Homeಮುಖಪುಟಉಕ್ರೇನ್‌ನಿಂದ ರಷ್ಯಾ ಪಡೆ ಹಿಂತೆಗೆದುಕೊಳ್ಳುವ ನಿರ್ಣಯದ ಮೇಲೆ ಮತದಾನ: ದೂರ ಉಳಿದ ಭಾರತ

ಉಕ್ರೇನ್‌ನಿಂದ ರಷ್ಯಾ ಪಡೆ ಹಿಂತೆಗೆದುಕೊಳ್ಳುವ ನಿರ್ಣಯದ ಮೇಲೆ ಮತದಾನ: ದೂರ ಉಳಿದ ಭಾರತ

- Advertisement -
- Advertisement -

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಗುರುವಾರ ಉಕ್ರೇನ್‌ನಿಂದ ರಷ್ಯಾದ ಪಡೆಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳಬೇಕು ಎಂಬ ನಿರ್ಣಯದ ಮೇಲೆ ಮತದಾನ ನಡೆಯಿತು ಆದರೆ ಭಾರತ ಮಾತ್ರ ಈ ಮತದಾನದಿಂದ ದೂರ ಉಳಿದಿದೆ.

ನಿಖರವಾಗಿ ಇಂದಿಗೆ ಒಂದು ವರ್ಷದ ಹಿಂದೆ ಅಂದರೆ ಫೆಬ್ರವರಿ 24, 2022ರಂದು ರಷ್ಯಾ ಉಕ್ರೇನ್ಅನ್ನು ಆಕ್ರಮಿಸಿತು. ಇದು ವಿಶ್ವಯುದ್ಧ IIರ ನಂತರ ಯುರೋಪಿನಲ್ಲಿ ನಡೆದ ಅತ್ಯಂತ ಮಾರಕ ಸಂಘರ್ಷವಾಗಿದೆ. ವಿದೇಶಿ ದಾಳಿಗಳ ವೇದಿಕೆಯಾಗಿ ಕೈವ್ಅನ್ನು ಬಳಸದಂತೆ ತಡೆಯಲು ಇದು ವಿಶೇಷ ಮಿಲಿಟರಿ ಕಾರ್ಯಾಚರಣೆ ಎಂದು ರಷ್ಯಾ ಸಮರ್ಥಿಸಿಕೊಂಡಿತ್ತು. ಆದರೆ ಉಕ್ರೇನ್ ಮತ್ತು ಅದರ ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳು, ಇದು ಸಾಮ್ರಾಜ್ಯಶಾಹಿ ಶೈಲಿಯ ಆಕ್ರಮಣದ ಯುದ್ಧ ಎಂದು ಹೇಳುತ್ತವೆ.

ಇದನ್ನೂ ಓದಿ: ಉಕ್ರೇನ್‌ಗೆ ಪರಮಾಣು ಬೆದರಿಕೆಯೊಡ್ಡಿದ ರಷ್ಯಾ; ಶಾಂತಿ ಮಾತುಕತೆ ನಡೆಸಲು ಉಭಯ ರಾಷ್ಟ್ರಗಳಿಗೆ ಚೀನಾ ಕರೆ

ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿ, ಭದ್ರತಾ ಮಂಡಳಿ ಮತ್ತು ಮಾನವ ಹಕ್ಕುಗಳ ಮಂಡಳಿಯಲ್ಲಿ ಹಲವಾರು ನಿರ್ಣಯಗಳು ಆಕ್ರಮಣವನ್ನು ಖಂಡಿಸಿವೆ ಮತ್ತು ಉಕ್ರೇನ್‌ನ ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವಂತೆ ಕರೆ ನೀಡಿವೆ. ಭಾರತವು ಅಂತಹ ಹೆಚ್ಚಿನ ನಿರ್ಣಯಗಳಿಂದ ದೂರವಿದೆ.

ಉಕ್ರೇನ್‌ನಿಂದ ರಷ್ಯಾದ ಪಡೆಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳಬೇಕೆಂಬ ನಿರ್ಣಯದ ಮೇಲೆ ನಡೆದ ಮತದಾನದಲ್ಲಿ 141 ಮತಗಳು ದಾಖಲಾದವು. ಆ ನಂತರ ಗುರುವಾರ ನಡೆದ ಸಾಮಾನ್ಯ ಸಭೆ ನಿರ್ಣಯವನ್ನು ಅಂಗೀಕರಿಸಿತು. ನಿರ್ಣಯದ ವಿರುದ್ಧ ಏಳು ದೇಶಗಳು ಮತ ಚಲಾಯಿಸಿದವು ಮತ್ತು ಭಾರತ ಸೇರಿದಂತೆ 32 ದೇಶಗಳು ಮತದಾನದಿಂದ ದೂರ ಉಳಿದಿವೆ.

ಈ ನಿರ್ಣಯವು ”ರಷ್ಯಾದ ಒಕ್ಕೂಟವು ತಕ್ಷಣವೇ, ಸಂಪೂರ್ಣವಾಗಿ ಮತ್ತು ಬೇಷರತ್ತಾಗಿ ತನ್ನ ಎಲ್ಲಾ ಮಿಲಿಟರಿ ಪಡೆಗಳನ್ನು ಅಂತರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ತನ್ನ ಗಡಿಯೊಳಗೆ ಉಕ್ರೇನ್ ಪ್ರದೇಶದಿಂದ ಹಿಂತೆಗೆದುಕೊಳ್ಳಬೇಕು” ಮತ್ತು ಈ ಯುದ್ಧವನ್ನು ನಿಲ್ಲಿಸುವಂತೆ ಒತ್ತಾಯಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...