Homeಮುಖಪುಟಮತದಾರ ಚೀಟಿ ಸಂಖ್ಯೆಯ ಸಮಸ್ಯೆ 3 ತಿಂಗಳೊಳಗೆ ಪರಿಹರಿಸುತ್ತೇವೆ: ಚುನಾವಣಾ ಆಯೋಗ

ಮತದಾರ ಚೀಟಿ ಸಂಖ್ಯೆಯ ಸಮಸ್ಯೆ 3 ತಿಂಗಳೊಳಗೆ ಪರಿಹರಿಸುತ್ತೇವೆ: ಚುನಾವಣಾ ಆಯೋಗ

- Advertisement -
- Advertisement -

ಎಲ್ಲಾ ಮತದಾರರಿಗೆ ವಿಶಿಷ್ಟವಾದ ರಾಷ್ಟ್ರೀಯ EPIC ಸಂಖ್ಯೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ ಮೂರು ತಿಂಗಳೊಳಗೆ ವಿವಿಧ ರಾಜ್ಯಗಳಲ್ಲಿ ಒಂದೇ ರೀತಿಯ ಮತದಾರರ ಗುರುತಿನ ಸಂಖ್ಯೆಗಳನ್ನು ನೀಡಲಾಗುತ್ತಿರುವ ಸಮಸ್ಯೆಯನ್ನು ಪರಿಹರಿಸುವುದಾಗಿ ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ. ಮತದಾರ ಚೀಟಿ

EPIC ಅಥವಾ ಮತದಾರರ ಫೋಟೋ ಗುರುತಿನ ಚೀಟಿಯನ್ನು ಚುನಾವಣಾ ಆಯೋಗವು ನೀಡುತ್ತದೆ ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟ ಭಾರತೀಯ ನಾಗರಿಕರು ಚುನಾವಣೆಯಲ್ಲಿ ಮತ ಚಲಾಯಿಸಲು ಗುರುತಿನ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. EPIC ಸಂಖ್ಯೆ ಮತದಾರರ ಗುರುತಿನ ಚೀಟಿ ಸಂಖ್ಯೆಯಾಗಿದೆ. ಮತದಾರ ಚೀಟಿ

100 ಕ್ಕೂ ಹೆಚ್ಚು ಮತದಾರರ ಮಾದರಿ ವಿಚಾರಣೆಯಲ್ಲಿ ಒಂದೇ ರೀತಿ EPIC ಸಂಖ್ಯೆಗಳನ್ನು ಹೊಂದಿರುವ ಮತದಾರರು “ನಿಜವಾದ ಮತದಾರ”ರಾಗಿದ್ದು ಅವರು ನಕಲಿ ಮತದಾರರಲ್ಲ ಎಂದು ತಿಳಿದುಬಂದಿದೆ ಎಂದು ಚುನಾವಣಾ ಆಯೋಗ ಹೇಳಿದೆ.

“2000 ನೇ ಇಸವಿಯಲ್ಲಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ EPIC ಸರಣಿಯನ್ನು ಹಂಚಿಕೆ ಮಾಡಿದಾಗಿನಿಂದ, ಕೆಲವು ERO ಗಳು [ಚುನಾವಣಾ ನೋಂದಣಿ ಅಧಿಕಾರಿಗಳು] ಸರಿಯಾದ ಸರಣಿಯನ್ನು ಬಳಸಲಿಲ್ಲ” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

“ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮತದಾರರ ಪಟ್ಟಿಯ ಡೇಟಾಬೇಸ್‌ಗಳನ್ನು ಸ್ವತಂತ್ರವಾಗಿ ನಿರ್ವಹಿಸುತ್ತಿರುವುದರಿಂದ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಾದ್ಯಂತ ತಪ್ಪಾದ ಸರಣಿಗಳಿಂದಾಗಿ ಒಂದೆ ರೀತಿಯ ಸಂಖ್ಯೆಗಳ ಹಂಚಿಕೆಯ ಸಮಸ್ಯೆಯನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ.” ಎಂದು ಅದು ಹೇಳಿದೆ.

ಒಂದೇ ರೀತಿಯ ಸಂಖ್ಯೆಯಿದ್ದರೂ ಕೂಡಾ, ಮತದಾರರು ತಮ್ಮ ಮತಗಳನ್ನು ಬೇರೆ ಕ್ಷೇತ್ರಗಳಲ್ಲಿ ಚಲಾಯಿಸಲು ಸಾಧ್ಯವಿಲ್ಲ ಎಂದು ಆಯೋಗ ಹೇಳಿಕೊಂಡಿದೆ.

ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಗಳನ್ನು ಗೆಲ್ಲಲು ಬಿಜೆಪಿಯು ಚುನಾವಣಾ ಆಯೋಗದೊಂದಿಗೆ ಒಪ್ಪಂದ ಮಾಡಿಕೊಂಡು ಮತದಾರರ ಪಟ್ಟಿಗೆ ನಕಲಿ ಮತದಾರರನ್ನು ಸೇರಿಸುತ್ತಿದೆ ಎಂದು ಫೆಬ್ರವರಿ 27 ರಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಆರೋಪಿಸಿದ್ದರು.

ಬಿಜೆಪಿಯು ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣ ನಿವಾಸಿಗಳನ್ನು ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗೆ ಸೇರಿಸಲು ಅಸೋಸಿಯೇಷನ್ ​​ಆಫ್ ಬಿಲಿಯನ್ ಮೈಂಡ್ಸ್ ಮತ್ತು ಇಂಡಿಯಾ 360 ಎಂಬ ಎರಡು ಸಂಸ್ಥೆಗಳನ್ನು ನೇಮಿಸಿಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ. 2026 ರಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ನಡೆಯಲಿದೆ.

ವಿವಿಧ ರಾಜ್ಯಗಳಲ್ಲಿ ನೀಡಲಾದ ಮತದಾರರ ಗುರುತಿನ ಚೀಟಿ ಸಂಖ್ಯೆಗಳು ಒಂದೇ ರೀತಿಯಲ್ಲಿ ಇದ್ದರೆ ಅದರ ಅರ್ಥ ನಕಲಿ ಮತದಾರರನ್ನು ಪಟ್ಟಿಗೆ ಸೇರಿಸಲಾಗಿದೆ ಎಂದು ಎಂದಲ್ಲ ಎಂದು ಚುನಾವಣಾ ಆಯೋಗ ಮಾರ್ಚ್ 2 ರಂದು ಹೇಳಿತ್ತು. ರಾಜ್ಯಗಳು ಒಂದೇ ಆಲ್ಫಾನ್ಯೂಮರಿಕ್ ಸರಣಿಯನ್ನು ಬಳಸುವುದರ ಪರಿಣಾಮವಾಗಿದೆ ಒಂದಕ್ಕಿಂತ ಹೆಚ್ಚು ಮತದಾರರಿಗೆ ಒಂದೇ ಸಂಖ್ಯೆಯ ಹಂಚಿಕೆಯಾಗಿದೆ ಎಂದು ಅದು ಹೇಳಿತ್ತು.

“…ಕೆಲವು ಮತದಾರರ EPIC ಸಂಖ್ಯೆಗಳು ಒಂದೇ ಆಗಿರಬಹುದು, ಜನಸಂಖ್ಯಾ ವಿವರಗಳು, ವಿಧಾನಸಭಾ ಕ್ಷೇತ್ರ ಮತ್ತು ಮತಗಟ್ಟೆ ಸೇರಿದಂತೆ ಇತರ ವಿವರಗಳು ಒಂದೇ EPIC ಸಂಖ್ಯೆಯನ್ನು ಹೊಂದಿರುವ ಮತದಾರರಿಗೆ ವಿಭಿನ್ನವಾಗಿರುತ್ತವೆ.” ಎಂದು ಚುನಾವಣಾ ಆಯೋಗವು ಹೇಳಿತ್ತು. ಮತದಾರರು ತಮ್ಮ EPIC ಸಂಖ್ಯೆಯನ್ನು ಲೆಕ್ಕಿಸದೆ, ತಮ್ಮ ನೋಂದಾಯಿತ ಕ್ಷೇತ್ರಗಳಲ್ಲಿ ಗೊತ್ತುಪಡಿಸಿದ ಮತಗಟ್ಟೆಯಲ್ಲಿ ಮಾತ್ರ ಮತ ಚಲಾಯಿಸಬಹುದು ಎಂದು ಅದು ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ

ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...