Homeಕರ್ನಾಟಕಜೆಡಿಎಸ್‌ಗೆ ಬುದ್ಧಿ ಹೇಳುವವರಿಲ್ಲ, ಮತದಾರರೇ ಪಾಠ ಕಲಿಸುತ್ತಾರೆ: ನಾರಾಯಣಗೌಡ

ಜೆಡಿಎಸ್‌ಗೆ ಬುದ್ಧಿ ಹೇಳುವವರಿಲ್ಲ, ಮತದಾರರೇ ಪಾಠ ಕಲಿಸುತ್ತಾರೆ: ನಾರಾಯಣಗೌಡ

’ನಿನ್ನೆ ಮಧ್ಯಾಹ್ನದವರೆಗೂ ಜೆಡಿಎಸ್ ಕಾಯ್ದೆ ವಿರೋಧಿಸಿತ್ತು. ಆದ್ರೆ ಸಂಜೆ ವೇಳೆಗೆ ಕಾಯ್ದೆ ಜಾರಿಗೊಳಿಸಲು ಅಸ್ತು ಎಂದಿದೆ. ಇದು ಜೆಡಿಎಸ್‌ನ ಇಬ್ಬಗೆಯ ನೀತಿಯನ್ನು ತೋರಿಸುತ್ತದೆ.’

- Advertisement -
- Advertisement -

ರಾಜ್ಯದಲ್ಲಿ ಜೆಡಿಎಸ್‌ಗೆ ಬುದ್ಧಿ ಹೇಳುವವರಿಲ್ಲ, ಜೆಡಿಎಸ್‌ ರೈತರ ಪರವಾಗಿಲ್ಲ. ಮುಂದಿನ ಚುನಾವಣೆಯಲ್ಲಿ ಮತದಾರರೇ ಅವರಿಗೆ ಪಾಠ ಕಲಿಸುತ್ತಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತರನ್ನು ಬೆಂಬಲಿಸಿ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಬೆಂಗಳೂರು ಮಹಾನಗರ ಪಾಲಿಕೆಯ ಬಳಿಯಿಂದ ಫ್ರೀಡಂಪಾರ್ಕ್‌ವರೆಗೆ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿದೆ. ಈ ವೇಳೆ ಕರವೇ ಕಾರ್ಯಕರ್ತರನ್ನು ಪೋಲಿಸರು ಬಂಧಿಸಿದ್ದಾರೆ. ಆದರೆ, ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಕರವೇ ತಿಳಿಸಿದೆ.

ಈ ವೇಳೆ ಮಾತನಾಡಿದ ನಾರಾಯಣಗೌಡ, ’ಅನ್ನದಾತರ ಬಗ್ಗೆ ಜೆಡಿಎಸ್‌ಗೆ ಎಷ್ಟು ಕಾಳಜಿ ಇದೆ ಎಂದು ಗೊತ್ತಾಗಿದೆ. ಜೆಡಿಎಸ್‌ಗೆ ಬುದ್ಧಿ ಹೇಳುವವರು ಯಾರೂ ಇಲ್ಲ, ಜೆಡಿಎಸ್ ರೈತರ ಪರವಾಗಿಲ್ಲ, ಅವರ ಮತ್ತೊಂದು ಮುಖ ಜನರಿಗೆ ಪರಿಚಯವಾಗಿದೆ. ಮುಂದಿನ ಚುನಾವಣೆಯಲ್ಲಿ ಮತದಾರರೇ ಅವರಿಗೆ ಪಾಠ ಕಲಿಸಲಿದ್ದಾರೆ’ ಎಂದರು.

ಇದನ್ನೂ ಓದಿ: ಈ ಕೃಷಿ ಕಾನೂನುಗಳನ್ನು ಕಾಂಗ್ರೆಸ್ ಕೂಡಾ ತರಲು ಬಯಸಿತ್ತು ಎಂದ ಬಿಜೆಪಿ; ತಿರುಗೇಟು ನೀಡಿದ ಪವಾರ್!

“ನಿನ್ನೆ ಮಧ್ಯಾಹ್ನದವರೆಗೂ ಜೆಡಿಎಸ್ ಕಾಯ್ದೆ ವಿರೋಧಿಸಿತ್ತು. ಆದ್ರೆ ಸಂಜೆ ವೇಳೆಗೆ ಕಾಯ್ದೆ ಜಾರಿಗೊಳಿಸಲು ಅಸ್ತು ಎಂದಿದೆ. ಇದರ ಹಿಂದೆ ಏನು ನಡೆದಿದೆ ಎಂಬುದು ಗೊತ್ತಿಲ್ಲ. ಆದರೆ, ಇದು ಜೆಡಿಎಸ್‌ನ ಇಬ್ಬಗೆಯ ನೀತಿಯನ್ನ ತೋರಿಸುತ್ತದೆ. ಇಂತ ಕಾಯ್ದೆಗಳನ್ನ ವಿರೋಧಿಸಿ ನಾವು ರೈತರ ಜೊತೆ ಇರುತ್ತೇವೆ. ರೈತ ವಿರೋಧಿ ಯಡಿಯೂರಪ್ಪನವರ ಸರ್ಕಾರಕ್ಕೆ ರಾಜ್ಯದ ಜನ ಉತ್ತರ ಕೊಡುತ್ತಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನೆಯ ನಂತರ ಕರವೇ ಪ್ರತಿನಿಧಿಗಳ ನಿಯೋಗ, ರಾಜ್ಯಪಾಲರನ್ನು ಭೇಟಿ ಮಾಡಿ, ಅವರ ಮೂಲಕ ರಾಷ್ಟ್ರಪತಿಗಳಿಗೆ ಆಗ್ರಹ ಪತ್ರ ಸಲ್ಲಿಸಲಿದೆ. ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಿ, ಕರಾಳ ಕಾಯ್ದೆಗಳನ್ನು ರದ್ದುಪಡಿಸಬೇಕೆಂದು ನಿಯೋಗ ಒತ್ತಾಯಿಸಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜ್ಯದ ಮೂವತ್ತು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಆಗ್ರಹ ಪತ್ರ ಸಲ್ಲಿಸಲಿದ್ದಾರೆ.


ಇದನ್ನೂ ಓದಿ: ಭೂ ಸುದಾರಣೆ ಕಾಯ್ದೆ ತಿದ್ದುಪಡಿಗೆ ಅಂಗೀಕಾರ ವಿರೋಧಿಸಿ ಪ್ರತಿಭಟನೆ: ಹೋರಾಟಗಾರರ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...