Homeಮುಖಪುಟಉಪರಾಷ್ಟ್ರಪತಿ ಚುನಾವಣೆಯಲ್ಲೂ ಮತಗಳ್ಳತನ: ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖ್ಯ ಸಚೇತಕ ಮಾಣಿಕಂ ಟ್ಯಾಗೋರ್ ಆರೋಪ!

ಉಪರಾಷ್ಟ್ರಪತಿ ಚುನಾವಣೆಯಲ್ಲೂ ಮತಗಳ್ಳತನ: ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖ್ಯ ಸಚೇತಕ ಮಾಣಿಕಂ ಟ್ಯಾಗೋರ್ ಆರೋಪ!

- Advertisement -
- Advertisement -

ಉಪರಾಷ್ಟ್ರಪತಿ ಚುನಾವಣೆಯಲ್ಲೂ ಬಿಜೆಪಿ ‘ಮತಗಳ್ಳತನ’ ಮಾಡಿದೆ ಎಂದು ಕಾಂಗ್ರೆಸ್ ಸಂಸದ, ಲೋಕಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕರಾಗಿರುವ ಮಾಣಿಕಂ ಟ್ಯಾಗೋರ್ ಆರೋಪಿಸಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನದ ಊಹಾಪೋಹಗಳು ಹರಡಿದೆ. ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಎರಡೂ ಸದನಗಳಲ್ಲಿರುವ ತನ್ನ ಸಾಮೂಹಿಕ ಸಾಮರ್ಥ್ಯಕ್ಕಿಂತ ಕಡಿಮೆ ಮತ ಪಡೆಯುವಂತಾಗಲು ಇಂಡಿಯಾ ಮೈತ್ರಿಕೂಟದ ಅಂಗಪಕ್ಷಗಳಾದ ಶಿವಸೇನೆ (ಉದ್ಧವ್ ಬಣ) ಹಾಗೂ ಎಎಪಿಯ ಕೆಲ ಸಂಸದರು ಎನ್‌ಡಿಎ ಅಭ್ಯರ್ಥಿ ಪರ ಮತ ಚಲಾಯಿಸಿರುವುದು ಕಾರಣ ಎಂಬ ಅನುಮಾನಗಳು ವ್ಯಕ್ತವಾಗಿದೆ. ಈ ಬೆನ್ನಿಗೇ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಮತಗಳ್ಳತನ ಮಾಡಿದೆ ಎಂಬ ಗಂಭೀರ ಆರೋಪವನ್ನು ಮಾಣಿಕಂ ಟ್ಯಾಗೋರ್ ಮಾಡಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಇಂಡಿಯಾ ಅಭ್ಯರ್ಥಿ ಪರ ಬಿದ್ದ ಮತಗಳ ಸಂಖ್ಯೆ ಹೇಗೆ ಕಡಿಮೆ ಆದವು ಎಂಬುದರ ಕುರಿತು ವಿಪಕ್ಷಗಳ ನಾಯಕರು ಅನೌಪಚಾರಿಕ ತನಿಖೆಗಳನ್ನು ಪ್ರಾರಂಭಿಸಿದ್ದಾರೆ. ಅವರ ಸ್ವಂತ ಅಂದಾಜಿನ ಪ್ರಕಾರ, ಬಹುತೇಕ ಪರಿಪೂರ್ಣ ಹಾಜರಾತಿಯನ್ನು ಹೊಂದಿದ್ದರೂ, ಇಂಡಿಯಾ ಅಭ್ಯರ್ಥಿಯು ಅಂದಾಜು ಮಾಡಿದ ಸಂಖ್ಯೆಗಿಂತ ಕನಿಷ್ಠ 15 ಮತಗಳನ್ನು ಕಡಿಮೆ ಪಡೆದಿದ್ದಾರೆ. ಒಂದು ಅಂದಾಜಿನ ಪ್ರಕಾರ, ಆರು ಪಕ್ಷಗಳ ಸದಸ್ಯರು ಅಡ್ಡ-ಮತದಾನ ಮಾಡಿದ್ದಾರೆ ಅಥವಾ ಅವರ ಮತಗಳು ಅಮಾನ್ಯಗೊಂಡಿವೆ.

“ಎನ್‌ಡಿಎ ಅಭ್ಯರ್ಥಿಗೆ ಅವರ ಸಂಖ್ಯಾಬಲಕ್ಕಿಂತ ಹೆಚ್ಚು ಮತಗಳು ಹೇಗೆ ಬಿದ್ದವು ಎಂಬುದರ ಕುರಿತು ನಾವು ಮಾತನಾಡುವುದಿಲ್ಲ. ನಮಗೆ ದೊರೆತ 300 ಮತಗಳನ್ನು ನಾವು ವಿಶ್ಲೇಷಿಸಿದ್ದೇವೆ. ಮೂರು ಶಿವಸೇನೆ (ಯುಬಿಟಿ) ಮತಗಳು, ನಾಲ್ಕು ಆಮ್ ಆದ್ಮಿ ಪಕ್ಷದ (ಎಎಪಿ) ಮತಗಳು, ಎರಡು ಎನ್‌ಸಿಪಿ (ಶರದ್ ಪವಾರ್) ಮತಗಳು ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಒಂದು ಅಥವಾ ಎರಡು ಮತಗಳು ನಮಗೆ ಲೆಕ್ಕಕ್ಕೆ ಸಿಕ್ಕಿಲ್ಲ. ಈ ಮತಗಳು ಅಮಾನ್ಯಗೊಂಡಿವೆಯೇ? ಇಲ್ಲ, ಸಂಸದರು ಎನ್‌ಡಿಎ ಅಭ್ಯರ್ಥಿ ಪರ ಮತಚಲಾಯಿಸಿದ್ದಾರೆಯೇ? ಎಂಬುವುದನ್ನು ಹೇಳಲು ಸಾಧ್ಯವಿಲ್ಲ. ಕಾಂಗ್ರೆಸ್‌ಗೆ ಒಂದು ಮತ ಮತ್ತು ಸಮಾಜವಾದಿ ಪಕ್ಷಕ್ಕೆ ಎರಡು ಮತಗಳ ಲೆಕ್ಕ ಸಿಕ್ಕಿಲ್ಲ ಎಂದು ಹೆಸರು ಹೇಳಲು ಇಚ್ಚಿಸದ ವಿರೋಧ ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಈ ಕುರಿತು ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ನಾಯಕ ಮಾಣಿಕಂ ಟ್ಯಾಗೋರ್, “ಶಿವಸೇನೆಯ ಸಂಸದ ಶ್ರೀಕಾಂತ್ ಶಿಂದೆಯೇಕೆ ಇಂಡಿಯಾ ಸಂಸದರಿಗೆ ಧನ್ಯವಾದ ಸಲ್ಲಿಸುತ್ತಿದ್ದಾರೆ? ಸಚಿವ ಕಿರಣ್ ರಿಜಿಜು ಏಕೆ ವಿರೋಧ ಪಕ್ಷಗಳ ಆತ್ಮಸಾಕ್ಷಿಯ ಮತದಾನವನ್ನು ಸಂಭ್ರಮಿಸುತ್ತಿದ್ದಾರೆ? ಇದು ನಿಜಕ್ಕೂ ಆತ್ಮಸಾಕ್ಷಿಯದ್ದೆ? ಅಥವಾ ಸಿಬಿಐ/ಈಡಿ ಒತ್ತಡ ಹಾಗೂ ಕುದುರೆ ವ್ಯಾಪಾರವನ್ನು ಆತ್ಮಸಾಕ್ಷಿ ಎಂದು ಸಮರ್ಥಿಸಿಕೊಳ್ಳಾಲಾಗುತ್ತಿದೆಯೆ?” ಎಂದು ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷದ ಮತಗಳು ಎನ್‌ಡಿಎಗೆ ಹೋಗಿವೆ ಎಂದು ಬಿಜೆಪಿ ನಾಯಕರೇ ಒಪ್ಪಿಕೊಂಡಿರುವಾಗ, ಇದು ಸಂಸತ್ತಿನೊಳಗೆ ‘ಮತಗಳ್ಳತನ’ ನಡೆದಿದೆ ಎಂಬುವುದಕ್ಕೆ ಪುರಾವೆಯಲ್ಲವೇ ಟ್ಯಾಗೋರ್ ಕೇಳಿದ್ದಾರೆ.

“ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಆಧಾರ್ ಲಿಂಕ್ ಮಾಡಲಾದ ಮತದಾರರ ನಿಗ್ರಹದಿಂದ, ಈಗ ಉಪರಾಷ್ಟ್ರಪತಿ ಚುನಾವಣೆಗಳವರೆಗೆ. ಮೋದಿ-ಶಾ ಮಾದರಿ ಎಂದರೆ ಕೇವಲ ಮತಗಳ್ಳತನ  ಮೂಲಕ ಗೆಲ್ಲುವುದೇ? ಸಚಿವರು ಜನಾದೇಶವನ್ನು ಗೌರವಿಸುವ ಬದಲು ಮತಗಳನ್ನು ಕದಿಯುವ ಬಗ್ಗೆ ಹೆಮ್ಮೆಪಡುತ್ತಿದ್ದರೆ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಅಥವಾ 2029ರಲ್ಲಿ ಬಿಜೆಪಿಯ ಮತಗಳ್ಳತನ ರಾಜಕೀಯಕ್ಕೆ ಜನರು ಉತ್ತರಿಸುತ್ತಾರೆಯೇ?” ಎಂದು ಟ್ಯಾಗೋರ್ ಪ್ರಶ್ನಿಸಿದ್ದಾರೆ.

ಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮುಂದಾದ ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...