Homeಕರ್ನಾಟಕಕಷ್ಟಗಳಿಗೆ ಸ್ಪಂದಿಸುವ ಸುರೇಶ್ ಬೇಕೋ, ವೈಟ್ ಕಾಲರ್ ಮಂಜುನಾಥ್ ಬೇಕೋ ಎನ್ನುವುದನ್ನು ಮತದಾರರು ನಿರ್ಧರಿಸಿದ್ದಾರೆ: ಸಿಎಂ

ಕಷ್ಟಗಳಿಗೆ ಸ್ಪಂದಿಸುವ ಸುರೇಶ್ ಬೇಕೋ, ವೈಟ್ ಕಾಲರ್ ಮಂಜುನಾಥ್ ಬೇಕೋ ಎನ್ನುವುದನ್ನು ಮತದಾರರು ನಿರ್ಧರಿಸಿದ್ದಾರೆ: ಸಿಎಂ

- Advertisement -
- Advertisement -

‘ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌ ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಸುರೇಶ್ ನಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ’ ಎಂದರು.

‘ಸರ್ಕಾರ ಬಂದ ದಿನದಿಂದಲೇ ನಾವು ಕೊಟ್ಟ ಮಾತನ್ನು ಈಡೇರಿಸುವ ಕೆಲಸ ಶುರು ಮಾಡಿದೆವು. ಎಂಟೇ ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ. ಹೀಗಾಗಿ ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿಕೊಳ್ಳಿ’ ಎಂದರು.

‘ನಾವು ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಕನ್ನಡ ನಾಡಿನ‌ ಜನತೆಯ ಖಾತೆಗೆ ಹಣ ಜಮೆ ಮಾಡುತ್ತಿದ್ದೇವೆ. ಶೂದ್ರರು, ದಲಿತರು, ಮಹಿಳೆಯರು, ಶ್ರಮಿಕರು, ದುಡಿಯುವ ವರ್ಗಗಳ ಎಲ್ಲರ ಮನೆ ಮನೆಯನ್ನೂ ನಮ್ಮ ಗ್ಯಾರಂಟಿಗಳು ತಲುಪಿವೆ. ಇದು ನಮ್ಮ ಬದ್ಧತೆ. ನೀವು ಕೊಟ್ಟ ಒಂದೊಂದು ಓಟಿಗೂ ಘನತೆ ತಂದಿದ್ದೇವೆ’ ಎಂದರು.

‘ಬಿಜೆಪಿ-ಜೆಡಿಎಸ್ ಕಾರ್ಯಕರ್ತರು, ಕುಟುಂಬಗಳಿಗೂ ನಮ್ಮ ಸರ್ಕಾರ ಹಣ ಜಮೆ ಮಾಡುತ್ತಿದೆ. ಪಕ್ಷ, ಜಾತಿ, ಧರ್ಮ ಯಾವುದನ್ನೂ ನೋಡದೆ ಇಡೀ ನಾಡಿನ ಜನತೆಗೆ ಅವರ ಕುಟುಂಬಗಳಿಗೆ ಉಚಿತ ಅಕ್ಕಿ, ಉಚಿತ ವಿದ್ಯುತ್ ಜತೆಗೆ ಮಹಿಳೆಯರ ಖಾತೆಗೆ 2 ಸಾವಿರ ರೂಪಾಯಿ, ನಿರುದ್ಯೋಗಿಗಳ ಖಾತೆಗೆ ಭತ್ಯೆಯನ್ನು ಜಮೆ ಮಾಡುತ್ತಿದೆ. ಹೀಗೆ ಕಾಂಗ್ರೆಸ್ ಪಕ್ಷ ಪ್ರತಿಯೊಬ್ಬ ಮತದಾರರ ನಂಬಿಕೆ ಉಳಿಸಿಕೊಂಡಿದೆ’ ಎಂದು ವಿವರಿಸಿದರು.

‘ಬಿಜೆಪಿ ಸರ್ಕಾರ ಇದ್ದಾಗಲೂ ನೀವು ತೆರಿಗೆ ಕಟ್ಟಿದ್ದೀರಿ. ಆದರೆ, ಬಿಜೆಪಿ ನಿಮ್ಮ ತೆರಿಗೆ ಹಣವನ್ನು ನಿಮಗಾಗಿ ಖರ್ಚು ಮಾಡಲಿಲ್ಲ. ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ ಬೆಲೆಯನ್ನು ವಿಪರೀತ ಹೆಚ್ಚಿಸಿ ನಿಮ್ಮ ತೆರಿಗೆ ಹಣವನ್ನೂ ನಿಮಗಾಗಿ ಖರ್ಚು ಮಾಡಲಿಲ್ಲ. ಆದರೆ ನಾವು ಪ್ರತೀ ತಿಂಗಳು 4 ರಿಂದ 5 ಸಾವಿರ ರೂಪಾಯಿಯನ್ನು ಪ್ರತಿ ಅರ್ಹ ಕುಟುಂಬಗಳಿಗೆ ನಮ್ಮ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಕಾಂಗ್ರೆಸ್ ಅಂದರೆ ಬಡವರ, ಮಧ್ಯಮ ವರ್ಗದವರ ಪರವಾಗಿ ಕೆಲಸ ಮಾಡುವ ಪಕ್ಷ’ ಎಂದು ಹೇಳಿದರು.

‘ಹೀಗಾಗಿ, ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೋ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ. ಡಿ.ಕೆ.ಸುರೇಶ್ ಅವರನ್ನು ಜನ ಗೆಲ್ಲಿಸಲು ತೀರ್ಮಾನಿಸಿ ಆಗಿದೆ’ ಎಂದರು.

‘ಕುಮಾರಸ್ವಾಮಿ ಅವರು ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದಾಗ, ಮುಖ್ಯಮಂತ್ರಿ ಆಗಿದ್ದಾಗ ರಾಮನಗರ ಜಿಲ್ಲೆಯನ್ನು ಏಕೆ ಕಡೆಸಿದ್ದರು ಎನ್ನುವುದಕ್ಕೆ ಜನರಿಗೆ ಉತ್ತರಿಸಲಿ’ ಎಂದು ಸವಾಲು ಹಾಕಿದರು.

ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಸಿ.ಸುಧಾಕರ್, ಮಂಕಾಳ ವೈದ್ಯ , ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್ , ವಿಧಾನ‌ ಪರಿಷತ್ ಸದಸ್ಯ ಸುದಾಮ ದಾಸ್ ಸೇರಿ ರಾಮನಗರ ಜಿಲ್ಲೆಯ ಕಾಂಗ್ರೆಸ್ ಶಾಸಕರುಗಳು ಮತ್ತು ಜಿಲ್ಲಾ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ; ನನ್ನನ್ನು ಎನ್‌ಕೌಂಟರ್ ಮಾಡುವುದಾಗಿ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....