Homeಮುಖಪುಟಮತದಾರ ಚೀಟಿ ಸಂಖ್ಯೆಯ ಸಮಸ್ಯೆ 3 ತಿಂಗಳೊಳಗೆ ಪರಿಹರಿಸುತ್ತೇವೆ: ಚುನಾವಣಾ ಆಯೋಗ

ಮತದಾರ ಚೀಟಿ ಸಂಖ್ಯೆಯ ಸಮಸ್ಯೆ 3 ತಿಂಗಳೊಳಗೆ ಪರಿಹರಿಸುತ್ತೇವೆ: ಚುನಾವಣಾ ಆಯೋಗ

- Advertisement -
- Advertisement -

ಎಲ್ಲಾ ಮತದಾರರಿಗೆ ವಿಶಿಷ್ಟವಾದ ರಾಷ್ಟ್ರೀಯ EPIC ಸಂಖ್ಯೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ ಮೂರು ತಿಂಗಳೊಳಗೆ ವಿವಿಧ ರಾಜ್ಯಗಳಲ್ಲಿ ಒಂದೇ ರೀತಿಯ ಮತದಾರರ ಗುರುತಿನ ಸಂಖ್ಯೆಗಳನ್ನು ನೀಡಲಾಗುತ್ತಿರುವ ಸಮಸ್ಯೆಯನ್ನು ಪರಿಹರಿಸುವುದಾಗಿ ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ. ಮತದಾರ ಚೀಟಿ

EPIC ಅಥವಾ ಮತದಾರರ ಫೋಟೋ ಗುರುತಿನ ಚೀಟಿಯನ್ನು ಚುನಾವಣಾ ಆಯೋಗವು ನೀಡುತ್ತದೆ ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟ ಭಾರತೀಯ ನಾಗರಿಕರು ಚುನಾವಣೆಯಲ್ಲಿ ಮತ ಚಲಾಯಿಸಲು ಗುರುತಿನ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. EPIC ಸಂಖ್ಯೆ ಮತದಾರರ ಗುರುತಿನ ಚೀಟಿ ಸಂಖ್ಯೆಯಾಗಿದೆ. ಮತದಾರ ಚೀಟಿ

100 ಕ್ಕೂ ಹೆಚ್ಚು ಮತದಾರರ ಮಾದರಿ ವಿಚಾರಣೆಯಲ್ಲಿ ಒಂದೇ ರೀತಿ EPIC ಸಂಖ್ಯೆಗಳನ್ನು ಹೊಂದಿರುವ ಮತದಾರರು “ನಿಜವಾದ ಮತದಾರ”ರಾಗಿದ್ದು ಅವರು ನಕಲಿ ಮತದಾರರಲ್ಲ ಎಂದು ತಿಳಿದುಬಂದಿದೆ ಎಂದು ಚುನಾವಣಾ ಆಯೋಗ ಹೇಳಿದೆ.

“2000 ನೇ ಇಸವಿಯಲ್ಲಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ EPIC ಸರಣಿಯನ್ನು ಹಂಚಿಕೆ ಮಾಡಿದಾಗಿನಿಂದ, ಕೆಲವು ERO ಗಳು [ಚುನಾವಣಾ ನೋಂದಣಿ ಅಧಿಕಾರಿಗಳು] ಸರಿಯಾದ ಸರಣಿಯನ್ನು ಬಳಸಲಿಲ್ಲ” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

“ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮತದಾರರ ಪಟ್ಟಿಯ ಡೇಟಾಬೇಸ್‌ಗಳನ್ನು ಸ್ವತಂತ್ರವಾಗಿ ನಿರ್ವಹಿಸುತ್ತಿರುವುದರಿಂದ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಾದ್ಯಂತ ತಪ್ಪಾದ ಸರಣಿಗಳಿಂದಾಗಿ ಒಂದೆ ರೀತಿಯ ಸಂಖ್ಯೆಗಳ ಹಂಚಿಕೆಯ ಸಮಸ್ಯೆಯನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ.” ಎಂದು ಅದು ಹೇಳಿದೆ.

ಒಂದೇ ರೀತಿಯ ಸಂಖ್ಯೆಯಿದ್ದರೂ ಕೂಡಾ, ಮತದಾರರು ತಮ್ಮ ಮತಗಳನ್ನು ಬೇರೆ ಕ್ಷೇತ್ರಗಳಲ್ಲಿ ಚಲಾಯಿಸಲು ಸಾಧ್ಯವಿಲ್ಲ ಎಂದು ಆಯೋಗ ಹೇಳಿಕೊಂಡಿದೆ.

ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಗಳನ್ನು ಗೆಲ್ಲಲು ಬಿಜೆಪಿಯು ಚುನಾವಣಾ ಆಯೋಗದೊಂದಿಗೆ ಒಪ್ಪಂದ ಮಾಡಿಕೊಂಡು ಮತದಾರರ ಪಟ್ಟಿಗೆ ನಕಲಿ ಮತದಾರರನ್ನು ಸೇರಿಸುತ್ತಿದೆ ಎಂದು ಫೆಬ್ರವರಿ 27 ರಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಆರೋಪಿಸಿದ್ದರು.

ಬಿಜೆಪಿಯು ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣ ನಿವಾಸಿಗಳನ್ನು ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗೆ ಸೇರಿಸಲು ಅಸೋಸಿಯೇಷನ್ ​​ಆಫ್ ಬಿಲಿಯನ್ ಮೈಂಡ್ಸ್ ಮತ್ತು ಇಂಡಿಯಾ 360 ಎಂಬ ಎರಡು ಸಂಸ್ಥೆಗಳನ್ನು ನೇಮಿಸಿಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ. 2026 ರಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ನಡೆಯಲಿದೆ.

ವಿವಿಧ ರಾಜ್ಯಗಳಲ್ಲಿ ನೀಡಲಾದ ಮತದಾರರ ಗುರುತಿನ ಚೀಟಿ ಸಂಖ್ಯೆಗಳು ಒಂದೇ ರೀತಿಯಲ್ಲಿ ಇದ್ದರೆ ಅದರ ಅರ್ಥ ನಕಲಿ ಮತದಾರರನ್ನು ಪಟ್ಟಿಗೆ ಸೇರಿಸಲಾಗಿದೆ ಎಂದು ಎಂದಲ್ಲ ಎಂದು ಚುನಾವಣಾ ಆಯೋಗ ಮಾರ್ಚ್ 2 ರಂದು ಹೇಳಿತ್ತು. ರಾಜ್ಯಗಳು ಒಂದೇ ಆಲ್ಫಾನ್ಯೂಮರಿಕ್ ಸರಣಿಯನ್ನು ಬಳಸುವುದರ ಪರಿಣಾಮವಾಗಿದೆ ಒಂದಕ್ಕಿಂತ ಹೆಚ್ಚು ಮತದಾರರಿಗೆ ಒಂದೇ ಸಂಖ್ಯೆಯ ಹಂಚಿಕೆಯಾಗಿದೆ ಎಂದು ಅದು ಹೇಳಿತ್ತು.

“…ಕೆಲವು ಮತದಾರರ EPIC ಸಂಖ್ಯೆಗಳು ಒಂದೇ ಆಗಿರಬಹುದು, ಜನಸಂಖ್ಯಾ ವಿವರಗಳು, ವಿಧಾನಸಭಾ ಕ್ಷೇತ್ರ ಮತ್ತು ಮತಗಟ್ಟೆ ಸೇರಿದಂತೆ ಇತರ ವಿವರಗಳು ಒಂದೇ EPIC ಸಂಖ್ಯೆಯನ್ನು ಹೊಂದಿರುವ ಮತದಾರರಿಗೆ ವಿಭಿನ್ನವಾಗಿರುತ್ತವೆ.” ಎಂದು ಚುನಾವಣಾ ಆಯೋಗವು ಹೇಳಿತ್ತು. ಮತದಾರರು ತಮ್ಮ EPIC ಸಂಖ್ಯೆಯನ್ನು ಲೆಕ್ಕಿಸದೆ, ತಮ್ಮ ನೋಂದಾಯಿತ ಕ್ಷೇತ್ರಗಳಲ್ಲಿ ಗೊತ್ತುಪಡಿಸಿದ ಮತಗಟ್ಟೆಯಲ್ಲಿ ಮಾತ್ರ ಮತ ಚಲಾಯಿಸಬಹುದು ಎಂದು ಅದು ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ

ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...