Homeಕರ್ನಾಟಕನಾಳೆ ಮತದಾನ: ಟ್ವಿಟರ್‌ನಲ್ಲಿ ಇಂದೇ #ByeByeBJP ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ನಾಳೆ ಮತದಾನ: ಟ್ವಿಟರ್‌ನಲ್ಲಿ ಇಂದೇ #ByeByeBJP ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

- Advertisement -
- Advertisement -

ರಾಜ್ಯ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರ ಸೋಮವಾರ ಸಂಜೆಗೆ ಅಂತ್ಯವಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ #ByeByeBJP ಎನ್ನುವ ಹ್ಯಾಶ್‌ಟ್ಯಾಗ್‌ ಬಳಸಿ ಟ್ವಿಟರ್‌ ಅಭಿಯಾನ ಆರಂಭವಾಗಿದೆ.

ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಹೇಳುವ ವಿಡಿಯೊ, ಚಿತ್ರ, ವ್ಯಂಗ್ಯಚಿತ್ರ, ಮಾಧ್ಯಮ ವರದಿ ಹಾಗೂ ಬರಹಗಳನ್ನು ಟ್ವೀಟ್‌ ಮಾಡಿ ಈ ಹ್ಯಾಶ್‌ಟ್ಯಾಗ್‌ ಬಳಸಲಾಗುತ್ತಿದೆ.

ಶೇ 40 ಕಮೀಷನ್‌ ಸರ್ಕಾರಕ್ಕೆ ನನ್ನ ಮತ ಇಲ್ಲ ಎನ್ನುವ ಪೋಸ್ಟರ್ ಹಿಡಿದಿರುವ ಜನರ ವಿಡಿಯೊ ಹೆಚ್ಚು ಹರಿದಾಡುತ್ತಿದೆ.

ಬಿಜೆಪಿ ನಾಯಕರ ದ್ವೇಷ ಭಾಷಣ, ಕೋಮು ಗಲಭೆ, ನಂದಿನಿ ವಿವಾದ, ಪೇಸಿಎಂ, ರಸ್ತೆಗುಂಡಿ, ಹಿಜಾಬ್‌ ವಿವಾದ, ನಿರುದ್ಯೋಗ, ಶೇ 40 ಕಮಿಷನ್‌ ಮುಂತಾದ ವಿಷಯಗಳನ್ನು ಪ್ರಸ್ತಾಪಿಸಿ ಟ್ವಿಟರ್‌ ಅಭಿಯಾನ ನಡೆಯುತ್ತಿದೆ.

ರಾಜ್ಯ ಕಾಂಗ್ರೆಸ್‌ ಘಟಕ, ಭಾರತೀಯ ಯುವ ಕಾಂಗ್ರೆಸ್, ಕೇರಳ ಕಾಂಗ್ರೆಸ್‌ ಸೇವಾದಳ, ಜಾನ್ಸಿ ಕಾಂಗ್ರೆಸ್‌ ಸೇವಾದಳ, ದೇಶದ ಕಾಂಗ್ರೆಸ್‌ ನಾಯಕರು, ವಕ್ತಾರರು ಟ್ವೀಟ್‌ ಮಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

”ಕಳೆದ ನಾಲ್ಕು ವರ್ಷಗಳಿಂದ ಕರ್ನಾಟಕವನ್ನು ಕೋವಿಡ್ ವೈರಸ್ಸಿಗಿಂತಲೂ ಕ್ರೂರವಾಗಿ ಪೀಡಿಸಿದ ಬಿಜೆಪಿ ಸರ್ಕಾರದ ಅಂತ್ಯ ಸಮೀಪಿಸಿದೆ. ಕರ್ನಾಟಕಕ್ಕೆ ಕಾಡುತ್ತಿದ್ದ 40% ಕಮಿಷನ್ ಪಿಡುಗು ತೊಲಗಲಿದೆ, ಮುಂದೆ ಕಾಂಗ್ರೆಸ್ ನೇತೃತದಲ್ಲಿದೆ ಕರ್ನಾಟಕ ಪ್ರಗತಿಯತ್ತ ಸಾಗಲಿದೆ. #ByeByeBJP” ಎಂದು ಟ್ವೀಟ್ ಮಾಡಿದೆ.

”ರಸ್ತೆಗುಂಡಿಗಳಿಗೆ 30ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ 40% ಕಮಿಷನ್ನಿನ ಭ್ರಷ್ಟ ಬಿಜೆಪಿ ಸರ್ಕಾರ ತೊಲಗುವ ಸಮಯ ಬಂದಿದೆ. ಇನ್ಮುಂದೆ ಕಮಿಷನ್ ರಹಿತ, ಭ್ರಷ್ಟಾಚಾರ ರಹಿತ ಸರ್ಕಾರಕ್ಕಾಗಿ ಕಾಂಗ್ರೆಸ್ ಬೆಂಬಲಿಸಿ. ಕರ್ನಾಟಕದ ಪ್ರತಿಯೊಬ್ಬರ ಕಾಳಜಿಯೂ ಇನ್ಮುಂದೆ ಕಾಂಗ್ರೆಸ್ ಸರ್ಕಾರದ ಹೊಣೆ. #ByeByeBJP” ಎಂದು ಟ್ವೀಟ್ ಮಾಡಿದೆ.

”ನಮ್ಮ ಬ್ಯಾಂಕುಗಳು ನಮ್ಮ ಸಂಸ್ಥೆಗಳು ನಮ್ಮ ಕೆಎಂಎಫ್ ನಮ್ಮ ನಂದಿನಿ ಎಲ್ಲವೂ ನಮ್ಮ ಅಸ್ಮಿತೆಯ ಸಂಕೇತಗಳು! ಕನ್ನಡಿಗರ ಅಸ್ಮಿತೆಯನ್ನು ಕಾಪಾಡೋಣ! 40% ಸರ್ಕಾರಕ್ಕೆ #ByeByeBJP ಹೇಳೋಣ” ಎಂದು ಟ್ವೀಟ್ ಮಾಡಿದೆ.

”ಕೋರೋನ ಸಮಯದಲ್ಲಿ ಅನುಭವಿಸಿದ್ದು ಸಾಕು ಹಗರಣಗಳನ್ನು ನೋಡಿದ್ದೂ ಸಾಕು ಹಗರಣಗಳಿಗೆ ಮುಕ್ತಿ ಹಾಡೋಣ! 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದು ಟ್ವೀಟ್ ಮಾಡಿದೆ.

”40% ಕಮಿಷನ್ ತೆಗೆದುಕೊಳ್ಳುವ ಪೇಸಿಎಂ ತೊಲಗಿಸೋಣ ರಾಜ್ಯವನ್ನು ಪ್ರಗತಿಯ ಹಾದಿಗೆ ಮರಳಿ ತರೋಣ 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದಿದ್ದಾರೆ.

”ಉದ್ಯೋಗಕ್ಕೂ ಲಂಚ ಅಥವಾ ಮಂಚ ಈ ಲಂಚ ಮಂಚದ ಸರ್ಕಾರ ತೊಲಗಿಸಿಸೋಣ 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದು ಕರೆ ಕೊಟ್ಟಿದ್ದಾರೆ.

”ಸುಳ್ಳು ಭಾಷಣ ಸಾಕು ಪೊಳ್ಳು ಭರವಸೆಯೂ ಸಾಕು ಅಭಿವೃದ್ಧಿಯ ಆಡಳಿತಕ್ಕೆ ಮತ ನೀಡೋಣ! 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....