Homeಮುಖಪುಟಉಪರಾಷ್ಟ್ರಪತಿ ಚುನಾವಣೆ: ಸ್ಟಾಲಿನ್‌ಗೆ ಕರೆ ಮಾಡಿ ಎನ್‌ಡಿಎ ಅಭ್ಯರ್ಥಿ ಬೆಂಬಲಿಸುವಂತೆ ಕೋರಿದ ರಾಜನಾಥ್ ಸಿಂಗ್

ಉಪರಾಷ್ಟ್ರಪತಿ ಚುನಾವಣೆ: ಸ್ಟಾಲಿನ್‌ಗೆ ಕರೆ ಮಾಡಿ ಎನ್‌ಡಿಎ ಅಭ್ಯರ್ಥಿ ಬೆಂಬಲಿಸುವಂತೆ ಕೋರಿದ ರಾಜನಾಥ್ ಸಿಂಗ್

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರಿಗೆ ಸೋಮವಾರ (ಆ.18) ಕರೆ ಮಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಪ್ರಮುಖ ವಿರೋಧ ಪಕ್ಷಗಳ ನಾಯಕರ ಮನವೊಲಿಸುವ ಜವಾಬ್ದಾರಿಯನ್ನು ಬಿಜೆಪಿ ರಾಜನಾಥ್ ಸಿಂಗ್ ಅವರಿಗೆ ವಹಿಸಿದೆ.

ರಾಧಾಕೃಷ್ಣನ್ ಅವರ ಸುದೀರ್ಘ ರಾಜಕೀಯ ಜೀವನ, ಸಂಸದೀಯ ಪಟುವಾಗಿ ಮತ್ತು ರಾಜ್ಯಪಾಲರಾಗಿ ಅವರ ಕೊಡುಗೆಗಳ ಬಗ್ಗೆ ರಾಜನಾಥ್ ಸಿಂಗ್ ಸ್ಟಾಲಿನ್ ಅವರಿಗೆ ವಿವರಿಸಿದ್ದಾರೆ ಎಂದು ಬಿಜೆಪಿ ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಭಾನುವಾರ ನಡೆದ ಬಿಜೆಪಿ ಸಭೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ವಿಷಯವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ. ಎನ್‌ಡಿಎ ಅಭ್ಯರ್ಥಿ ಆಯ್ಕೆಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಜೆ.ಪಿ ನಡ್ಡಾ ಅವರಿಗೆ ಬಿಟ್ಟಿತ್ತು.

67 ವರ್ಷದ ಸಿ.ಪಿ ರಾಧಾಕೃಷ್ಣನ್ ಅವರು ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯ ಹಿರಿಯ ನಾಯಕರಾಗಿದ್ದು, ತಮಿಳುನಾಡಿನ ಕೊಯಮತ್ತೂರಿನಿಂದ ಎರಡು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. ಪ್ರಸ್ತುತ ಅವರು ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದಾರೆ.

ಆರ್‌ಎಸ್‌ಎಸ್‌ ಮತ್ತು ಬಿಜೆಪಿಯೊಂದಿಗಿನ ದೀರ್ಘಕಾಲದ ಒಡನಾಟಕ್ಕೆ ಹೆಸರುವಾಸಿಯಾದ ಅವರನ್ನು, ಬಲವಾದ ಸಂಘಟನಾ ಕೌಶಲ್ಯ ಹೊಂದಿರುವ ತಳಮಟ್ಟದ ನಾಯಕ ಎಂದು ಪರಿಗಣಿಸಲಾಗಿದೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸಂಸತ್ತಿನಲ್ಲಿ ಗಮನಾರ್ಹ ಬಲವನ್ನು ಹೊಂದಿರುವ ಈ ಹಿನ್ನೆಲೆಯಲ್ಲಿ ರಾಜನಾಥ್ ಸಿಂಗ್ ಅವರು ಸ್ಟಾಲಿನ್ ಅವರನ್ನು ಸಂಪರ್ಕಿಸಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆ ಬಗ್ಗೆ ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ಇನ್ನೂ ಔಪಚಾರಿಕವಾಗಿ ತನ್ನ ನಿಲುವನ್ನು ತಿಳಿಸಿಲ್ಲ. ರಾಧಾಕೃಷ್ಣನ್ ಅವರು ಸ್ಪರ್ಧೆಯನ್ನು ಎದುರಿಸುತ್ತಾರೋ ಅಥವಾ ಅವಿರೋಧವಾಗಿ ಗೆಲ್ಲುತ್ತಾರೋ ಎಂಬುದನ್ನು ನಿರ್ಧರಿಸುವಲ್ಲಿ ಡಿಎಂಕೆ ಬೆಂಬಲ ನಿರ್ಣಾಯಕವಾಗಿದೆ ಎಂದು ವರದಿಗಳು ಹೇಳಿವೆ.

ಮುಂದಿನ ಉಪರಾಷ್ಟ್ರಪತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಬೇಕೆಂದು ನಾವು ಬಯಸುತ್ತೇವೆ. ನಾವು ವಿರೋಧ ಪಕ್ಷದ ನಾಯಕರನ್ನು ಸಂಪರ್ಕಿಸಿದ್ದೇವೆ ಎಂದು ರಾಧಾಕೃಷ್ಣನ್ ಅವರ ಹೆಸರನ್ನು ಘೋಷಿಸುತ್ತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ ನಡ್ಡಾ ಹೇಳಿದ್ದಾರೆ.

ರಾಧಾಕೃಷ್ಣನ್ ಅವರ ಉಮೇದುವಾರಿಕೆಯು ದಕ್ಷಿಣ ಭಾರತದ ನಾಯಕರನ್ನು ಪ್ರಮುಖ ಸಾಂವಿಧಾನಿಕ ಹುದ್ದೆಗಳೊಂದಿಗೆ ಗೌರವಿಸುವ ಎನ್‌ಡಿಎ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.

ಸೆಪ್ಟೆಂಬರ್ 9 ರಂದು ಉಪರಾಷ್ಟ್ರತಿ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ರಾಜನಾಥ್ ಸಿಂಗ್ ಮತ್ತು ಇತರ ಹಿರಿಯ ಬಿಜೆಪಿ ನಾಯಕರು ವಿರೋಧ ಪಕ್ಷಗಳ ಮನವೊಲಿಸುವ ಕಸರತ್ತು ನಡೆಸುವ ಸಾಧ್ಯತೆ ಇದೆ.

‘ಚುನಾವಣಾ ಆಯುಕ್ತರನ್ನು ಹುಡುಕುವಾಗ ನಮಗೆ ಹೊಸ ಬಿಜೆಪಿ ವಕ್ತಾರ ಸಿಕ್ಕರು: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಪಕ್ಷ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...