Homeಕರ್ನಾಟಕನಾಳೆ ಮತದಾನ: ಟ್ವಿಟರ್‌ನಲ್ಲಿ ಇಂದೇ #ByeByeBJP ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ನಾಳೆ ಮತದಾನ: ಟ್ವಿಟರ್‌ನಲ್ಲಿ ಇಂದೇ #ByeByeBJP ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

- Advertisement -
- Advertisement -

ರಾಜ್ಯ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರ ಸೋಮವಾರ ಸಂಜೆಗೆ ಅಂತ್ಯವಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ #ByeByeBJP ಎನ್ನುವ ಹ್ಯಾಶ್‌ಟ್ಯಾಗ್‌ ಬಳಸಿ ಟ್ವಿಟರ್‌ ಅಭಿಯಾನ ಆರಂಭವಾಗಿದೆ.

ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಹೇಳುವ ವಿಡಿಯೊ, ಚಿತ್ರ, ವ್ಯಂಗ್ಯಚಿತ್ರ, ಮಾಧ್ಯಮ ವರದಿ ಹಾಗೂ ಬರಹಗಳನ್ನು ಟ್ವೀಟ್‌ ಮಾಡಿ ಈ ಹ್ಯಾಶ್‌ಟ್ಯಾಗ್‌ ಬಳಸಲಾಗುತ್ತಿದೆ.

ಶೇ 40 ಕಮೀಷನ್‌ ಸರ್ಕಾರಕ್ಕೆ ನನ್ನ ಮತ ಇಲ್ಲ ಎನ್ನುವ ಪೋಸ್ಟರ್ ಹಿಡಿದಿರುವ ಜನರ ವಿಡಿಯೊ ಹೆಚ್ಚು ಹರಿದಾಡುತ್ತಿದೆ.

ಬಿಜೆಪಿ ನಾಯಕರ ದ್ವೇಷ ಭಾಷಣ, ಕೋಮು ಗಲಭೆ, ನಂದಿನಿ ವಿವಾದ, ಪೇಸಿಎಂ, ರಸ್ತೆಗುಂಡಿ, ಹಿಜಾಬ್‌ ವಿವಾದ, ನಿರುದ್ಯೋಗ, ಶೇ 40 ಕಮಿಷನ್‌ ಮುಂತಾದ ವಿಷಯಗಳನ್ನು ಪ್ರಸ್ತಾಪಿಸಿ ಟ್ವಿಟರ್‌ ಅಭಿಯಾನ ನಡೆಯುತ್ತಿದೆ.

ರಾಜ್ಯ ಕಾಂಗ್ರೆಸ್‌ ಘಟಕ, ಭಾರತೀಯ ಯುವ ಕಾಂಗ್ರೆಸ್, ಕೇರಳ ಕಾಂಗ್ರೆಸ್‌ ಸೇವಾದಳ, ಜಾನ್ಸಿ ಕಾಂಗ್ರೆಸ್‌ ಸೇವಾದಳ, ದೇಶದ ಕಾಂಗ್ರೆಸ್‌ ನಾಯಕರು, ವಕ್ತಾರರು ಟ್ವೀಟ್‌ ಮಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

”ಕಳೆದ ನಾಲ್ಕು ವರ್ಷಗಳಿಂದ ಕರ್ನಾಟಕವನ್ನು ಕೋವಿಡ್ ವೈರಸ್ಸಿಗಿಂತಲೂ ಕ್ರೂರವಾಗಿ ಪೀಡಿಸಿದ ಬಿಜೆಪಿ ಸರ್ಕಾರದ ಅಂತ್ಯ ಸಮೀಪಿಸಿದೆ. ಕರ್ನಾಟಕಕ್ಕೆ ಕಾಡುತ್ತಿದ್ದ 40% ಕಮಿಷನ್ ಪಿಡುಗು ತೊಲಗಲಿದೆ, ಮುಂದೆ ಕಾಂಗ್ರೆಸ್ ನೇತೃತದಲ್ಲಿದೆ ಕರ್ನಾಟಕ ಪ್ರಗತಿಯತ್ತ ಸಾಗಲಿದೆ. #ByeByeBJP” ಎಂದು ಟ್ವೀಟ್ ಮಾಡಿದೆ.

”ರಸ್ತೆಗುಂಡಿಗಳಿಗೆ 30ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ 40% ಕಮಿಷನ್ನಿನ ಭ್ರಷ್ಟ ಬಿಜೆಪಿ ಸರ್ಕಾರ ತೊಲಗುವ ಸಮಯ ಬಂದಿದೆ. ಇನ್ಮುಂದೆ ಕಮಿಷನ್ ರಹಿತ, ಭ್ರಷ್ಟಾಚಾರ ರಹಿತ ಸರ್ಕಾರಕ್ಕಾಗಿ ಕಾಂಗ್ರೆಸ್ ಬೆಂಬಲಿಸಿ. ಕರ್ನಾಟಕದ ಪ್ರತಿಯೊಬ್ಬರ ಕಾಳಜಿಯೂ ಇನ್ಮುಂದೆ ಕಾಂಗ್ರೆಸ್ ಸರ್ಕಾರದ ಹೊಣೆ. #ByeByeBJP” ಎಂದು ಟ್ವೀಟ್ ಮಾಡಿದೆ.

”ನಮ್ಮ ಬ್ಯಾಂಕುಗಳು ನಮ್ಮ ಸಂಸ್ಥೆಗಳು ನಮ್ಮ ಕೆಎಂಎಫ್ ನಮ್ಮ ನಂದಿನಿ ಎಲ್ಲವೂ ನಮ್ಮ ಅಸ್ಮಿತೆಯ ಸಂಕೇತಗಳು! ಕನ್ನಡಿಗರ ಅಸ್ಮಿತೆಯನ್ನು ಕಾಪಾಡೋಣ! 40% ಸರ್ಕಾರಕ್ಕೆ #ByeByeBJP ಹೇಳೋಣ” ಎಂದು ಟ್ವೀಟ್ ಮಾಡಿದೆ.

”ಕೋರೋನ ಸಮಯದಲ್ಲಿ ಅನುಭವಿಸಿದ್ದು ಸಾಕು ಹಗರಣಗಳನ್ನು ನೋಡಿದ್ದೂ ಸಾಕು ಹಗರಣಗಳಿಗೆ ಮುಕ್ತಿ ಹಾಡೋಣ! 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದು ಟ್ವೀಟ್ ಮಾಡಿದೆ.

”40% ಕಮಿಷನ್ ತೆಗೆದುಕೊಳ್ಳುವ ಪೇಸಿಎಂ ತೊಲಗಿಸೋಣ ರಾಜ್ಯವನ್ನು ಪ್ರಗತಿಯ ಹಾದಿಗೆ ಮರಳಿ ತರೋಣ 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದಿದ್ದಾರೆ.

”ಉದ್ಯೋಗಕ್ಕೂ ಲಂಚ ಅಥವಾ ಮಂಚ ಈ ಲಂಚ ಮಂಚದ ಸರ್ಕಾರ ತೊಲಗಿಸಿಸೋಣ 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದು ಕರೆ ಕೊಟ್ಟಿದ್ದಾರೆ.

”ಸುಳ್ಳು ಭಾಷಣ ಸಾಕು ಪೊಳ್ಳು ಭರವಸೆಯೂ ಸಾಕು ಅಭಿವೃದ್ಧಿಯ ಆಡಳಿತಕ್ಕೆ ಮತ ನೀಡೋಣ! 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...