Homeಮುಖಪುಟಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ

ಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ನೆಪವಾಗಿಟ್ಟುಕೊಂಡು ಮುಸ್ಲಿಮರನ್ನು ಬಹಿಷ್ಕರಿಸಬೇಕು ಎಂದು ಬಲಪಂಥೀಯ ಗುಂಪುಗಳು ನೀಡಿದ್ದ ಕರೆಯನ್ನು ಭಾರತದಲ್ಲಿ ಅತಿ ಹೆಚ್ಚು ಜನರು ಭೇಟಿ ನೀಡುವ ಯಾತ್ರಾ ಸ್ಥಳಗಳಲ್ಲಿ ಒಂದಾದ ಉತ್ತರ ಪ್ರದೇಶದ ವೃಂದಾವನದ ಪ್ರಸಿದ್ಧ ಬಂಕೆ ಬಿಹಾರಿ ದೇವಾಲಯ ತಿರಸ್ಕರಿಸಿದೆ.

ಮಥುರಾ ಮತ್ತು ವೃಂದಾನವನದಲ್ಲಿ ಪ್ರತಿಭಟಿಸಿದ್ದ ಹಿಂದುತ್ವ ಗುಂಪು, ಮುಸ್ಲಿಮರೊಂದಿಗೆ ವ್ಯಾಪಾರ ನಡೆಸದಂತೆ ಹಿಂದೂಗಳನ್ನು ಒತ್ತಾಯಿಸಿತ್ತು. ಮುಸ್ಲಿಂ ವ್ಯಾಪಾರಸ್ಥರು ತಮ್ಮ ಅಂಗಡಿ-ಮುಂಗಟ್ಟುಗಳ ಮೇಲೆ ಮಾಲೀಕರ ಹೆಸರು ಬರೆಯುವಂತೆ ಬೆದರಿಗೆ ಹಾಕಿತ್ತು.

ಬಂಕೆ ಬಿಹಾರಿ ದೇವಾಲಯಕ್ಕೆ ಸಂಬಂಧಿಸಿದ ಎಲ್ಲಾ ವ್ಯವಹಾರಗಳಿಂದ ಮುಸ್ಲಿಮರನ್ನು ಬೇರ್ಪಡಿಸುತ್ತೇವೆ. ಮುಸ್ಲಿಂ ವ್ಯಾಪಾರಿಗಳಿಗೆ ಅಂಗಡಿಗಳ ಮುಂದೆ ಮಾಲೀಕರ ಹೆಸರು ಹಾಕುವಂತೆ ಸೂಚಿಸಲಾಗಿದೆ. ಹಿಂದೂಗಳ ಅವರೊಂದಿಗೆ ವ್ಯಾಪಾರ ಮಾಡದಂತೆ ಮತ್ತು ತಮ್ಮ ವ್ಯವಹಾರಗಳಲ್ಲಿ ಅವರನ್ನು ನೇಮಿಸಿಕೊಳ್ಳದಂತೆ ಮನವಿ ಮಾಡಿದ್ದೇವೆ ಎಂದು ಕಾಶಿ ವಿದ್ವತ್ ಪರಿಷತ್ ಸಂಘಟನೆಯ ಸದಸ್ಯ ನಾಗೇಂದ್ರ ಮಹಾರಾಜ್ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಬಂಕೆ ಬಿಹಾರಿ ದೇವಾಲಯದ ಅರ್ಚಕ ಹಾಗೂ ಆಡಳಿತ ಮಂಡಳಿ ಸದಸ್ಯ, ಜ್ಞಾನೇಂದ್ರ ಕಿಶೋರ್ ಗೋಸ್ವಾಮಿ ಅವರು, “ಇದು ಸಾಧ್ಯವಿಲ್ಲ. ಮುಸ್ಲಿಮರು, ವಿಶೇಷವಾಗಿ ಮುಸ್ಲಿಂ ಕುಶಲಕರ್ಮಿಗಳು ಮತ್ತು ನೇಕಾರರು ದೇವಾಲಯಕ್ಕೆ ದೊಡ್ಡ ಮಟ್ಟದ ಕೊಡುಗೆಗಳನ್ನು ನೀಡಿದ್ದಾರೆ. ಅವರು ದಶಕಗಳಿಂದ ಬಂಕೆ ಬಿಹಾರಿಯ ಉಡುಪುಗಳನ್ನು ನೇಯ್ಗೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರಲ್ಲಿ ಹಲವರು ಬಂಕೆ ಬಿಹಾರಿಯ ದೇವರಲ್ಲಿ ಬಲವಾದ ನಂಬಿಕೆಯನ್ನು ಹೊಂದಿದ್ದಾರೆ ಮತ್ತು ದೇವಾಲಯಕ್ಕೂ ಭೇಟಿ ನೀಡುತ್ತಾರೆ” ಎಂದಿದ್ದಾರೆ. ಈ ಮೂಲಕ ಹಿಂದುತ್ವ ಸಂಘಟನೆಯ ಕೋಮು ದ್ರುವೀಕರಣವನ್ನು ವಿರೋಧಿಸಿದ್ದಾರೆ.

“ವೃಂದಾವನದಲ್ಲಿ ದೇವರಿಗೆ ಕೆಲವು ಕಿರೀಟಗಳು ಮತ್ತು ಬಳೆಗಳನ್ನು ಅವರೇ (ಮುಸ್ಲಿಮರು) ತಯಾರಿಸುತ್ತಾರೆ” ಎಂದು ಸುದ್ದಿ ಸಂಸ್ಥೆ ಟೈಮ್ಸ್‌ ಆಫ್ ಇಂಡಿಯಾ ಜೊತೆ ಮಾತನಾಡುವಾಗ ಗೋಸ್ವಾಮಿ ಹೇಳಿದ್ದಾರೆ. ಇದಕ್ಕೆ ಅಲ್ಲಿನ ಹೆಚ್ಚಿನ ಪುರೋಹಿತರು ಮತ್ತು ಸ್ಥಳೀಯರು ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ವಿಚಾರದಲ್ಲಿ ನಾವು ಸಂಪೂರ್ಣವಾಗಿ ಸರ್ಕಾರದ ಜೊತೆಗಿದ್ದೇವೆ. ಆದರೆ ವೃಂದಾವನದಲ್ಲಿ, ಹಿಂದೂಗಳು ಮತ್ತು ಮುಸ್ಲಿಮರು ಶಾಂತಿ ಮತ್ತು ಸೌಹಾರ್ದತೆಯಿಂದ ಒಟ್ಟಿಗೆ ವಾಸಿಸುತ್ತಿದ್ದಾರೆ ಎಂದು ಗೋಸ್ವಾಮಿ ತಿಳಿಸಿದ್ದಾರೆ.

ಹಿಂದುತ್ವ ಗುಂಪಿನವರು ನನ್ನ ವ್ಯಾಪಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದಾರೆ. ಅಂಗಡಿ ಮುಂದೆ ನನ್ನ ಹೆಸರು ಹಾಕುವಂತೆ ಹೇಳಿದ್ದಾರೆ. ಅವರು ಹೇಳಿದಂತೆ ಕೇಳದಿದ್ದರೆ ಇಲ್ಲಿ ವ್ಯಾಪಾರ ನಡೆಸದಂತೆ ಬೆದರಿಕೆ ಹಾಕಿದ್ದಾರೆ. ಅರ್ಚಕರ ಹೇಳಿಕೆಯಿಂದ ನಮಗೆ ಆಶ್ವಾಸನೆ ಮೂಡಿದೆ. ನಾನು 20 ವರ್ಷಗಳಿಗೂ ಹೆಚ್ಚು ಸಮಯದಿಂದ ಇಲ್ಲಿ ಅಂಗಡಿ ನಡೆಸುತ್ತಿದ್ದೇನೆ. ನನ್ನ ತಂದೆ ಇಲ್ಲಿಯೇ ಟೈಲರ್ ಆಗಿ ಕೆಲಸ ಮಾಡುತ್ತಿದ್ದಾರೆ. ಗ್ರಾಹಕರು ಇಲ್ಲಿಂದ ವಸ್ತುಗಳನ್ನು ಖರೀದಿಸಿದಾಗಲೆಲ್ಲಾ, ನಾನು ಸಾಮಾನ್ಯವಾಗಿ ಅವರಿಗೆ ನನ್ನ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಮುದ್ರಿಸಿದ ಬಿಲ್ ರಶೀದಿಯನ್ನು ನೀಡುತ್ತೇನೆ. ನಮ್ಮಲ್ಲಿ ಮರೆಮಾಚಲು ಏನೂ ಇಲ್ಲ,” ಎಂದು ಬಂಕೆ ಬಿಹಾರಿ ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿ, ‘ಸ್ಟಾರ್ ಮುಕುತ್’ ಎಂಬ ಹೆಸರಿನಲ್ಲಿ ಅಂಗಡಿ ನಡೆಸುತ್ತಿರುವ ಜಾವೇದ್ ಅಲಿ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಅಲಿ ಅವರ ಅಂಗಡಿಯ ಪಕ್ಕದಲ್ಲೇ ಅಂಗಡಿ ಹೊಂದಿರುವ ನಿಖಿಲ್ ಅಗರ್ವಾಲ್ ಎಂಬವರು ಮಾತನಾಡಿ, ಹಲವು ವರ್ಷಗಳಿಂದ ನಮಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ನಾವು ಪರಸ್ಪರ ಒಬ್ಬರಿಗೊಬ್ಬರು ಸಹಕಾರ ಮಾಡುತ್ತಾ ವ್ಯಾಪಾರ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ಪೊಲೀಸರು ಇನ್ನೂ ಔಪಚಾರಿಕ ದೂರು ಸ್ವೀಕರಿಸಿಲ್ಲ ಎಂದು ವರದಿಯಾಗಿದೆ.

ಆಕಸ್ಮಿಕವಾಗಿ ಮಹಿಳೆಯನ್ನು ಸ್ಪರ್ಶಿಸಿದ ಮುಸ್ಲಿಂ ಬಾಲಕನ ಮೇಲೆ ಅಮಾನವೀಯ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...