Homeಮುಖಪುಟಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್...

ಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಪ್ರಶ್ನೆ

- Advertisement -
- Advertisement -

ನಾಲ್ಕು ದಿನಗಳ ವಿರಾಮದ ನಂತರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾಗುತ್ತಿದ್ದಂತೆ, ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಅವರು ನಕಲಿ ಮತದಾರರ ಗುರುತಿನ ಚೀಟಿಗಳ ವಿಷಯದ ಕುರಿತು ಪ್ರತಿಪಕ್ಷಗಳು ಚರ್ಚೆಯನ್ನು ಬಯಸುತ್ತಿದ್ದು, ಸರ್ಕಾರ ಅದಕ್ಕೆ ಸಿದ್ಧವಾಗಿದೆಯೇ ಎಂದು ಕೇಳಿದ್ದಾರೆ. ಸೋಮವಾರ ಬೆಳಿಗ್ಗೆ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಈ ವಿಚಾರವು “ಪ್ರಜಾಪ್ರಭುತ್ವದ ಪ್ರಮುಖ ಅಂಶವಾಗಿದೆ” ಎಂದು ಹೇಳಿದ್ದಾರೆ. ಮತದಾರರ ಗುರುತಿನ ಚೀಟಿ

ಡೆರೆಕ್ ಅವರು ಮಾರ್ಚ್ 12 ರ ಪೋಸ್ಟ್ ಅನ್ನು ಸಹ ಟ್ಯಾಗ್ ಮಾಡಿದ್ದು, ಅದರಲ್ಲಿ ಅವರು ಈ ವಿಷಯದ ಕುರಿತು “ಮುಂದಿನ ವಾರ (ನಿಯಮ 176 ರ ಅಡಿಯಲ್ಲಿ) ಮುಕ್ತ ಚರ್ಚೆ”ಯನ್ನು ಕೋರಿದ್ದಾರೆ. “ನಾಲ್ಕು ದಿನಗಳ ವಿರಾಮದ ನಂತರ ಸಂಸತ್ತು ಮತ್ತೆ ಸೇರುತ್ತಿದೆ. ರಚನಾತ್ಮಕ ವಿರೋಧ ಪಕ್ಷವು ಪ್ರಜಾಪ್ರಭುತ್ವದ ತಿರುಳಿನ ವಿಚಾರದ ಕುರಿತು ಚರ್ಚಿಸಲು ಬಯಸುತ್ತದೆ. ಸರ್ಕಾರ ಸಿದ್ಧವಾಗಿದೆಯೇ?” ಡೆರೆಕ್ ಅವರು ಕೇಳಿದ್ದಾರೆ.

ಸಂಸತ್ತಿನಲ್ಲಿ ಹಲವಾರು ವಿರೋಧ ಪಕ್ಷಗಳು ಒಂದೇ ರೀತಿಯ EPIC ಸಂಖ್ಯೆಯ ವಿವಾದದ ಕುರಿತು ಚರ್ಚೆಯನ್ನು ಒತ್ತಾಯಿಸುತ್ತಿವೆ. ಜೊತೆಗೆ ದಕ್ಷಿಣ ಭಾರತದ ಪಕ್ಷಗಳು ಕೂಡಾ ಡಿಲಿಮಿಟೇಶನ್ ವಿಷಯದ ಕುರಿತು ಚರ್ಚೆಯನ್ನು ಬಯಸುತ್ತಿವೆ. ಮತದಾರರ ಗುರುತಿನ ಚೀಟಿ

ವಿರೋಧ ಪಕ್ಷಗಳು ಚರ್ಚೆ ನಡೆಸಬೇಕಾದ ನಿಯಮಕ್ಕೆ ಹೊಂದಿಕೊಳ್ಳುವುದಾಗಿ ಹೇಳಿದ್ದು, ಅದಾಗ್ಯೂ, ಸಂಸತ್ತು ಈ ವಿಷಯವನ್ನು ಚರ್ಚಿಸಬೇಕು ಎಂದು ಒತ್ತಿ ಹೇಳಿವೆ ಎಂದು ಮೂಲಗಳು ಉಲ್ಲೇಖಿಸಿವೆ.

ದೇಶದ ಹಲವು ರಾಜ್ಯಗಳಲ್ಲಿ ಒಂದೇ ರೀತಿಯ ಸಂಖ್ಯೆಗಳನ್ನು ಹೊಂದಿರುವ ಮತದಾರರ ಗುರುತಿನ ಚೀಟಿಗಳ ವಿಷಯವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಫೆಬ್ರವರಿ 27 ರಂದು ಮುನ್ನಲೆಗೆ ತಂದಿದ್ದರು.

ಕಳೆದ ವಾರ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ, “ಆಧಾರ್ ಕಾರ್ಡ್‌ಗಳನ್ನು ಕ್ಲೋನ್ ಮಾಡಲಾಗುತ್ತಿದೆ ಮತ್ತು ನಕಲಿ ಮತದಾರರ ನೋಂದಣಿಗೆ ಅನುಕೂಲವಾಗುವಂತೆ ಈ ಕ್ಲೋನ್ ಮಾಡಿದ ಆಧಾರ್ ಕಾರ್ಡ್‌ಗಳನ್ನು ಬಳಸಲಾಗುತ್ತಿದೆ ಎಂಬ ವಿಶ್ವಾಸಾರ್ಹ ಆರೋಪಗಳಿವೆ” ಎಂದು ಟಿಎಂಸಿ ಹೇಳಿದೆ.

ಮತದಾರರ ಗುರುತಿನ ಚೀಟಿಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ವಿಷಯದ ಕುರಿತು ಚರ್ಚಿಸಲು ಮುಖ್ಯ ಚುನಾವಣಾ ಆಯುಕ್ತರು ಮಾರ್ಚ್ 18 ರಂದು ಕೇಂದ್ರ ಗೃಹ ಕಾರ್ಯದರ್ಶಿ, ಶಾಸಕಾಂಗ ಕಾರ್ಯದರ್ಶಿ ಮತ್ತು ಯುಐಡಿಎಐ ಸಿಇಒ ಅವರೊಂದಿಗೆ ಸಭೆ ಕರೆದಿದ್ದಾರೆ.

ಮಾರ್ಚ್ 2 ರಂದು ಚುನಾವಣಾ ಆಯೋಗವು ಹೇಳಿಕೆ ನೀಡಿ, ಎಲ್ಲಾ ರಾಜ್ಯಗಳ ಮತದಾರರ ಪಟ್ಟಿಯ ಡೇಟಾಬೇಸ್ ಅನ್ನು ERONET (ಚುನಾವಣಾ ಪಟ್ಟಿ ನಿರ್ವಹಣೆ) ವೇದಿಕೆಗೆ ವರ್ಗಾಯಿಸುವ ಮೊದಲು “ವಿಕೇಂದ್ರೀಕೃತ ಮತ್ತು ಹಸ್ತಚಾಲಿತ ಕಾರ್ಯವಿಧಾನ” ದಿಂದಾಗಿ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕೆಲವು ಮತದಾರರಿಗೆ ಒಂದೇ ರೀತಿಯ EPIC ಸಂಖ್ಯೆಗಳು ಅಥವಾ ಸರಣಿಗಳನ್ನು ನೀಡಲಾಗಿದೆ ಎಂದು ಹೇಳಿದೆ.

ಕೆಲವು ಮತದಾರರ EPIC ಸಂಖ್ಯೆಗಳು “ಒಂದೇ ಆಗಿರಬಹುದು” ಎಂದು ಆಯೋಗವು ಹೇಳಿದ್ದು, ಆದೆರೆ ಅದು ನಕಲಿ ಮತದಾರರ ಚೀಟಿ ಅಲ್ಲ ಎಂದು ಪ್ರತಿಪಾದಿಸಿದೆ. ಈ ರೀತಿಯಲ್ಲಿ ಒಂದೇ EPIC ಸಂಖ್ಯೆ ಹೊಂದಿರುವ ಮತದಾರರ ಚೀಟಿಗಳ ಜನಸಂಖ್ಯಾ ವಿವರಗಳು, ವಿಧಾನಸಭಾ ಕ್ಷೇತ್ರ ಮತ್ತು ಮತಗಟ್ಟೆ ಸೇರಿದಂತೆ ಇತರ ವಿವರಗಳು ವಿಭಿನ್ನವಾಗಿವೆ ಎಂದು ಅದು ಹೇಳಿದೆ.

ಈ ಬಗ್ಗೆ ಮತ್ತೊಂದು ಹೇಳಿಕೆ ನೀಡಿರುವ ಆಯೋಗ, 2000 ಇಸವಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ EPIC ಸರಣಿಯನ್ನು ಹಂಚಿಕೆ ಮಾಡಿದಾಗಿನಿಂದ, ಕೆಲವು ಚುನಾವಣಾ ನೋಂದಣಿ ಅಧಿಕಾರಿಗಳು ಸರಿಯಾದ ಸರಣಿಯನ್ನು ಬಳಸಿಲ್ಲ ಎಂದು ಹೇಳಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ವತಂತ್ರವಾಗಿ ಮತದಾರರ ಪಟ್ಟಿಗಳ ದೇಟಾ ಬೇಸ್‌ಗಳನ್ನು ನಿರ್ವಹಿಸುತ್ತಿರುವುದರಿಂದ ತಪ್ಪಾದ ಸರಣಿಗಳಿಂದಾಗಿ ಒಂದೇ ರೀತಿಯ ಸಂಖ್ಯೆಗಳ ಹಂಚಿಕೆಯನ್ನು ಪತ್ತೆಹಚ್ಚಲು ಸಾಧ್ಯವಿಲ್ಲ ಎಂದು ಆಯೋಗ ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...