Homeಮುಖಪುಟನಿರುದ್ಯೋಗ ಹೆಚ್ಚಳಕ್ಕೆ ಮತಗಳ್ಳತನ ನೇರ ಕಾರಣ: ರಾಹುಲ್ ಗಾಂಧಿ

ನಿರುದ್ಯೋಗ ಹೆಚ್ಚಳಕ್ಕೆ ಮತಗಳ್ಳತನ ನೇರ ಕಾರಣ: ರಾಹುಲ್ ಗಾಂಧಿ

- Advertisement -
- Advertisement -

ಚುನಾವಣೆಗಳಲ್ಲಿ ‘ಮತಗಳ್ಳತನ’ ನಿಲ್ಲುವವರೆಗೆ ನಿರುದ್ಯೋಗ ಮತ್ತು ಭ್ರಷ್ಟಾಚಾರ ಹೆಚ್ಚುತ್ತಲೇ ಇರುತ್ತದೆ. ಯುವಜನರು ‘ಉದ್ಯೋಗ ಕಳ್ಳತನ’ ಮತ್ತು ‘ಮತ ಕಳ್ಳತನ’ವನ್ನು ಇನ್ನು ಮುಂದೆ ಸಹಿಸುವುದಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಅವರು, “ನಿರುದ್ಯೋಗವು ಭಾರತದಲ್ಲಿ ಯುವಕರು ಎದುರಿಸುತ್ತಿರುವ ಅತಿದೊಡ್ಡ ಸಮಸ್ಯೆಯಾಗಿದ್ದು, ಅದು ನೇರವಾಗಿ ಮತಗಳ್ಳತನದೊಂದಿಗೆ ಸಂಬಂಧ ಹೊಂದಿದೆ ಎಂದಿದ್ದಾರೆ.

ಒಂದು ಸರ್ಕಾರ ಜನರ ವಿಶ್ವಾಸಗಳಿಸಿ ಅಧಿಕಾರಕ್ಕೆ ಬಂದಾಗ, ಅದರ ಮೊದಲ ಕರ್ತವ್ಯ ಯುವಕರಿಗೆ ಉದ್ಯೋಗ ಮತ್ತು ಅವಕಾಶಗಳನ್ನು ಒದಗಿಸುವುದು ಆಗಿರುತ್ತದೆ. ಆದರೆ, ಬಿಜೆಪಿ ಪ್ರಾಮಾಣಿಕವಾಗಿ ಚುನಾವಣೆಗಳನ್ನು ಗೆಲ್ಲುವುದಿಲ್ಲ. ಅವರು ಮತಗಳನ್ನು ಕದಿಯುವ ಮೂಲಕ ಮತ್ತು ಸಂಸ್ಥೆಗಳನ್ನು ನಿಯಂತ್ರಿಸುವ ಮೂಲಕ ಅಧಿಕಾರದಲ್ಲಿ ಉಳಿಯುತ್ತಾರೆ” ಎಂದು ಆರೋಪಿಸಿದ್ದಾರೆ.

“ಈ ಕಾರಣಕ್ಕೆ ದೇಶದಲ್ಲಿ ನಿರುದ್ಯೋಗ 45 ವರ್ಷಗಳಲ್ಲಿ ಗರಿಷ್ಠ ಮಟ್ಟ ತಲುಪಿದೆ. ಉದ್ಯೋಗವಕಾಶಗಳು ಕಡಿಮೆಯಾಗುತ್ತಿವೆ. ನೇಮಕಾತಿ ಪ್ರಕ್ರಿಯೆಗಳು ಕುಸಿದಿವೆ. ಯುವಕರ ಭವಿಷ್ಯ ಅಪಾಯಕ್ಕೆ ಸಿಲುಕುತ್ತಿದೆ. ಪ್ರತಿಯೊಂದು ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪ್ರತಿಯೊಂದು ನೇಮಕಾತಿಯು ಭ್ರಷ್ಟಾಚಾರದ ಕಥೆಗಳೊಂದಿಗೆ ಸಂಬಂಧ ಹೊಂದಿದೆ” ಎಂದು ಹೇಳಿದ್ದಾರೆ.

“ದೇಶದ ಯುವಕರು ಕಷ್ಟಪಟ್ಟು ಕೆಲಸ ಮಾಡುತ್ತಾರೆ, ಕನಸು ಕಾಣುತ್ತಾರೆ ಮತ್ತು ತಮ್ಮ ಭವಿಷ್ಯಕ್ಕಾಗಿ ಹೋರಾಡುತ್ತಾರೆ. ಆದರೆ, ಮೋದಿ ತಮ್ಮ ಪಿಆರ್, ಸೆಲೆಬ್ರಿಟಿಗಳು ತಮ್ಮನ್ನು ಹೊಗಳುವಂತೆ ಮಾಡುವುದು ಮತ್ತು ಕೋಟ್ಯಾಧಿಪತಿಗಳ ಲಾಭದ ಮೇಲೆ ಮಾತ್ರ ಗಮನಹರಿಸಿದ್ದಾರೆ. ಯುವಕರ ಭರವಸೆಗಳನ್ನು ಛಿದ್ರಗೊಳಿಸುವುದು ಮತ್ತು ಅವರನ್ನು ನಿರಾಶೆಗೊಳಿಸುವುದು ಸರ್ಕಾರದ ಗುರುತಾಗಿದೆ” ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

“ಈಗ ಪರಿಸ್ಥಿತಿ ಬದಲಾಗುತ್ತಿದೆ. ಭಾರತದ ಯುವಕರು ನಿಜವಾದ ಹೋರಾಟ ಕೇವಲ ಉದ್ಯೋಗಗಳಿಗಾಗಿ ಅಲ್ಲ, ಮತ ಕಳ್ಳತನದ ವಿರುದ್ಧ ಎಂದು ಅರ್ಥಮಾಡಿಕೊಂಡಿದ್ದಾರೆ. ಏಕೆಂದರೆ, ಎಲ್ಲಿಯವರೆಗೆ ಮತಗಳ್ಳತನ ನಡೆಯುತ್ತದೆಯೋ, ಅಲ್ಲಿಯವರೆಗೆ ನಿರುದ್ಯೋಗ ಮತ್ತು ಭ್ರಷ್ಟಾಚಾರ ಹೆಚ್ಚುತ್ತಲೇ ಇರುತ್ತದೆ” ಎಂದಿದ್ದಾರೆ.

“ಯುವಜನರು ಇನ್ನು ಮುಂದೆ “ಉದ್ಯೋಗ ಕಳ್ಳತನ” ಅಥವಾ “ಮತ ಕಳ್ಳತನ”ವನ್ನು ಸಹಿಸುವುದಿಲ್ಲ. ಈಗ ಅಂತಿಮ ದೇಶಭಕ್ತಿ ಭಾರತವನ್ನು ನಿರುದ್ಯೋಗ ಮತ್ತು ಮತ ಕಳ್ಳತನದಿಂದ ಮುಕ್ತಗೊಳಿಸುವುದರಲ್ಲಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಉದ್ಯೋಗಕ್ಕಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿ ಚಾರ್ಜ್ ದೃಶ್ಯ ಹಾಗೂ ಇನ್ನೊಂದೆಡೆ ಪ್ರಧಾನಿ ಮೋದಿ ಸಸಿಗಳನ್ನು ನೆಡುವುದು, ನವಿಲುಗಳಿಗೆ ಆಹಾರ ನೀಡುವುದು ಮತ್ತು ಯೋಗಾಭ್ಯಾಸ ಮಾಡುತ್ತಿರುವ ದೃಶ್ಯಗಳಿರುವ ವಿಡಿಯೋವನ್ನು ರಾಹುಲ್ ಗಾಂಧಿ ತಮ್ಮ ಪೋಸ್ಟ್ ಜೊತೆ ಹಂಚಿಕೊಂಡಿದ್ದಾರೆ.

ಯುಪಿಯಲ್ಲಿ ಜಾತಿ ಆಧಾರಿತ ರಾಜಕೀಯ ರ‍್ಯಾಲಿಗಳು ನಿಷೇಧ: ಹಿಂದುಳಿದ ಸಮುದಾಯಗಳ ಧ್ವನಿ ಅಡಗಿಸುವ ತಂತ್ರ ಎಂದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...