Homeಕರ್ನಾಟಕನಾಳೆ ಮತದಾನ: ಟ್ವಿಟರ್‌ನಲ್ಲಿ ಇಂದೇ #ByeByeBJP ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ನಾಳೆ ಮತದಾನ: ಟ್ವಿಟರ್‌ನಲ್ಲಿ ಇಂದೇ #ByeByeBJP ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

- Advertisement -
- Advertisement -

ರಾಜ್ಯ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರ ಸೋಮವಾರ ಸಂಜೆಗೆ ಅಂತ್ಯವಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ #ByeByeBJP ಎನ್ನುವ ಹ್ಯಾಶ್‌ಟ್ಯಾಗ್‌ ಬಳಸಿ ಟ್ವಿಟರ್‌ ಅಭಿಯಾನ ಆರಂಭವಾಗಿದೆ.

ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಹೇಳುವ ವಿಡಿಯೊ, ಚಿತ್ರ, ವ್ಯಂಗ್ಯಚಿತ್ರ, ಮಾಧ್ಯಮ ವರದಿ ಹಾಗೂ ಬರಹಗಳನ್ನು ಟ್ವೀಟ್‌ ಮಾಡಿ ಈ ಹ್ಯಾಶ್‌ಟ್ಯಾಗ್‌ ಬಳಸಲಾಗುತ್ತಿದೆ.

ಶೇ 40 ಕಮೀಷನ್‌ ಸರ್ಕಾರಕ್ಕೆ ನನ್ನ ಮತ ಇಲ್ಲ ಎನ್ನುವ ಪೋಸ್ಟರ್ ಹಿಡಿದಿರುವ ಜನರ ವಿಡಿಯೊ ಹೆಚ್ಚು ಹರಿದಾಡುತ್ತಿದೆ.

ಬಿಜೆಪಿ ನಾಯಕರ ದ್ವೇಷ ಭಾಷಣ, ಕೋಮು ಗಲಭೆ, ನಂದಿನಿ ವಿವಾದ, ಪೇಸಿಎಂ, ರಸ್ತೆಗುಂಡಿ, ಹಿಜಾಬ್‌ ವಿವಾದ, ನಿರುದ್ಯೋಗ, ಶೇ 40 ಕಮಿಷನ್‌ ಮುಂತಾದ ವಿಷಯಗಳನ್ನು ಪ್ರಸ್ತಾಪಿಸಿ ಟ್ವಿಟರ್‌ ಅಭಿಯಾನ ನಡೆಯುತ್ತಿದೆ.

ರಾಜ್ಯ ಕಾಂಗ್ರೆಸ್‌ ಘಟಕ, ಭಾರತೀಯ ಯುವ ಕಾಂಗ್ರೆಸ್, ಕೇರಳ ಕಾಂಗ್ರೆಸ್‌ ಸೇವಾದಳ, ಜಾನ್ಸಿ ಕಾಂಗ್ರೆಸ್‌ ಸೇವಾದಳ, ದೇಶದ ಕಾಂಗ್ರೆಸ್‌ ನಾಯಕರು, ವಕ್ತಾರರು ಟ್ವೀಟ್‌ ಮಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

”ಕಳೆದ ನಾಲ್ಕು ವರ್ಷಗಳಿಂದ ಕರ್ನಾಟಕವನ್ನು ಕೋವಿಡ್ ವೈರಸ್ಸಿಗಿಂತಲೂ ಕ್ರೂರವಾಗಿ ಪೀಡಿಸಿದ ಬಿಜೆಪಿ ಸರ್ಕಾರದ ಅಂತ್ಯ ಸಮೀಪಿಸಿದೆ. ಕರ್ನಾಟಕಕ್ಕೆ ಕಾಡುತ್ತಿದ್ದ 40% ಕಮಿಷನ್ ಪಿಡುಗು ತೊಲಗಲಿದೆ, ಮುಂದೆ ಕಾಂಗ್ರೆಸ್ ನೇತೃತದಲ್ಲಿದೆ ಕರ್ನಾಟಕ ಪ್ರಗತಿಯತ್ತ ಸಾಗಲಿದೆ. #ByeByeBJP” ಎಂದು ಟ್ವೀಟ್ ಮಾಡಿದೆ.

”ರಸ್ತೆಗುಂಡಿಗಳಿಗೆ 30ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ 40% ಕಮಿಷನ್ನಿನ ಭ್ರಷ್ಟ ಬಿಜೆಪಿ ಸರ್ಕಾರ ತೊಲಗುವ ಸಮಯ ಬಂದಿದೆ. ಇನ್ಮುಂದೆ ಕಮಿಷನ್ ರಹಿತ, ಭ್ರಷ್ಟಾಚಾರ ರಹಿತ ಸರ್ಕಾರಕ್ಕಾಗಿ ಕಾಂಗ್ರೆಸ್ ಬೆಂಬಲಿಸಿ. ಕರ್ನಾಟಕದ ಪ್ರತಿಯೊಬ್ಬರ ಕಾಳಜಿಯೂ ಇನ್ಮುಂದೆ ಕಾಂಗ್ರೆಸ್ ಸರ್ಕಾರದ ಹೊಣೆ. #ByeByeBJP” ಎಂದು ಟ್ವೀಟ್ ಮಾಡಿದೆ.

”ನಮ್ಮ ಬ್ಯಾಂಕುಗಳು ನಮ್ಮ ಸಂಸ್ಥೆಗಳು ನಮ್ಮ ಕೆಎಂಎಫ್ ನಮ್ಮ ನಂದಿನಿ ಎಲ್ಲವೂ ನಮ್ಮ ಅಸ್ಮಿತೆಯ ಸಂಕೇತಗಳು! ಕನ್ನಡಿಗರ ಅಸ್ಮಿತೆಯನ್ನು ಕಾಪಾಡೋಣ! 40% ಸರ್ಕಾರಕ್ಕೆ #ByeByeBJP ಹೇಳೋಣ” ಎಂದು ಟ್ವೀಟ್ ಮಾಡಿದೆ.

”ಕೋರೋನ ಸಮಯದಲ್ಲಿ ಅನುಭವಿಸಿದ್ದು ಸಾಕು ಹಗರಣಗಳನ್ನು ನೋಡಿದ್ದೂ ಸಾಕು ಹಗರಣಗಳಿಗೆ ಮುಕ್ತಿ ಹಾಡೋಣ! 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದು ಟ್ವೀಟ್ ಮಾಡಿದೆ.

”40% ಕಮಿಷನ್ ತೆಗೆದುಕೊಳ್ಳುವ ಪೇಸಿಎಂ ತೊಲಗಿಸೋಣ ರಾಜ್ಯವನ್ನು ಪ್ರಗತಿಯ ಹಾದಿಗೆ ಮರಳಿ ತರೋಣ 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದಿದ್ದಾರೆ.

”ಉದ್ಯೋಗಕ್ಕೂ ಲಂಚ ಅಥವಾ ಮಂಚ ಈ ಲಂಚ ಮಂಚದ ಸರ್ಕಾರ ತೊಲಗಿಸಿಸೋಣ 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದು ಕರೆ ಕೊಟ್ಟಿದ್ದಾರೆ.

”ಸುಳ್ಳು ಭಾಷಣ ಸಾಕು ಪೊಳ್ಳು ಭರವಸೆಯೂ ಸಾಕು ಅಭಿವೃದ್ಧಿಯ ಆಡಳಿತಕ್ಕೆ ಮತ ನೀಡೋಣ! 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...