Homeಕರ್ನಾಟಕಮತಗಳ್ಳತನ ಆರೋಪ:  ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಭಾಗಿ: ಸಂಚಾರ ನಿರ್ಬಂಧ

ಮತಗಳ್ಳತನ ಆರೋಪ:  ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಭಾಗಿ: ಸಂಚಾರ ನಿರ್ಬಂಧ

- Advertisement -
- Advertisement -

ಬೆಂಗಳೂರು, ಆ.7: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದು (ಆ.8) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದ ಕೆಲವು ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಸಂಚಾರ ದಟ್ಟಣೆಯನ್ನು ತಪ್ಪಿಸಲು ನಗರ ಪೊಲೀಸರು ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.

ನಿರ್ಬಂಧಿತ ರಸ್ತೆಗಳು ಮತ್ತು ಪರ್ಯಾಯ ಮಾರ್ಗಗಳು:

  • ಶಾಂತಲಾ ಜಂಕ್ಷನ್ ಮತ್ತು ಖೋಡ್ ಸರ್ಕಲ್: ಇಲ್ಲಿಂದ ಆನಂದ್ ರಾವ್ ಮೇಲ್ಸೇತುವೆ, ಓಲ್ಡ್ ಜೆಡಿಎಸ್ ರಸ್ತೆ ಮತ್ತು ಶೇಷಾದ್ರಿಪುರ ರಸ್ತೆಗೆ ಸಂಚಾರವನ್ನು ನಿಷೇಧಿಸಲಾಗಿದೆ.
    • ಪರ್ಯಾಯ ಮಾರ್ಗ: ಲುಲು ಮಾಲ್, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರು ಸರ್ಕಲ್ ಮತ್ತು ರೇಸ್ ಕೋರ್ಸ್ ಮೇಲ್ಸೇತುವೆಗಳ ಮೂಲಕ ಪ್ರಯಾಣಿಸಬಹುದು.
  • ಮೈಸೂರು ಬ್ಯಾಂಕ್‌ನಿಂದ ಚಾಲುಕ್ಯ ಕಡೆಗೆ: ಈ ಮಾರ್ಗದಲ್ಲಿ ಸಂಚಾರ ನಿರ್ಬಂಧವಿದೆ.
    • ಪರ್ಯಾಯ ಮಾರ್ಗ: ಕೆ.ಜಿ. ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ರಾಜೀವ್ ಗಾಂಧಿ ಸರ್ಕಲ್ ಮತ್ತು ರೇಸ್ ಕೋರ್ಸ್ ಮೇಲ್ಸೇತುವೆಗಳ ಮೂಲಕ ಸಂಚರಿಸಬಹುದು.
  • ಚಾಲುಕ್ಯದಿಂದ ಮೈಸೂರು ಬ್ಯಾಂಕ್ ಕಡೆಗೆ: ಈ ಮಾರ್ಗದಲ್ಲಿಯೂ ಸಂಚಾರವನ್ನು ನಿರ್ಬಂಧಿಸಲಾಗಿದೆ.
    • ಪರ್ಯಾಯ ಮಾರ್ಗ: ಚಾಲುಕ್ಯ ಸರ್ಕಲ್, ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ ಮತ್ತು ಇಂಡಿಯನ್ ಎಕ್ಸ್‌ಪ್ರೆಸ್ ಮೂಲಕ ಪ್ರಯಾಣಿಸಲು ಸೂಚಿಸಲಾಗಿದೆ.
  • ಕಾಳಿದಾಸ ರಸ್ತೆ, ಕನಕದಾಸ ಜಂಕ್ಷನ್: ಇಲ್ಲಿಂದ ಫ್ರೀಡಂ ಪಾರ್ಕ್ ಕಡೆಗೆ ಹೋಗುವ ವಾಹನಗಳು ಕನಕದಾಸ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಿ ಸಾಗರ್ ಜಂಕ್ಷನ್ ಕಡೆಗೆ ಹೋಗಬಹುದು.
  • ಮೌರ್ಯ ಸುಬ್ಬಣ್ಣ ಜಂಕ್ಷನ್: ಇಲ್ಲಿಂದ ಫ್ರೀಡಂ ಪಾರ್ಕ್ ಕಡೆಗೆ ಹೋಗುವವರು ಸುಬ್ಬಣ್ಣ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಿ ಆನಂದ್ ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದು.

ಸಂಚಾರ ದಟ್ಟಣೆಯ ಅನನುಕೂಲತೆಯನ್ನು ತಪ್ಪಿಸಲು ಪ್ರಯಾಣಿಕರು ಪರ್ಯಾಯ ಮಾರ್ಗಗಳನ್ನು ಬಳಸಿಕೊಳ್ಳುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಹೋರಾಟದ ಹಿನ್ನಲೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಲೋಕಸಭಾ ಚುನಾವಣೆಯಲ್ಲಿ ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ, ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ನಿನ್ನೆ (ಅ.7) ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ನ್ಯಾಯಯುತ ಚುನಾವಣೆಗಳನ್ನು ನಡೆಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ ಎಂದು ಟೀಕಿಸಿದ್ದರು.

ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಹೆಚ್ಚು ನಕಲಿ ಮತದಾರರು, ಅಮಾನ್ಯ ವಿಳಾಸಗಳು ಮತ್ತು ಒಂದೇ ವಿಳಾಸದಲ್ಲಿ ಅನೇಕ ಹೆಸರುಗಳು ದಾಖಲಾಗಿವೆ ಎಂದು ಕಾಂಗ್ರೆಸ್ ನಡೆಸಿದ ಆಂತರಿಕ ಅಧ್ಯಯನದಿಂದ ತಿಳಿದುಬಂದಿದೆ ಎಂದು ಗಾಂಧಿ ವಿವರಿಸಿದ್ದರು. ಈ ಅಕ್ರಮಗಳಿಗೆ ಸ್ಥಳೀಯ ಮತಗಟ್ಟೆ ಅಧಿಕಾರಿಗಳು, ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರ ಸಹಕರಿಸಿವೆ ಎಂದು ಅವರು ಆರೋಪಿಸಿದ್ದರು.

ಚುನಾವಣಾ ಆಯೋಗವು ಮತದಾರರ ಪಟ್ಟಿಯ ಎಲೆಕ್ಟ್ರಾನಿಕ್ ಪ್ರತಿಯನ್ನು ನೀಡಲು ನಿರಾಕರಿಸಿರುವುದನ್ನು ಗಾಂಧಿ ಪ್ರಶ್ನಿಸಿದರು. ಎಲೆಕ್ಟ್ರಾನಿಕ್ ಡೇಟಾ ನೀಡಿದರೆ ಕೇವಲ 30 ಸೆಕೆಂಡುಗಳಲ್ಲಿ ಈ ವಂಚನೆಯನ್ನು ಬಯಲು ಮಾಡಬಹುದು. ಆದರೆ, ಆಯೋಗವು ಭೌತಿಕ ಪ್ರತಿಯನ್ನು ಮಾತ್ರ ನೀಡುವ ಮೂಲಕ ಪರಿಶೀಲನೆ ಪ್ರಕ್ರಿಯೆಯನ್ನು ಕಠಿಣಗೊಳಿಸಿದೆ ಎಂದು ಅವರು ಹೇಳಿದರು. ಅಲ್ಲದೆ, ಸಿಸಿಟಿವಿ ದೃಶ್ಯಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಆರೋಪಿಸಿದ್ದರು.

2024 ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ ಕೇವಲ 32,707 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಈ ಅಕ್ರಮಗಳು ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದು ರಾಹುಲ್ ಗಾಂಧಿ ದೂರಿದ್ದರು.

“ಇದು ಸ್ವತಂತ್ರ ಮತ್ತು ನ್ಯಾಯಸಮ್ಮತ ಚುನಾವಣಾ ವ್ಯವಸ್ಥೆಯ ಮೇಲಿನ ನೇರ ದಾಳಿ. ಚುನಾವಣಾ ಆಯೋಗವು ತನ್ನ ಸಂವಿಧಾನಾತ್ಮಕ ಕರ್ತವ್ಯವನ್ನು ನಿರ್ಲಕ್ಷಿಸಿ, ಬಿಜೆಪಿ ಸರ್ಕಾರಕ್ಕೆ ಅನುಕೂಲಕರವಾಗಿ ವರ್ತಿಸುತ್ತಿದೆ,” ಎಂದು ಅವರು ತೀವ್ರ ವಾಗ್ದಾಳಿ ನಡೆಸಿದರು. ಈ ಆರೋಪಗಳ ಹಿನ್ನೆಲೆಯಲ್ಲಿ ಇಂದು (ಆ.8) ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಅವರು ತಿಳಿಸಿದ್ದರು. ಈ ಪ್ರತಿಭಟನೆಯ ನೇತೃತ್ವವನ್ನು ರಾಹುಲ್ ಗಾಂಧಿ ವಹಿಸಲಿದ್ದು, ಎಐಸಿಸಿ ಅಧ್ಯಕ್ಷರು ಮತ್ತು ಪಕ್ಷದ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

ಮತ ಕದ್ದು ಪ್ರಧಾನಿಯಾಗಿರುವ ಮೋದಿಗೆ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...