Homeಮುಖಪುಟಉಪರಾಷ್ಟ್ರಪತಿ ಚುನಾವಣೆ: ಸ್ಟಾಲಿನ್‌ಗೆ ಕರೆ ಮಾಡಿ ಎನ್‌ಡಿಎ ಅಭ್ಯರ್ಥಿ ಬೆಂಬಲಿಸುವಂತೆ ಕೋರಿದ ರಾಜನಾಥ್ ಸಿಂಗ್

ಉಪರಾಷ್ಟ್ರಪತಿ ಚುನಾವಣೆ: ಸ್ಟಾಲಿನ್‌ಗೆ ಕರೆ ಮಾಡಿ ಎನ್‌ಡಿಎ ಅಭ್ಯರ್ಥಿ ಬೆಂಬಲಿಸುವಂತೆ ಕೋರಿದ ರಾಜನಾಥ್ ಸಿಂಗ್

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರಿಗೆ ಸೋಮವಾರ (ಆ.18) ಕರೆ ಮಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಪ್ರಮುಖ ವಿರೋಧ ಪಕ್ಷಗಳ ನಾಯಕರ ಮನವೊಲಿಸುವ ಜವಾಬ್ದಾರಿಯನ್ನು ಬಿಜೆಪಿ ರಾಜನಾಥ್ ಸಿಂಗ್ ಅವರಿಗೆ ವಹಿಸಿದೆ.

ರಾಧಾಕೃಷ್ಣನ್ ಅವರ ಸುದೀರ್ಘ ರಾಜಕೀಯ ಜೀವನ, ಸಂಸದೀಯ ಪಟುವಾಗಿ ಮತ್ತು ರಾಜ್ಯಪಾಲರಾಗಿ ಅವರ ಕೊಡುಗೆಗಳ ಬಗ್ಗೆ ರಾಜನಾಥ್ ಸಿಂಗ್ ಸ್ಟಾಲಿನ್ ಅವರಿಗೆ ವಿವರಿಸಿದ್ದಾರೆ ಎಂದು ಬಿಜೆಪಿ ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಭಾನುವಾರ ನಡೆದ ಬಿಜೆಪಿ ಸಭೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ವಿಷಯವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ. ಎನ್‌ಡಿಎ ಅಭ್ಯರ್ಥಿ ಆಯ್ಕೆಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಜೆ.ಪಿ ನಡ್ಡಾ ಅವರಿಗೆ ಬಿಟ್ಟಿತ್ತು.

67 ವರ್ಷದ ಸಿ.ಪಿ ರಾಧಾಕೃಷ್ಣನ್ ಅವರು ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯ ಹಿರಿಯ ನಾಯಕರಾಗಿದ್ದು, ತಮಿಳುನಾಡಿನ ಕೊಯಮತ್ತೂರಿನಿಂದ ಎರಡು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. ಪ್ರಸ್ತುತ ಅವರು ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದಾರೆ.

ಆರ್‌ಎಸ್‌ಎಸ್‌ ಮತ್ತು ಬಿಜೆಪಿಯೊಂದಿಗಿನ ದೀರ್ಘಕಾಲದ ಒಡನಾಟಕ್ಕೆ ಹೆಸರುವಾಸಿಯಾದ ಅವರನ್ನು, ಬಲವಾದ ಸಂಘಟನಾ ಕೌಶಲ್ಯ ಹೊಂದಿರುವ ತಳಮಟ್ಟದ ನಾಯಕ ಎಂದು ಪರಿಗಣಿಸಲಾಗಿದೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸಂಸತ್ತಿನಲ್ಲಿ ಗಮನಾರ್ಹ ಬಲವನ್ನು ಹೊಂದಿರುವ ಈ ಹಿನ್ನೆಲೆಯಲ್ಲಿ ರಾಜನಾಥ್ ಸಿಂಗ್ ಅವರು ಸ್ಟಾಲಿನ್ ಅವರನ್ನು ಸಂಪರ್ಕಿಸಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆ ಬಗ್ಗೆ ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ಇನ್ನೂ ಔಪಚಾರಿಕವಾಗಿ ತನ್ನ ನಿಲುವನ್ನು ತಿಳಿಸಿಲ್ಲ. ರಾಧಾಕೃಷ್ಣನ್ ಅವರು ಸ್ಪರ್ಧೆಯನ್ನು ಎದುರಿಸುತ್ತಾರೋ ಅಥವಾ ಅವಿರೋಧವಾಗಿ ಗೆಲ್ಲುತ್ತಾರೋ ಎಂಬುದನ್ನು ನಿರ್ಧರಿಸುವಲ್ಲಿ ಡಿಎಂಕೆ ಬೆಂಬಲ ನಿರ್ಣಾಯಕವಾಗಿದೆ ಎಂದು ವರದಿಗಳು ಹೇಳಿವೆ.

ಮುಂದಿನ ಉಪರಾಷ್ಟ್ರಪತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಬೇಕೆಂದು ನಾವು ಬಯಸುತ್ತೇವೆ. ನಾವು ವಿರೋಧ ಪಕ್ಷದ ನಾಯಕರನ್ನು ಸಂಪರ್ಕಿಸಿದ್ದೇವೆ ಎಂದು ರಾಧಾಕೃಷ್ಣನ್ ಅವರ ಹೆಸರನ್ನು ಘೋಷಿಸುತ್ತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ ನಡ್ಡಾ ಹೇಳಿದ್ದಾರೆ.

ರಾಧಾಕೃಷ್ಣನ್ ಅವರ ಉಮೇದುವಾರಿಕೆಯು ದಕ್ಷಿಣ ಭಾರತದ ನಾಯಕರನ್ನು ಪ್ರಮುಖ ಸಾಂವಿಧಾನಿಕ ಹುದ್ದೆಗಳೊಂದಿಗೆ ಗೌರವಿಸುವ ಎನ್‌ಡಿಎ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.

ಸೆಪ್ಟೆಂಬರ್ 9 ರಂದು ಉಪರಾಷ್ಟ್ರತಿ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ರಾಜನಾಥ್ ಸಿಂಗ್ ಮತ್ತು ಇತರ ಹಿರಿಯ ಬಿಜೆಪಿ ನಾಯಕರು ವಿರೋಧ ಪಕ್ಷಗಳ ಮನವೊಲಿಸುವ ಕಸರತ್ತು ನಡೆಸುವ ಸಾಧ್ಯತೆ ಇದೆ.

‘ಚುನಾವಣಾ ಆಯುಕ್ತರನ್ನು ಹುಡುಕುವಾಗ ನಮಗೆ ಹೊಸ ಬಿಜೆಪಿ ವಕ್ತಾರ ಸಿಕ್ಕರು: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಪಕ್ಷ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...