Homeಕರ್ನಾಟಕನಾಳೆ ಮತದಾನ: ಟ್ವಿಟರ್‌ನಲ್ಲಿ ಇಂದೇ #ByeByeBJP ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ನಾಳೆ ಮತದಾನ: ಟ್ವಿಟರ್‌ನಲ್ಲಿ ಇಂದೇ #ByeByeBJP ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

- Advertisement -
- Advertisement -

ರಾಜ್ಯ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರ ಸೋಮವಾರ ಸಂಜೆಗೆ ಅಂತ್ಯವಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ #ByeByeBJP ಎನ್ನುವ ಹ್ಯಾಶ್‌ಟ್ಯಾಗ್‌ ಬಳಸಿ ಟ್ವಿಟರ್‌ ಅಭಿಯಾನ ಆರಂಭವಾಗಿದೆ.

ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಹೇಳುವ ವಿಡಿಯೊ, ಚಿತ್ರ, ವ್ಯಂಗ್ಯಚಿತ್ರ, ಮಾಧ್ಯಮ ವರದಿ ಹಾಗೂ ಬರಹಗಳನ್ನು ಟ್ವೀಟ್‌ ಮಾಡಿ ಈ ಹ್ಯಾಶ್‌ಟ್ಯಾಗ್‌ ಬಳಸಲಾಗುತ್ತಿದೆ.

ಶೇ 40 ಕಮೀಷನ್‌ ಸರ್ಕಾರಕ್ಕೆ ನನ್ನ ಮತ ಇಲ್ಲ ಎನ್ನುವ ಪೋಸ್ಟರ್ ಹಿಡಿದಿರುವ ಜನರ ವಿಡಿಯೊ ಹೆಚ್ಚು ಹರಿದಾಡುತ್ತಿದೆ.

ಬಿಜೆಪಿ ನಾಯಕರ ದ್ವೇಷ ಭಾಷಣ, ಕೋಮು ಗಲಭೆ, ನಂದಿನಿ ವಿವಾದ, ಪೇಸಿಎಂ, ರಸ್ತೆಗುಂಡಿ, ಹಿಜಾಬ್‌ ವಿವಾದ, ನಿರುದ್ಯೋಗ, ಶೇ 40 ಕಮಿಷನ್‌ ಮುಂತಾದ ವಿಷಯಗಳನ್ನು ಪ್ರಸ್ತಾಪಿಸಿ ಟ್ವಿಟರ್‌ ಅಭಿಯಾನ ನಡೆಯುತ್ತಿದೆ.

ರಾಜ್ಯ ಕಾಂಗ್ರೆಸ್‌ ಘಟಕ, ಭಾರತೀಯ ಯುವ ಕಾಂಗ್ರೆಸ್, ಕೇರಳ ಕಾಂಗ್ರೆಸ್‌ ಸೇವಾದಳ, ಜಾನ್ಸಿ ಕಾಂಗ್ರೆಸ್‌ ಸೇವಾದಳ, ದೇಶದ ಕಾಂಗ್ರೆಸ್‌ ನಾಯಕರು, ವಕ್ತಾರರು ಟ್ವೀಟ್‌ ಮಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

”ಕಳೆದ ನಾಲ್ಕು ವರ್ಷಗಳಿಂದ ಕರ್ನಾಟಕವನ್ನು ಕೋವಿಡ್ ವೈರಸ್ಸಿಗಿಂತಲೂ ಕ್ರೂರವಾಗಿ ಪೀಡಿಸಿದ ಬಿಜೆಪಿ ಸರ್ಕಾರದ ಅಂತ್ಯ ಸಮೀಪಿಸಿದೆ. ಕರ್ನಾಟಕಕ್ಕೆ ಕಾಡುತ್ತಿದ್ದ 40% ಕಮಿಷನ್ ಪಿಡುಗು ತೊಲಗಲಿದೆ, ಮುಂದೆ ಕಾಂಗ್ರೆಸ್ ನೇತೃತದಲ್ಲಿದೆ ಕರ್ನಾಟಕ ಪ್ರಗತಿಯತ್ತ ಸಾಗಲಿದೆ. #ByeByeBJP” ಎಂದು ಟ್ವೀಟ್ ಮಾಡಿದೆ.

”ರಸ್ತೆಗುಂಡಿಗಳಿಗೆ 30ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ 40% ಕಮಿಷನ್ನಿನ ಭ್ರಷ್ಟ ಬಿಜೆಪಿ ಸರ್ಕಾರ ತೊಲಗುವ ಸಮಯ ಬಂದಿದೆ. ಇನ್ಮುಂದೆ ಕಮಿಷನ್ ರಹಿತ, ಭ್ರಷ್ಟಾಚಾರ ರಹಿತ ಸರ್ಕಾರಕ್ಕಾಗಿ ಕಾಂಗ್ರೆಸ್ ಬೆಂಬಲಿಸಿ. ಕರ್ನಾಟಕದ ಪ್ರತಿಯೊಬ್ಬರ ಕಾಳಜಿಯೂ ಇನ್ಮುಂದೆ ಕಾಂಗ್ರೆಸ್ ಸರ್ಕಾರದ ಹೊಣೆ. #ByeByeBJP” ಎಂದು ಟ್ವೀಟ್ ಮಾಡಿದೆ.

”ನಮ್ಮ ಬ್ಯಾಂಕುಗಳು ನಮ್ಮ ಸಂಸ್ಥೆಗಳು ನಮ್ಮ ಕೆಎಂಎಫ್ ನಮ್ಮ ನಂದಿನಿ ಎಲ್ಲವೂ ನಮ್ಮ ಅಸ್ಮಿತೆಯ ಸಂಕೇತಗಳು! ಕನ್ನಡಿಗರ ಅಸ್ಮಿತೆಯನ್ನು ಕಾಪಾಡೋಣ! 40% ಸರ್ಕಾರಕ್ಕೆ #ByeByeBJP ಹೇಳೋಣ” ಎಂದು ಟ್ವೀಟ್ ಮಾಡಿದೆ.

”ಕೋರೋನ ಸಮಯದಲ್ಲಿ ಅನುಭವಿಸಿದ್ದು ಸಾಕು ಹಗರಣಗಳನ್ನು ನೋಡಿದ್ದೂ ಸಾಕು ಹಗರಣಗಳಿಗೆ ಮುಕ್ತಿ ಹಾಡೋಣ! 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದು ಟ್ವೀಟ್ ಮಾಡಿದೆ.

”40% ಕಮಿಷನ್ ತೆಗೆದುಕೊಳ್ಳುವ ಪೇಸಿಎಂ ತೊಲಗಿಸೋಣ ರಾಜ್ಯವನ್ನು ಪ್ರಗತಿಯ ಹಾದಿಗೆ ಮರಳಿ ತರೋಣ 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದಿದ್ದಾರೆ.

”ಉದ್ಯೋಗಕ್ಕೂ ಲಂಚ ಅಥವಾ ಮಂಚ ಈ ಲಂಚ ಮಂಚದ ಸರ್ಕಾರ ತೊಲಗಿಸಿಸೋಣ 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದು ಕರೆ ಕೊಟ್ಟಿದ್ದಾರೆ.

”ಸುಳ್ಳು ಭಾಷಣ ಸಾಕು ಪೊಳ್ಳು ಭರವಸೆಯೂ ಸಾಕು ಅಭಿವೃದ್ಧಿಯ ಆಡಳಿತಕ್ಕೆ ಮತ ನೀಡೋಣ! 40% ಸರ್ಕಾರಕ್ಕೆ #ByeByeBJP ಹೇಳೋಣ!” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...