Homeಮುಖಪುಟಮತದಾರರ ಗುರುತಿನ ಚೀಟಿ ಬಗ್ಗೆ ಚರ್ಚೆಗೆ ನಕಾರ | ರಾಜ್ಯಸಭೆಯಿಂದ ಹೊರನಡೆದ ಪ್ರತಿಪಕ್ಷಗಳು

ಮತದಾರರ ಗುರುತಿನ ಚೀಟಿ ಬಗ್ಗೆ ಚರ್ಚೆಗೆ ನಕಾರ | ರಾಜ್ಯಸಭೆಯಿಂದ ಹೊರನಡೆದ ಪ್ರತಿಪಕ್ಷಗಳು

- Advertisement -
- Advertisement -

ಮತದಾರರ ಗುರುತಿನ ಚೀಟಿ ವಿವಾದ ಮತ್ತು ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ಚರ್ಚೆ ನಡೆಸಬೇಕೆಂಬ ಬೇಡಿಕೆಯನ್ನು ನಿರಾಕರಿಸಿದ ನಂತರ ಕಾಂಗ್ರೆಸ್ ಮತ್ತು ಟಿಎಂಸಿ ಸೇರಿದಂತೆ ವಿರೋಧ ಪಕ್ಷಗಳು ಸೋಮವಾರ ರಾಜ್ಯಸಭೆಯಿಂದ ಹೊರನಡೆದಿವೆ. ಮತದಾರರ ಗುರುತಿನ ಚೀಟಿ

ಈ ಬಗ್ಗೆ ಚರ್ಚೆ ನಡೆಸುವಂತೆ ತೃಣಮೂಲ ಕಾಂಗ್ರೆಸ್, ಕಾಂಗ್ರೆಸ್ ಮತ್ತು ಎಡ ಪಕ್ಷಗಳ ವಿರೋಧ ಪಕ್ಷಗಳ ಸಂಸದರು ನಿಯಮ 267 ರ ಅಡಿಯಲ್ಲಿ ನೋಟಿಸ್‌ಗಳನ್ನು ನೀಡಿದ್ದರು. ತಾವು ಎತ್ತಿದ ವಿಚಾರದ ಕುರಿತು ಚರ್ಚೆಯನ್ನು ಕೈಗೆತ್ತಿಕೊಳ್ಳಲು ಸದನದ ದಿನವನ್ನು ಮೀಸಲಿಡಬೇಕು ಎಂದು ವಿಪಕ್ಷಗಳು ಕರೆ ನೀಡಿದ್ದವು. ಆದರೆ ಉಪ ಸಭಾಪತಿ ಹರಿವಂಶ್ ಅವರು ಅಂತಹ ನೋಟಿಸ್‌ಗಳ ಕುರಿತು ಸ್ಪೀಕರ್‌ ತೀರ್ಮಾನಗಳಿಗೆ ಅನುಗುಣವಾಗಿಲ್ಲದ ಕಾರಣ ಅವುಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಟಿಎಂಸಿ ಮತ್ತು ಕಾಂಗ್ರೆಸ್ ಸಂಸದರು ಮತದಾರರ ಗುರುತಿನ ಚೀಟಿ ಸಮಸ್ಯೆಯ ಬಗ್ಗೆ ಧ್ವನಿ ಎತ್ತಲು ಪ್ರಯತ್ನಿಸಿದಾಗ, ಆ ಚರ್ಚೆಯ ನಂತರ, ದಕ್ಷಿಣ ಭಾರತದ ರಾಜ್ಯಗಳ ಮೇಲೆ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ಪರಿಣಾಮದ ಬಗ್ಗೆ ಚರ್ಚಿಸಲು ತಮಿಳುನಾಡಿನ ಪಕ್ಷಗಳು ಬಯಸಿದ್ದವು.

ವಿರೋಧ ಪಕ್ಷದ ಸಂಸದರು ಘೋಷಣೆಗಳನ್ನು ಕೂಗಿ ಈ ಬಗ್ಗೆ ಚರ್ಚೆಗೆ ಒತ್ತಾಯಿಸಿದ್ದಾರೆ. ಆದಾಗ್ಯೂ, ಹರಿವಂಶ್ ಅವರು ವಿಪಕ್ಷಗಳ ಸೂಚನೆಗಳನ್ನು ಅಂಗೀಕರಿಸಲಾಗಿಲ್ಲ ಮತ್ತು ವಿಪಕ್ಷಗಳು ಹೇಳಿದ ಯಾವುದೂ ದಾಖಲೆಗೆ ಹೋಗುವುದಿಲ್ಲ ಎಂದು ಪ್ರತಿಪಾದಿಸಿದ ನಂತರ ಅವರು ಸಭಾತ್ಯಾಗ ಮಾಡಿದ್ದಾರೆ. ಮತದಾರರ ಗುರುತಿನ ಚೀಟಿ

ನಿಯಮ 267 ರ ಅಡಿಯಲ್ಲಿ 10 ಸಂಸದರು ನೋಟಿಸ್ ನೀಡಿದ್ದರು. ಸುಖೇಂದು ಶೇಖರ್ ರಾಯ್, ಮೌಸಮ್ ಬಿ ನೂ, ಸುಷ್ಮಿತಾ ದೇವ್ (ಟಿಎಂಸಿ) ಮತ್ತು ಪ್ರಮೋದ್ ತಿವಾರಿ (ಕಾಂಗ್ರೆಸ್) ಅವರು ದೇಶದ ವಿವಿಧ ರಾಜ್ಯಗಲಲ್ಲಿ ಹಲವು ಮತದಾರರ ಚೀಟಿ ಸಂಖ್ಯೆ ಒಂದೆ ರೀತಿಯಲ್ಲಿ ಇದ್ದು, ಅವುಗಳನ್ನು ನೀಡುವಲ್ಲಿ ಚುನಾವಣಾ ಆಯೋಗ ಲೋಪ ಎಸಗಿದೆ ಎಂಬ ಬಗ್ಗೆ ಚರ್ಚೆಗೆ ಒತ್ತಾಯಿಸಿದ್ದಾರೆ ಎಂದು ಹರಿವಂಶ್ ಹೇಳಿದ್ದಾರೆ.

ದಕ್ಷಿಣ ರಾಜ್ಯಗಳಿಗೆ ಮುಂಬರುವ ಕ್ಷೇತ್ರ ಪುನರ್‌ ವಿಂಗಡಣೆ ಪ್ರಕ್ರಿಯೆಗೆ ಸಂಬಂಧಿಸಿದ ಆತಂಕಗಳ ಕುರಿತು ಡಿಎಂಕೆಯ ಪಿ ವಿಲ್ಸನ್ ಮತ್ತು ಸಿಪಿಎಂನ ವಿ. ಶಿವದಾಸನ್ ಒಂದನ್ನು ಒತ್ತಾಯಿಸಿದ್ದರು. ಇದೇ ವೇಳೆ, ಪಶ್ಚಿಮ ಬಂಗಾಳದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ವಿರುದ್ಧ ಹೆಚ್ಚಿದ ದೌರ್ಜನ್ಯ ಪ್ರಕರಣಗಳನ್ನು ಚರ್ಚಿಸಲು ಬಿಜೆಪಿಯ ಸಮಿಕ್ ಭಟ್ಟಾಚಾರ್ಯ ಬಯಸಿದ್ದರು.

ಭಾರತದಲ್ಲಿ ಉಪಗ್ರಹ ಬ್ರಾಡ್‌ಬ್ಯಾಂಡ್ ಇಂಟರ್ನೆಟ್ ಒದಗಿಸಲು ಭಾರ್ತಿ ಏರ್‌ಟೆಲ್ ಮತ್ತು ರಿಲಯನ್ಸ್ ಜಿಯೋ ಎಲೋನ್ ಮಸ್ಕ್‌ನ ಸ್ಟಾರ್‌ಲಿಂಕ್‌ನೊಂದಿಗೆ ಮಾಡಿಕೊಂಡ ಒಪ್ಪಂದದ ಪರಿಣಾಮದ ವಿಷಯವನ್ನು ಚರ್ಚಿಸಲು ಸಿಪಿಐನ ಪಿ ಸಂತೋಷ್ ಕುಮಾರ್ ಪ್ರಯತ್ನಿಸಿದರು.

ದೆಹಲಿಯಲ್ಲಿ ಅಪರಾಧಗಳ ಹೆಚ್ಚಳ ಮತ್ತು ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಬಗ್ಗೆ ಚರ್ಚೆ ನಡೆಸಬೇಕೆಂದು ಎಎಪಿಯ ಸಂಜಯ್ ಸಿಂಗ್ ಒತ್ತಾಯಿಸಿದರೆ, ಕೇರಳದಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನ ಹೆಚ್ಚುತ್ತಿರುವ ಬಗ್ಗೆ ಚರ್ಚೆ ನಡೆಸಬೇಕೆಂದು ಐಯುಎಂಎಲ್‌ನ ಹಾರಿಸ್ ಬೀರಾನ್ ಒತ್ತಾಯಿಸಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕ್ಷೇತ್ರ ಪುನರ್‌ವಿಂಗಡನೆ | ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಕೇರಳ ಸಿಎಂ ಪಿಣರಾಯಿ ಬೆಂಬಲ

ಕ್ಷೇತ್ರ ಪುನರ್‌ವಿಂಗಡನೆ | ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಕೇರಳ ಸಿಎಂ ಪಿಣರಾಯಿ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...