Homeಮುಖಪುಟಮತಗಳ್ಳತನ: ರಾಹುಲ್ ಗಾಂಧಿ ಆರೋಪಗಳ ಕುರಿತು ತನಿಖೆಗೆ ಎಸ್ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಮತಗಳ್ಳತನ: ರಾಹುಲ್ ಗಾಂಧಿ ಆರೋಪಗಳ ಕುರಿತು ತನಿಖೆಗೆ ಎಸ್ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಪಿಐಎಲ್

- Advertisement -
- Advertisement -

ಬೆಂಗಳೂರು ಕೇಂದ್ರ ಸೇರಿದಂತೆ ದೇಶದ ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ‘ಮತಗಳ್ಳತನ’ ನಡೆದಿದೆ ಎಂಬ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆರೋಪದ ಕುರಿತು ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ.

ಮತದಾರರ ಪಟ್ಟಿಯ ತಯಾರಿಕೆ, ನಿರ್ವಹಣೆ ಮತ್ತು ಪ್ರಕಟಣೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಚೌಕಟ್ಟಿಗೆ (ರೂಪುರೇಷೆ) ನಿರ್ದೇಶನಗಳನ್ನು ನೀಡುವಂತೆ ಮತ್ತು ನಕಲಿ ಅಥವಾ ಕಾಲ್ಪನಿಕ ನಮೂದುಗಳನ್ನು ಪತ್ತೆಹಚ್ಚುವ ಮತ್ತು ತಡೆಗಟ್ಟುವ ಕಾರ್ಯವಿಧಾನಗಳನ್ನು ಒಳಗೊಂಡಂತೆ ಭಾರತೀಯ ಚುನಾವಣಾ ಆಯೋಗಕ್ಕೆ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಅಲ್ಲದೆ, ಅರ್ಥಪೂರ್ಣ ಪರಿಶೀಲನೆ, ಲೆಕ್ಕಪರಿಶೋಧನೆ ಮತ್ತು ಸಾರ್ವಜನಿಕ ಪರಿಶೀಲನೆಗೆ ಅನುವು ಮಾಡಿಕೊಡಲು ಮತದಾರರ ಪಟ್ಟಿಯನ್ನು ಸುಲಭವಾಗಿ ಪ್ರವೇಶಿಸಬಹುದಾದ, ಮೆಶಿನ್ ರೀಡೇಬಲ್ (ಯಂತ್ರ-ಓದಬಲ್ಲ) ಮತ್ತು ಆಪ್ಟಿಕಲ್ ಕ್ಯಾರೆಕ್ಟರ್ ರಿಕಗ್ನಿಷನ್ (ಒಸಿಆರ್) ಕಂಪ್ಲೈಂಟ್ ಸ್ವರೂಪಗಳಲ್ಲಿ ಪ್ರಕಟಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಆಗಸ್ಟ್ 7ರಂದು ರಾಹುಲ್ ಗಾಂಧಿ ನಡೆಸಿದ ಪತ್ರಿಕಾಗೋಷ್ಠಿಯನ್ನು ಆಧರಿಸಿ ವಕೀಲ ರೋಹಿತ್ ಪಾಂಡೆ ಪಿಐಎಲ್‌ ಸಲ್ಲಿಸಿದ್ದಾರೆ.

ಕರ್ನಾಟಕದಲ್ಲಿ ಒಂದೇ ರೀತಿಯ ವಿಳಾಸ ಮತ್ತು ತಂದೆಯ ಹೆಸರಿನ ಸುಮಾರು 40,000–50,000 ಮತದಾರರು ಮತ್ತು ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಒಂದೇ ವಿಳಾಸದಲ್ಲಿ ನೋಂದಾಯಿಸಲಾದ ಸುಮಾರು 80 ಮತದಾರರು ಸೇರಿದಂತೆ ಆಪಾದಿತ ಅಕ್ರಮಗಳ ಉದಾಹರಣೆಗಳನ್ನು ಪಿಐಎಲ್ ಉಲ್ಲೇಖಿಸಿದೆ.

ಈ ವಿಷಯವು ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಪಾಯವನ್ನೇ ಅಲುಗಾಡಿಸುವಂತದ್ದು ಎಂದು ಅರ್ಜಿಯಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.

ಸ್ವತಂತ್ರ ಪರಿಶೀಲನೆ ನಡೆಯುವವರೆಗೆ ಮತ್ತು ಮತದಾರರ ಪಟ್ಟಿಗಳ ತಯಾರಿಕೆ, ನಿರ್ವಹಣೆ ಮತ್ತು ಪ್ರಕಟಣೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಮಾರ್ಗಸೂಚಿಗಳನ್ನು ಪ್ರಕಟಿಸುವವರೆಗೆ ಮತದಾರರ ಪಟ್ಟಿಗಳ ಅಂತಿಮಗೊಳಿಸುವಿಕೆಯನ್ನು ನಿಲ್ಲಿಸಲು ನಿರ್ದೇಶನಗಳನ್ನು ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ದೆಹಲಿ ಗಲಭೆ ಪ್ರಕರಣ: ಮೂವರು ಆರೋಪಿಗಳ ಖುಲಾಸೆ; ತನಿಖೆಯ ಲೋಪಗಳ ಬಗ್ಗೆ ನ್ಯಾಯಾಲಯದ ತೀವ್ರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...