Homeಮುಖಪುಟಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ

ಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ನೆಪವಾಗಿಟ್ಟುಕೊಂಡು ಮುಸ್ಲಿಮರನ್ನು ಬಹಿಷ್ಕರಿಸಬೇಕು ಎಂದು ಬಲಪಂಥೀಯ ಗುಂಪುಗಳು ನೀಡಿದ್ದ ಕರೆಯನ್ನು ಭಾರತದಲ್ಲಿ ಅತಿ ಹೆಚ್ಚು ಜನರು ಭೇಟಿ ನೀಡುವ ಯಾತ್ರಾ ಸ್ಥಳಗಳಲ್ಲಿ ಒಂದಾದ ಉತ್ತರ ಪ್ರದೇಶದ ವೃಂದಾವನದ ಪ್ರಸಿದ್ಧ ಬಂಕೆ ಬಿಹಾರಿ ದೇವಾಲಯ ತಿರಸ್ಕರಿಸಿದೆ.

ಮಥುರಾ ಮತ್ತು ವೃಂದಾನವನದಲ್ಲಿ ಪ್ರತಿಭಟಿಸಿದ್ದ ಹಿಂದುತ್ವ ಗುಂಪು, ಮುಸ್ಲಿಮರೊಂದಿಗೆ ವ್ಯಾಪಾರ ನಡೆಸದಂತೆ ಹಿಂದೂಗಳನ್ನು ಒತ್ತಾಯಿಸಿತ್ತು. ಮುಸ್ಲಿಂ ವ್ಯಾಪಾರಸ್ಥರು ತಮ್ಮ ಅಂಗಡಿ-ಮುಂಗಟ್ಟುಗಳ ಮೇಲೆ ಮಾಲೀಕರ ಹೆಸರು ಬರೆಯುವಂತೆ ಬೆದರಿಗೆ ಹಾಕಿತ್ತು.

ಬಂಕೆ ಬಿಹಾರಿ ದೇವಾಲಯಕ್ಕೆ ಸಂಬಂಧಿಸಿದ ಎಲ್ಲಾ ವ್ಯವಹಾರಗಳಿಂದ ಮುಸ್ಲಿಮರನ್ನು ಬೇರ್ಪಡಿಸುತ್ತೇವೆ. ಮುಸ್ಲಿಂ ವ್ಯಾಪಾರಿಗಳಿಗೆ ಅಂಗಡಿಗಳ ಮುಂದೆ ಮಾಲೀಕರ ಹೆಸರು ಹಾಕುವಂತೆ ಸೂಚಿಸಲಾಗಿದೆ. ಹಿಂದೂಗಳ ಅವರೊಂದಿಗೆ ವ್ಯಾಪಾರ ಮಾಡದಂತೆ ಮತ್ತು ತಮ್ಮ ವ್ಯವಹಾರಗಳಲ್ಲಿ ಅವರನ್ನು ನೇಮಿಸಿಕೊಳ್ಳದಂತೆ ಮನವಿ ಮಾಡಿದ್ದೇವೆ ಎಂದು ಕಾಶಿ ವಿದ್ವತ್ ಪರಿಷತ್ ಸಂಘಟನೆಯ ಸದಸ್ಯ ನಾಗೇಂದ್ರ ಮಹಾರಾಜ್ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಬಂಕೆ ಬಿಹಾರಿ ದೇವಾಲಯದ ಅರ್ಚಕ ಹಾಗೂ ಆಡಳಿತ ಮಂಡಳಿ ಸದಸ್ಯ, ಜ್ಞಾನೇಂದ್ರ ಕಿಶೋರ್ ಗೋಸ್ವಾಮಿ ಅವರು, “ಇದು ಸಾಧ್ಯವಿಲ್ಲ. ಮುಸ್ಲಿಮರು, ವಿಶೇಷವಾಗಿ ಮುಸ್ಲಿಂ ಕುಶಲಕರ್ಮಿಗಳು ಮತ್ತು ನೇಕಾರರು ದೇವಾಲಯಕ್ಕೆ ದೊಡ್ಡ ಮಟ್ಟದ ಕೊಡುಗೆಗಳನ್ನು ನೀಡಿದ್ದಾರೆ. ಅವರು ದಶಕಗಳಿಂದ ಬಂಕೆ ಬಿಹಾರಿಯ ಉಡುಪುಗಳನ್ನು ನೇಯ್ಗೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರಲ್ಲಿ ಹಲವರು ಬಂಕೆ ಬಿಹಾರಿಯ ದೇವರಲ್ಲಿ ಬಲವಾದ ನಂಬಿಕೆಯನ್ನು ಹೊಂದಿದ್ದಾರೆ ಮತ್ತು ದೇವಾಲಯಕ್ಕೂ ಭೇಟಿ ನೀಡುತ್ತಾರೆ” ಎಂದಿದ್ದಾರೆ. ಈ ಮೂಲಕ ಹಿಂದುತ್ವ ಸಂಘಟನೆಯ ಕೋಮು ದ್ರುವೀಕರಣವನ್ನು ವಿರೋಧಿಸಿದ್ದಾರೆ.

“ವೃಂದಾವನದಲ್ಲಿ ದೇವರಿಗೆ ಕೆಲವು ಕಿರೀಟಗಳು ಮತ್ತು ಬಳೆಗಳನ್ನು ಅವರೇ (ಮುಸ್ಲಿಮರು) ತಯಾರಿಸುತ್ತಾರೆ” ಎಂದು ಸುದ್ದಿ ಸಂಸ್ಥೆ ಟೈಮ್ಸ್‌ ಆಫ್ ಇಂಡಿಯಾ ಜೊತೆ ಮಾತನಾಡುವಾಗ ಗೋಸ್ವಾಮಿ ಹೇಳಿದ್ದಾರೆ. ಇದಕ್ಕೆ ಅಲ್ಲಿನ ಹೆಚ್ಚಿನ ಪುರೋಹಿತರು ಮತ್ತು ಸ್ಥಳೀಯರು ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ವಿಚಾರದಲ್ಲಿ ನಾವು ಸಂಪೂರ್ಣವಾಗಿ ಸರ್ಕಾರದ ಜೊತೆಗಿದ್ದೇವೆ. ಆದರೆ ವೃಂದಾವನದಲ್ಲಿ, ಹಿಂದೂಗಳು ಮತ್ತು ಮುಸ್ಲಿಮರು ಶಾಂತಿ ಮತ್ತು ಸೌಹಾರ್ದತೆಯಿಂದ ಒಟ್ಟಿಗೆ ವಾಸಿಸುತ್ತಿದ್ದಾರೆ ಎಂದು ಗೋಸ್ವಾಮಿ ತಿಳಿಸಿದ್ದಾರೆ.

ಹಿಂದುತ್ವ ಗುಂಪಿನವರು ನನ್ನ ವ್ಯಾಪಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದಾರೆ. ಅಂಗಡಿ ಮುಂದೆ ನನ್ನ ಹೆಸರು ಹಾಕುವಂತೆ ಹೇಳಿದ್ದಾರೆ. ಅವರು ಹೇಳಿದಂತೆ ಕೇಳದಿದ್ದರೆ ಇಲ್ಲಿ ವ್ಯಾಪಾರ ನಡೆಸದಂತೆ ಬೆದರಿಕೆ ಹಾಕಿದ್ದಾರೆ. ಅರ್ಚಕರ ಹೇಳಿಕೆಯಿಂದ ನಮಗೆ ಆಶ್ವಾಸನೆ ಮೂಡಿದೆ. ನಾನು 20 ವರ್ಷಗಳಿಗೂ ಹೆಚ್ಚು ಸಮಯದಿಂದ ಇಲ್ಲಿ ಅಂಗಡಿ ನಡೆಸುತ್ತಿದ್ದೇನೆ. ನನ್ನ ತಂದೆ ಇಲ್ಲಿಯೇ ಟೈಲರ್ ಆಗಿ ಕೆಲಸ ಮಾಡುತ್ತಿದ್ದಾರೆ. ಗ್ರಾಹಕರು ಇಲ್ಲಿಂದ ವಸ್ತುಗಳನ್ನು ಖರೀದಿಸಿದಾಗಲೆಲ್ಲಾ, ನಾನು ಸಾಮಾನ್ಯವಾಗಿ ಅವರಿಗೆ ನನ್ನ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಮುದ್ರಿಸಿದ ಬಿಲ್ ರಶೀದಿಯನ್ನು ನೀಡುತ್ತೇನೆ. ನಮ್ಮಲ್ಲಿ ಮರೆಮಾಚಲು ಏನೂ ಇಲ್ಲ,” ಎಂದು ಬಂಕೆ ಬಿಹಾರಿ ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿ, ‘ಸ್ಟಾರ್ ಮುಕುತ್’ ಎಂಬ ಹೆಸರಿನಲ್ಲಿ ಅಂಗಡಿ ನಡೆಸುತ್ತಿರುವ ಜಾವೇದ್ ಅಲಿ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಅಲಿ ಅವರ ಅಂಗಡಿಯ ಪಕ್ಕದಲ್ಲೇ ಅಂಗಡಿ ಹೊಂದಿರುವ ನಿಖಿಲ್ ಅಗರ್ವಾಲ್ ಎಂಬವರು ಮಾತನಾಡಿ, ಹಲವು ವರ್ಷಗಳಿಂದ ನಮಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ನಾವು ಪರಸ್ಪರ ಒಬ್ಬರಿಗೊಬ್ಬರು ಸಹಕಾರ ಮಾಡುತ್ತಾ ವ್ಯಾಪಾರ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ಪೊಲೀಸರು ಇನ್ನೂ ಔಪಚಾರಿಕ ದೂರು ಸ್ವೀಕರಿಸಿಲ್ಲ ಎಂದು ವರದಿಯಾಗಿದೆ.

ಆಕಸ್ಮಿಕವಾಗಿ ಮಹಿಳೆಯನ್ನು ಸ್ಪರ್ಶಿಸಿದ ಮುಸ್ಲಿಂ ಬಾಲಕನ ಮೇಲೆ ಅಮಾನವೀಯ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...