Homeಮುಖಪುಟಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ

ಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ನೆಪವಾಗಿಟ್ಟುಕೊಂಡು ಮುಸ್ಲಿಮರನ್ನು ಬಹಿಷ್ಕರಿಸಬೇಕು ಎಂದು ಬಲಪಂಥೀಯ ಗುಂಪುಗಳು ನೀಡಿದ್ದ ಕರೆಯನ್ನು ಭಾರತದಲ್ಲಿ ಅತಿ ಹೆಚ್ಚು ಜನರು ಭೇಟಿ ನೀಡುವ ಯಾತ್ರಾ ಸ್ಥಳಗಳಲ್ಲಿ ಒಂದಾದ ಉತ್ತರ ಪ್ರದೇಶದ ವೃಂದಾವನದ ಪ್ರಸಿದ್ಧ ಬಂಕೆ ಬಿಹಾರಿ ದೇವಾಲಯ ತಿರಸ್ಕರಿಸಿದೆ.

ಮಥುರಾ ಮತ್ತು ವೃಂದಾನವನದಲ್ಲಿ ಪ್ರತಿಭಟಿಸಿದ್ದ ಹಿಂದುತ್ವ ಗುಂಪು, ಮುಸ್ಲಿಮರೊಂದಿಗೆ ವ್ಯಾಪಾರ ನಡೆಸದಂತೆ ಹಿಂದೂಗಳನ್ನು ಒತ್ತಾಯಿಸಿತ್ತು. ಮುಸ್ಲಿಂ ವ್ಯಾಪಾರಸ್ಥರು ತಮ್ಮ ಅಂಗಡಿ-ಮುಂಗಟ್ಟುಗಳ ಮೇಲೆ ಮಾಲೀಕರ ಹೆಸರು ಬರೆಯುವಂತೆ ಬೆದರಿಗೆ ಹಾಕಿತ್ತು.

ಬಂಕೆ ಬಿಹಾರಿ ದೇವಾಲಯಕ್ಕೆ ಸಂಬಂಧಿಸಿದ ಎಲ್ಲಾ ವ್ಯವಹಾರಗಳಿಂದ ಮುಸ್ಲಿಮರನ್ನು ಬೇರ್ಪಡಿಸುತ್ತೇವೆ. ಮುಸ್ಲಿಂ ವ್ಯಾಪಾರಿಗಳಿಗೆ ಅಂಗಡಿಗಳ ಮುಂದೆ ಮಾಲೀಕರ ಹೆಸರು ಹಾಕುವಂತೆ ಸೂಚಿಸಲಾಗಿದೆ. ಹಿಂದೂಗಳ ಅವರೊಂದಿಗೆ ವ್ಯಾಪಾರ ಮಾಡದಂತೆ ಮತ್ತು ತಮ್ಮ ವ್ಯವಹಾರಗಳಲ್ಲಿ ಅವರನ್ನು ನೇಮಿಸಿಕೊಳ್ಳದಂತೆ ಮನವಿ ಮಾಡಿದ್ದೇವೆ ಎಂದು ಕಾಶಿ ವಿದ್ವತ್ ಪರಿಷತ್ ಸಂಘಟನೆಯ ಸದಸ್ಯ ನಾಗೇಂದ್ರ ಮಹಾರಾಜ್ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಬಂಕೆ ಬಿಹಾರಿ ದೇವಾಲಯದ ಅರ್ಚಕ ಹಾಗೂ ಆಡಳಿತ ಮಂಡಳಿ ಸದಸ್ಯ, ಜ್ಞಾನೇಂದ್ರ ಕಿಶೋರ್ ಗೋಸ್ವಾಮಿ ಅವರು, “ಇದು ಸಾಧ್ಯವಿಲ್ಲ. ಮುಸ್ಲಿಮರು, ವಿಶೇಷವಾಗಿ ಮುಸ್ಲಿಂ ಕುಶಲಕರ್ಮಿಗಳು ಮತ್ತು ನೇಕಾರರು ದೇವಾಲಯಕ್ಕೆ ದೊಡ್ಡ ಮಟ್ಟದ ಕೊಡುಗೆಗಳನ್ನು ನೀಡಿದ್ದಾರೆ. ಅವರು ದಶಕಗಳಿಂದ ಬಂಕೆ ಬಿಹಾರಿಯ ಉಡುಪುಗಳನ್ನು ನೇಯ್ಗೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರಲ್ಲಿ ಹಲವರು ಬಂಕೆ ಬಿಹಾರಿಯ ದೇವರಲ್ಲಿ ಬಲವಾದ ನಂಬಿಕೆಯನ್ನು ಹೊಂದಿದ್ದಾರೆ ಮತ್ತು ದೇವಾಲಯಕ್ಕೂ ಭೇಟಿ ನೀಡುತ್ತಾರೆ” ಎಂದಿದ್ದಾರೆ. ಈ ಮೂಲಕ ಹಿಂದುತ್ವ ಸಂಘಟನೆಯ ಕೋಮು ದ್ರುವೀಕರಣವನ್ನು ವಿರೋಧಿಸಿದ್ದಾರೆ.

“ವೃಂದಾವನದಲ್ಲಿ ದೇವರಿಗೆ ಕೆಲವು ಕಿರೀಟಗಳು ಮತ್ತು ಬಳೆಗಳನ್ನು ಅವರೇ (ಮುಸ್ಲಿಮರು) ತಯಾರಿಸುತ್ತಾರೆ” ಎಂದು ಸುದ್ದಿ ಸಂಸ್ಥೆ ಟೈಮ್ಸ್‌ ಆಫ್ ಇಂಡಿಯಾ ಜೊತೆ ಮಾತನಾಡುವಾಗ ಗೋಸ್ವಾಮಿ ಹೇಳಿದ್ದಾರೆ. ಇದಕ್ಕೆ ಅಲ್ಲಿನ ಹೆಚ್ಚಿನ ಪುರೋಹಿತರು ಮತ್ತು ಸ್ಥಳೀಯರು ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ವಿಚಾರದಲ್ಲಿ ನಾವು ಸಂಪೂರ್ಣವಾಗಿ ಸರ್ಕಾರದ ಜೊತೆಗಿದ್ದೇವೆ. ಆದರೆ ವೃಂದಾವನದಲ್ಲಿ, ಹಿಂದೂಗಳು ಮತ್ತು ಮುಸ್ಲಿಮರು ಶಾಂತಿ ಮತ್ತು ಸೌಹಾರ್ದತೆಯಿಂದ ಒಟ್ಟಿಗೆ ವಾಸಿಸುತ್ತಿದ್ದಾರೆ ಎಂದು ಗೋಸ್ವಾಮಿ ತಿಳಿಸಿದ್ದಾರೆ.

ಹಿಂದುತ್ವ ಗುಂಪಿನವರು ನನ್ನ ವ್ಯಾಪಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದಾರೆ. ಅಂಗಡಿ ಮುಂದೆ ನನ್ನ ಹೆಸರು ಹಾಕುವಂತೆ ಹೇಳಿದ್ದಾರೆ. ಅವರು ಹೇಳಿದಂತೆ ಕೇಳದಿದ್ದರೆ ಇಲ್ಲಿ ವ್ಯಾಪಾರ ನಡೆಸದಂತೆ ಬೆದರಿಕೆ ಹಾಕಿದ್ದಾರೆ. ಅರ್ಚಕರ ಹೇಳಿಕೆಯಿಂದ ನಮಗೆ ಆಶ್ವಾಸನೆ ಮೂಡಿದೆ. ನಾನು 20 ವರ್ಷಗಳಿಗೂ ಹೆಚ್ಚು ಸಮಯದಿಂದ ಇಲ್ಲಿ ಅಂಗಡಿ ನಡೆಸುತ್ತಿದ್ದೇನೆ. ನನ್ನ ತಂದೆ ಇಲ್ಲಿಯೇ ಟೈಲರ್ ಆಗಿ ಕೆಲಸ ಮಾಡುತ್ತಿದ್ದಾರೆ. ಗ್ರಾಹಕರು ಇಲ್ಲಿಂದ ವಸ್ತುಗಳನ್ನು ಖರೀದಿಸಿದಾಗಲೆಲ್ಲಾ, ನಾನು ಸಾಮಾನ್ಯವಾಗಿ ಅವರಿಗೆ ನನ್ನ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಮುದ್ರಿಸಿದ ಬಿಲ್ ರಶೀದಿಯನ್ನು ನೀಡುತ್ತೇನೆ. ನಮ್ಮಲ್ಲಿ ಮರೆಮಾಚಲು ಏನೂ ಇಲ್ಲ,” ಎಂದು ಬಂಕೆ ಬಿಹಾರಿ ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿ, ‘ಸ್ಟಾರ್ ಮುಕುತ್’ ಎಂಬ ಹೆಸರಿನಲ್ಲಿ ಅಂಗಡಿ ನಡೆಸುತ್ತಿರುವ ಜಾವೇದ್ ಅಲಿ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಅಲಿ ಅವರ ಅಂಗಡಿಯ ಪಕ್ಕದಲ್ಲೇ ಅಂಗಡಿ ಹೊಂದಿರುವ ನಿಖಿಲ್ ಅಗರ್ವಾಲ್ ಎಂಬವರು ಮಾತನಾಡಿ, ಹಲವು ವರ್ಷಗಳಿಂದ ನಮಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ನಾವು ಪರಸ್ಪರ ಒಬ್ಬರಿಗೊಬ್ಬರು ಸಹಕಾರ ಮಾಡುತ್ತಾ ವ್ಯಾಪಾರ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ಪೊಲೀಸರು ಇನ್ನೂ ಔಪಚಾರಿಕ ದೂರು ಸ್ವೀಕರಿಸಿಲ್ಲ ಎಂದು ವರದಿಯಾಗಿದೆ.

ಆಕಸ್ಮಿಕವಾಗಿ ಮಹಿಳೆಯನ್ನು ಸ್ಪರ್ಶಿಸಿದ ಮುಸ್ಲಿಂ ಬಾಲಕನ ಮೇಲೆ ಅಮಾನವೀಯ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...