Homeಕರ್ನಾಟಕಜೆಡಿಎಸ್‌ಗೆ ಬುದ್ಧಿ ಹೇಳುವವರಿಲ್ಲ, ಮತದಾರರೇ ಪಾಠ ಕಲಿಸುತ್ತಾರೆ: ನಾರಾಯಣಗೌಡ

ಜೆಡಿಎಸ್‌ಗೆ ಬುದ್ಧಿ ಹೇಳುವವರಿಲ್ಲ, ಮತದಾರರೇ ಪಾಠ ಕಲಿಸುತ್ತಾರೆ: ನಾರಾಯಣಗೌಡ

’ನಿನ್ನೆ ಮಧ್ಯಾಹ್ನದವರೆಗೂ ಜೆಡಿಎಸ್ ಕಾಯ್ದೆ ವಿರೋಧಿಸಿತ್ತು. ಆದ್ರೆ ಸಂಜೆ ವೇಳೆಗೆ ಕಾಯ್ದೆ ಜಾರಿಗೊಳಿಸಲು ಅಸ್ತು ಎಂದಿದೆ. ಇದು ಜೆಡಿಎಸ್‌ನ ಇಬ್ಬಗೆಯ ನೀತಿಯನ್ನು ತೋರಿಸುತ್ತದೆ.’

- Advertisement -
- Advertisement -

ರಾಜ್ಯದಲ್ಲಿ ಜೆಡಿಎಸ್‌ಗೆ ಬುದ್ಧಿ ಹೇಳುವವರಿಲ್ಲ, ಜೆಡಿಎಸ್‌ ರೈತರ ಪರವಾಗಿಲ್ಲ. ಮುಂದಿನ ಚುನಾವಣೆಯಲ್ಲಿ ಮತದಾರರೇ ಅವರಿಗೆ ಪಾಠ ಕಲಿಸುತ್ತಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತರನ್ನು ಬೆಂಬಲಿಸಿ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಬೆಂಗಳೂರು ಮಹಾನಗರ ಪಾಲಿಕೆಯ ಬಳಿಯಿಂದ ಫ್ರೀಡಂಪಾರ್ಕ್‌ವರೆಗೆ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿದೆ. ಈ ವೇಳೆ ಕರವೇ ಕಾರ್ಯಕರ್ತರನ್ನು ಪೋಲಿಸರು ಬಂಧಿಸಿದ್ದಾರೆ. ಆದರೆ, ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಕರವೇ ತಿಳಿಸಿದೆ.

ಈ ವೇಳೆ ಮಾತನಾಡಿದ ನಾರಾಯಣಗೌಡ, ’ಅನ್ನದಾತರ ಬಗ್ಗೆ ಜೆಡಿಎಸ್‌ಗೆ ಎಷ್ಟು ಕಾಳಜಿ ಇದೆ ಎಂದು ಗೊತ್ತಾಗಿದೆ. ಜೆಡಿಎಸ್‌ಗೆ ಬುದ್ಧಿ ಹೇಳುವವರು ಯಾರೂ ಇಲ್ಲ, ಜೆಡಿಎಸ್ ರೈತರ ಪರವಾಗಿಲ್ಲ, ಅವರ ಮತ್ತೊಂದು ಮುಖ ಜನರಿಗೆ ಪರಿಚಯವಾಗಿದೆ. ಮುಂದಿನ ಚುನಾವಣೆಯಲ್ಲಿ ಮತದಾರರೇ ಅವರಿಗೆ ಪಾಠ ಕಲಿಸಲಿದ್ದಾರೆ’ ಎಂದರು.

ಇದನ್ನೂ ಓದಿ: ಈ ಕೃಷಿ ಕಾನೂನುಗಳನ್ನು ಕಾಂಗ್ರೆಸ್ ಕೂಡಾ ತರಲು ಬಯಸಿತ್ತು ಎಂದ ಬಿಜೆಪಿ; ತಿರುಗೇಟು ನೀಡಿದ ಪವಾರ್!

“ನಿನ್ನೆ ಮಧ್ಯಾಹ್ನದವರೆಗೂ ಜೆಡಿಎಸ್ ಕಾಯ್ದೆ ವಿರೋಧಿಸಿತ್ತು. ಆದ್ರೆ ಸಂಜೆ ವೇಳೆಗೆ ಕಾಯ್ದೆ ಜಾರಿಗೊಳಿಸಲು ಅಸ್ತು ಎಂದಿದೆ. ಇದರ ಹಿಂದೆ ಏನು ನಡೆದಿದೆ ಎಂಬುದು ಗೊತ್ತಿಲ್ಲ. ಆದರೆ, ಇದು ಜೆಡಿಎಸ್‌ನ ಇಬ್ಬಗೆಯ ನೀತಿಯನ್ನ ತೋರಿಸುತ್ತದೆ. ಇಂತ ಕಾಯ್ದೆಗಳನ್ನ ವಿರೋಧಿಸಿ ನಾವು ರೈತರ ಜೊತೆ ಇರುತ್ತೇವೆ. ರೈತ ವಿರೋಧಿ ಯಡಿಯೂರಪ್ಪನವರ ಸರ್ಕಾರಕ್ಕೆ ರಾಜ್ಯದ ಜನ ಉತ್ತರ ಕೊಡುತ್ತಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನೆಯ ನಂತರ ಕರವೇ ಪ್ರತಿನಿಧಿಗಳ ನಿಯೋಗ, ರಾಜ್ಯಪಾಲರನ್ನು ಭೇಟಿ ಮಾಡಿ, ಅವರ ಮೂಲಕ ರಾಷ್ಟ್ರಪತಿಗಳಿಗೆ ಆಗ್ರಹ ಪತ್ರ ಸಲ್ಲಿಸಲಿದೆ. ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಿ, ಕರಾಳ ಕಾಯ್ದೆಗಳನ್ನು ರದ್ದುಪಡಿಸಬೇಕೆಂದು ನಿಯೋಗ ಒತ್ತಾಯಿಸಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜ್ಯದ ಮೂವತ್ತು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಆಗ್ರಹ ಪತ್ರ ಸಲ್ಲಿಸಲಿದ್ದಾರೆ.


ಇದನ್ನೂ ಓದಿ: ಭೂ ಸುದಾರಣೆ ಕಾಯ್ದೆ ತಿದ್ದುಪಡಿಗೆ ಅಂಗೀಕಾರ ವಿರೋಧಿಸಿ ಪ್ರತಿಭಟನೆ: ಹೋರಾಟಗಾರರ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...