Homeಮುಖಪುಟಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್...

ಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಪ್ರಶ್ನೆ

- Advertisement -
- Advertisement -

ನಾಲ್ಕು ದಿನಗಳ ವಿರಾಮದ ನಂತರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾಗುತ್ತಿದ್ದಂತೆ, ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಅವರು ನಕಲಿ ಮತದಾರರ ಗುರುತಿನ ಚೀಟಿಗಳ ವಿಷಯದ ಕುರಿತು ಪ್ರತಿಪಕ್ಷಗಳು ಚರ್ಚೆಯನ್ನು ಬಯಸುತ್ತಿದ್ದು, ಸರ್ಕಾರ ಅದಕ್ಕೆ ಸಿದ್ಧವಾಗಿದೆಯೇ ಎಂದು ಕೇಳಿದ್ದಾರೆ. ಸೋಮವಾರ ಬೆಳಿಗ್ಗೆ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಈ ವಿಚಾರವು “ಪ್ರಜಾಪ್ರಭುತ್ವದ ಪ್ರಮುಖ ಅಂಶವಾಗಿದೆ” ಎಂದು ಹೇಳಿದ್ದಾರೆ. ಮತದಾರರ ಗುರುತಿನ ಚೀಟಿ

ಡೆರೆಕ್ ಅವರು ಮಾರ್ಚ್ 12 ರ ಪೋಸ್ಟ್ ಅನ್ನು ಸಹ ಟ್ಯಾಗ್ ಮಾಡಿದ್ದು, ಅದರಲ್ಲಿ ಅವರು ಈ ವಿಷಯದ ಕುರಿತು “ಮುಂದಿನ ವಾರ (ನಿಯಮ 176 ರ ಅಡಿಯಲ್ಲಿ) ಮುಕ್ತ ಚರ್ಚೆ”ಯನ್ನು ಕೋರಿದ್ದಾರೆ. “ನಾಲ್ಕು ದಿನಗಳ ವಿರಾಮದ ನಂತರ ಸಂಸತ್ತು ಮತ್ತೆ ಸೇರುತ್ತಿದೆ. ರಚನಾತ್ಮಕ ವಿರೋಧ ಪಕ್ಷವು ಪ್ರಜಾಪ್ರಭುತ್ವದ ತಿರುಳಿನ ವಿಚಾರದ ಕುರಿತು ಚರ್ಚಿಸಲು ಬಯಸುತ್ತದೆ. ಸರ್ಕಾರ ಸಿದ್ಧವಾಗಿದೆಯೇ?” ಡೆರೆಕ್ ಅವರು ಕೇಳಿದ್ದಾರೆ.

ಸಂಸತ್ತಿನಲ್ಲಿ ಹಲವಾರು ವಿರೋಧ ಪಕ್ಷಗಳು ಒಂದೇ ರೀತಿಯ EPIC ಸಂಖ್ಯೆಯ ವಿವಾದದ ಕುರಿತು ಚರ್ಚೆಯನ್ನು ಒತ್ತಾಯಿಸುತ್ತಿವೆ. ಜೊತೆಗೆ ದಕ್ಷಿಣ ಭಾರತದ ಪಕ್ಷಗಳು ಕೂಡಾ ಡಿಲಿಮಿಟೇಶನ್ ವಿಷಯದ ಕುರಿತು ಚರ್ಚೆಯನ್ನು ಬಯಸುತ್ತಿವೆ. ಮತದಾರರ ಗುರುತಿನ ಚೀಟಿ

ವಿರೋಧ ಪಕ್ಷಗಳು ಚರ್ಚೆ ನಡೆಸಬೇಕಾದ ನಿಯಮಕ್ಕೆ ಹೊಂದಿಕೊಳ್ಳುವುದಾಗಿ ಹೇಳಿದ್ದು, ಅದಾಗ್ಯೂ, ಸಂಸತ್ತು ಈ ವಿಷಯವನ್ನು ಚರ್ಚಿಸಬೇಕು ಎಂದು ಒತ್ತಿ ಹೇಳಿವೆ ಎಂದು ಮೂಲಗಳು ಉಲ್ಲೇಖಿಸಿವೆ.

ದೇಶದ ಹಲವು ರಾಜ್ಯಗಳಲ್ಲಿ ಒಂದೇ ರೀತಿಯ ಸಂಖ್ಯೆಗಳನ್ನು ಹೊಂದಿರುವ ಮತದಾರರ ಗುರುತಿನ ಚೀಟಿಗಳ ವಿಷಯವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಫೆಬ್ರವರಿ 27 ರಂದು ಮುನ್ನಲೆಗೆ ತಂದಿದ್ದರು.

ಕಳೆದ ವಾರ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ, “ಆಧಾರ್ ಕಾರ್ಡ್‌ಗಳನ್ನು ಕ್ಲೋನ್ ಮಾಡಲಾಗುತ್ತಿದೆ ಮತ್ತು ನಕಲಿ ಮತದಾರರ ನೋಂದಣಿಗೆ ಅನುಕೂಲವಾಗುವಂತೆ ಈ ಕ್ಲೋನ್ ಮಾಡಿದ ಆಧಾರ್ ಕಾರ್ಡ್‌ಗಳನ್ನು ಬಳಸಲಾಗುತ್ತಿದೆ ಎಂಬ ವಿಶ್ವಾಸಾರ್ಹ ಆರೋಪಗಳಿವೆ” ಎಂದು ಟಿಎಂಸಿ ಹೇಳಿದೆ.

ಮತದಾರರ ಗುರುತಿನ ಚೀಟಿಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ವಿಷಯದ ಕುರಿತು ಚರ್ಚಿಸಲು ಮುಖ್ಯ ಚುನಾವಣಾ ಆಯುಕ್ತರು ಮಾರ್ಚ್ 18 ರಂದು ಕೇಂದ್ರ ಗೃಹ ಕಾರ್ಯದರ್ಶಿ, ಶಾಸಕಾಂಗ ಕಾರ್ಯದರ್ಶಿ ಮತ್ತು ಯುಐಡಿಎಐ ಸಿಇಒ ಅವರೊಂದಿಗೆ ಸಭೆ ಕರೆದಿದ್ದಾರೆ.

ಮಾರ್ಚ್ 2 ರಂದು ಚುನಾವಣಾ ಆಯೋಗವು ಹೇಳಿಕೆ ನೀಡಿ, ಎಲ್ಲಾ ರಾಜ್ಯಗಳ ಮತದಾರರ ಪಟ್ಟಿಯ ಡೇಟಾಬೇಸ್ ಅನ್ನು ERONET (ಚುನಾವಣಾ ಪಟ್ಟಿ ನಿರ್ವಹಣೆ) ವೇದಿಕೆಗೆ ವರ್ಗಾಯಿಸುವ ಮೊದಲು “ವಿಕೇಂದ್ರೀಕೃತ ಮತ್ತು ಹಸ್ತಚಾಲಿತ ಕಾರ್ಯವಿಧಾನ” ದಿಂದಾಗಿ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕೆಲವು ಮತದಾರರಿಗೆ ಒಂದೇ ರೀತಿಯ EPIC ಸಂಖ್ಯೆಗಳು ಅಥವಾ ಸರಣಿಗಳನ್ನು ನೀಡಲಾಗಿದೆ ಎಂದು ಹೇಳಿದೆ.

ಕೆಲವು ಮತದಾರರ EPIC ಸಂಖ್ಯೆಗಳು “ಒಂದೇ ಆಗಿರಬಹುದು” ಎಂದು ಆಯೋಗವು ಹೇಳಿದ್ದು, ಆದೆರೆ ಅದು ನಕಲಿ ಮತದಾರರ ಚೀಟಿ ಅಲ್ಲ ಎಂದು ಪ್ರತಿಪಾದಿಸಿದೆ. ಈ ರೀತಿಯಲ್ಲಿ ಒಂದೇ EPIC ಸಂಖ್ಯೆ ಹೊಂದಿರುವ ಮತದಾರರ ಚೀಟಿಗಳ ಜನಸಂಖ್ಯಾ ವಿವರಗಳು, ವಿಧಾನಸಭಾ ಕ್ಷೇತ್ರ ಮತ್ತು ಮತಗಟ್ಟೆ ಸೇರಿದಂತೆ ಇತರ ವಿವರಗಳು ವಿಭಿನ್ನವಾಗಿವೆ ಎಂದು ಅದು ಹೇಳಿದೆ.

ಈ ಬಗ್ಗೆ ಮತ್ತೊಂದು ಹೇಳಿಕೆ ನೀಡಿರುವ ಆಯೋಗ, 2000 ಇಸವಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ EPIC ಸರಣಿಯನ್ನು ಹಂಚಿಕೆ ಮಾಡಿದಾಗಿನಿಂದ, ಕೆಲವು ಚುನಾವಣಾ ನೋಂದಣಿ ಅಧಿಕಾರಿಗಳು ಸರಿಯಾದ ಸರಣಿಯನ್ನು ಬಳಸಿಲ್ಲ ಎಂದು ಹೇಳಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ವತಂತ್ರವಾಗಿ ಮತದಾರರ ಪಟ್ಟಿಗಳ ದೇಟಾ ಬೇಸ್‌ಗಳನ್ನು ನಿರ್ವಹಿಸುತ್ತಿರುವುದರಿಂದ ತಪ್ಪಾದ ಸರಣಿಗಳಿಂದಾಗಿ ಒಂದೇ ರೀತಿಯ ಸಂಖ್ಯೆಗಳ ಹಂಚಿಕೆಯನ್ನು ಪತ್ತೆಹಚ್ಚಲು ಸಾಧ್ಯವಿಲ್ಲ ಎಂದು ಆಯೋಗ ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....