Homeಮುಖಪುಟಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ

ಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ನೆಪವಾಗಿಟ್ಟುಕೊಂಡು ಮುಸ್ಲಿಮರನ್ನು ಬಹಿಷ್ಕರಿಸಬೇಕು ಎಂದು ಬಲಪಂಥೀಯ ಗುಂಪುಗಳು ನೀಡಿದ್ದ ಕರೆಯನ್ನು ಭಾರತದಲ್ಲಿ ಅತಿ ಹೆಚ್ಚು ಜನರು ಭೇಟಿ ನೀಡುವ ಯಾತ್ರಾ ಸ್ಥಳಗಳಲ್ಲಿ ಒಂದಾದ ಉತ್ತರ ಪ್ರದೇಶದ ವೃಂದಾವನದ ಪ್ರಸಿದ್ಧ ಬಂಕೆ ಬಿಹಾರಿ ದೇವಾಲಯ ತಿರಸ್ಕರಿಸಿದೆ.

ಮಥುರಾ ಮತ್ತು ವೃಂದಾನವನದಲ್ಲಿ ಪ್ರತಿಭಟಿಸಿದ್ದ ಹಿಂದುತ್ವ ಗುಂಪು, ಮುಸ್ಲಿಮರೊಂದಿಗೆ ವ್ಯಾಪಾರ ನಡೆಸದಂತೆ ಹಿಂದೂಗಳನ್ನು ಒತ್ತಾಯಿಸಿತ್ತು. ಮುಸ್ಲಿಂ ವ್ಯಾಪಾರಸ್ಥರು ತಮ್ಮ ಅಂಗಡಿ-ಮುಂಗಟ್ಟುಗಳ ಮೇಲೆ ಮಾಲೀಕರ ಹೆಸರು ಬರೆಯುವಂತೆ ಬೆದರಿಗೆ ಹಾಕಿತ್ತು.

ಬಂಕೆ ಬಿಹಾರಿ ದೇವಾಲಯಕ್ಕೆ ಸಂಬಂಧಿಸಿದ ಎಲ್ಲಾ ವ್ಯವಹಾರಗಳಿಂದ ಮುಸ್ಲಿಮರನ್ನು ಬೇರ್ಪಡಿಸುತ್ತೇವೆ. ಮುಸ್ಲಿಂ ವ್ಯಾಪಾರಿಗಳಿಗೆ ಅಂಗಡಿಗಳ ಮುಂದೆ ಮಾಲೀಕರ ಹೆಸರು ಹಾಕುವಂತೆ ಸೂಚಿಸಲಾಗಿದೆ. ಹಿಂದೂಗಳ ಅವರೊಂದಿಗೆ ವ್ಯಾಪಾರ ಮಾಡದಂತೆ ಮತ್ತು ತಮ್ಮ ವ್ಯವಹಾರಗಳಲ್ಲಿ ಅವರನ್ನು ನೇಮಿಸಿಕೊಳ್ಳದಂತೆ ಮನವಿ ಮಾಡಿದ್ದೇವೆ ಎಂದು ಕಾಶಿ ವಿದ್ವತ್ ಪರಿಷತ್ ಸಂಘಟನೆಯ ಸದಸ್ಯ ನಾಗೇಂದ್ರ ಮಹಾರಾಜ್ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಬಂಕೆ ಬಿಹಾರಿ ದೇವಾಲಯದ ಅರ್ಚಕ ಹಾಗೂ ಆಡಳಿತ ಮಂಡಳಿ ಸದಸ್ಯ, ಜ್ಞಾನೇಂದ್ರ ಕಿಶೋರ್ ಗೋಸ್ವಾಮಿ ಅವರು, “ಇದು ಸಾಧ್ಯವಿಲ್ಲ. ಮುಸ್ಲಿಮರು, ವಿಶೇಷವಾಗಿ ಮುಸ್ಲಿಂ ಕುಶಲಕರ್ಮಿಗಳು ಮತ್ತು ನೇಕಾರರು ದೇವಾಲಯಕ್ಕೆ ದೊಡ್ಡ ಮಟ್ಟದ ಕೊಡುಗೆಗಳನ್ನು ನೀಡಿದ್ದಾರೆ. ಅವರು ದಶಕಗಳಿಂದ ಬಂಕೆ ಬಿಹಾರಿಯ ಉಡುಪುಗಳನ್ನು ನೇಯ್ಗೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರಲ್ಲಿ ಹಲವರು ಬಂಕೆ ಬಿಹಾರಿಯ ದೇವರಲ್ಲಿ ಬಲವಾದ ನಂಬಿಕೆಯನ್ನು ಹೊಂದಿದ್ದಾರೆ ಮತ್ತು ದೇವಾಲಯಕ್ಕೂ ಭೇಟಿ ನೀಡುತ್ತಾರೆ” ಎಂದಿದ್ದಾರೆ. ಈ ಮೂಲಕ ಹಿಂದುತ್ವ ಸಂಘಟನೆಯ ಕೋಮು ದ್ರುವೀಕರಣವನ್ನು ವಿರೋಧಿಸಿದ್ದಾರೆ.

“ವೃಂದಾವನದಲ್ಲಿ ದೇವರಿಗೆ ಕೆಲವು ಕಿರೀಟಗಳು ಮತ್ತು ಬಳೆಗಳನ್ನು ಅವರೇ (ಮುಸ್ಲಿಮರು) ತಯಾರಿಸುತ್ತಾರೆ” ಎಂದು ಸುದ್ದಿ ಸಂಸ್ಥೆ ಟೈಮ್ಸ್‌ ಆಫ್ ಇಂಡಿಯಾ ಜೊತೆ ಮಾತನಾಡುವಾಗ ಗೋಸ್ವಾಮಿ ಹೇಳಿದ್ದಾರೆ. ಇದಕ್ಕೆ ಅಲ್ಲಿನ ಹೆಚ್ಚಿನ ಪುರೋಹಿತರು ಮತ್ತು ಸ್ಥಳೀಯರು ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ವಿಚಾರದಲ್ಲಿ ನಾವು ಸಂಪೂರ್ಣವಾಗಿ ಸರ್ಕಾರದ ಜೊತೆಗಿದ್ದೇವೆ. ಆದರೆ ವೃಂದಾವನದಲ್ಲಿ, ಹಿಂದೂಗಳು ಮತ್ತು ಮುಸ್ಲಿಮರು ಶಾಂತಿ ಮತ್ತು ಸೌಹಾರ್ದತೆಯಿಂದ ಒಟ್ಟಿಗೆ ವಾಸಿಸುತ್ತಿದ್ದಾರೆ ಎಂದು ಗೋಸ್ವಾಮಿ ತಿಳಿಸಿದ್ದಾರೆ.

ಹಿಂದುತ್ವ ಗುಂಪಿನವರು ನನ್ನ ವ್ಯಾಪಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದಾರೆ. ಅಂಗಡಿ ಮುಂದೆ ನನ್ನ ಹೆಸರು ಹಾಕುವಂತೆ ಹೇಳಿದ್ದಾರೆ. ಅವರು ಹೇಳಿದಂತೆ ಕೇಳದಿದ್ದರೆ ಇಲ್ಲಿ ವ್ಯಾಪಾರ ನಡೆಸದಂತೆ ಬೆದರಿಕೆ ಹಾಕಿದ್ದಾರೆ. ಅರ್ಚಕರ ಹೇಳಿಕೆಯಿಂದ ನಮಗೆ ಆಶ್ವಾಸನೆ ಮೂಡಿದೆ. ನಾನು 20 ವರ್ಷಗಳಿಗೂ ಹೆಚ್ಚು ಸಮಯದಿಂದ ಇಲ್ಲಿ ಅಂಗಡಿ ನಡೆಸುತ್ತಿದ್ದೇನೆ. ನನ್ನ ತಂದೆ ಇಲ್ಲಿಯೇ ಟೈಲರ್ ಆಗಿ ಕೆಲಸ ಮಾಡುತ್ತಿದ್ದಾರೆ. ಗ್ರಾಹಕರು ಇಲ್ಲಿಂದ ವಸ್ತುಗಳನ್ನು ಖರೀದಿಸಿದಾಗಲೆಲ್ಲಾ, ನಾನು ಸಾಮಾನ್ಯವಾಗಿ ಅವರಿಗೆ ನನ್ನ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಮುದ್ರಿಸಿದ ಬಿಲ್ ರಶೀದಿಯನ್ನು ನೀಡುತ್ತೇನೆ. ನಮ್ಮಲ್ಲಿ ಮರೆಮಾಚಲು ಏನೂ ಇಲ್ಲ,” ಎಂದು ಬಂಕೆ ಬಿಹಾರಿ ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿ, ‘ಸ್ಟಾರ್ ಮುಕುತ್’ ಎಂಬ ಹೆಸರಿನಲ್ಲಿ ಅಂಗಡಿ ನಡೆಸುತ್ತಿರುವ ಜಾವೇದ್ ಅಲಿ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಅಲಿ ಅವರ ಅಂಗಡಿಯ ಪಕ್ಕದಲ್ಲೇ ಅಂಗಡಿ ಹೊಂದಿರುವ ನಿಖಿಲ್ ಅಗರ್ವಾಲ್ ಎಂಬವರು ಮಾತನಾಡಿ, ಹಲವು ವರ್ಷಗಳಿಂದ ನಮಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ನಾವು ಪರಸ್ಪರ ಒಬ್ಬರಿಗೊಬ್ಬರು ಸಹಕಾರ ಮಾಡುತ್ತಾ ವ್ಯಾಪಾರ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ಪೊಲೀಸರು ಇನ್ನೂ ಔಪಚಾರಿಕ ದೂರು ಸ್ವೀಕರಿಸಿಲ್ಲ ಎಂದು ವರದಿಯಾಗಿದೆ.

ಆಕಸ್ಮಿಕವಾಗಿ ಮಹಿಳೆಯನ್ನು ಸ್ಪರ್ಶಿಸಿದ ಮುಸ್ಲಿಂ ಬಾಲಕನ ಮೇಲೆ ಅಮಾನವೀಯ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...