Homeಕರ್ನಾಟಕವಿಧಾನಪರಿಷತ್​​ನ 6 ಸ್ಥಾನಗಳಿಗೆ ಇಂದು ಮತದಾನ

ವಿಧಾನಪರಿಷತ್​​ನ 6 ಸ್ಥಾನಗಳಿಗೆ ಇಂದು ಮತದಾನ

- Advertisement -
- Advertisement -

ವಿಧಾನಪರಿಷತ್‌ನ ಪದವೀಧರರು ಮತ್ತು ಶಿಕ್ಷಕರ ತಲಾ ಮೂರು ಕ್ಷೇತ್ರಗಳಿಗೆ ಇಂದು (ಜೂನ್‌ 3) ಮತದಾನ ನಡೆಯುತ್ತಿದೆ. ಒಟ್ಟು ಆರು ಕ್ಷೇತ್ರಗಳಿಗೆ 78 ಅಭ್ಯರ್ಥಿಗಳು ಕಣದಲ್ಲಿದ್ದು, 4.33 ಲಕ್ಷ ಮತದಾರರಿದ್ದಾರೆ.

ಈಶಾನ್ಯ, ನೈರುತ್ಯ ಮತ್ತು ಬೆಂಗಳೂರು ಪದವೀಧರರ ಕ್ಷೇತ್ರಗಳ ವ್ಯಾಪ್ತಿಯಲ್ಲಿ 16 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಪದವೀಧರ ಕ್ಷೇತ್ರಗಳಲ್ಲಿ ಒಟ್ಟು 3.63 ಲಕ್ಷ ಮತದಾರರಿದ್ದಾರೆ. ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಅತ್ಯಧಿಕ 1.56 ಲಕ್ಷ ಮತದಾರರಿದ್ದಾರೆ. ಒಟ್ಟು 16 ಜಿಲ್ಲೆಗಳಲ್ಲಿ 461 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಆಗ್ನೇಯ, ನೈರುತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ವ್ಯಾಪ್ತಿಯಲ್ಲಿ 15 ಜಿಲ್ಲೆಗಳಿವೆ. ಈ ಕ್ಷೇತ್ರಗಳಲ್ಲಿ ಒಟ್ಟು 70,260 ಮತದಾರರಿದ್ದಾರೆ. ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಅತ್ಯಧಿಕ 25,309 ಮತದಾರರಿದ್ದಾರೆ. ಈ ಕ್ಷೇತ್ರಗಳಲ್ಲಿ 170 ಮತಗಟ್ಟೆಗಳನ್ನು ತೆರೆಯಲಾಗಿದೆ.

ಪ್ರಾಶಸ್ತ್ಯದ ಮತ ಚಲಾವಣೆಗೆ ಅವಕಾಶ:

ವಿಧಾನಪರಿಷತ್‌ನ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಪ್ರಾಶಸ್ತ್ಯದ ಮತ ಚಲಾವಣೆಗೆ ಅವಕಾಶವಿದೆ. ಮತಪತ್ರದ ಮೂಲಕ ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳ ಹೆಸರಿನ ಮುಂದೆ ತಮ್ಮ ಆಯ್ಕೆಯ ಪ್ರಾಶಸ್ತ್ಯವನ್ನು ಸಂಖ್ಯೆಗಳಲ್ಲಿ ನಮೂದಿಸಬೇಕಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿರುವುದಾಗಿ ವರದಿಯಾಗಿದೆ.

ಪ್ರಮುಖ ಅಭ್ಯರ್ಥಿಗಳು

ದಕ್ಷಿಣ ಶಿಕ್ಷಕರ ಕ್ಷೇತ್ರ
ಕಾಂಗ್ರೆಸ್-ಮರಿತಿಬ್ಬೇಗೌಡ
ಜೆಡಿಎಸ್-ವಿವೇಕಾನಂದ

ನೈಋತ್ಯ ಶಿಕ್ಷಕರ ಕ್ಷೇತ್ರ
ಕಾಂಗ್ರೆಸ್-ಕೆ.ಕೆ.ಮಂಜುನಾಥ್
ಜೆಡಿಎಸ್‌-ಎಸ್‌.ಎಲ್‌ ಭೋಜೇಗೌಡ

ಆಗ್ನೇಯ ಶಿಕ್ಷಕರ ಕ್ಷೇತ್ರ
ಕಾಂಗ್ರೆಸ್- ಟಿ.ಡಿ ಶ್ರೀನಿವಾಸ್
ಬಿಜೆಪಿ-ವೈ.ಎ ನಾರಾಯಣಸ್ವಾಮಿ

ನೈಋತ್ಯ ಪದವೀಧರ ಕ್ಷೇತ್ರ

ಕಾಂಗ್ರೆಸ್- ಆಯನೂರು ಮಂಜುನಾಥ್
ಬಿಜೆಪಿ-ಡಾ. ಧನಂಜಯ ಸರ್ಜಿ

ಈಶಾನ್ಯ ಪದವೀಧರ ಕ್ಷೇತ್ರ
ಕಾಂಗ್ರೆಸ್- ಡಾ.ಚಂದ್ರಶೇಖರ ಪಾಟೀಲ್
ಬಿಜೆಪಿ- ಅಮರನಾಥ ಪಾಟೀಲ್

ಬೆಂಗಳೂರು ಪದವೀಧರ ಕ್ಷೇತ್ರ
ಕಾಂಗ್ರೆಸ್-ರಾಮೋಜಿ ಗೌಡ
ಬಿಜೆಪಿ-ಅ.ದೇವೇಗೌಡ

ನೈಋತ್ಯ ಪದವೀಧರ ಕ್ಷೇತ್ರ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್ ಕಣಕ್ಕಿಳಿದಿದ್ದಾರೆ. ಇವರನ್ನು ಬಿಜೆಪಿ ಇತ್ತೀಚೆಗೆ ಉಚ್ಚಾಟನೆ ಮಾಡಿದೆ. ಅಗ್ನೇಯ ಶಿಕ್ಷಕರ ಕ್ಷೇತ್ರದಿಂದ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಸ್ಪರ್ಧಿಸಿದ್ದಾರೆ.

ಇದನ್ನೂ ಓದಿ : ವಿಧಾನ ಪರಿಷತ್‌ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...