Homeಮುಖಪುಟನಿರುದ್ಯೋಗ ಹೆಚ್ಚಳಕ್ಕೆ ಮತಗಳ್ಳತನ ನೇರ ಕಾರಣ: ರಾಹುಲ್ ಗಾಂಧಿ

ನಿರುದ್ಯೋಗ ಹೆಚ್ಚಳಕ್ಕೆ ಮತಗಳ್ಳತನ ನೇರ ಕಾರಣ: ರಾಹುಲ್ ಗಾಂಧಿ

- Advertisement -
- Advertisement -

ಚುನಾವಣೆಗಳಲ್ಲಿ ‘ಮತಗಳ್ಳತನ’ ನಿಲ್ಲುವವರೆಗೆ ನಿರುದ್ಯೋಗ ಮತ್ತು ಭ್ರಷ್ಟಾಚಾರ ಹೆಚ್ಚುತ್ತಲೇ ಇರುತ್ತದೆ. ಯುವಜನರು ‘ಉದ್ಯೋಗ ಕಳ್ಳತನ’ ಮತ್ತು ‘ಮತ ಕಳ್ಳತನ’ವನ್ನು ಇನ್ನು ಮುಂದೆ ಸಹಿಸುವುದಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಅವರು, “ನಿರುದ್ಯೋಗವು ಭಾರತದಲ್ಲಿ ಯುವಕರು ಎದುರಿಸುತ್ತಿರುವ ಅತಿದೊಡ್ಡ ಸಮಸ್ಯೆಯಾಗಿದ್ದು, ಅದು ನೇರವಾಗಿ ಮತಗಳ್ಳತನದೊಂದಿಗೆ ಸಂಬಂಧ ಹೊಂದಿದೆ ಎಂದಿದ್ದಾರೆ.

ಒಂದು ಸರ್ಕಾರ ಜನರ ವಿಶ್ವಾಸಗಳಿಸಿ ಅಧಿಕಾರಕ್ಕೆ ಬಂದಾಗ, ಅದರ ಮೊದಲ ಕರ್ತವ್ಯ ಯುವಕರಿಗೆ ಉದ್ಯೋಗ ಮತ್ತು ಅವಕಾಶಗಳನ್ನು ಒದಗಿಸುವುದು ಆಗಿರುತ್ತದೆ. ಆದರೆ, ಬಿಜೆಪಿ ಪ್ರಾಮಾಣಿಕವಾಗಿ ಚುನಾವಣೆಗಳನ್ನು ಗೆಲ್ಲುವುದಿಲ್ಲ. ಅವರು ಮತಗಳನ್ನು ಕದಿಯುವ ಮೂಲಕ ಮತ್ತು ಸಂಸ್ಥೆಗಳನ್ನು ನಿಯಂತ್ರಿಸುವ ಮೂಲಕ ಅಧಿಕಾರದಲ್ಲಿ ಉಳಿಯುತ್ತಾರೆ” ಎಂದು ಆರೋಪಿಸಿದ್ದಾರೆ.

“ಈ ಕಾರಣಕ್ಕೆ ದೇಶದಲ್ಲಿ ನಿರುದ್ಯೋಗ 45 ವರ್ಷಗಳಲ್ಲಿ ಗರಿಷ್ಠ ಮಟ್ಟ ತಲುಪಿದೆ. ಉದ್ಯೋಗವಕಾಶಗಳು ಕಡಿಮೆಯಾಗುತ್ತಿವೆ. ನೇಮಕಾತಿ ಪ್ರಕ್ರಿಯೆಗಳು ಕುಸಿದಿವೆ. ಯುವಕರ ಭವಿಷ್ಯ ಅಪಾಯಕ್ಕೆ ಸಿಲುಕುತ್ತಿದೆ. ಪ್ರತಿಯೊಂದು ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪ್ರತಿಯೊಂದು ನೇಮಕಾತಿಯು ಭ್ರಷ್ಟಾಚಾರದ ಕಥೆಗಳೊಂದಿಗೆ ಸಂಬಂಧ ಹೊಂದಿದೆ” ಎಂದು ಹೇಳಿದ್ದಾರೆ.

“ದೇಶದ ಯುವಕರು ಕಷ್ಟಪಟ್ಟು ಕೆಲಸ ಮಾಡುತ್ತಾರೆ, ಕನಸು ಕಾಣುತ್ತಾರೆ ಮತ್ತು ತಮ್ಮ ಭವಿಷ್ಯಕ್ಕಾಗಿ ಹೋರಾಡುತ್ತಾರೆ. ಆದರೆ, ಮೋದಿ ತಮ್ಮ ಪಿಆರ್, ಸೆಲೆಬ್ರಿಟಿಗಳು ತಮ್ಮನ್ನು ಹೊಗಳುವಂತೆ ಮಾಡುವುದು ಮತ್ತು ಕೋಟ್ಯಾಧಿಪತಿಗಳ ಲಾಭದ ಮೇಲೆ ಮಾತ್ರ ಗಮನಹರಿಸಿದ್ದಾರೆ. ಯುವಕರ ಭರವಸೆಗಳನ್ನು ಛಿದ್ರಗೊಳಿಸುವುದು ಮತ್ತು ಅವರನ್ನು ನಿರಾಶೆಗೊಳಿಸುವುದು ಸರ್ಕಾರದ ಗುರುತಾಗಿದೆ” ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

“ಈಗ ಪರಿಸ್ಥಿತಿ ಬದಲಾಗುತ್ತಿದೆ. ಭಾರತದ ಯುವಕರು ನಿಜವಾದ ಹೋರಾಟ ಕೇವಲ ಉದ್ಯೋಗಗಳಿಗಾಗಿ ಅಲ್ಲ, ಮತ ಕಳ್ಳತನದ ವಿರುದ್ಧ ಎಂದು ಅರ್ಥಮಾಡಿಕೊಂಡಿದ್ದಾರೆ. ಏಕೆಂದರೆ, ಎಲ್ಲಿಯವರೆಗೆ ಮತಗಳ್ಳತನ ನಡೆಯುತ್ತದೆಯೋ, ಅಲ್ಲಿಯವರೆಗೆ ನಿರುದ್ಯೋಗ ಮತ್ತು ಭ್ರಷ್ಟಾಚಾರ ಹೆಚ್ಚುತ್ತಲೇ ಇರುತ್ತದೆ” ಎಂದಿದ್ದಾರೆ.

“ಯುವಜನರು ಇನ್ನು ಮುಂದೆ “ಉದ್ಯೋಗ ಕಳ್ಳತನ” ಅಥವಾ “ಮತ ಕಳ್ಳತನ”ವನ್ನು ಸಹಿಸುವುದಿಲ್ಲ. ಈಗ ಅಂತಿಮ ದೇಶಭಕ್ತಿ ಭಾರತವನ್ನು ನಿರುದ್ಯೋಗ ಮತ್ತು ಮತ ಕಳ್ಳತನದಿಂದ ಮುಕ್ತಗೊಳಿಸುವುದರಲ್ಲಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಉದ್ಯೋಗಕ್ಕಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿ ಚಾರ್ಜ್ ದೃಶ್ಯ ಹಾಗೂ ಇನ್ನೊಂದೆಡೆ ಪ್ರಧಾನಿ ಮೋದಿ ಸಸಿಗಳನ್ನು ನೆಡುವುದು, ನವಿಲುಗಳಿಗೆ ಆಹಾರ ನೀಡುವುದು ಮತ್ತು ಯೋಗಾಭ್ಯಾಸ ಮಾಡುತ್ತಿರುವ ದೃಶ್ಯಗಳಿರುವ ವಿಡಿಯೋವನ್ನು ರಾಹುಲ್ ಗಾಂಧಿ ತಮ್ಮ ಪೋಸ್ಟ್ ಜೊತೆ ಹಂಚಿಕೊಂಡಿದ್ದಾರೆ.

ಯುಪಿಯಲ್ಲಿ ಜಾತಿ ಆಧಾರಿತ ರಾಜಕೀಯ ರ‍್ಯಾಲಿಗಳು ನಿಷೇಧ: ಹಿಂದುಳಿದ ಸಮುದಾಯಗಳ ಧ್ವನಿ ಅಡಗಿಸುವ ತಂತ್ರ ಎಂದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...