Homeಕರ್ನಾಟಕಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮಿ ವಿವಾದ

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮಿ ವಿವಾದ

ಪಾಳೆಗಾರಿ ಸ್ವಾಮಿ ಮುಂದೆ ದಲಿತರಿಗೂ ಹೀಗೆ ಹೇಳುತ್ತಾರೆ ಎಂದು ಆಕ್ರೋಶ

- Advertisement -
- Advertisement -

ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮಿ ಅವರು ವಿವಾದಿತ ಹೇಳಿಕೆ ನೀಡಿದ್ದಾರೆ. ಅವರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಇಂದು ಮುಸ್ಲಿಮರಿಗೆ ಹೀಗೆ ಹೇಳುತ್ತಾರೆ, ಮುಂದಿನ ದಿನಗಳಲ್ಲಿ ಈ ಪಾಳೇಗಾರಿ ಮನಸ್ಥಿತಿಯ ಸ್ವಾಮಿಗಳು ನಮ್ಮ ಮಾತು ಕೇಳುತ್ತಿಲ್ಲ ಎಂದು ಇಲ್ಲಿನ ಹಿಂದುಳಿದ ವರ್ಗಗಳ ಇತರ ಸಮುದಾಯಗಳಿಗೆ ಮತ್ತು ದಲಿತರಿಗೂ ಹೀಗೆ ಹೇಳುತ್ತಾರೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.

ವಕ್ಫ್ ಕಾಯಿದೆ ವಿರುದ್ಧವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿಯ ಸಹ ಸಂಘಟನೆಯಾದ ಭಾರತೀಯ ಕಿಸಾನ್ ಸಂಘ ಆಯೋಜಿಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿ ಅವರು ಮಾತನಾಡುತ್ತಿದ್ದರು. ಪ್ರತಿಭಟನೆಯಲ್ಲಿ ಮಾತನಾಡಿದ ಚಂದ್ರಶೇಖರ ಅವರು, “ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು. ಮುಸ್ಲಿಂ ಜನಾಂಗಕ್ಕೆ ಮತದಾನದ ಹಕ್ಕೇ ಇಲ್ಲದಂತೆ ಕಾನೂನು ಮಾಡಿದರೆ ಎಲ್ಲವೂ ಸರಿಯಾಗುತ್ತದೆ. ಖಂಡಿತ ಅದನ್ನು ಮಾಡಬೇಕು” ಎಂದು ಹೇಳಿದ್ದಾರೆ. ಮುಸ್ಲಿಮರಿಗೆ ಮತದಾನದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ ಮತದಾನ ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ” ಎಂದು ಅವರು ಹೇಳಿದ್ದಾರೆ. ಚಂದ್ರಶೇಖರ್ ಅವರ ಈ ಹೇಳಿಕೆ ಸುಳ್ಳಾಗಿದ್ದು, ಪಾಕಿಸ್ತಾನದಲ್ಲಿ ಎಲ್ಲಾ ಸಮುದಾಯಗಳಿಗೆ ಮತದಾನದ ಹಕ್ಕು ಇವೆ. 

ಈ ಹಿಂದೆಯೂ ಚಂದ್ರಶೇಖರ ಅವರು ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗಿದ್ದರು. “ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಇಬ್ಭಾಗವಾಗಬೇಕು. ಹಾಗಾದರೆ ಮಾತ್ರ ಉತ್ತರ ಕರ್ನಾಟಕ ಅಭಿವೃದ್ಧಿ ಸಾಧ್ಯ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಚಂದ್ರಶೇಖರ ಅವರ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಇವೆಲ್ಲಾ ಉತ್ತರ ಪ್ರದೇಶದಿಂದ ಆಮದಾಗಿರುವ ಮಾತುಗಳಾಗಿವೆ, ಮೋದಿ ಮತ್ತು ಅಮಿತ್ ಶಾ ಅವರನ್ನು ಮೆಚ್ಚಿಸಲು ಈ ಸ್ವಾಮಿಗಳು ನೋಡುತ್ತಿದ್ದಾರೆ. ಇಂದು ಮುಸ್ಲಿಮರಿಗೆ ಹೀಗೆ ಹೇಳುತ್ತಾರೆ, ಮುಂದಿನ ದಿನಗಳಲ್ಲಿ ಈ ಪಾಳೇಗಾರಿ ಸ್ವಾಮಿಗಳು ನಮ್ಮ ಮಾತು ಕೇಳುತ್ತಿಲ್ಲ ಎಂದು ಇಲ್ಲಿನ ಹಿಂದುಳಿದ ಇತರ ವರ್ಗಗಳು, ಮಹಿಳೆಯರಿಗೆ ಮತ್ತು ದಲಿತರಿಗೂ ಹೀಗೆ ಹೇಳುತ್ತಾರೆ ಎಂದು ದಲಿತ ಹೋರಾಟಗಾರರೊಬ್ಬರು ಹೇಳಿದ್ದಾರೆ.

“ಈ ಹಿಂದೆ ಉತ್ತರದಲ್ಲಿ ಈ ರೀತಿಯಾಗಿ ಸ್ವಾಮಿಗಳು ಕೋಮು ಉದ್ರೇಕಕಾರಿ ಹೇಳಿಕೆಗಳನ್ನು ನೀಡುತ್ತಿದ್ದರು. ಅವರನ್ನು ರಾಜಕೀಯ ನಾಯಕರು ಬಳಸಿಕೊಂಡು ಅವರಿಗೆ ಅಧಿಕಾರ ನೀಡಿದ್ದರು. ಇದೀಗ ಅಧಿಕಾರಕ್ಕಾಗಿ ದಕ್ಷಿಣದ ಸ್ವಾಮಿಜಿಗಳು ಕೂಡಾ ಅದೇ ದಾರಿಯಲ್ಲಿ ಮೋದಿ ಮತ್ತು ಅಮಿತ್ ಶಾ ಅವರನ್ನು ಮೆಚ್ಚಿಸಲು ನೋಡುತ್ತಿದ್ದಾರೆ. ಆದರೆ ಇದು ಕರ್ನಾಟಕವಾಗಿದ್ದು, ಇಲ್ಲಿನ ಸಂಸ್ಕೃತಿ ಮತ್ತು ಪರಂಪರೆ ಅವರನ್ನು ಒಪ್ಪುವುದಿಲ್ಲ” ಎಂದು ದಲಿತ ಹಕ್ಕುಗಳ ಹೋರಾಟಗಾರ ರವಿಕುಮಾರ್ ಅವರು ಹೇಳಿದ್ದಾರೆ.

ಉದಯ್ ಕುಮಾರ್ ಎಂಬ ಟ್ವಿಟರ್‌ ಬಳಕೆದಾರರೊಬ್ಬರು “ಖಾವಿದಾರಿ ಸ್ವಾಮಿಗಳಿಗೆ ಮಾತಾಡುವ ಹಕ್ಕು ಇಲ್ಲದಂತೆ ಮಾಡಬೇಕು. ಇಂದು ಮುಸ್ಲಿಂಮರಿಗೆ ಹೇಳುತ್ತಾರೆ. ನಾಳೆ ದಲಿತರಿಗೆ ಹೇಳುತ್ತಾರೆ. ಇವರು ಮನುವಾದಿಗಳು” ಎಂದು ಕೆಲವರು ಟೀಕಿಸಿದ್ದಾರೆ.

ಇದನ್ನೂ ಓದಿ: ಶಾಸಕರು, ಸಂಸದರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಶಾಸಕರು, ಸಂಸದರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...