‘ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ’ ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಶನಿವಾರ (ಜೂ.20) ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿ ಬೃಹತ್ ಪ್ರತಿರೋಧ ಸಮಾವೇಶದಲ್ಲಿ ಅವರು ಮಾತನಾಡಿದರು.
ಇದು ರಾಜಕೀಯ ಸಭೆಯಲ್ಲ, ಸಾರ್ವಜನಿಕರ, ಸಂವಿಧಾನ ಪ್ರೇಮಿಗಳ ದೇಶ ಪ್ರೇಮಿಗಳ ಸಭೆಯಾಗಿದೆ. ಎಸ್ಐಆರ್ ಪ್ರಕ್ರಿಯೆಯಲ್ಲ ನಾವೆಲ್ಲರೂ ಭಾಗವಹಿಸಿ ಅಗತ್ಯ ದಾಖಲೆಗಳನ್ನು ಹೊಂದಿಸಿಕೊಂಡು ಬಗ್ಗೆ ಜಾಗೃತಿ ಮೂಡಿಸಲು ನಾವಿಲ್ಲಿ ಜಮಾಯಿಸಿದ್ದೇವೆ ಎಂದು ಸಮಾವೇಶದ ಕುರಿತು ಅವರು ಹೇಳಿದರು.
ಮತದಾರರ ಪಟ್ಟಿಯ ಪರಿಷ್ಕರಣೆಗೆ ನಾವು ಸಹಕಾರ ಕೋಡುತ್ತೇವೆ. ಆದರೆ, ಕೆಲವರು ಹೆಸರನ್ನ ತೆಗೆಯುವುದು, ಕೆಲವರ ಹೆಸರು ಉಳಿಸುವಂತೆ ಆಗದಂತೆ ನೋಡಿಕೊಳ್ಳಬೇಕು. ಒಬ್ಬರೇ ಒಬ್ಬರು ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಹೊರಗಿಡದಂತೆ ನೋಡಿಕೊಳ್ಳಬೆಕು ಎಂದರೆ.
ʼಚುನಾವಣಾ ಆಯೋಗಕ್ಕೆʼ ಪ್ರತಿರೋಧ ಸಮಾವೇಶದ ಆಗ್ರಹಗಳು:
- ಅತಾರ್ತಿಕ ʼಲಾಜಿಕಲ್ ಡಿಸ್ಕ್ರಿಪೆನ್ಸಿʼ ಸಾಫ್ಟ್ವೇರ್ ಅನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಳಸಬಾರದು.
- ನೀವು ತಯಾರಿಸುವ ಮತದಾರರ ಪಟ್ಟಿಯ ಕರಡು ಪ್ರತಿಯನ್ನು (ಪರಿಶೀಲನೆಗೆ ಅವಕಾಶವಿರುವಂತೆ) ಕಂಪ್ಯೂಟರ್ ಓದುವ ಮಾದರಿಯಲ್ಲಿ ಕೊಡಬೇಕು.
- ಚುನಾವಣಾ ಮ್ಯಾನ್ಯೂಯಲ್ನಲ್ಲಿ ನೀಡಲಾಗಿರುವ ನಿರ್ದೇಶನದಂತೆ, ಕರಡು ಮತದಾರರ ಪಟ್ಟಿಯನ್ನು ಗ್ರಾಮ ಸಭೆ ಹಾಗೂ ವಾರ್ಡ್ ಸಭೆಗಳನ್ನು ಕರೆದು ಸಾರ್ವಜನಿಕ ಪರಿಶೀಲನೆಗೆ ಮತ್ತು ತಿದ್ದುಪಡಿಗೆ ಒಳಪಡಿಸಬೇಕು.
- ಅಪೀಲ್ ಸಲ್ಲಿಸಲು ಕನಿಷ್ಟ ಆರು ತಿಂಗಳ ಸಮಯಾವಕಾಶ ನೀಡಲೇ ಬೇಕು.
‘ರಾಜ್ಯ ಸರಕಾರಕ್ಕೆʼ ಪ್ರತಿರೋಧ ಸಮಾವೇಶದ ಆಗ್ರಹಗಳು:
- ಸರಳ ವಿಧಾನ ಬಳಸಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ, ಚೆಕ್ ಲಿಸ್ಟ್ ರೀತಿ ಕೆಲಸ ಮಾಡುವ, ರಾಜ್ಯದ ಸ್ವಾಲಂಬಿ ಅರ್ಹ ಮತದಾರರ ಪಟ್ಟಿಯನ್ನು ತಯಾರಿಸಬೇಕು.
- ಅರ್ಹ ಮತದಾರರಿಗೆ ಗ್ಯಾರಂಟಿಯಾಗಿ ಸ್ಮಾರ್ಟ್ ಕಾರ್ಡ್ ವಿತರಿಸಬೇಕು.
- ಎಸ್ಐಆರ್ ಕೇಳುವ ದಾಖಲೆಗಳಲ್ಲಿದ ಅರ್ಹ ಮತದಾರರಿಗೆ ಸ್ಥಳದಲ್ಲೇ ಅಗತ್ಯ ದಾಖಲೆ ಒದಗಿಸಬೇಕು.


