Homeಮುಖಪುಟಉಪರಾಷ್ಟ್ರಪತಿ ಚುನಾವಣೆ: ಸ್ಟಾಲಿನ್‌ಗೆ ಕರೆ ಮಾಡಿ ಎನ್‌ಡಿಎ ಅಭ್ಯರ್ಥಿ ಬೆಂಬಲಿಸುವಂತೆ ಕೋರಿದ ರಾಜನಾಥ್ ಸಿಂಗ್

ಉಪರಾಷ್ಟ್ರಪತಿ ಚುನಾವಣೆ: ಸ್ಟಾಲಿನ್‌ಗೆ ಕರೆ ಮಾಡಿ ಎನ್‌ಡಿಎ ಅಭ್ಯರ್ಥಿ ಬೆಂಬಲಿಸುವಂತೆ ಕೋರಿದ ರಾಜನಾಥ್ ಸಿಂಗ್

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರಿಗೆ ಸೋಮವಾರ (ಆ.18) ಕರೆ ಮಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಪ್ರಮುಖ ವಿರೋಧ ಪಕ್ಷಗಳ ನಾಯಕರ ಮನವೊಲಿಸುವ ಜವಾಬ್ದಾರಿಯನ್ನು ಬಿಜೆಪಿ ರಾಜನಾಥ್ ಸಿಂಗ್ ಅವರಿಗೆ ವಹಿಸಿದೆ.

ರಾಧಾಕೃಷ್ಣನ್ ಅವರ ಸುದೀರ್ಘ ರಾಜಕೀಯ ಜೀವನ, ಸಂಸದೀಯ ಪಟುವಾಗಿ ಮತ್ತು ರಾಜ್ಯಪಾಲರಾಗಿ ಅವರ ಕೊಡುಗೆಗಳ ಬಗ್ಗೆ ರಾಜನಾಥ್ ಸಿಂಗ್ ಸ್ಟಾಲಿನ್ ಅವರಿಗೆ ವಿವರಿಸಿದ್ದಾರೆ ಎಂದು ಬಿಜೆಪಿ ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಭಾನುವಾರ ನಡೆದ ಬಿಜೆಪಿ ಸಭೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ವಿಷಯವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ. ಎನ್‌ಡಿಎ ಅಭ್ಯರ್ಥಿ ಆಯ್ಕೆಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಜೆ.ಪಿ ನಡ್ಡಾ ಅವರಿಗೆ ಬಿಟ್ಟಿತ್ತು.

67 ವರ್ಷದ ಸಿ.ಪಿ ರಾಧಾಕೃಷ್ಣನ್ ಅವರು ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯ ಹಿರಿಯ ನಾಯಕರಾಗಿದ್ದು, ತಮಿಳುನಾಡಿನ ಕೊಯಮತ್ತೂರಿನಿಂದ ಎರಡು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. ಪ್ರಸ್ತುತ ಅವರು ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದಾರೆ.

ಆರ್‌ಎಸ್‌ಎಸ್‌ ಮತ್ತು ಬಿಜೆಪಿಯೊಂದಿಗಿನ ದೀರ್ಘಕಾಲದ ಒಡನಾಟಕ್ಕೆ ಹೆಸರುವಾಸಿಯಾದ ಅವರನ್ನು, ಬಲವಾದ ಸಂಘಟನಾ ಕೌಶಲ್ಯ ಹೊಂದಿರುವ ತಳಮಟ್ಟದ ನಾಯಕ ಎಂದು ಪರಿಗಣಿಸಲಾಗಿದೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸಂಸತ್ತಿನಲ್ಲಿ ಗಮನಾರ್ಹ ಬಲವನ್ನು ಹೊಂದಿರುವ ಈ ಹಿನ್ನೆಲೆಯಲ್ಲಿ ರಾಜನಾಥ್ ಸಿಂಗ್ ಅವರು ಸ್ಟಾಲಿನ್ ಅವರನ್ನು ಸಂಪರ್ಕಿಸಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆ ಬಗ್ಗೆ ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ಇನ್ನೂ ಔಪಚಾರಿಕವಾಗಿ ತನ್ನ ನಿಲುವನ್ನು ತಿಳಿಸಿಲ್ಲ. ರಾಧಾಕೃಷ್ಣನ್ ಅವರು ಸ್ಪರ್ಧೆಯನ್ನು ಎದುರಿಸುತ್ತಾರೋ ಅಥವಾ ಅವಿರೋಧವಾಗಿ ಗೆಲ್ಲುತ್ತಾರೋ ಎಂಬುದನ್ನು ನಿರ್ಧರಿಸುವಲ್ಲಿ ಡಿಎಂಕೆ ಬೆಂಬಲ ನಿರ್ಣಾಯಕವಾಗಿದೆ ಎಂದು ವರದಿಗಳು ಹೇಳಿವೆ.

ಮುಂದಿನ ಉಪರಾಷ್ಟ್ರಪತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಬೇಕೆಂದು ನಾವು ಬಯಸುತ್ತೇವೆ. ನಾವು ವಿರೋಧ ಪಕ್ಷದ ನಾಯಕರನ್ನು ಸಂಪರ್ಕಿಸಿದ್ದೇವೆ ಎಂದು ರಾಧಾಕೃಷ್ಣನ್ ಅವರ ಹೆಸರನ್ನು ಘೋಷಿಸುತ್ತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ ನಡ್ಡಾ ಹೇಳಿದ್ದಾರೆ.

ರಾಧಾಕೃಷ್ಣನ್ ಅವರ ಉಮೇದುವಾರಿಕೆಯು ದಕ್ಷಿಣ ಭಾರತದ ನಾಯಕರನ್ನು ಪ್ರಮುಖ ಸಾಂವಿಧಾನಿಕ ಹುದ್ದೆಗಳೊಂದಿಗೆ ಗೌರವಿಸುವ ಎನ್‌ಡಿಎ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.

ಸೆಪ್ಟೆಂಬರ್ 9 ರಂದು ಉಪರಾಷ್ಟ್ರತಿ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ರಾಜನಾಥ್ ಸಿಂಗ್ ಮತ್ತು ಇತರ ಹಿರಿಯ ಬಿಜೆಪಿ ನಾಯಕರು ವಿರೋಧ ಪಕ್ಷಗಳ ಮನವೊಲಿಸುವ ಕಸರತ್ತು ನಡೆಸುವ ಸಾಧ್ಯತೆ ಇದೆ.

‘ಚುನಾವಣಾ ಆಯುಕ್ತರನ್ನು ಹುಡುಕುವಾಗ ನಮಗೆ ಹೊಸ ಬಿಜೆಪಿ ವಕ್ತಾರ ಸಿಕ್ಕರು: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಪಕ್ಷ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...