಥಿಯು ಅಂದಾಜು ಮಾಡಿದ ಸಂಖ್ಯೆಗಿಂತ ಕನಿಷ್ಠ 15 ಮತಗಳನ್ನು ಕಡಿಮೆ ಪಡೆದಿದ್ದಾರೆ. ಒಂದು ಅಂದಾಜಿನ ಪ್ರಕಾರ, ಆರು ಪಕ್ಷಗಳ ಸದಸ್ಯರು ಅಡ್ಡ-ಮತದಾನ ಮಾಡಿದ್ದಾರೆ ಅಥವಾ ಅವರ ಮತಗಳು ಅಮಾನ್ಯಗೊಂಡಿವೆ.

“ಎನ್‌ಡಿಎ ಅಭ್ಯರ್ಥಿಗೆ ಅವರ ಸಂಖ್ಯಾಬಲಕ್ಕಿಂತ ಹೆಚ್ಚು ಮತಗಳು ಹೇಗೆ ಬಿದ್ದವು ಎಂಬುದರ ಕುರಿತು ನಾವು ಮಾತನಾಡುವುದಿಲ್ಲ. ನಮಗೆ ದೊರೆತ 300 ಮತಗಳನ್ನು ನಾವು ವಿಶ್ಲೇಷಿಸಿದ್ದೇವೆ. ಮೂರು ಶಿವಸೇನೆ (ಯುಬಿಟಿ) ಮತಗಳು, ನಾಲ್ಕು ಆಮ್ ಆದ್ಮಿ ಪಕ್ಷದ (ಎಎಪಿ) ಮತಗಳು, ಎರಡು ಎನ್‌ಸಿಪಿ (ಶರದ್ ಪವಾರ್) ಮತಗಳು ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಒಂದು ಅಥವಾ ಎರಡು ಮತಗಳು ನಮಗೆ ಲೆಕ್ಕಕ್ಕೆ ಸಿಕ್ಕಿಲ್ಲ. ಈ ಮತಗಳು ಅಮಾನ್ಯಗೊಂಡಿವೆಯೇ? ಇಲ್ಲ, ಸಂಸದರು ಎನ್‌ಡಿಎ ಅಭ್ಯರ್ಥಿ ಪರ ಮತಚಲಾಯಿಸಿದ್ದಾರೆಯೇ? ಎಂಬುವುದನ್ನು ಹೇಳಲು ಸಾಧ್ಯವಿಲ್ಲ. ಕಾಂಗ್ರೆಸ್‌ಗೆ ಒಂದು ಮತ ಮತ್ತು ಸಮಾಜವಾದಿ ಪಕ್ಷಕ್ಕೆ ಎರಡು ಮತಗಳ ಲೆಕ್ಕ ಸಿಕ್ಕಿಲ್ಲ ಎಂದು ಹೆಸರು ಹೇಳಲು ಇಚ್ಚಿಸದ ವಿರೋಧ ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಈ ಕುರಿತು ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ನಾಯಕ ಮಾಣಿಕಂ ಟ್ಯಾಗೋರ್, “ಶಿವಸೇನೆಯ ಸಂಸದ ಶ್ರೀಕಾಂತ್ ಶಿಂದೆಯೇಕೆ ಇಂಡಿಯಾ ಸಂಸದರಿಗೆ ಧನ್ಯವಾದ ಸಲ್ಲಿಸುತ್ತಿದ್ದಾರೆ? ಸಚಿವ ಕಿರಣ್ ರಿಜಿಜು ಏಕೆ ವಿರೋಧ ಪಕ್ಷಗಳ ಆತ್ಮಸಾಕ್ಷಿಯ ಮತದಾನವನ್ನು ಸಂಭ್ರಮಿಸುತ್ತಿದ್ದಾರೆ? ಇದು ನಿಜಕ್ಕೂ ಆತ್ಮಸಾಕ್ಷಿಯದ್ದೆ? ಅಥವಾ ಸಿಬಿಐ/ಈಡಿ ಒತ್ತಡ ಹಾಗೂ ಕುದುರೆ ವ್ಯಾಪಾರವನ್ನು ಆತ್ಮಸಾಕ್ಷಿ ಎಂದು ಸಮರ್ಥಿಸಿಕೊಳ್ಳಾಲಾಗುತ್ತಿದೆಯೆ?” ಎಂದು ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷದ ಮತಗಳು ಎನ್‌ಡಿಎಗೆ ಹೋಗಿವೆ ಎಂದು ಬಿಜೆಪಿ ನಾಯಕರೇ ಒಪ್ಪಿಕೊಂಡಿರುವಾಗ, ಇದು ಸಂಸತ್ತಿನೊಳಗೆ ‘ಮತಗಳ್ಳತನ’ ನಡೆದಿದೆ ಎಂಬುವುದಕ್ಕೆ ಪುರಾವೆಯಲ್ಲವೇ ಟ್ಯಾಗೋರ್ ಕೇಳಿದ್ದಾರೆ.

“ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಆಧಾರ್ ಲಿಂಕ್ ಮಾಡಲಾದ ಮತದಾರರ ನಿಗ್ರಹದಿಂದ, ಈಗ ಉಪರಾಷ್ಟ್ರಪತಿ ಚುನಾವಣೆಗಳವರೆಗೆ. ಮೋದಿ-ಶಾ ಮಾದರಿ ಎಂದರೆ ಕೇವಲ ಮತಗಳ್ಳತನ  ಮೂಲಕ ಗೆಲ್ಲುವುದೇ? ಸಚಿವರು ಜನಾದೇಶವನ್ನು ಗೌರವಿಸುವ ಬದಲು ಮತಗಳನ್ನು ಕದಿಯುವ ಬಗ್ಗೆ ಹೆಮ್ಮೆಪಡುತ್ತಿದ್ದರೆ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಅಥವಾ 2029ರಲ್ಲಿ ಬಿಜೆಪಿಯ ಮತಗಳ್ಳತನ ರಾಜಕೀಯಕ್ಕೆ ಜನರು ಉತ್ತರಿಸುತ್ತಾರೆಯೇ?” ಎಂದು ಟ್ಯಾಗೋರ್ ಪ್ರಶ್ನಿಸಿದ್ದಾರೆ.

ಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮುಂದಾದ ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...