Homeಮುಖಪುಟ96 ಲೋಕಸಭಾ ಕ್ಷೇತ್ರಗಳಲ್ಲಿ 4ನೇ ಹಂತದ ಮತದಾನ ಆರಂಭ: ಆಂಧ್ರ, ಒಡಿಶಾ ವಿಧಾನಸಭೆಗೂ ಮತದಾನ

96 ಲೋಕಸಭಾ ಕ್ಷೇತ್ರಗಳಲ್ಲಿ 4ನೇ ಹಂತದ ಮತದಾನ ಆರಂಭ: ಆಂಧ್ರ, ಒಡಿಶಾ ವಿಧಾನಸಭೆಗೂ ಮತದಾನ

- Advertisement -
- Advertisement -

ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಆರಂಭವಾಗಿದೆ. 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 96 ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದು, ಮತಪೆಟ್ಟಿಗೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರವಾಗುತ್ತಿದೆ. ಇದರ ಜೊತೆಗೆ ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಮತ್ತು ಒಡಿಶಾದ 28 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ಮತದಾನವು ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. 96 ಕ್ಷೇತ್ರಗಳಲ್ಲಿ ಒಟ್ಟು 1,717 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆಂಧ್ರಪ್ರದೇಶದ 25, ತೆಲಂಗಾಣದ 17, ಉತ್ತರಪ್ರದೇಶದ 13, ಮಹಾರಾಷ್ಟ್ರದ 11 ಮಧ್ಯಪ್ರದೇಶ ಹಾಗೂ ಪಶ್ಚಿಮಬಂಗಾಳದ ತಲಾ 4 ಕ್ಷೇತ್ರಗಳು, ಬಿಹಾರದ 5 ಸ್ಥಾನಗಳು, ಜಾರ್ಖಂಡ್ ಹಾಗೂ ಒಡಿಶಾದ ಮತ್ತು ಜಮ್ಮುಕಾಶ್ಮೀರದ ಒಂದು ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ.

3 ಹಂತಗಳಲ್ಲಿ ಈವರೆಗೆ ಒಟ್ಟು 285 ಕ್ಷೇತ್ರಳಿಗೆ ಮತದಾನವಾಗಿದೆ. ಚುನಾವಣಾ ಆಯೋಗವು ಶನಿವಾರ ಅಧಿಕೃತ ಅಧಿಸೂಚನೆಯೊಂದನ್ನು ಹೊರಡಿಸಿ ಲೋಕಸಭಾ ಚುನಾವಣೆ 3ನೇ ಹಂತದಲ್ಲಿ 65.68 ಶೇ. ಮತದಾನವಾಗಿರುವುದಾಗಿ ಹೇಳಿದೆ.

ಆಂಧ್ರಪ್ರದೇಶದ ಎಲ್ಲಾ 25 ಲೋಕಸಭಾ ಕ್ಷೇತ್ರಗಳ ಜೊತೆಗೆ 175 ವಿಧಾನಸಭಾ ಕ್ಷೇತ್ರಗಳಿಗೂ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ತೆಲಂಗಾಣದ ಎಲ್ಲಾ 17 ಲೋಕಸಭಾ ಕ್ಷೇತ್ರಗಳಿಗೂ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ.

ಅಸಾದುದ್ದೀನ್ ಉವೈಸಿ (ಎಐಎಂಐಎಂ)- ಹೈದರಾಬಾದ್, ಅಖಿಲೇಶ್ ಯಾದವ್ (ಎಸ್ಪಿ) -ಕನೌಜ್,ಮಹುವಾ ಮೊಯಿತ್ರಾ(ಟಿಎಂಸಿ)- ಕೃಷ್ಣನಗರ, ವೈ.ಎಸ್.ಶರ್ಮಿಳಾ ರೆಡ್ಡಿ (ಕಾಂಗ್ರೆಸ್) -ಕಡಪ, ಅಧೀರ್ ರಂಜನ್ ಚೌಧರಿ (ಕಾಂಗ್ರೆಸ್), ಯೂಸುಫ್ ಪಠಾಣ್ (ಟಿಎಂಸಿ) – ಬೆಹ್ರಾಂಪುರ, ಶತ್ರುಘ್ನಸಿನ್ಹಾ (ಟಿಎಂಸಿ)-ಅಸಾನ್‌ಸೊಲ್ ಸೇರಿದಂತೆ ಹಲವು ಪ್ರಮುಖರು ಕಣದಲ್ಲಿದ್ದಾರೆ.

4ನೇ ಹಂತದ ಮತದಾನ ಮುಗಿಯುತ್ತಿದ್ದಂತೆ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 379 ಸ್ಥಾನಗಳಿಗೆ ಮತದಾನವು ಪೂರ್ಣಗೊಳ್ಳುತ್ತದೆ. ಮತಗಳ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದೆ.

4ನೇ ಹಂತದ ಮತದಾನದಲ್ಲಿ 17.7ಕೋಟಿಗೂ ಹೆಚ್ಚು ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ.  ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 19 ಲಕ್ಷಕ್ಕೂ ಹೆಚ್ಚು ಮತಗಟ್ಟೆ ಅಧಿಕಾರಿಗಳನ್ನು ಕರ್ತವ್ಯಕ್ಕೆ ನೇಮಿಸಲಾಗಿದೆ. 1.92 ಲಕ್ಷ ಮತಗಟ್ಟೆಗಳನ್ನು ನಿರ್ಮಿಸಲಾಗಿದೆ.

ನಟ ಅಲ್ಲು ಅರ್ಜುನ್ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ಮತಗಟ್ಟೆಯಲ್ಲಿ ಮತದಾನ  ಮಾಡಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅಲ್ಲು ಅರ್ಜುನ್, ಎಲ್ಲರೂ ಮತ ಚಲಾಯಿಸಿ. ಮತದಾನ ಮಾಡುವುದು ದೇಶದ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಮುಂದಿನ ಐದು ವರ್ಷಕ್ಕೆ ಇದು ಪ್ರಮುಖ ದಿನವಾಗಿದೆ ಎಂದು ಹೇಳಿದ್ದಾರೆ.

ಹೈದರಾಬಾದ್‌ನಲ್ಲಿ ಮತ ಚಲಾಯಿಸಿದ ನಂತರ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಾತನಾಡಿ, ಬಿಜೆಪಿಯ ಸಿದ್ಧಾಂತ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ಪ್ರಧಾನಿ ಮೋದಿ ನೀಡಿರುವ ಹೇಳಿಕೆಗಳನ್ನು ಜನರು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: “ಕೇಜ್ರಿವಾಲ್ ಕಿ ಗ್ಯಾರಂಟಿ” ಘೋಷಣೆ: ಉಚಿತ ವಿದ್ಯುತ್‌ ಸೇರಿ 10 ಗ್ಯಾರೆಂಟಿಗಳನ್ನು ಘೋಷಿಸಿದ ಅರವಿಂದ್‌ ಕೇಜ್ರಿವಾಲ್‌

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...