Homeಮುಖಪುಟಮತದಾರ ಚೀಟಿ ಸಂಖ್ಯೆಯ ಸಮಸ್ಯೆ 3 ತಿಂಗಳೊಳಗೆ ಪರಿಹರಿಸುತ್ತೇವೆ: ಚುನಾವಣಾ ಆಯೋಗ

ಮತದಾರ ಚೀಟಿ ಸಂಖ್ಯೆಯ ಸಮಸ್ಯೆ 3 ತಿಂಗಳೊಳಗೆ ಪರಿಹರಿಸುತ್ತೇವೆ: ಚುನಾವಣಾ ಆಯೋಗ

- Advertisement -
- Advertisement -

ಎಲ್ಲಾ ಮತದಾರರಿಗೆ ವಿಶಿಷ್ಟವಾದ ರಾಷ್ಟ್ರೀಯ EPIC ಸಂಖ್ಯೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ ಮೂರು ತಿಂಗಳೊಳಗೆ ವಿವಿಧ ರಾಜ್ಯಗಳಲ್ಲಿ ಒಂದೇ ರೀತಿಯ ಮತದಾರರ ಗುರುತಿನ ಸಂಖ್ಯೆಗಳನ್ನು ನೀಡಲಾಗುತ್ತಿರುವ ಸಮಸ್ಯೆಯನ್ನು ಪರಿಹರಿಸುವುದಾಗಿ ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ. ಮತದಾರ ಚೀಟಿ

EPIC ಅಥವಾ ಮತದಾರರ ಫೋಟೋ ಗುರುತಿನ ಚೀಟಿಯನ್ನು ಚುನಾವಣಾ ಆಯೋಗವು ನೀಡುತ್ತದೆ ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟ ಭಾರತೀಯ ನಾಗರಿಕರು ಚುನಾವಣೆಯಲ್ಲಿ ಮತ ಚಲಾಯಿಸಲು ಗುರುತಿನ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. EPIC ಸಂಖ್ಯೆ ಮತದಾರರ ಗುರುತಿನ ಚೀಟಿ ಸಂಖ್ಯೆಯಾಗಿದೆ. ಮತದಾರ ಚೀಟಿ

100 ಕ್ಕೂ ಹೆಚ್ಚು ಮತದಾರರ ಮಾದರಿ ವಿಚಾರಣೆಯಲ್ಲಿ ಒಂದೇ ರೀತಿ EPIC ಸಂಖ್ಯೆಗಳನ್ನು ಹೊಂದಿರುವ ಮತದಾರರು “ನಿಜವಾದ ಮತದಾರ”ರಾಗಿದ್ದು ಅವರು ನಕಲಿ ಮತದಾರರಲ್ಲ ಎಂದು ತಿಳಿದುಬಂದಿದೆ ಎಂದು ಚುನಾವಣಾ ಆಯೋಗ ಹೇಳಿದೆ.

“2000 ನೇ ಇಸವಿಯಲ್ಲಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ EPIC ಸರಣಿಯನ್ನು ಹಂಚಿಕೆ ಮಾಡಿದಾಗಿನಿಂದ, ಕೆಲವು ERO ಗಳು [ಚುನಾವಣಾ ನೋಂದಣಿ ಅಧಿಕಾರಿಗಳು] ಸರಿಯಾದ ಸರಣಿಯನ್ನು ಬಳಸಲಿಲ್ಲ” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

“ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮತದಾರರ ಪಟ್ಟಿಯ ಡೇಟಾಬೇಸ್‌ಗಳನ್ನು ಸ್ವತಂತ್ರವಾಗಿ ನಿರ್ವಹಿಸುತ್ತಿರುವುದರಿಂದ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಾದ್ಯಂತ ತಪ್ಪಾದ ಸರಣಿಗಳಿಂದಾಗಿ ಒಂದೆ ರೀತಿಯ ಸಂಖ್ಯೆಗಳ ಹಂಚಿಕೆಯ ಸಮಸ್ಯೆಯನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ.” ಎಂದು ಅದು ಹೇಳಿದೆ.

ಒಂದೇ ರೀತಿಯ ಸಂಖ್ಯೆಯಿದ್ದರೂ ಕೂಡಾ, ಮತದಾರರು ತಮ್ಮ ಮತಗಳನ್ನು ಬೇರೆ ಕ್ಷೇತ್ರಗಳಲ್ಲಿ ಚಲಾಯಿಸಲು ಸಾಧ್ಯವಿಲ್ಲ ಎಂದು ಆಯೋಗ ಹೇಳಿಕೊಂಡಿದೆ.

ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಗಳನ್ನು ಗೆಲ್ಲಲು ಬಿಜೆಪಿಯು ಚುನಾವಣಾ ಆಯೋಗದೊಂದಿಗೆ ಒಪ್ಪಂದ ಮಾಡಿಕೊಂಡು ಮತದಾರರ ಪಟ್ಟಿಗೆ ನಕಲಿ ಮತದಾರರನ್ನು ಸೇರಿಸುತ್ತಿದೆ ಎಂದು ಫೆಬ್ರವರಿ 27 ರಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಆರೋಪಿಸಿದ್ದರು.

ಬಿಜೆಪಿಯು ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣ ನಿವಾಸಿಗಳನ್ನು ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗೆ ಸೇರಿಸಲು ಅಸೋಸಿಯೇಷನ್ ​​ಆಫ್ ಬಿಲಿಯನ್ ಮೈಂಡ್ಸ್ ಮತ್ತು ಇಂಡಿಯಾ 360 ಎಂಬ ಎರಡು ಸಂಸ್ಥೆಗಳನ್ನು ನೇಮಿಸಿಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ. 2026 ರಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ನಡೆಯಲಿದೆ.

ವಿವಿಧ ರಾಜ್ಯಗಳಲ್ಲಿ ನೀಡಲಾದ ಮತದಾರರ ಗುರುತಿನ ಚೀಟಿ ಸಂಖ್ಯೆಗಳು ಒಂದೇ ರೀತಿಯಲ್ಲಿ ಇದ್ದರೆ ಅದರ ಅರ್ಥ ನಕಲಿ ಮತದಾರರನ್ನು ಪಟ್ಟಿಗೆ ಸೇರಿಸಲಾಗಿದೆ ಎಂದು ಎಂದಲ್ಲ ಎಂದು ಚುನಾವಣಾ ಆಯೋಗ ಮಾರ್ಚ್ 2 ರಂದು ಹೇಳಿತ್ತು. ರಾಜ್ಯಗಳು ಒಂದೇ ಆಲ್ಫಾನ್ಯೂಮರಿಕ್ ಸರಣಿಯನ್ನು ಬಳಸುವುದರ ಪರಿಣಾಮವಾಗಿದೆ ಒಂದಕ್ಕಿಂತ ಹೆಚ್ಚು ಮತದಾರರಿಗೆ ಒಂದೇ ಸಂಖ್ಯೆಯ ಹಂಚಿಕೆಯಾಗಿದೆ ಎಂದು ಅದು ಹೇಳಿತ್ತು.

“…ಕೆಲವು ಮತದಾರರ EPIC ಸಂಖ್ಯೆಗಳು ಒಂದೇ ಆಗಿರಬಹುದು, ಜನಸಂಖ್ಯಾ ವಿವರಗಳು, ವಿಧಾನಸಭಾ ಕ್ಷೇತ್ರ ಮತ್ತು ಮತಗಟ್ಟೆ ಸೇರಿದಂತೆ ಇತರ ವಿವರಗಳು ಒಂದೇ EPIC ಸಂಖ್ಯೆಯನ್ನು ಹೊಂದಿರುವ ಮತದಾರರಿಗೆ ವಿಭಿನ್ನವಾಗಿರುತ್ತವೆ.” ಎಂದು ಚುನಾವಣಾ ಆಯೋಗವು ಹೇಳಿತ್ತು. ಮತದಾರರು ತಮ್ಮ EPIC ಸಂಖ್ಯೆಯನ್ನು ಲೆಕ್ಕಿಸದೆ, ತಮ್ಮ ನೋಂದಾಯಿತ ಕ್ಷೇತ್ರಗಳಲ್ಲಿ ಗೊತ್ತುಪಡಿಸಿದ ಮತಗಟ್ಟೆಯಲ್ಲಿ ಮಾತ್ರ ಮತ ಚಲಾಯಿಸಬಹುದು ಎಂದು ಅದು ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ

ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...