Homeಮುಖಪುಟಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್...

ಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಪ್ರಶ್ನೆ

- Advertisement -
- Advertisement -

ನಾಲ್ಕು ದಿನಗಳ ವಿರಾಮದ ನಂತರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾಗುತ್ತಿದ್ದಂತೆ, ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಅವರು ನಕಲಿ ಮತದಾರರ ಗುರುತಿನ ಚೀಟಿಗಳ ವಿಷಯದ ಕುರಿತು ಪ್ರತಿಪಕ್ಷಗಳು ಚರ್ಚೆಯನ್ನು ಬಯಸುತ್ತಿದ್ದು, ಸರ್ಕಾರ ಅದಕ್ಕೆ ಸಿದ್ಧವಾಗಿದೆಯೇ ಎಂದು ಕೇಳಿದ್ದಾರೆ. ಸೋಮವಾರ ಬೆಳಿಗ್ಗೆ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಈ ವಿಚಾರವು “ಪ್ರಜಾಪ್ರಭುತ್ವದ ಪ್ರಮುಖ ಅಂಶವಾಗಿದೆ” ಎಂದು ಹೇಳಿದ್ದಾರೆ. ಮತದಾರರ ಗುರುತಿನ ಚೀಟಿ

ಡೆರೆಕ್ ಅವರು ಮಾರ್ಚ್ 12 ರ ಪೋಸ್ಟ್ ಅನ್ನು ಸಹ ಟ್ಯಾಗ್ ಮಾಡಿದ್ದು, ಅದರಲ್ಲಿ ಅವರು ಈ ವಿಷಯದ ಕುರಿತು “ಮುಂದಿನ ವಾರ (ನಿಯಮ 176 ರ ಅಡಿಯಲ್ಲಿ) ಮುಕ್ತ ಚರ್ಚೆ”ಯನ್ನು ಕೋರಿದ್ದಾರೆ. “ನಾಲ್ಕು ದಿನಗಳ ವಿರಾಮದ ನಂತರ ಸಂಸತ್ತು ಮತ್ತೆ ಸೇರುತ್ತಿದೆ. ರಚನಾತ್ಮಕ ವಿರೋಧ ಪಕ್ಷವು ಪ್ರಜಾಪ್ರಭುತ್ವದ ತಿರುಳಿನ ವಿಚಾರದ ಕುರಿತು ಚರ್ಚಿಸಲು ಬಯಸುತ್ತದೆ. ಸರ್ಕಾರ ಸಿದ್ಧವಾಗಿದೆಯೇ?” ಡೆರೆಕ್ ಅವರು ಕೇಳಿದ್ದಾರೆ.

ಸಂಸತ್ತಿನಲ್ಲಿ ಹಲವಾರು ವಿರೋಧ ಪಕ್ಷಗಳು ಒಂದೇ ರೀತಿಯ EPIC ಸಂಖ್ಯೆಯ ವಿವಾದದ ಕುರಿತು ಚರ್ಚೆಯನ್ನು ಒತ್ತಾಯಿಸುತ್ತಿವೆ. ಜೊತೆಗೆ ದಕ್ಷಿಣ ಭಾರತದ ಪಕ್ಷಗಳು ಕೂಡಾ ಡಿಲಿಮಿಟೇಶನ್ ವಿಷಯದ ಕುರಿತು ಚರ್ಚೆಯನ್ನು ಬಯಸುತ್ತಿವೆ. ಮತದಾರರ ಗುರುತಿನ ಚೀಟಿ

ವಿರೋಧ ಪಕ್ಷಗಳು ಚರ್ಚೆ ನಡೆಸಬೇಕಾದ ನಿಯಮಕ್ಕೆ ಹೊಂದಿಕೊಳ್ಳುವುದಾಗಿ ಹೇಳಿದ್ದು, ಅದಾಗ್ಯೂ, ಸಂಸತ್ತು ಈ ವಿಷಯವನ್ನು ಚರ್ಚಿಸಬೇಕು ಎಂದು ಒತ್ತಿ ಹೇಳಿವೆ ಎಂದು ಮೂಲಗಳು ಉಲ್ಲೇಖಿಸಿವೆ.

ದೇಶದ ಹಲವು ರಾಜ್ಯಗಳಲ್ಲಿ ಒಂದೇ ರೀತಿಯ ಸಂಖ್ಯೆಗಳನ್ನು ಹೊಂದಿರುವ ಮತದಾರರ ಗುರುತಿನ ಚೀಟಿಗಳ ವಿಷಯವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಫೆಬ್ರವರಿ 27 ರಂದು ಮುನ್ನಲೆಗೆ ತಂದಿದ್ದರು.

ಕಳೆದ ವಾರ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ, “ಆಧಾರ್ ಕಾರ್ಡ್‌ಗಳನ್ನು ಕ್ಲೋನ್ ಮಾಡಲಾಗುತ್ತಿದೆ ಮತ್ತು ನಕಲಿ ಮತದಾರರ ನೋಂದಣಿಗೆ ಅನುಕೂಲವಾಗುವಂತೆ ಈ ಕ್ಲೋನ್ ಮಾಡಿದ ಆಧಾರ್ ಕಾರ್ಡ್‌ಗಳನ್ನು ಬಳಸಲಾಗುತ್ತಿದೆ ಎಂಬ ವಿಶ್ವಾಸಾರ್ಹ ಆರೋಪಗಳಿವೆ” ಎಂದು ಟಿಎಂಸಿ ಹೇಳಿದೆ.

ಮತದಾರರ ಗುರುತಿನ ಚೀಟಿಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ವಿಷಯದ ಕುರಿತು ಚರ್ಚಿಸಲು ಮುಖ್ಯ ಚುನಾವಣಾ ಆಯುಕ್ತರು ಮಾರ್ಚ್ 18 ರಂದು ಕೇಂದ್ರ ಗೃಹ ಕಾರ್ಯದರ್ಶಿ, ಶಾಸಕಾಂಗ ಕಾರ್ಯದರ್ಶಿ ಮತ್ತು ಯುಐಡಿಎಐ ಸಿಇಒ ಅವರೊಂದಿಗೆ ಸಭೆ ಕರೆದಿದ್ದಾರೆ.

ಮಾರ್ಚ್ 2 ರಂದು ಚುನಾವಣಾ ಆಯೋಗವು ಹೇಳಿಕೆ ನೀಡಿ, ಎಲ್ಲಾ ರಾಜ್ಯಗಳ ಮತದಾರರ ಪಟ್ಟಿಯ ಡೇಟಾಬೇಸ್ ಅನ್ನು ERONET (ಚುನಾವಣಾ ಪಟ್ಟಿ ನಿರ್ವಹಣೆ) ವೇದಿಕೆಗೆ ವರ್ಗಾಯಿಸುವ ಮೊದಲು “ವಿಕೇಂದ್ರೀಕೃತ ಮತ್ತು ಹಸ್ತಚಾಲಿತ ಕಾರ್ಯವಿಧಾನ” ದಿಂದಾಗಿ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕೆಲವು ಮತದಾರರಿಗೆ ಒಂದೇ ರೀತಿಯ EPIC ಸಂಖ್ಯೆಗಳು ಅಥವಾ ಸರಣಿಗಳನ್ನು ನೀಡಲಾಗಿದೆ ಎಂದು ಹೇಳಿದೆ.

ಕೆಲವು ಮತದಾರರ EPIC ಸಂಖ್ಯೆಗಳು “ಒಂದೇ ಆಗಿರಬಹುದು” ಎಂದು ಆಯೋಗವು ಹೇಳಿದ್ದು, ಆದೆರೆ ಅದು ನಕಲಿ ಮತದಾರರ ಚೀಟಿ ಅಲ್ಲ ಎಂದು ಪ್ರತಿಪಾದಿಸಿದೆ. ಈ ರೀತಿಯಲ್ಲಿ ಒಂದೇ EPIC ಸಂಖ್ಯೆ ಹೊಂದಿರುವ ಮತದಾರರ ಚೀಟಿಗಳ ಜನಸಂಖ್ಯಾ ವಿವರಗಳು, ವಿಧಾನಸಭಾ ಕ್ಷೇತ್ರ ಮತ್ತು ಮತಗಟ್ಟೆ ಸೇರಿದಂತೆ ಇತರ ವಿವರಗಳು ವಿಭಿನ್ನವಾಗಿವೆ ಎಂದು ಅದು ಹೇಳಿದೆ.

ಈ ಬಗ್ಗೆ ಮತ್ತೊಂದು ಹೇಳಿಕೆ ನೀಡಿರುವ ಆಯೋಗ, 2000 ಇಸವಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ EPIC ಸರಣಿಯನ್ನು ಹಂಚಿಕೆ ಮಾಡಿದಾಗಿನಿಂದ, ಕೆಲವು ಚುನಾವಣಾ ನೋಂದಣಿ ಅಧಿಕಾರಿಗಳು ಸರಿಯಾದ ಸರಣಿಯನ್ನು ಬಳಸಿಲ್ಲ ಎಂದು ಹೇಳಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ವತಂತ್ರವಾಗಿ ಮತದಾರರ ಪಟ್ಟಿಗಳ ದೇಟಾ ಬೇಸ್‌ಗಳನ್ನು ನಿರ್ವಹಿಸುತ್ತಿರುವುದರಿಂದ ತಪ್ಪಾದ ಸರಣಿಗಳಿಂದಾಗಿ ಒಂದೇ ರೀತಿಯ ಸಂಖ್ಯೆಗಳ ಹಂಚಿಕೆಯನ್ನು ಪತ್ತೆಹಚ್ಚಲು ಸಾಧ್ಯವಿಲ್ಲ ಎಂದು ಆಯೋಗ ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...